AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ, ಹೈದರಾಬಾದ್​ ಸೇರಿ ದೇಶದ ವಿವಿಧೆಡೆ ಇರುವ ಸಿಆರ್​ಪಿಎಫ್​ ಶಾಲೆಗಳಿಗೆ ಬಾಂಬ್ ಬೆದರಿಕೆ

ದೆಹಲಿ, ಹೈದರಾಬಾದ್​ ಸೇರಿ ದೇಶದ ವಿವಿಧೆಡೆ ಇರುವ ಸಿಆರ್​ಪಿಎಫ್ ಶಾಲೆಗಳಿಗೆ ಬಾಂಬ್ ಬೆದರಿಕೆ ಬಂದಿದೆ. ಅವುಗಳಲ್ಲಿ ಎರಡು ದೆಹಲಿಯಲ್ಲಿ ಮತ್ತು ಒಂದು ಹೈದರಾಬಾದ್‌ನಲ್ಲಿವೆ. ಸೋಮವಾರ ತಡರಾತ್ರಿ ಈ ಶಾಲೆಗಳ ಆಡಳಿತ ಮಂಡಳಿಗೆ ಇಮೇಲ್ ಮೂಲಕ ಬೆದರಿಕೆಯನ್ನು ರವಾನಿಸಲಾಗಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ಎಎನ್​ಐ ವರದಿ ಮಾಡಿದೆ.

ದೆಹಲಿ, ಹೈದರಾಬಾದ್​ ಸೇರಿ ದೇಶದ ವಿವಿಧೆಡೆ ಇರುವ ಸಿಆರ್​ಪಿಎಫ್​ ಶಾಲೆಗಳಿಗೆ ಬಾಂಬ್ ಬೆದರಿಕೆ
ಶಾಲೆImage Credit source: Hindustan Times
ನಯನಾ ರಾಜೀವ್
|

Updated on: Oct 22, 2024 | 12:30 PM

Share

ದೆಹಲಿ, ಹೈದರಾಬಾದ್​ ಸೇರಿ ದೇಶದ ವಿವಿಧೆಡೆ ಇರುವ ಸಿಆರ್​ಪಿಎಫ್ ಶಾಲೆಗಳಿಗೆ ಬಾಂಬ್ ಬೆದರಿಕೆ ಬಂದಿದೆ. ಅವುಗಳಲ್ಲಿ ಎರಡು ದೆಹಲಿಯಲ್ಲಿ ಮತ್ತು ಒಂದು ಹೈದರಾಬಾದ್‌ನಲ್ಲಿವೆ. ಸೋಮವಾರ ತಡರಾತ್ರಿ ಈ ಶಾಲೆಗಳ ಆಡಳಿತ ಮಂಡಳಿಗೆ ಇಮೇಲ್ ಮೂಲಕ ಬೆದರಿಕೆಯನ್ನು ರವಾನಿಸಲಾಗಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ಎಎನ್​ಐ ವರದಿ ಮಾಡಿದೆ.

ಸಿಆರ್​ಪಿಎಫ್ ಶಾಲೆ ಎದುರು ಸ್ಫೋಟ ಸಂಭವಿಸಿತ್ತು ದೆಹಲಿಯ ರೋಹಿಣಿಯ ಪ್ರಶಾಂತ್ ವಿಹಾರ್ ಪ್ರದೇಶದ ಸಿಆರ್​ಪಿಎಫ್ ಶಾಲೆಯ ಬಳಿ ಭಾನುವಾರ ಬೆಳಗ್ಗೆ ಭಾರಿ ಸ್ಫೋಟ ಸಂಭವಿಸಿತ್ತು. ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬೆಳಗ್ಗೆ 7.50ರ ಸುಮಾರಿಗೆ ಸಂಭವಿಸಿದ ಸ್ಫೋಟದ ಕಾರಣವನ್ನು ಕಂಡುಹಿಡಿಯಲು ಸೆಕ್ಟರ್ 14ರಲ್ಲಿರುವ ಸಿಆರ್​ಪಿಎಫ್ ಶಾಲೆಯ ಬಳಿಗೆ ಬಾಂಬ್ ಸ್ಕ್ವಾಡ್ ಮತ್ತು ಪೊಲೀಸ್ ವಿಧಿವಿಜ್ಞಾನ ತಂಡಗಳು ಆಗಮಿಸಿದ್ದವು.

ಅಪರಾಧ ವಿಭಾಗ ಮತ್ತು ವಿಶೇಷ ಸೆಲ್ ಮತ್ತು ಅಗ್ನಿಶಾಮಕ ದಳ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಕೂಡ ಸ್ಥಳದಲ್ಲಿದ್ದು, ಪರಿಶೀಲನೆ ನಡೆಸಿದ್ದರು. ಶಾಲೆಯ ಗೋಡೆ, ಹತ್ತಿರದ ಅಂಗಡಿಗಳು ಮತ್ತು ಕಾರಿಗೆ ಹಾನಿಯಾಗಿದೆ ಮತ್ತು ಇಡೀ ಪ್ರದೇಶದ ಸುತ್ತ ಯಾರೂ ಬರದಂತೆ ನಿರ್ಬಂಧ ಹಾಕಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮತ್ತಷ್ಟು ಓದಿ: ದೆಹಲಿ: ಸಿಆರ್​ಪಿಎಫ್​ ಸ್ಕೂಲ್ ಎದುರು ನಿಗೂಢ ಸ್ಫೋಟ

ಸ್ಥಳದಿಂದ ಹೊಗೆ ಬರುತ್ತಿರುವುದು ಕಾಣಿಸಿದೆ. ಸ್ಫೋಟದ ನಂತರ ದಟ್ಟವಾದ ಬಿಳಿ ಹೊಗೆ ಕಾಣಿಸಿರುವ ವೀಡಿಯೊವೊಂದು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ. ದೊಡ್ಡ ಶಬ್ದದೊಂದಿಗೆ ಸ್ಫೋಟ ಸಂಭವಿಸಿದೆ ಎಂದು ಬೆಳಗ್ಗೆ 7.47ಕ್ಕೆ ಪಿಸಿಆರ್ ಕರೆ ಬಂದಿತ್ತು. ಘಟನಾ ಸ್ಥಳದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಆ ಶಾಸಕರಿಂದಲೇ ಅಡ್ಡಮತದಾನ? ಸಿಟಿ ರವಿ ಏನಂದ್ರು ನೋಡಿ
ಆ ಶಾಸಕರಿಂದಲೇ ಅಡ್ಡಮತದಾನ? ಸಿಟಿ ರವಿ ಏನಂದ್ರು ನೋಡಿ
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ