AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ, ಹೈದರಾಬಾದ್​ ಸೇರಿ ದೇಶದ ವಿವಿಧೆಡೆ ಇರುವ ಸಿಆರ್​ಪಿಎಫ್​ ಶಾಲೆಗಳಿಗೆ ಬಾಂಬ್ ಬೆದರಿಕೆ

ದೆಹಲಿ, ಹೈದರಾಬಾದ್​ ಸೇರಿ ದೇಶದ ವಿವಿಧೆಡೆ ಇರುವ ಸಿಆರ್​ಪಿಎಫ್ ಶಾಲೆಗಳಿಗೆ ಬಾಂಬ್ ಬೆದರಿಕೆ ಬಂದಿದೆ. ಅವುಗಳಲ್ಲಿ ಎರಡು ದೆಹಲಿಯಲ್ಲಿ ಮತ್ತು ಒಂದು ಹೈದರಾಬಾದ್‌ನಲ್ಲಿವೆ. ಸೋಮವಾರ ತಡರಾತ್ರಿ ಈ ಶಾಲೆಗಳ ಆಡಳಿತ ಮಂಡಳಿಗೆ ಇಮೇಲ್ ಮೂಲಕ ಬೆದರಿಕೆಯನ್ನು ರವಾನಿಸಲಾಗಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ಎಎನ್​ಐ ವರದಿ ಮಾಡಿದೆ.

ದೆಹಲಿ, ಹೈದರಾಬಾದ್​ ಸೇರಿ ದೇಶದ ವಿವಿಧೆಡೆ ಇರುವ ಸಿಆರ್​ಪಿಎಫ್​ ಶಾಲೆಗಳಿಗೆ ಬಾಂಬ್ ಬೆದರಿಕೆ
ಶಾಲೆImage Credit source: Hindustan Times
ನಯನಾ ರಾಜೀವ್
|

Updated on: Oct 22, 2024 | 12:30 PM

Share

ದೆಹಲಿ, ಹೈದರಾಬಾದ್​ ಸೇರಿ ದೇಶದ ವಿವಿಧೆಡೆ ಇರುವ ಸಿಆರ್​ಪಿಎಫ್ ಶಾಲೆಗಳಿಗೆ ಬಾಂಬ್ ಬೆದರಿಕೆ ಬಂದಿದೆ. ಅವುಗಳಲ್ಲಿ ಎರಡು ದೆಹಲಿಯಲ್ಲಿ ಮತ್ತು ಒಂದು ಹೈದರಾಬಾದ್‌ನಲ್ಲಿವೆ. ಸೋಮವಾರ ತಡರಾತ್ರಿ ಈ ಶಾಲೆಗಳ ಆಡಳಿತ ಮಂಡಳಿಗೆ ಇಮೇಲ್ ಮೂಲಕ ಬೆದರಿಕೆಯನ್ನು ರವಾನಿಸಲಾಗಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ಎಎನ್​ಐ ವರದಿ ಮಾಡಿದೆ.

ಸಿಆರ್​ಪಿಎಫ್ ಶಾಲೆ ಎದುರು ಸ್ಫೋಟ ಸಂಭವಿಸಿತ್ತು ದೆಹಲಿಯ ರೋಹಿಣಿಯ ಪ್ರಶಾಂತ್ ವಿಹಾರ್ ಪ್ರದೇಶದ ಸಿಆರ್​ಪಿಎಫ್ ಶಾಲೆಯ ಬಳಿ ಭಾನುವಾರ ಬೆಳಗ್ಗೆ ಭಾರಿ ಸ್ಫೋಟ ಸಂಭವಿಸಿತ್ತು. ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬೆಳಗ್ಗೆ 7.50ರ ಸುಮಾರಿಗೆ ಸಂಭವಿಸಿದ ಸ್ಫೋಟದ ಕಾರಣವನ್ನು ಕಂಡುಹಿಡಿಯಲು ಸೆಕ್ಟರ್ 14ರಲ್ಲಿರುವ ಸಿಆರ್​ಪಿಎಫ್ ಶಾಲೆಯ ಬಳಿಗೆ ಬಾಂಬ್ ಸ್ಕ್ವಾಡ್ ಮತ್ತು ಪೊಲೀಸ್ ವಿಧಿವಿಜ್ಞಾನ ತಂಡಗಳು ಆಗಮಿಸಿದ್ದವು.

ಅಪರಾಧ ವಿಭಾಗ ಮತ್ತು ವಿಶೇಷ ಸೆಲ್ ಮತ್ತು ಅಗ್ನಿಶಾಮಕ ದಳ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಕೂಡ ಸ್ಥಳದಲ್ಲಿದ್ದು, ಪರಿಶೀಲನೆ ನಡೆಸಿದ್ದರು. ಶಾಲೆಯ ಗೋಡೆ, ಹತ್ತಿರದ ಅಂಗಡಿಗಳು ಮತ್ತು ಕಾರಿಗೆ ಹಾನಿಯಾಗಿದೆ ಮತ್ತು ಇಡೀ ಪ್ರದೇಶದ ಸುತ್ತ ಯಾರೂ ಬರದಂತೆ ನಿರ್ಬಂಧ ಹಾಕಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮತ್ತಷ್ಟು ಓದಿ: ದೆಹಲಿ: ಸಿಆರ್​ಪಿಎಫ್​ ಸ್ಕೂಲ್ ಎದುರು ನಿಗೂಢ ಸ್ಫೋಟ

ಸ್ಥಳದಿಂದ ಹೊಗೆ ಬರುತ್ತಿರುವುದು ಕಾಣಿಸಿದೆ. ಸ್ಫೋಟದ ನಂತರ ದಟ್ಟವಾದ ಬಿಳಿ ಹೊಗೆ ಕಾಣಿಸಿರುವ ವೀಡಿಯೊವೊಂದು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ. ದೊಡ್ಡ ಶಬ್ದದೊಂದಿಗೆ ಸ್ಫೋಟ ಸಂಭವಿಸಿದೆ ಎಂದು ಬೆಳಗ್ಗೆ 7.47ಕ್ಕೆ ಪಿಸಿಆರ್ ಕರೆ ಬಂದಿತ್ತು. ಘಟನಾ ಸ್ಥಳದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ