AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾರ್ಖಂಡ್‌, ಒಡಿಶಾದಲ್ಲಿ ಐಟಿ ದಾಳಿ; ₹50 ಕೋಟಿ ಎಣಿಸಿದ ನಂತರ ನೋಟು ಎಣಿಸಲಾಗದೆ ಕೆಟ್ಟು ಹೋದ ಯಂತ್ರ

ನಿನ್ನೆಯವರೆಗೆ 50 ಕೋಟಿ ರೂಪಾಯಿಗಳವರೆಗಿನ ನೋಟುಗಳ ಎಣಿಕೆ ಪೂರ್ಣಗೊಂಡಿದೆ. ಆದರೆ ನೋಟುಗಳ ಸಂಖ್ಯೆ ತುಂಬಾ ಹೆಚ್ಚಾಗಿರುವುದರಿಂದ ಯಂತ್ರಗಳು ಕಾರ್ಯನಿರ್ವಹಿಸುವುದನ್ನು ನಿಲ್ಲಿಸಿವೆ ಎಂದು ಒಡಿಶಾ ಮತ್ತು ಜಾರ್ಖಂಡ್‌ನ ಬೌದ್ ಡಿಸ್ಟಿಲರೀಸ್ ಪ್ರೈವೇಟ್ ಲಿಮಿಟೆಡ್‌ನಲ್ಲಿ ದಾಳಿ ನಡೆಸಿದ ಆದಾಯ ತೆರಿಗೆ ಇಲಾಖೆಯ ಮೂಲಗಳು ಹೇಳಿವೆ.

ಜಾರ್ಖಂಡ್‌, ಒಡಿಶಾದಲ್ಲಿ ಐಟಿ ದಾಳಿ; ₹50 ಕೋಟಿ ಎಣಿಸಿದ ನಂತರ ನೋಟು ಎಣಿಸಲಾಗದೆ ಕೆಟ್ಟು ಹೋದ ಯಂತ್ರ
ಐಟಿ ದಾಳಿ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: Dec 07, 2023 | 2:15 PM

Share

ದೆಹಲಿ ಡಿಸೆಂಬರ್ 07: ಆದಾಯ ತೆರಿಗೆ ಇಲಾಖೆಯು(Income Tax Department) ಒಡಿಶಾ (Odisha) ಮತ್ತು ಜಾರ್ಖಂಡ್‌ನ ಬೌದ್ ಡಿಸ್ಟಿಲರೀಸ್ ಪ್ರೈವೇಟ್ ಲಿಮಿಟೆಡ್‌ನಲ್ಲಿ (Boudh Distilleries Pvt Ltd) ದಾಳಿ ನಡೆಸಿದೆ .ನಿನ್ನೆಯವರೆಗೆ ಕಂಪನಿಯೊಂದಿಗೆ ಸಂಬಂಧಹೊಂದಿರುವ ಆವರಣದಿಂದ ಅಪಾರ ಪ್ರಮಾಣದ ಕರೆನ್ಸಿ ನೋಟುಗಳನ್ನು ವಶಪಡಿಸಿಕೊಂಡಿದೆ ಎಂದು ಐಟಿ ಇಲಾಖೆ ಮೂಲಗಳು ಗುರುವಾರ (ಡಿಸೆಂಬರ್ 7) ತಿಳಿಸಿವೆ. ಅಧಿಕಾರಿಗಳ ಪ್ರಕಾರ, ಒಡಿಶಾದ ಬೋಲಂಗಿರ್ ಮತ್ತು ಸಂಬಲ್‌ಪುರ ಮತ್ತು ಜಾರ್ಖಂಡ್‌ನ ರಾಂಚಿ, ಲೋಹರ್ದಗಾದಲ್ಲಿ ಶೋಧ ನಡೆಸಲಾಗಿದೆ.

“ನಿನ್ನೆಯವರೆಗೆ 50 ಕೋಟಿ ರೂಪಾಯಿಗಳವರೆಗಿನ ನೋಟುಗಳ ಎಣಿಕೆ ಪೂರ್ಣಗೊಂಡಿದೆ. ಆದರೆ ನೋಟುಗಳ ಸಂಖ್ಯೆ ತುಂಬಾ ಹೆಚ್ಚಾಗಿರುವುದರಿಂದ ಯಂತ್ರಗಳು ಕಾರ್ಯನಿರ್ವಹಿಸುವುದನ್ನು ನಿಲ್ಲಿಸಿವೆ” ಎಂದು ಮೂಲಗಳು ತಿಳಿಸಿವೆ.

ಬೌದ್ ಡಿಸ್ಟಿಲರೀಸ್ ಪ್ರೈವೇಟ್ ಲಿಮಿಟೆಡ್ ಕಂಪನಿಯ ವೆಬ್‌ಸೈಟ್ ಪ್ರಕಾರ, ಇದು ಒಡಿಶಾದಲ್ಲಿ ಗ್ರೂಪ್ ಪ್ರಧಾನ ಕಚೇರಿಯನ್ನು ಹೊಂದಿದೆ, 6 ವ್ಯಾಪಾರ ವಿಭಾಗಗಳಲ್ಲಿ 4 ಕಂಪನಿಗಳನ್ನು ಒಳಗೊಂಡಿದೆ. ಗುಂಪು ಒಡಿಶಾದಾದ್ಯಂತ ಕಾರ್ಯನಿರ್ವಹಿಸುತ್ತದೆ.

ಇದನ್ನೂ ಓದಿ:ಐಟಿ ದಾಳಿ ಪ್ರಕರಣ: ಡಿಸಿಎಂ ಡಿಕೆ ಶಿವಕುಮಾರ್ ದುಬೈಗೆ ತೆರಳಲು ವಿಶೇಷ ಕೋರ್ಟ್​ ಅನುಮತಿ

“ಕಂಪನಿಗಳಲ್ಲಿ ಬೌಧ್ ಡಿಸ್ಟಿಲರಿ ಪ್ರೈವೇಟ್ ಲಿಮಿಟೆಡ್ (ENA, CO2, DDGS), ಬಾಲ್ಡಿಯೊ ಸಾಹು ಇನ್ಫ್ರಾ ಪ್ರೈವೇಟ್ ಲಿಮಿಟೆಡ್ (ಫ್ಲೈ ಆಶ್ ಬ್ರಿಕ್ಸ್) ಕ್ವಾಲಿಟಿ ಬಾಟ್ಲರ್ಸ್ ಪ್ರೈವೇಟ್ ಲಿಮಿಟೆಡ್ (IMFL ಬಾಟ್ಲಿಂಗ್) ಮತ್ತು ಕಿಶೋರ್ ಪ್ರಸಾದ್ ಬಿಜಯ್ ಪ್ರಸಾದ್ ಬೆವರೇಜಸ್ ಪ್ರೈವೇಟ್ ಲಿಮಿಟೆಡ್ (ಸೇಲ್ಸ್ & IMFL ಬ್ರ್ಯಾಂಡ್ ಮಾರ್ಕೆಟಿಂಗ್) ಸೇರಿದೆ ಎಂದು ವೆಬ್‌ಸೈಟ್ ಹೇಳಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ