ಗಂಡನಿಗೆ ಬಿರಿಯಾನಿಯಲ್ಲಿ ನಿದ್ರೆ ಮಾತ್ರೆ ಹಾಕಿ ನಿದ್ದೆ ಮಾಡಿಸಿದಳು, ಬಳಿಕ ಪ್ರಿಯನಿಗೆ ಕರೆ ಮಾಡಿ ಕರೆಯಿಸಿಕೊಂಡಳು.. ಆಮೇಲೆ !?

ಅಷ್ಟೇ ಸಾಲದು ಅಂತಾ ಇಬ್ಬರೂ ಸೇರಿಕೊಂಡು ಕೋಟರಾಜುವಿನ ಕುತ್ತಿಗೆಗೆ ನೈಲಾನ್​ ಹಗ್ಗದಿಂದ ನೇಣು ಬಿಗಿದು ಕೊಲೆ ಮಾಡಲು ಯತ್ನಿಸಿದ್ದಾರೆ.

ಗಂಡನಿಗೆ ಬಿರಿಯಾನಿಯಲ್ಲಿ ನಿದ್ರೆ ಮಾತ್ರೆ ಹಾಕಿ ನಿದ್ದೆ ಮಾಡಿಸಿದಳು, ಬಳಿಕ ಪ್ರಿಯನಿಗೆ ಕರೆ ಮಾಡಿ ಕರೆಯಿಸಿಕೊಂಡಳು.. ಆಮೇಲೆ !?
ಗಂಡನಿಗೆ ಬಿರಿಯಾನಿಯಲ್ಲಿ ನಿದ್ರೆ ಮಾತ್ರೆ ಹಾಕಿ ನಿದ್ದೆ ಮಾಡಿಸಿದಳು, ಬಳಿಕ ಪ್ರಿಯನಿಗೆ ಕರೆ ಮಾಡಿ ಕರೆಯಿಸಿಕೊಂಡಳು..
Follow us
|

Updated on:Jul 07, 2023 | 2:15 PM

ವಿವಾಹೇತರ ಸಂಬಂಧಗಳ ಭ್ರಮೆಯಲ್ಲಿ ಸಿಲುಕುವ ಕೆಲವರು ಎಂಥಹುದ್ದೇ ಅಪರಾಧವೆಸಗಲು ಹಿಂಜರಿಯುವುದಿಲ್ಲ. ಸ್ವಂತ ಮಕ್ಕಳ ಭವಿಷ್ಯದ ಬಗ್ಗೆಯೂ ಅವರು ಕಾಳಜಿ ವಹಿಸುವುದಿಲ್ಲ. ವೇದಮಂತ್ರಗಳ ಸಾಕ್ಷಿಯಾಗಿ ಸಪ್ತಪದಿ ತುಳಿದ ಮೇಲೂ… ಪರದೇಶಿಗಳ ಮೋಹದಲ್ಲಿ ಸಂಗಾತಿಗಳನ್ನೇ ಕೊಲ್ಲಲೂ ಹಿಂಜರಿಯುವುದಿಲ್ಲ. ಇತ್ತೀಚೆಗಷ್ಟೇ ವಿಜಯನಗರದಲ್ಲಿ ಇಂತಹದ್ದೇ ಘಟನೆ ಬೆಳಕಿಗೆ ಬಂದಿದೆ.

ಸ್ಥಳೀಯ ಕುಮ್ಮರಿಬೀದಿಯಲ್ಲಿ ವಾಸವಾಗಿರುವ ಕೋಟರಾಜು ಅವರಿಗೆ ಪತ್ನಿ (Wife) ಶ್ರೀದೇವಿ ಮತ್ತು ಮಕ್ಕಳಿದ್ದಾರೆ. ಅವರೆಲ್ಲರೂ ಎಂದಿನಂತೆ ಬುಧವಾರ ರಾತ್ರಿ ಮಲಗಲು ಸಿದ್ಧತೆ ನಡೆಸಿದ್ದಾರೆ. ಮಲಗುವ ಮುನ್ನ ಹೆಂಡತಿ ಪ್ರೀತಿಯಿಂದ ಗಂಡನಿಗೆ (Husband) ಮಟನ್ ಬಿರಿಯಾನಿ (Mutton Biryani) ಮಾಡಿಕೊಟ್ಟಿದ್ದಾಳೆ. ಇಲ್ಲಿ ಕಹಾನಿ ಮೆ ಟ್ವಿಸ್ಟ್ ಏನೆಂದರೆ ಆ ಬಿರಿಯಾನಿಯಲ್ಲಿ ನಿದ್ದೆ ಮಾತ್ರೆಗಳನ್ನು ಹಾಕಲಾಗಿತ್ತು. ಪತಿ ನಿದ್ರೆಗೆ ಜಾರಿದ ಬಳಿಕ ಹಲವು ವರ್ಷಗಳಿಂದ ವಿವಾಹೇತರ ಸಂಬಂಧ ಹೊಂದಿದ್ದ ಗೆಳೆಯ ಗಂಧವರವು ರಘು ಎಂಬಾತನಿಗೆ ಪತ್ನಿ ಶ್ರೀದೇವಿ ಕರೆ ಮಾಡಿದ್ದಾಳೆ. ಅಲ್ಲಿಗೆ ಪ್ರಿಯತಮನೊಂದಿಗೆ ಸೇರಿಕೊಂಡು ಪತಿಯನ್ನು ಕೊಲ್ಲಲು ಪತ್ನಿ ಶ್ರೀದೇವಿ ಸ್ಪಷ್ಟ ಸ್ಕೆಚ್ ಹಾಕಿದ್ದಳು ಎಂದು ಪ್ರಕರಣದ ಸ್ಥೂಲ ಚಿತ್ರಣವನ್ನು ಪೊಲೀಸರು ಬಿಡಿಸಿದ್ದಾರೆ.

ಅಷ್ಟೇ ಸಾಲದು ಅಂತಾ ಇಬ್ಬರೂ ಸೇರಿಕೊಂಡು ಕೋಟರಾಜುವಿನ ಕುತ್ತಿಗೆಗೆ ನೈಲಾನ್​ ಹಗ್ಗದಿಂದ ನೇಣು ಬಿಗಿದು ಕೊಲೆ ಮಾಡಲು ಯತ್ನಿಸಿದ್ದಾರೆ. ಎಚ್ಚರಗೊಂಡ ಗಂಡ ಜೋರಾಗಿ ಕಿರುಚಿದ್ದಾರೆ. ಆಗ ಅವರಿಬ್ಬರೂ ಓಡಿಹೋಗಿದ್ದಾರೆ. ಕೂಡಲೇ ಕೋಟರಾಜು ಟೂ ಟೌನ್ ಪೊಲೀಸರಿಗೆ ದೂರು ನೀಡಿದ್ದಾರೆ. ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ತಪ್ಪೊಪ್ಪಿಕೊಂಡಿದ್ದಾರೆ. ಬೊಗ್ಗುಲದಿಬ್ಬದ ಕೇತ ಶ್ರೀನು ಎಂಬಾತ ಕೂಡ ಅವರಿಗೆ ಸಹಾಯ ಮಾಡಿರುವುದಾಗಿ ತಿಳಿದುಬಂದಿದೆ. ಆತನನ್ನೂ ಪೊಲೀಸರು ರಿಮಾಂಡ್ ಗೆ ತೆಗೆದುಕೊಂಡಿದ್ದಾರೆ.

Published On - 2:14 pm, Fri, 7 July 23

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ