AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮ್ಮು ಕಾಶ್ಮೀರ, ಲಡಾಖ್ ಭಾರತದ ಅವಿಭಾಜ್ಯ ಅಂಗ; ಪಾಕಿಸ್ತಾನ-ಚೀನಾಗೆ ವಿದೇಶಾಂಗ ಸಚಿವಾಲಯ ಚಾಟಿ

ಚೀನಾ ಮತ್ತು ಪಾಕಿಸ್ತಾನ ಜಂಟಿಯಾಗಿ ಬಿಡುಗಡೆ ಮಾಡಿದ ಜಂಟಿ ಹೇಳಿಕೆಯಲ್ಲಿ ಜಮ್ಮು ಮತ್ತು ಕಾಶ್ಮೀರವನ್ನು ಉಲ್ಲೇಖಿಸಿರುವುದನ್ನು ಭಾರತ ತೀವ್ರವಾಗಿ ಖಂಡಿಸಿದೆ. ಅಲ್ಲದೆ, ಕೇಂದ್ರಾಡಳಿತ ಪ್ರದೇಶಗಳಾದ ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್ ಯಾವತ್ತಿದ್ದರೂ ಭಾರತದ ಅವಿಭಾಜ್ಯ ಅಂಗ ಎಂದು ವಿದೇಶಾಂಗ ಸಚಿವಾಲಯ ದೃಢವಾಗಿ ಪ್ರತಿಪಾದಿಸಿದೆ. ಪಾಕಿಸ್ತಾನ ಅಕ್ರಮವಾಗಿ ಆಕ್ರಮಿಸಿಕೊಂಡಿರುವ ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಚೀನಾ ನಡೆಸುತ್ತಿರುವ CPEC ಯೋಜನೆಗಳು ಮತ್ತು ಮೂಲಸೌಕರ್ಯ ಅಭಿವೃದ್ಧಿಗಳನ್ನು ಕೂಡ ಭಾರತ ತೀವ್ರವಾಗಿ ವಿರೋಧಿಸಿದೆ.

ಜಮ್ಮು ಕಾಶ್ಮೀರ, ಲಡಾಖ್ ಭಾರತದ ಅವಿಭಾಜ್ಯ ಅಂಗ; ಪಾಕಿಸ್ತಾನ-ಚೀನಾಗೆ ವಿದೇಶಾಂಗ ಸಚಿವಾಲಯ ಚಾಟಿ
Randhir Jaiswal Image Credit source: PTI
ಸುಷ್ಮಾ ಚಕ್ರೆ
|

Updated on: May 26, 2026 | 10:19 PM

Share

ನವದೆಹಲಿ, ಮೇ 26: ಚೀನಾ ಮತ್ತು ಪಾಕಿಸ್ತಾನ ಜಂಟಿಯಾಗಿ ಬಿಡುಗಡೆ ಮಾಡಿದ್ದ ಜಂಟಿ ಹೇಳಿಕೆಯಲ್ಲಿ ಜಮ್ಮು ಮತ್ತು ಕಾಶ್ಮೀರವನ್ನು (Jammu and Kashmir) ಉಲ್ಲೇಖಿಸಿದ್ದಕ್ಕೆ ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA) ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. “ಜಮ್ಮು ಮತ್ತು ಕಾಶ್ಮೀರ, ಲಡಾಖ್ ಭಾರತದ ಅವಿಭಾಜ್ಯ ಅಂಗ” ಎಂದು ಪುನರುಚ್ಚರಿಸಿರುವ ಭಾರತ ಚೀನಾ-ಪಾಕಿಸ್ತಾನದ ವಿರುದ್ಧ ಕಿಡಿಕಾರಿದೆ.

ಇಂದು ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ (MEA) ವಕ್ತಾರ ರಣಧೀರ್ ಜೈಸ್ವಾಲ್, ಚೀನಾ-ಪಾಕಿಸ್ತಾನ ಜಂಟಿ ಹೇಳಿಕೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಕುರಿತು ಮಾಡಲಾದ ಅನಗತ್ಯ ಉಲ್ಲೇಖಗಳನ್ನು ಭಾರತವು ಖಡಾಖಂಡಿತವಾಗಿ ಖಂಡಿಸುತ್ತದೆ ಎಂದು ಹೇಳಿದರು. ಭಾರತದ ದೀರ್ಘಾವಧಿಯ ನಿಲುವನ್ನು ಪುನರುಚ್ಚರಿಸಿದ ರಣಧೀರ್ ಜೈಸ್ವಾಲ್, ಭಾರತದ ಅವಿಭಾಜ್ಯ ಅಂಗಗಳಾಗಿರುವ ಜಮ್ಮು-ಕಾಶ್ಮೀರ ಮತ್ತು ಲಡಾಖ್‌ಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಪ್ರತಿಕ್ರಿಯಿಸುವ ಯಾವುದೇ ಹಕ್ಕು ಬೇರೆ ಯಾವುದೇ ದೇಶಕ್ಕೆ ಇಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಏನಿದು ಅಬ್ರಹಾಂ ಒಪ್ಪಂದ? ಟ್ರಂಪ್ ಮಾತಿಗೆ ಒಪ್ಪಿದರೆ ಪಾಕಿಸ್ತಾನದ ಪಾಸ್​ಪೋರ್ಟ್ ಏಕೆ ಬದಲಾಗುತ್ತದೆ?

ಚೀನಾ-ಪಾಕಿಸ್ತಾನ ಆರ್ಥಿಕ ಕಾರಿಡಾರ್ (CPEC) ಕುರಿತಾದ ಉಲ್ಲೇಖಗಳಿಗೂ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. “ಭಾರತದ ಸಾರ್ವಭೌಮತ್ವ ಮತ್ತು ಪ್ರಾದೇಶಿಕ ಸಮಗ್ರತೆಗೆ ಧಕ್ಕೆ ತರುವ ಮೂಲಕ ಈ ಪ್ರದೇಶಗಳ ಮೇಲಿನ ಪಾಕಿಸ್ತಾನದ ಅಕ್ರಮ ಮತ್ತು ಬಲವಂತದ ಆಕ್ರಮಣವನ್ನು ಬಲಪಡಿಸಲು ಅಥವಾ ಕಾನೂನುಬದ್ಧಗೊಳಿಸಲು ಇತರ ದೇಶಗಳು ಮಾಡುವ ಯಾವುದೇ ಪ್ರಯತ್ನಗಳನ್ನು ನಾವು ದೃಢವಾಗಿ ವಿರೋಧಿಸುತ್ತೇವೆ ಮತ್ತು ತಿರಸ್ಕರಿಸುತ್ತೇವೆ” ಎಂದು ವಿದೇಶಾಂಗ ಸಚಿವಾಲಯದ ವಕ್ತಾರರು ತಿಳಿಸಿದ್ದಾರೆ.

ಇದನ್ನೂ ಓದಿ: ಪಾಕಿಸ್ತಾನದ ಸೈನಿಕರನ್ನು ಕರೆದೊಯ್ಯುತ್ತಿದ್ದ ರೈಲಿನ ಮೇಲೆ ಆತ್ಮಾಹುತಿ ಬಾಂಬ್ ದಾಳಿ; 24 ಜನ ಸಾವು, 70 ಮಂದಿಗೆ ಗಾಯ

1963ರಲ್ಲಿ ಪಾಕಿಸ್ತಾನ ಮತ್ತು ಚೀನಾ ನಡುವೆ ಸಹಿ ಮಾಡಲಾದ ಗಡಿ ಒಪ್ಪಂದವನ್ನು ಭಾರತ ಎಂದಿಗೂ ಮಾನ್ಯ ಮಾಡಿಲ್ಲ ಎಂಬುದನ್ನು ಭಾರತ ಮತ್ತೊಮ್ಮೆ ಸ್ಪಷ್ಟಪಡಿಸಿದೆ.

ತಮ್ಮ ಜಂಟಿ ಹೇಳಿಕೆಯಲ್ಲಿ, ಜಮ್ಮು ಮತ್ತು ಕಾಶ್ಮೀರ ವಿವಾದವನ್ನು ವಿಶ್ವಸಂಸ್ಥೆಯ ಚಾರ್ಟರ್, ಭದ್ರತಾ ಮಂಡಳಿಯ ನಿರ್ಣಯಗಳು ಮತ್ತು ದ್ವಿಪಕ್ಷೀಯ ಒಪ್ಪಂದಗಳ ಪ್ರಕಾರ ಶಾಂತಿಯುತವಾಗಿ ಪರಿಹರಿಸಿಕೊಳ್ಳಬೇಕು ಎಂದು ಚೀನಾ ಮತ್ತು ಪಾಕಿಸ್ತಾನ ಉಲ್ಲೇಖಿಸಿದ್ದವು. ಇದರೊಂದಿಗೆ, ಭಾರತದ ಸಾರ್ವಭೌಮತ್ವಕ್ಕೆ ಧಕ್ಕೆ ತರುವ ಜಮ್ಮು-ಕಾಶ್ಮೀರ ಭಾಗದ “ಚೀನಾ-ಪಾಕಿಸ್ತಾನ ಆರ್ಥಿಕ ಕಾರಿಡಾರ್” (CPEC) ಯೋಜನೆಗಳನ್ನು ಮತ್ತಷ್ಟು ವಿಸ್ತರಿಸುವ ಬಗ್ಗೆಯೂ ಚರ್ಚಿಸಲಾಗಿತ್ತು. ಇದಕ್ಕೆ ಭಾರತ ಆಕ್ಷೇಪ ವ್ಯಕ್ತಪಡಿಸಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
ರಸ್ತೆಯಲ್ಲಿ ಸಿಕ್ಕ ಅನಾಥ ಭಿಕ್ಷುಕನ ಹೇರ್​​ಕಟ್ ಮಾಡಿ ಆರೈಕೆ ಮಾಡಿದ ನಟ
ರಸ್ತೆಯಲ್ಲಿ ಸಿಕ್ಕ ಅನಾಥ ಭಿಕ್ಷುಕನ ಹೇರ್​​ಕಟ್ ಮಾಡಿ ಆರೈಕೆ ಮಾಡಿದ ನಟ
ನಾಯಕತ್ವ ಬದಲಾವಣೆ: ಸಭೆಯ ರಹಸ್ಯ ಬಿಚ್ಚಿಟ್ಟ ಕೆ.ಸಿ. ವೇಣುಗೋಪಾಲ್
ನಾಯಕತ್ವ ಬದಲಾವಣೆ: ಸಭೆಯ ರಹಸ್ಯ ಬಿಚ್ಚಿಟ್ಟ ಕೆ.ಸಿ. ವೇಣುಗೋಪಾಲ್
ಹಾಸನ ಸೈಟ್ ವಿವಾದ: ಬೆಂಗಳೂರಲ್ಲಿ ಡಿಜಿಪಿ ಭೇಟಿಯಾದ ಯಶ್ ತಾಯಿ ಪುಷ್ಪಾ
ಹಾಸನ ಸೈಟ್ ವಿವಾದ: ಬೆಂಗಳೂರಲ್ಲಿ ಡಿಜಿಪಿ ಭೇಟಿಯಾದ ಯಶ್ ತಾಯಿ ಪುಷ್ಪಾ
ಪುನೀತ್ ಅಂಗಾಂಗ ದಾನ: ಸಂಬಂಧಿಕರ ನೋವಿನ ಮಾತು
ಪುನೀತ್ ಅಂಗಾಂಗ ದಾನ: ಸಂಬಂಧಿಕರ ನೋವಿನ ಮಾತು
ಮೇಕೆದಾಟು ಯೋಜನೆಗೆ ಕ್ಯಾತೆ: ಪ್ರಧಾನಿಗೆ ಪತ್ರ ಬರೆದ ತಮಿಳುನಾಡು ಸಿಎಂ ವಿಜಯ್
ಮೇಕೆದಾಟು ಯೋಜನೆಗೆ ಕ್ಯಾತೆ: ಪ್ರಧಾನಿಗೆ ಪತ್ರ ಬರೆದ ತಮಿಳುನಾಡು ಸಿಎಂ ವಿಜಯ್
ರಾಜ್ಯಸಭೆ ಆಫರ್​​ ಬಂದರೆ ಸಿದ್ದರಾಮಯ್ಯ ನಿಲುವೇನು? ಇಲ್ಲಿದೆ ಮಾಹಿತಿ
ರಾಜ್ಯಸಭೆ ಆಫರ್​​ ಬಂದರೆ ಸಿದ್ದರಾಮಯ್ಯ ನಿಲುವೇನು? ಇಲ್ಲಿದೆ ಮಾಹಿತಿ
ಚಾಮುಂಡಿ ಬೆಟ್ಟಕ್ಕೆ ರಣ್ವೀರ್ ಸಿಂಗ್: ಪೂಜಾರಿ ಹೇಳಿದ್ದು ಹೀಗೆ?
ಚಾಮುಂಡಿ ಬೆಟ್ಟಕ್ಕೆ ರಣ್ವೀರ್ ಸಿಂಗ್: ಪೂಜಾರಿ ಹೇಳಿದ್ದು ಹೀಗೆ?
ತಾಜ್ ಮಹಲ್​ ಮುಂದೆ ಪತ್ನಿ ಜೊತೆ ಫೋಟೋ ಕ್ಲಿಕ್ಕಿಸಿಕೊಂಡ ರೂಬಿಯೋ
ತಾಜ್ ಮಹಲ್​ ಮುಂದೆ ಪತ್ನಿ ಜೊತೆ ಫೋಟೋ ಕ್ಲಿಕ್ಕಿಸಿಕೊಂಡ ರೂಬಿಯೋ
ಗಲಾಟೆ ವೇಳೆ ಯುವಕನ ಕಾಲಿಗೆ ಗುಂಡು ಹಾರಿಸಿದ ಉದ್ಯಮಿಯ ಅಂಗರಕ್ಷಕ
ಗಲಾಟೆ ವೇಳೆ ಯುವಕನ ಕಾಲಿಗೆ ಗುಂಡು ಹಾರಿಸಿದ ಉದ್ಯಮಿಯ ಅಂಗರಕ್ಷಕ
ಸಿದ್ದರಾಮಯ್ಯ-ರಾಹುಲ್ ಗಾಂಧಿ ಹೈವೋಲ್ಟೇಜ್ ಸಭೆಯ ಇನ್ಸ್​​​ಸೈಡ್ ಮಾಹಿತಿ
ಸಿದ್ದರಾಮಯ್ಯ-ರಾಹುಲ್ ಗಾಂಧಿ ಹೈವೋಲ್ಟೇಜ್ ಸಭೆಯ ಇನ್ಸ್​​​ಸೈಡ್ ಮಾಹಿತಿ