AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆರಿಗೆ ವಂಚನೆ: ಉತ್ತರ ಪ್ರದೇಶ ಮತ್ತು ಇತರ ಸ್ಥಳಗಳಲ್ಲಿ ಸುಗಂಧ ದ್ರವ್ಯ ಉದ್ಯಮಿ ಮನೆ ಮೇಲೆ ಐಟಿ ದಾಳಿ

ಕನೌಜ್‌ನಲ್ಲಿರುವ ತನ್ನ ಎಂಎಲ್‌ಸಿ ಪುಷ್ಪರಾಜ್(MLC Pushpraj) ಅಲಿಯಾಸ್ ಪಂಪಿ ಜೈನ್ ಅವರ ಆವರಣದ ಮೇಲೆ ದಾಳಿ ನಡೆಸಲಾಗಿದೆ ಎಂದು ಸಮಾಜವಾದಿ ಪಕ್ಷವು ತನ್ನ ಅಧಿಕೃತ ಟ್ವಿಟರ್ ಹ್ಯಾಂಡಲ್‌ನಲ್ಲಿ  ಹೇಳಿಕೊಂಡಿದೆ.

ತೆರಿಗೆ ವಂಚನೆ: ಉತ್ತರ ಪ್ರದೇಶ ಮತ್ತು ಇತರ ಸ್ಥಳಗಳಲ್ಲಿ ಸುಗಂಧ ದ್ರವ್ಯ ಉದ್ಯಮಿ ಮನೆ ಮೇಲೆ ಐಟಿ ದಾಳಿ
ಐಟಿ ದಾಳಿ
TV9 Web
| Edited By: |

Updated on:Dec 31, 2021 | 1:22 PM

Share

ಲಖನೌ: ತೆರಿಗೆ ವಂಚನೆ (tax evasion)ತನಿಖೆಯ ಭಾಗವಾಗಿ ಉತ್ತರ ಪ್ರದೇಶದಲ್ಲಿ ಸುಗಂಧ ದ್ರವ್ಯ ವ್ಯಾಪಾರಿಗಳು(perfume traders) ಮತ್ತು ಇತರ ಕೆಲವರಿಗೆ ಸಂಬಂಧಿಸಿದ ಅನೇಕ ಸ್ಥಳಗಳ ಮೇಲೆ ಆದಾಯ ತೆರಿಗೆ ಇಲಾಖೆ ಶುಕ್ರವಾರ ದಾಳಿ ನಡೆಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಕಾನ್ಪುರ, ಕನೌಜ್, ರಾಷ್ಟ್ರ ರಾಜಧಾನಿ ಪ್ರದೇಶ (NCR) ಮತ್ತು ಇತರ ಕೆಲವು ಸ್ಥಳಗಳಲ್ಲಿ ಶೋಧ ನಡೆಸಲಾಗುತ್ತಿದೆ ಎಂದು ಅವರು ಹೇಳಿದರು. ಇಲಾಖೆಯು ಸುಗಂಧ ದ್ರವ್ಯ ವ್ಯಾಪಾರ ಮತ್ತು ಸಂಬಂಧಿತ ವ್ಯವಹಾರಗಳಿಗೆ ಸಂಬಂಧಿಸಿದ ಕೆಲವು ಘಟಕಗಳ ವಿವಿಧ ಪ್ರದೇಶಗಳಲ್ಲಿ ದಾಳಿ ನಡೆಸಿದೆ ಎಂದು ಮೂಲಗಳು ತಿಳಿಸಿವೆ. ಯಾವ ವ್ಯಕ್ತಿಗಳ ಆಸ್ತಿ ಮೇಲೆ ದಾಳಿ ನಡೆಸಲಾಗಿದೆ ಎಂಬುದರ ನಿಖರ ಗುರುತುಗಳನ್ನು ಅಧಿಕಾರಿಗಳು ದೃಢಪಡಿಸಿಲ್ಲ. ಕನೌಜ್‌ನಲ್ಲಿರುವ ತನ್ನ ಎಂಎಲ್‌ಸಿ ಪುಷ್ಪರಾಜ್(MLC Pushpraj) ಅಲಿಯಾಸ್ ಪಂಪಿ ಜೈನ್ ಅವರ ಆವರಣದ ಮೇಲೆ ದಾಳಿ ನಡೆಸಲಾಗಿದೆ ಎಂದು ಸಮಾಜವಾದಿ ಪಕ್ಷವು ತನ್ನ ಅಧಿಕೃತ ಟ್ವಿಟರ್ ಹ್ಯಾಂಡಲ್‌ನಲ್ಲಿ  ಹೇಳಿಕೊಂಡಿದೆ. ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಕನ್ನೌಜ್‌ನಲ್ಲಿ ಪತ್ರಿಕಾಗೋಷ್ಠಿಯನ್ನು ಕರೆದಿದದ್ದು “ಬಿಜೆಪಿ ಸರ್ಕಾರ” ದಾಳಿಗಳನ್ನು ಪ್ರಾರಂಭಿಸಿದೆ ಎಂದಿದ್ದಾರೆ.

ರಾಜ್ಯದಲ್ಲಿ ಮುಂದಿನ ವರ್ಷದ ಆರಂಭದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯ ಪೂರ್ವಭಾವಿಯಾಗಿ ಜೈನ್ ಸಿದ್ಧಪಡಿಸಿದ ‘ಸಮಾಜವಾದಿ ಇತ್ರ್ ’ ಎಂಬ ಸುಗಂಧ ದ್ರವ್ಯವನ್ನು ಯಾದವ್ ಇತ್ತೀಚೆಗೆ ಬಿಡುಗಡೆ ಮಾಡಿದ್ದರು. ಕೇಂದ್ರೀಯ ಪರೋಕ್ಷ ತೆರಿಗೆಗಳು ಮತ್ತು ಕಸ್ಟಮ್ಸ್ ಮಂಡಳಿ (ಸಿಬಿಐಸಿ) ಅಡಿಯಲ್ಲಿನ ತನಿಖಾ ಸಂಸ್ಥೆಯಾದ ಡೈರೆಕ್ಟರೇಟ್ ಜನರಲ್ ಆಫ್ ಜಿಎಸ್‌ಟಿ ಇಂಟೆಲಿಜೆನ್ಸ್ (ಡಿಜಿಜಿಐ) ಇತ್ತೀಚೆಗೆ ಕಾನ್ಪುರ ಮತ್ತು ಕನೌಜ್‌ನಲ್ಲಿ ದೊಡ್ಡ ಪ್ರಮಾಣದ ದಾಳಿ ನಡೆಸಿ ಸುಗಂಧ ದ್ರವ್ಯ ವ್ಯಾಪಾರಿ ಪೀಯೂಷ್ ಜೈನ್ ಅವರನ್ನು ಬಂಧಿಸಿ 197 ಕೋಟಿ ರೂ. ನಗದು, 26 ಕೆಜಿ ಚಿನ್ನ ಮತ್ತು ಅಪಾರ ಪ್ರಮಾಣದ ಶ್ರೀಗಂಧದ ಎಣ್ಣೆ ವಶ ಪಡಿಸಿಕೊಂಡಿತ್ತು ಐಟಿ ಇಲಾಖೆಯು ನೇರ ತೆರಿಗೆಗಳ ಕೇಂದ್ರೀಯ ಮಂಡಳಿ (CBDT) ಅಡಿಯಲ್ಲಿ ಕಾರ್ಯನಿರ್ವಹಿಸುತ್ತದೆ.

ದಾಳಿ ಮತ್ತು ನಗದು ವಶಪಡಿಸಿಕೊಳ್ಳುವಿಕೆಯ ಬೆನ್ನಲ್ಲೇ ಚುನಾವಣೆಗೆ ಒಳಪಟ್ಟಿರುವ ಉತ್ತರ ಪ್ರದೇಶದಲ್ಲಿ ರಾಜಕೀಯ ಪಕ್ಷಗಳ ನಡುವೆ ಮಾತಿನ ಸಮರವನ್ನು ಉಂಟುಮಾಡಿದೆ. ಬಂಧಿತರು ಯಾದವ್ ಅವರ ನಿಕಟ ಮಿತ್ರ ಎಂದು ಬಿಜೆಪಿ ಹೇಳಿದರೆ, ಆಡಳಿತಾರೂಢ ಪಾಳಯವು ತಪ್ಪಾಗಿ ತನ್ನದೇ ಪಕ್ಷದವನನ್ನು ಬಂಧಿಸಿದೆ ಎಂದು ಸಮಾಜವಾದಿ ಪಕ್ಷ ಹೇಳಿದೆ. ಕಾನ್ಪುರದಲ್ಲಿ ನಡೆದ ರ್ಯಾಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು, ಸಮಾಜವಾದಿ ಪಕ್ಷವು 2017 ರ ಮೊದಲು ಉತ್ತರ ಪ್ರದೇಶದಾದ್ಯಂತ ಹರಡಿದ ಭ್ರಷ್ಟಾಚಾರದ ಸುಗಂಧವನ್ನು ಎಲ್ಲರೂ ನೋಡಬಹುದು ಎಂದು ಕುಟುಕಿದ್ದರು.

ಇದನ್ನೂ ಓದಿ: ಐಟಿ ದಾಳಿ: ಬರೋಬ್ಬರಿ ₹257 ಕೋಟಿ ಜಪ್ತಿ; ಉತ್ತರ ಪ್ರದೇಶದ ಸುಗಂಧ ದ್ರವ್ಯ ಉದ್ಯಮಿ ಪಿಯೂಷ್ ಜೈನ್ ಬಂಧನ

Published On - 1:05 pm, Fri, 31 December 21

ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ