AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಂಡನಿಗೆ ಬಿರಿಯಾನಿಯಲ್ಲಿ ನಿದ್ರೆ ಮಾತ್ರೆ ಹಾಕಿ ನಿದ್ದೆ ಮಾಡಿಸಿದಳು, ಬಳಿಕ ಪ್ರಿಯನಿಗೆ ಕರೆ ಮಾಡಿ ಕರೆಯಿಸಿಕೊಂಡಳು.. ಆಮೇಲೆ !?

ಅಷ್ಟೇ ಸಾಲದು ಅಂತಾ ಇಬ್ಬರೂ ಸೇರಿಕೊಂಡು ಕೋಟರಾಜುವಿನ ಕುತ್ತಿಗೆಗೆ ನೈಲಾನ್​ ಹಗ್ಗದಿಂದ ನೇಣು ಬಿಗಿದು ಕೊಲೆ ಮಾಡಲು ಯತ್ನಿಸಿದ್ದಾರೆ.

ಗಂಡನಿಗೆ ಬಿರಿಯಾನಿಯಲ್ಲಿ ನಿದ್ರೆ ಮಾತ್ರೆ ಹಾಕಿ ನಿದ್ದೆ ಮಾಡಿಸಿದಳು, ಬಳಿಕ ಪ್ರಿಯನಿಗೆ ಕರೆ ಮಾಡಿ ಕರೆಯಿಸಿಕೊಂಡಳು.. ಆಮೇಲೆ !?
ಗಂಡನಿಗೆ ಬಿರಿಯಾನಿಯಲ್ಲಿ ನಿದ್ರೆ ಮಾತ್ರೆ ಹಾಕಿ ನಿದ್ದೆ ಮಾಡಿಸಿದಳು, ಬಳಿಕ ಪ್ರಿಯನಿಗೆ ಕರೆ ಮಾಡಿ ಕರೆಯಿಸಿಕೊಂಡಳು..
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Jul 07, 2023 | 2:15 PM

Share

ವಿವಾಹೇತರ ಸಂಬಂಧಗಳ ಭ್ರಮೆಯಲ್ಲಿ ಸಿಲುಕುವ ಕೆಲವರು ಎಂಥಹುದ್ದೇ ಅಪರಾಧವೆಸಗಲು ಹಿಂಜರಿಯುವುದಿಲ್ಲ. ಸ್ವಂತ ಮಕ್ಕಳ ಭವಿಷ್ಯದ ಬಗ್ಗೆಯೂ ಅವರು ಕಾಳಜಿ ವಹಿಸುವುದಿಲ್ಲ. ವೇದಮಂತ್ರಗಳ ಸಾಕ್ಷಿಯಾಗಿ ಸಪ್ತಪದಿ ತುಳಿದ ಮೇಲೂ… ಪರದೇಶಿಗಳ ಮೋಹದಲ್ಲಿ ಸಂಗಾತಿಗಳನ್ನೇ ಕೊಲ್ಲಲೂ ಹಿಂಜರಿಯುವುದಿಲ್ಲ. ಇತ್ತೀಚೆಗಷ್ಟೇ ವಿಜಯನಗರದಲ್ಲಿ ಇಂತಹದ್ದೇ ಘಟನೆ ಬೆಳಕಿಗೆ ಬಂದಿದೆ.

ಸ್ಥಳೀಯ ಕುಮ್ಮರಿಬೀದಿಯಲ್ಲಿ ವಾಸವಾಗಿರುವ ಕೋಟರಾಜು ಅವರಿಗೆ ಪತ್ನಿ (Wife) ಶ್ರೀದೇವಿ ಮತ್ತು ಮಕ್ಕಳಿದ್ದಾರೆ. ಅವರೆಲ್ಲರೂ ಎಂದಿನಂತೆ ಬುಧವಾರ ರಾತ್ರಿ ಮಲಗಲು ಸಿದ್ಧತೆ ನಡೆಸಿದ್ದಾರೆ. ಮಲಗುವ ಮುನ್ನ ಹೆಂಡತಿ ಪ್ರೀತಿಯಿಂದ ಗಂಡನಿಗೆ (Husband) ಮಟನ್ ಬಿರಿಯಾನಿ (Mutton Biryani) ಮಾಡಿಕೊಟ್ಟಿದ್ದಾಳೆ. ಇಲ್ಲಿ ಕಹಾನಿ ಮೆ ಟ್ವಿಸ್ಟ್ ಏನೆಂದರೆ ಆ ಬಿರಿಯಾನಿಯಲ್ಲಿ ನಿದ್ದೆ ಮಾತ್ರೆಗಳನ್ನು ಹಾಕಲಾಗಿತ್ತು. ಪತಿ ನಿದ್ರೆಗೆ ಜಾರಿದ ಬಳಿಕ ಹಲವು ವರ್ಷಗಳಿಂದ ವಿವಾಹೇತರ ಸಂಬಂಧ ಹೊಂದಿದ್ದ ಗೆಳೆಯ ಗಂಧವರವು ರಘು ಎಂಬಾತನಿಗೆ ಪತ್ನಿ ಶ್ರೀದೇವಿ ಕರೆ ಮಾಡಿದ್ದಾಳೆ. ಅಲ್ಲಿಗೆ ಪ್ರಿಯತಮನೊಂದಿಗೆ ಸೇರಿಕೊಂಡು ಪತಿಯನ್ನು ಕೊಲ್ಲಲು ಪತ್ನಿ ಶ್ರೀದೇವಿ ಸ್ಪಷ್ಟ ಸ್ಕೆಚ್ ಹಾಕಿದ್ದಳು ಎಂದು ಪ್ರಕರಣದ ಸ್ಥೂಲ ಚಿತ್ರಣವನ್ನು ಪೊಲೀಸರು ಬಿಡಿಸಿದ್ದಾರೆ.

ಅಷ್ಟೇ ಸಾಲದು ಅಂತಾ ಇಬ್ಬರೂ ಸೇರಿಕೊಂಡು ಕೋಟರಾಜುವಿನ ಕುತ್ತಿಗೆಗೆ ನೈಲಾನ್​ ಹಗ್ಗದಿಂದ ನೇಣು ಬಿಗಿದು ಕೊಲೆ ಮಾಡಲು ಯತ್ನಿಸಿದ್ದಾರೆ. ಎಚ್ಚರಗೊಂಡ ಗಂಡ ಜೋರಾಗಿ ಕಿರುಚಿದ್ದಾರೆ. ಆಗ ಅವರಿಬ್ಬರೂ ಓಡಿಹೋಗಿದ್ದಾರೆ. ಕೂಡಲೇ ಕೋಟರಾಜು ಟೂ ಟೌನ್ ಪೊಲೀಸರಿಗೆ ದೂರು ನೀಡಿದ್ದಾರೆ. ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ತಪ್ಪೊಪ್ಪಿಕೊಂಡಿದ್ದಾರೆ. ಬೊಗ್ಗುಲದಿಬ್ಬದ ಕೇತ ಶ್ರೀನು ಎಂಬಾತ ಕೂಡ ಅವರಿಗೆ ಸಹಾಯ ಮಾಡಿರುವುದಾಗಿ ತಿಳಿದುಬಂದಿದೆ. ಆತನನ್ನೂ ಪೊಲೀಸರು ರಿಮಾಂಡ್ ಗೆ ತೆಗೆದುಕೊಂಡಿದ್ದಾರೆ.

Published On - 2:14 pm, Fri, 7 July 23

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!