AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಮಾಜವಾದಿ ಪಕ್ಷದ ನಿಕಟವರ್ತಿ ಉತ್ತರಪ್ರದೇಶದ ರಿಯಲ್ ಎಸ್ಟೇಟ್ ಪ್ರವರ್ತಕರ ಆಸ್ತಿ ಮೇಲೆ ಐಟಿ ದಾಳಿ

ಆಗ್ರಾದಲ್ಲಿ ಶೂಗಳ ವ್ಯಾಪಾರದಲ್ಲಿ ವ್ಯವಹರಿಸುವ ಕಂಪನಿಗಳ ಆವರಣದಲ್ಲೂ ಶೋಧ ನಡೆಸಲಾಗುತ್ತಿದೆ ಎಂದು ಆದಾಯ ತೆರಿಗೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಚೌಧರಿ ಸಮಾಜವಾದಿ ಪಕ್ಷಕ್ಕೆ (ಎಸ್‌ಪಿ) ನಿಕಟವರ್ತಿ ಎಂದು ಹೇಳಲಾಗಿದೆ.

ಸಮಾಜವಾದಿ ಪಕ್ಷದ ನಿಕಟವರ್ತಿ ಉತ್ತರಪ್ರದೇಶದ ರಿಯಲ್ ಎಸ್ಟೇಟ್ ಪ್ರವರ್ತಕರ ಆಸ್ತಿ ಮೇಲೆ ಐಟಿ ದಾಳಿ
ಪ್ರಾತಿನಿಧಿಕ ಚಿತ್ರ
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on:Jan 04, 2022 | 4:37 PM

Share

ಲಖನೌ: ಆದಾಯ ತೆರಿಗೆ (IT) ಇಲಾಖೆಯು ರಿಯಲ್ ಎಸ್ಟೇಟ್ ಕಂಪನಿ ಎಸಿಇ ಗ್ರೂಪ್ (ACE Group) ಮತ್ತು ಅದರ ಪ್ರವರ್ತಕ ಅಜಯ್ ಚೌಧರಿ(Ajay Chaudhary) ಅವರಿಗೆ ಸೇರಿದ ದೆಹಲಿ, ನೋಯ್ಡಾ ಮತ್ತು ಗ್ರೇಟರ್ ನೋಯ್ಡಾದ ಇತರ ಸ್ಥಳಗಳಲ್ಲಿ ಶೋಧ ನಡೆಸುತ್ತಿದೆ ಎಂದು ಮೂಲಗಳು ತಿಳಿಸಿವೆ. ಆಗ್ರಾದಲ್ಲಿ ಶೂಗಳ ವ್ಯಾಪಾರದಲ್ಲಿ ವ್ಯವಹರಿಸುವ ಕಂಪನಿಗಳ ಆವರಣದಲ್ಲೂ ಶೋಧ ನಡೆಸಲಾಗುತ್ತಿದೆ ಎಂದು ಆದಾಯ ತೆರಿಗೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಚೌಧರಿ ಸಮಾಜವಾದಿ ಪಕ್ಷಕ್ಕೆ (Samajwadi Party) ನಿಕಟವರ್ತಿ ಎಂದು ಹೇಳಲಾಗಿದೆ. ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವಂತೆಯೇ, ಆದಾಯ ತೆರಿಗೆ ಇಲಾಖೆ ಮತ್ತು ಜಿಎಸ್‌ಟಿ ಅಧಿಕಾರಿಗಳು ಹಲವಾರು ಉದ್ಯಮಿಗಳ ಮನೆ ,ಕಚೇರಿ ಮೇಲೆ ನಡೆಸಿದ ಶೋಧಗಳು ಆಡಳಿತಾರೂಢ ಬಿಜೆಪಿ ಮತ್ತು ಪ್ರತಿಪಕ್ಷ ಎಸ್‌ಪಿ ನಡುವೆ ರಾಜಕೀಯ ದೋಷಾರೋಪಣೆಗೆ ಕಾರಣವಾಗಿವೆ.ಅಜಯ್ ಚೌಧರಿ ಅವರು ಸಮಾಜವಾದಿ ಪಕ್ಷದ ಮುಖ್ಯಸ್ಥ ಮತ್ತು ಉತ್ತರ ಪ್ರದೇಶದ ಮಾಜಿ ಸಿಎಂ ಅಖಿಲೇಶ್ ಯಾದವ್ ಅವರೊಂದಿಗೆ ನಿಕಟ ಸಂಪರ್ಕ ಹೊಂದಿದ್ದಾರೆ ಎಂದು ನಂಬಲಾಗಿದೆ ಎಂದು ಇಂಡಿಯಾ ಟಿವಿ ವರದಿ ಮಾಡಿದೆ.

ಐಟಿ ಅಧಿಕಾರಿಗಳು ಎಸಿಇ ಗ್ರೂಪ್‌ನ ಕಾರ್ಪೊರೇಟ್ ಕಚೇರಿ, ಕೆಲವು ವಸತಿ ಮತ್ತು ವಾಣಿಜ್ಯ ಕಟ್ಟಡಗಳಲ್ಲಿ ಶೋಧ ನಡೆಸುತ್ತಿದ್ದಾರೆ. ಗ್ರೇಟರ್ ನೋಯ್ಡಾದಲ್ಲಿರುವ ಕಂಪನಿಯ ಕಚೇರಿಯ ಮೇಲೂ ದಾಳಿ ನಡೆಯುತ್ತಿದೆ. ಐಟಿ ಅಧಿಕಾರಿಗಳ ಪ್ರಕಾರ, ಕಂಪನಿ ಮತ್ತು ಇತರರ ವಿರುದ್ಧ ತೆರಿಗೆ ವಂಚನೆ ತನಿಖೆಯ ಭಾಗವಾಗಿ ದಾಳಿ ನಡೆಸಲಾಗುತ್ತಿದೆ. ನೋಯ್ಡಾ, ಗ್ರೇಟರ್ ನೋಯ್ಡಾದಲ್ಲಿರುವ ಗುಂಪಿನ ಕಚೇರಿಗಳು ಮತ್ತು ಇತರ ಸ್ಥಳಗಳು ಮತ್ತು ಆಗ್ರಾದಲ್ಲಿನ ಕೆಲವು ಸಂಬಂಧಿತ ವ್ಯಕ್ತಿಗಳನ್ನು ಹುಡುಕಾಟದ ಭಾಗವಾಗಿದೆ ಎಂದು ಅವರು ಖಚಿತಪಡಿಸಿದ್ದಾರೆ. ಐಟಿ ತಂಡವು ಬಿಲ್ಡರ್‌ನ ಹಾರ್ಡ್ ಡಿಸ್ಕ್ ಮತ್ತು ಡಿಜಿಟಲ್ ಉಪಕರಣಗಳನ್ನು ಪರಿಶೀಲಿಸುತ್ತಿದೆ. ಅವರು ಕಂಪನಿಯ ಬ್ಯಾಲೆನ್ಸ್ ಶೀಟ್ ಅನ್ನು ಸಹ ಪರಿಶೀಲಿಸುತ್ತಿದ್ದಾರೆ.

ಇವರು ನೋಯ್ಡಾ, ಗ್ರೇಟರ್ ನೋಯ್ಡಾ ಮತ್ತು ರಾಷ್ಟ್ರ ರಾಜಧಾನಿ ಪ್ರದೇಶದ ಇತರ ಕೆಲವು ಸ್ಥಳಗಳಲ್ಲಿ ವಾಣಿಜ್ಯ ಮತ್ತು ವಸತಿ ಯೋಜನೆಗಳನ್ನು ಹೊಂದಿದೆ. ಏತನ್ಮಧ್ಯೆ, ಆಗ್ರಾದ ನುವಾ ಗ್ರೂಪ್‌ನ ಪ್ರವರ್ತಕ ಹರ್‌ಸಿಮ್ರಾನ್ ಸಿಂಗ್ ಅಲಾಗ್‌ಗೆ ಸಂಬಂಧಿಸಿದ ಆಸ್ತಿಗಳ ಮೇಲೂ ಐಟಿ ದಾಳಿಗಳು ನಡೆಯುತ್ತಿವೆ.

ಕಳೆದ ತಿಂಗಳು ಜಿಎಸ್‌ಟಿ ಅಧಿಕಾರಿಗಳು ಕಾನ್ಪುರ ಮತ್ತು ಕನೌಜ್‌ನಲ್ಲಿರುವ ಸುಗಂಧ ದ್ರವ್ಯ ವ್ಯಾಪಾರಿ ಪೀಯೂಶ್ ಜೈನ್ ಅವರ ಆವರಣದಲ್ಲಿ ಶೋಧ ನಡೆಸಿದ್ದರು. ಕನೌಜ್​​ನ ಓಡೋಕೆಮ್ ಇಂಡಸ್ಟ್ರೀಸ್ – ಸುಗಂಧ ದ್ರವ್ಯಗಳ ಸಂಯುಕ್ತಗಳ ತಯಾರಕರು ಮತ್ತು ಅದರ ಮಾಲೀಕ ಪೀಯೂಶ್ ಜೈನ್‌ ನಿವಾಸದಲ್ಲಿ ನಡೆಸಿದ ಶೋಧದಲ್ಲಿ ಒಟ್ಟು 197.49 ಕೋಟಿ ರೂಪಾಯಿ ನಗದು, 23 ಕೆಜಿ ಚಿನ್ನ ಮತ್ತು ಹೆಚ್ಚಿನ ಮೌಲ್ಯದ ಕೆಲವು ಆಕ್ಷೇಪಾರ್ಹ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಇಲಾಖೆ ತಿಳಿಸಿದೆ.  ಆದಾಯ ತೆರಿಗೆ ಇಲಾಖೆಯು ಸಮಾಜವಾದಿ ಪಕ್ಷದ ಆಪ್ತ ಪುಷ್ಪರಾಜ್ ಜೈನ್ ಅಲಿಯಾಸ್ ‘ಪಂಪಿ’ ಮತ್ತು ಇನ್ನೊಬ್ಬ ಸುಗಂಧ ದ್ರವ್ಯ ಉದ್ಯಮಿ ಫೌಜಾನ್ ಮಲಿಕ್ ಜೊತೆ ಅವರ ಆವರಣವನ್ನು ಸಹ ಶೋಧಿಸಿತ್ತು.

ಇದನ್ನೂ ಓದಿ: Akhilesh Yadav: ಪುಷ್ಪರಾಜ್ ಜೈನ್ ಮೇಲಿನ ಐಟಿ ದಾಳಿ ಹಿಂದೆ ಬಿಜೆಪಿ ಕೈವಾಡ; ಅಖಿಲೇಶ್ ಯಾದವ್ ಆರೋಪ

Published On - 4:22 pm, Tue, 4 January 22

ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ