ಶಿವಸೇನೆ ಆಪ್ತರಿಗೆ ಸೇರಿದ 12 ಸ್ಥಳಗಳಲ್ಲಿ ಐಟಿ ದಾಳಿ; ಬಿಜೆಪಿ ವಿರುದ್ಧ ಆದಿತ್ಯ ಠಾಕ್ರೆ ಕಿಡಿ

ಭಜರಂಗ್​ ಖರ್ಮಟೆಯವರನ್ನು ಈ ಹಿಂದೆ ಮಾಜಿ ಸಚಿವ ಅನಿಲ್​ ದೇಶ್​ಮುಖ್​ (ವಸೂಲಿ ಪ್ರಕರಣದಲ್ಲಿ ಇದೀಗ ಬಂಧಿತರಾಗಿರುವ)ಗೆ ಸಂಬಂಧಪಟ್ಟ ಪ್ರಕರಣದಲ್ಲೂ ಇ.ಡಿ.ವಿಚಾರಣೆಗೆ ಒಳಪಡಿಸಿತ್ತು.

ಶಿವಸೇನೆ ಆಪ್ತರಿಗೆ ಸೇರಿದ 12 ಸ್ಥಳಗಳಲ್ಲಿ ಐಟಿ ದಾಳಿ; ಬಿಜೆಪಿ ವಿರುದ್ಧ ಆದಿತ್ಯ ಠಾಕ್ರೆ ಕಿಡಿ
ಆದಿತ್ಯ ಠಾಕ್ರೆ
Follow us
| Updated By: Lakshmi Hegde

Updated on:Mar 08, 2022 | 6:45 PM

ಮಹಾರಾಷ್ಟ್ರದಲ್ಲಿ ಶಿವಸೇನೆ ಪ್ರಮುಖ ನಾಯಕರ ಆಪ್ತರಿಗೆ ಸಂಬಂಧಪಟ್ಟ ಸ್ಥಳಗಳ ಮೇಲೆ ಆದಾಯ ತೆರಿಗೆ ಇಲಾಖೆ (ಐಟಿ) ಇಂದು ದಾಳಿ ನಡೆಸಿದೆ. ರಾಹುಲ್ ಕನಾಲ್​, ಸದಾನಂದ್ ಕದಮ್​ ಮತ್ತು ಉಪ ಪ್ರಾದೇಶಿಕ ಸಾರಿಗೆ ಅಧಿಕಾರಿ ಭಜರಂಗ್ ಖರ್ಮಟೆಯವರಿಗೆ ಸೇರಿದ, ಮುಂಬೈ ಮತ್ತು ಪುಣೆಯಲ್ಲಿರುವ ಸ್ಥಳಗಳಲ್ಲಿ ಐಟಿ ರೈಡ್ ಆಗಿದೆ. ಇವರಲ್ಲಿ ರಾಹುಲ್ ಕನಾಲ್​, ಶಿವಸೇನೆ ಯುವ ನಾಯಕ, ಮಹಾರಾಷ್ಟ್ರ ಪ್ರವಾಸೋದ್ಯಮ ಇಲಾಖೆ ಸಚಿವ, ಸಿಎಂ ಉದ್ಧವ್​ ಠಾಕ್ರೆ ಪುತ್ರ ಆದಿತ್ಯ ಠಾಕ್ರೆಯ ಆಪ್ತ ಸ್ನೇಹಿತ. ಇನ್ನು ಸದಾನಂದ್ ಕದಮ್​, ಶಿವಸೇನೆ ನಾಯಕ ರಾಮದಾಸ್​ ಕದಮ್​ ಅವರ ಸೋದರ ಮತ್ತು ಶಿವಸೇನೆ ನಾಯಕ, ಸಾರಿಗೆ ಸಚಿವ ಅನಿಲ್​ ಪರಬ್​​ರ ವ್ಯಾಪಾರ ಪಾಲುದಾರ. ಭಜರಂಗ್ ಖರ್ಮಟೆಯೂ ಕೂಡ ಅನಿಲ್ ಪರಬ್​​ ಅವರ ಆಪ್ತರು ಎನ್ನಲಾಗಿದೆ.

ಇವರಲ್ಲಿ ಭಜರಂಗ್​ ಖರ್ಮಟೆಯವರನ್ನು ಈ ಹಿಂದೆ ಮಾಜಿ ಸಚಿವ ಅನಿಲ್​ ದೇಶ್​ಮುಖ್​ (ವಸೂಲಿ ಪ್ರಕರಣದಲ್ಲಿ ಇದೀಗ ಬಂಧಿತರಾಗಿರುವ)ಗೆ ಸಂಬಂಧಪಟ್ಟ ಪ್ರಕರಣದಲ್ಲೂ ಇ.ಡಿ.ವಿಚಾರಣೆಗೆ ಒಳಪಡಿಸಿತ್ತು. ಮಹಾರಾಷ್ಟ್ರದ ಗೃಹ ಮತ್ತು ಸಾರಿಗೆ ಇಲಾಖೆಯಲ್ಲಿ ನಡೆದ ವರ್ಗಾವಣೆ, ನೇಮಕಾತಿಗೆ ಸಂಬಂಧಪಟ್ಟು ವಿಚಾರಣೆ ನಡೆಸಿ ಅವರ ಹೇಳಿಕೆಯನ್ನು ರೆಕಾರ್ಡ್ ಮಾಡಲಾಗಿತ್ತು. ಇದೀಗ ಈ ಮೂವರಿಗೆ ಸೇರಿದ ಸ್ಥಳಗಳ ಮೇಲೆ ಐಟಿ ದಾಳಿಯಾದ ಬಗ್ಗೆ ಪ್ರತಿಕ್ರಿಯೆ ನೀಡಿದ ಆದಿತ್ಯ ಠಾಕ್ರೆ, ಕೇಂದ್ರದ ತನಿಖಾದಳಗಳನ್ನು ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ. ಪಶ್ಚಿಮ ಬಂಗಾಳದಲ್ಲಿ, ಆಂಧ್ರಪ್ರದೇಶದಲ್ಲಿ ಆಗಿದ್ದೂ ಇದೇ. ಈಗ ಮಹಾರಾಷ್ಟ್ರದಲ್ಲೂ ಹೀಗೆ ರೇಡ್​ಗಳು ನಡೆಯುತ್ತಿವೆ. ಕೇಂದ್ರದ ತನಿಖಾ ದಳಗಳೆಲ್ಲ ಬಿಜೆಪಿಯ ಪ್ರಚಾರಕ್ಕೆ ಬಳಕೆಯಾಗುತ್ತಿವೆ. ಇದೆಲ್ಲ ಮಹಾರಾಷ್ಟ್ರದಲ್ಲಿ ನಡೆಯುವುದಿಲ್ಲ ಎಂದಿದ್ದಾರೆ. ಕಳೆದ ತಿಂಗಳು ಆದಾಯ ತೆರಿಗೆ ಇಲಾಖೆ ಶಿವಸೇನೆ ನಾಯಕ ಯಶ್ವಂತ್ ಜಾಧವ್​ ಅವರಿಗೆ ಸೇರಿದ ಸ್ಥಳಗಳಲ್ಲಿ ರೇಡ್ ಮಾಡಿತ್ತು. ಇವರಿಗೆ ಆಪ್ತರಾಗಿದ್ದ ಗುತ್ತಿಗೆದಾರರ ಮನೆ ಮೇಲೂ ದಾಳಿ ನಡೆದಿತ್ತು. ಅಂದಿನ ದಾಳಿ ಸಂದರ್ಭದಲ್ಲಿ ಯಶ್ವಂತ್ ಜಾಧವ್​ ಮತ್ತು ಅವರ ಕುಟುಂಬದವರ ಹೆಸರಿನಲ್ಲಿದ್ದ ಸುಮಾರು 130 ಕೋಟಿ ರೂಪಾಯಿ ಆಸ್ತಿಯನ್ನು ಅದು ಜಪ್ತಿ ಮಾಡಿತ್ತು.

ಇದನ್ನೂ ಓದಿ: David warner: ಕೊಹ್ಲಿಯಂತೆ ಮೈದಾನದಲ್ಲೇ ಡೇವಿಡ್ ವಾರ್ನರ್ ಸಖತ್ ಸ್ಟೆಪ್: ವಿಡಿಯೋ ವೈರಲ್

Published On - 6:41 pm, Tue, 8 March 22

ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ