AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ, ಹೈದರಾಬಾದ್​ ಸೇರಿ ದೇಶದ ವಿವಿಧೆಡೆ ಇರುವ ಸಿಆರ್​ಪಿಎಫ್​ ಶಾಲೆಗಳಿಗೆ ಬಾಂಬ್ ಬೆದರಿಕೆ

ದೆಹಲಿ, ಹೈದರಾಬಾದ್​ ಸೇರಿ ದೇಶದ ವಿವಿಧೆಡೆ ಇರುವ ಸಿಆರ್​ಪಿಎಫ್ ಶಾಲೆಗಳಿಗೆ ಬಾಂಬ್ ಬೆದರಿಕೆ ಬಂದಿದೆ. ಅವುಗಳಲ್ಲಿ ಎರಡು ದೆಹಲಿಯಲ್ಲಿ ಮತ್ತು ಒಂದು ಹೈದರಾಬಾದ್‌ನಲ್ಲಿವೆ. ಸೋಮವಾರ ತಡರಾತ್ರಿ ಈ ಶಾಲೆಗಳ ಆಡಳಿತ ಮಂಡಳಿಗೆ ಇಮೇಲ್ ಮೂಲಕ ಬೆದರಿಕೆಯನ್ನು ರವಾನಿಸಲಾಗಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ಎಎನ್​ಐ ವರದಿ ಮಾಡಿದೆ.

ದೆಹಲಿ, ಹೈದರಾಬಾದ್​ ಸೇರಿ ದೇಶದ ವಿವಿಧೆಡೆ ಇರುವ ಸಿಆರ್​ಪಿಎಫ್​ ಶಾಲೆಗಳಿಗೆ ಬಾಂಬ್ ಬೆದರಿಕೆ
ಶಾಲೆImage Credit source: Hindustan Times
ನಯನಾ ರಾಜೀವ್
|

Updated on: Oct 22, 2024 | 12:30 PM

Share

ದೆಹಲಿ, ಹೈದರಾಬಾದ್​ ಸೇರಿ ದೇಶದ ವಿವಿಧೆಡೆ ಇರುವ ಸಿಆರ್​ಪಿಎಫ್ ಶಾಲೆಗಳಿಗೆ ಬಾಂಬ್ ಬೆದರಿಕೆ ಬಂದಿದೆ. ಅವುಗಳಲ್ಲಿ ಎರಡು ದೆಹಲಿಯಲ್ಲಿ ಮತ್ತು ಒಂದು ಹೈದರಾಬಾದ್‌ನಲ್ಲಿವೆ. ಸೋಮವಾರ ತಡರಾತ್ರಿ ಈ ಶಾಲೆಗಳ ಆಡಳಿತ ಮಂಡಳಿಗೆ ಇಮೇಲ್ ಮೂಲಕ ಬೆದರಿಕೆಯನ್ನು ರವಾನಿಸಲಾಗಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ಎಎನ್​ಐ ವರದಿ ಮಾಡಿದೆ.

ಸಿಆರ್​ಪಿಎಫ್ ಶಾಲೆ ಎದುರು ಸ್ಫೋಟ ಸಂಭವಿಸಿತ್ತು ದೆಹಲಿಯ ರೋಹಿಣಿಯ ಪ್ರಶಾಂತ್ ವಿಹಾರ್ ಪ್ರದೇಶದ ಸಿಆರ್​ಪಿಎಫ್ ಶಾಲೆಯ ಬಳಿ ಭಾನುವಾರ ಬೆಳಗ್ಗೆ ಭಾರಿ ಸ್ಫೋಟ ಸಂಭವಿಸಿತ್ತು. ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬೆಳಗ್ಗೆ 7.50ರ ಸುಮಾರಿಗೆ ಸಂಭವಿಸಿದ ಸ್ಫೋಟದ ಕಾರಣವನ್ನು ಕಂಡುಹಿಡಿಯಲು ಸೆಕ್ಟರ್ 14ರಲ್ಲಿರುವ ಸಿಆರ್​ಪಿಎಫ್ ಶಾಲೆಯ ಬಳಿಗೆ ಬಾಂಬ್ ಸ್ಕ್ವಾಡ್ ಮತ್ತು ಪೊಲೀಸ್ ವಿಧಿವಿಜ್ಞಾನ ತಂಡಗಳು ಆಗಮಿಸಿದ್ದವು.

ಅಪರಾಧ ವಿಭಾಗ ಮತ್ತು ವಿಶೇಷ ಸೆಲ್ ಮತ್ತು ಅಗ್ನಿಶಾಮಕ ದಳ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಕೂಡ ಸ್ಥಳದಲ್ಲಿದ್ದು, ಪರಿಶೀಲನೆ ನಡೆಸಿದ್ದರು. ಶಾಲೆಯ ಗೋಡೆ, ಹತ್ತಿರದ ಅಂಗಡಿಗಳು ಮತ್ತು ಕಾರಿಗೆ ಹಾನಿಯಾಗಿದೆ ಮತ್ತು ಇಡೀ ಪ್ರದೇಶದ ಸುತ್ತ ಯಾರೂ ಬರದಂತೆ ನಿರ್ಬಂಧ ಹಾಕಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮತ್ತಷ್ಟು ಓದಿ: ದೆಹಲಿ: ಸಿಆರ್​ಪಿಎಫ್​ ಸ್ಕೂಲ್ ಎದುರು ನಿಗೂಢ ಸ್ಫೋಟ

ಸ್ಥಳದಿಂದ ಹೊಗೆ ಬರುತ್ತಿರುವುದು ಕಾಣಿಸಿದೆ. ಸ್ಫೋಟದ ನಂತರ ದಟ್ಟವಾದ ಬಿಳಿ ಹೊಗೆ ಕಾಣಿಸಿರುವ ವೀಡಿಯೊವೊಂದು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ. ದೊಡ್ಡ ಶಬ್ದದೊಂದಿಗೆ ಸ್ಫೋಟ ಸಂಭವಿಸಿದೆ ಎಂದು ಬೆಳಗ್ಗೆ 7.47ಕ್ಕೆ ಪಿಸಿಆರ್ ಕರೆ ಬಂದಿತ್ತು. ಘಟನಾ ಸ್ಥಳದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ
ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ
3 ಮದುವೆಯಾಗಿ ಲಕ್ಷಾಂತರ ರೂ ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ!
3 ಮದುವೆಯಾಗಿ ಲಕ್ಷಾಂತರ ರೂ ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ!
ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿ ಬಿದ್ದ ಇನ್ಸ್‌ಪೆಕ್ಟರ್!
ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿ ಬಿದ್ದ ಇನ್ಸ್‌ಪೆಕ್ಟರ್!
ಲಕ್ಕುಂಡಿಯಲ್ಲಿ ಉತ್ಖನನ ನಡೆಯುತ್ತಿರುವ ಸ್ಥಳದಲ್ಲೇ ಹಾವು ಪ್ರತ್ಯಕ್ಷ!
ಲಕ್ಕುಂಡಿಯಲ್ಲಿ ಉತ್ಖನನ ನಡೆಯುತ್ತಿರುವ ಸ್ಥಳದಲ್ಲೇ ಹಾವು ಪ್ರತ್ಯಕ್ಷ!
ಕಿರಿದಾದ ರಸ್ತೆಯಲ್ಲಿ ಸ್ಕೂಲ್ ಬಸ್ ಅಟ್ಟಾಡಿಸಿದ ಭಾರಿ ಗಾತ್ರದ ಒಂಟಿ ಸಲಗ!
ಕಿರಿದಾದ ರಸ್ತೆಯಲ್ಲಿ ಸ್ಕೂಲ್ ಬಸ್ ಅಟ್ಟಾಡಿಸಿದ ಭಾರಿ ಗಾತ್ರದ ಒಂಟಿ ಸಲಗ!
ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಕೆಲ‌ಕಾಲ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ
ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಕೆಲ‌ಕಾಲ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ
ಕೊಪ್ಪಳ: ಕಿಮ್ಸ್ ಆಡಳಿತಾಧಿಕಾರಿ ಕಲ್ಲೇಶ್ ಮನೆ ಸೇರಿ 6 ಕಡೆ ಲೋಕಾಯುಕ್ತ ದಾಳಿ
ಕೊಪ್ಪಳ: ಕಿಮ್ಸ್ ಆಡಳಿತಾಧಿಕಾರಿ ಕಲ್ಲೇಶ್ ಮನೆ ಸೇರಿ 6 ಕಡೆ ಲೋಕಾಯುಕ್ತ ದಾಳಿ
ನಟಿಯರ ಪರವಾಗಿ ಚಿತ್ರರಂಗಕ್ಕೆ ವಿಶೇಷ ಮನವಿ ಮಾಡಿದ ರಚಿತಾ ರಾಮ್
ನಟಿಯರ ಪರವಾಗಿ ಚಿತ್ರರಂಗಕ್ಕೆ ವಿಶೇಷ ಮನವಿ ಮಾಡಿದ ರಚಿತಾ ರಾಮ್
ಖಾಸಗಿ ಶಾಲೆಗಳ ಶುಲ್ಕ ವಸೂಲಿಗೆ ಬೀಳುತ್ತಾ ಬ್ರೇಕ್?
ಖಾಸಗಿ ಶಾಲೆಗಳ ಶುಲ್ಕ ವಸೂಲಿಗೆ ಬೀಳುತ್ತಾ ಬ್ರೇಕ್?