AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೂನಿಯರ್ ಎನ್‌ಟಿಆರ್ ಅಭಿಮಾನಿಗಳು ಮತ್ತು ಟಿಡಿಪಿ ಕಾರ್ಯಕರ್ತರ ನಡುವೆ ಘರ್ಷಣೆ

ಜೂನಿಯರ್ ಎನ್​​ಟಿಆರ್ ಅಭಿಮಾನಿಗಳು ಮತ್ತು ಟಿಡಿಪಿ ಕಾರ್ಯಕರ್ತರ ಜಗಳಕ್ಕೆ ತೆಲುಗು ದೇಶಂ ನಾಯಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಘಟನೆಯ ಹಿಂದೆ ಯಾರೋ ಕೈವಾಡ ಇರಬಹುದು ಎಂದು ಶಂಕಿಸಲಾಗಿದೆ. ಮುಂಬರುವ ಸಭೆಗಳಲ್ಲಿ ಸಂಯಮದಿಂದ ವರ್ತಿಸುವಂತೆ ಟಿಡಿಪಿ ಕಾರ್ಯಕರ್ತರಿಗೆ ಪಕ್ಷದ ಹಿರಿಯ ಮುಖಂಡರು ಸಲಹೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಜೂನಿಯರ್ ಎನ್‌ಟಿಆರ್ ಅಭಿಮಾನಿಗಳು ಮತ್ತು ಟಿಡಿಪಿ ಕಾರ್ಯಕರ್ತರ ನಡುವೆ ಘರ್ಷಣೆ
ಜೂ.ಎನ್‌ಟಿಆರ್ ಅಭಿಮಾನಿಗಳು ಮತ್ತು ಟಿಡಿಪಿ ಕಾರ್ಯಕರ್ತರ ನಡುವೆ ಸಂಘರ್ಷ
ರಶ್ಮಿ ಕಲ್ಲಕಟ್ಟ
|

Updated on:Jan 08, 2024 | 1:57 PM

Share

ಹೈದರಾಬಾದ್ ಜನವರಿ 08: ಪಶ್ಚಿಮ ಗೋದಾವರಿ ಜಿಲ್ಲೆಯ (Godavari district) ಅಚಂತಾದಲ್ಲಿ ಟಿಡಿಪಿ (TDP) ಆಯೋಜಿಸಿದ್ದ ಕದಲೀರ ಸಭೆಯಲ್ಲಿ ಗದ್ದಲ ನಡೆದಿದೆ. ಜೂನಿಯರ್ ಎನ್‌ಟಿಆರ್ (Jr NTR )ಅಭಿಮಾನಿಗಳು ಬ್ಯಾನರ್ ಮತ್ತು ಫ್ಲೆಕ್ಸ್ ಹಿಡಿದುವೇದಿಕೆಯತ್ತ ನುಗ್ಗಲು ಪ್ರಯತ್ನಿಸಿದರು. ಟಿಡಿಪಿ ಕಾರ್ಯಕರ್ತರು ಅವರನ್ನು ತಡೆದರು. ಇದು ಎರಡು ಗುಂಪುಗಳ ನಡುವೆ ವಾಗ್ವಾದಕ್ಕೆ ಕಾರಮವಾಗಿದ್ದು ಪರಸ್ಪರ ಹಲ್ಲೆ ನಡೆದಿದೆ. ಜೂನಿಯರ್ ಎನ್‌ಟಿಆರ್ ಅಭಿಮಾನಿಗಳು ಮತ್ತು ಟಿಡಿಪಿ ಕಾರ್ಯಕರ್ತರು ಜಗಳವಾಡಿದ್ದು, ಏಕಾಏಕಿ ಉದ್ವಿಗ್ನತೆ ಉಂಟಾಗಿದೆ. ಇದನ್ನು ತಡೆಯಲು ಟಿಡಿಪಿ ಮುಖಂಡರು ಪ್ರಯತ್ನಿಸಿದರೂ ಟಿಡಿಪ ಕಾರ್ಯಕರ್ತರು ಅಥವಾ ಜೂನಿಯರ್ ಎನ್‌ಟಿಆರ್ ಅಭಿಮಾನಿಗಳು ಕೇಳಲಿಲ್ಲ. ಬಹಳ ಕಷ್ಟಪಟ್ಟು ಪರಿಸ್ಥಿತಿಯನ್ನು ಹತೋಟಿಗೆ ತರಲಾಯಿತು.

ಮತ್ತೊಂದೆಡೆ, ಎನ್‌ಟಿಆರ್‌ ಅವರ ಜಿಲ್ಲೆಯ ತಿರುವುರು ಸಭಾಭವನದಲ್ಲಿ ಜೂನಿಯರ್‌ ಎನ್‌ಟಿಆರ್‌ ಅವರ ಫ್ಲೆಕ್ಸ್ ಗಳು ಸಂಚಲನ ಮೂಡಿಸಿದವು. ಅಭಿಮಾನಿಗಳು ಜೂನಿಯರ್ ಎನ್ ಟಿಆರ್ ಸಿಎಂ ಎಂದು ಬರೆದ ಬ್ಯಾನರ್ ಹಾಗೂ ಬಾವುಟಗಳನ್ನು ಪ್ರದರ್ಶಿಸಿದರು. ಧ್ವಜ ಮತ್ತು ಬ್ಯಾನರ್‌ಗಳನ್ನು ಕಸಿದುಕೊಂಡ ಟಿಡಿಪಿ ಕಾರ್ಯಕರ್ತರು ಅವುಗಳನ್ನು ಪಕ್ಕಕ್ಕೆ ಎಸೆದರು. ಕೆರಳಿದ ಜೂನಿಯರ್ ಎನ್ ಟಿಆರ್ ಅಭಿಮಾನಿಗಳು ಟಿಡಿಪಿ ಕಾರ್ಯಕರ್ತರ ವರ್ತನೆಯನ್ನು ದೂಷಿಸಿದ್ದಾರೆ.

ಜೂನಿಯರ್ ಎನ್ ಟಿಆರ್ ಅಭಿಮಾನಿಗಳು ಮತ್ತು ಟಿಡಿಪಿ ಕಾರ್ಯಕರ್ತರ ಜಗಳಕ್ಕೆ ತೆಲುಗು ದೇಶಂ ನಾಯಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಘಟನೆಯ ಹಿಂದೆ ಯಾರೋ ಕೈವಾಡ ಇರಬಹುದು ಎಂದು ಶಂಕಿಸಲಾಗಿದೆ. ಮುಂಬರುವ ಸಭೆಗಳಲ್ಲಿ ಸಂಯಮದಿಂದ ವರ್ತಿಸುವಂತೆ ಟಿಡಿಪಿ ಕಾರ್ಯಕರ್ತರಿಗೆ ಪಕ್ಷದ ಹಿರಿಯ ಮುಖಂಡರು ಸಲಹೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ವಿಜಯಪುರದಲ್ಲಿ ಧರ್ಮ ದಂಗಲ್; ಸಿದ್ದೇಶ್ವರ ಜಾತ್ರೆಯಲ್ಲಿ ಮುಸ್ಲಿಮರಿಗೆ ವ್ಯಾಪಾರಕ್ಕೆ ಅವಕಾಶವಿಲ್ಲ ಎಂದು ಹಾಕಲಾಗಿದ್ದ ಬ್ಯಾನರ್ ತೆರವು

ಜ್ಯೂನಿಯರ್ ಎನ್‌ಟಿಆರ್ ಅಭಿಮಾನಿಗಳು ಅಥವಾ ವೈಎಸ್‌ಆರ್ ಕಾಂಗ್ರೆಸ್ ಕಾರ್ಯಕರ್ತರ ಸೋಗಿನಲ್ಲಿ ಜ್ಯೂನಿಯರ್ ಎನ್‌ಟಿಆರ್ ಅಭಿಮಾನಿಗಳಾಗಿರುವ ಕೆಲವರು ಸಭೆಯಲ್ಲಿ ಪಾಲ್ಗೊಂಡು ಪ್ರಚೋದನಕಾರಿ ಘೋಷಣೆಗಳನ್ನು ಕೂಗಿದ್ದಾರೆ ಎಂದು ಎಂ9 ಡಾಟ್ ನ್ಯೂಸ್ ವರದಿ ಮಾಡಿದೆ. ಸ್ವಯಂ ಸೇವಕರನ್ನು ಸಮಾಧಾನಪಡಿಸಲು ಪ್ರಯತ್ನಿಸಿದರು ಆದರೆ ಅವರು ನಿಲ್ಲಿಸಲಿಲ್ಲ. ಚಂದ್ರಬಾಬು ಡಯಾಸ್‌ಗೆ ಬರುತ್ತಿದ್ದಾಗ ವೇದಿಕೆಗೆ ನುಗ್ಗಲು ಯತ್ನಿಸಿದರು. ಅವರು ಏನನ್ನೋ ಮಾಡುತ್ತಿದ್ದಾರೆ ಎಂದು ಗ್ರಹಿಸಿದ ಸ್ವಯಂಸೇವಕರು ಅವರನ್ನು ತಡೆಯಲು ಪ್ರಯತ್ನಿಸಿದರು ಮತ್ತು ಅವರ ನಡುವೆ ಮಾತಿನ ಚಕಮಕಿ ನಡೆಯಿತು ಎಂದು ವರದಿ ಮಾಡಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:56 pm, Mon, 8 January 24

ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ
ಬೆಂಗಳೂರು ಹೊಸೂರು ಹೆದ್ದಾರಿಯಲ್ಲಿ ಕಿಮೀಗಟ್ಟಲೆ ಟ್ರಾಫಿಕ್ ಜಾಮ್
ಬೆಂಗಳೂರು ಹೊಸೂರು ಹೆದ್ದಾರಿಯಲ್ಲಿ ಕಿಮೀಗಟ್ಟಲೆ ಟ್ರಾಫಿಕ್ ಜಾಮ್
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ ವಸತಿ ಭಾಗ್ಯ ಇಲ್ಲ
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ ವಸತಿ ಭಾಗ್ಯ ಇಲ್ಲ