AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಸೇನೆ ಆಪ್ತರಿಗೆ ಸೇರಿದ 12 ಸ್ಥಳಗಳಲ್ಲಿ ಐಟಿ ದಾಳಿ; ಬಿಜೆಪಿ ವಿರುದ್ಧ ಆದಿತ್ಯ ಠಾಕ್ರೆ ಕಿಡಿ

ಭಜರಂಗ್​ ಖರ್ಮಟೆಯವರನ್ನು ಈ ಹಿಂದೆ ಮಾಜಿ ಸಚಿವ ಅನಿಲ್​ ದೇಶ್​ಮುಖ್​ (ವಸೂಲಿ ಪ್ರಕರಣದಲ್ಲಿ ಇದೀಗ ಬಂಧಿತರಾಗಿರುವ)ಗೆ ಸಂಬಂಧಪಟ್ಟ ಪ್ರಕರಣದಲ್ಲೂ ಇ.ಡಿ.ವಿಚಾರಣೆಗೆ ಒಳಪಡಿಸಿತ್ತು.

ಶಿವಸೇನೆ ಆಪ್ತರಿಗೆ ಸೇರಿದ 12 ಸ್ಥಳಗಳಲ್ಲಿ ಐಟಿ ದಾಳಿ; ಬಿಜೆಪಿ ವಿರುದ್ಧ ಆದಿತ್ಯ ಠಾಕ್ರೆ ಕಿಡಿ
ಆದಿತ್ಯ ಠಾಕ್ರೆ
TV9 Web
| Updated By: Lakshmi Hegde|

Updated on:Mar 08, 2022 | 6:45 PM

Share

ಮಹಾರಾಷ್ಟ್ರದಲ್ಲಿ ಶಿವಸೇನೆ ಪ್ರಮುಖ ನಾಯಕರ ಆಪ್ತರಿಗೆ ಸಂಬಂಧಪಟ್ಟ ಸ್ಥಳಗಳ ಮೇಲೆ ಆದಾಯ ತೆರಿಗೆ ಇಲಾಖೆ (ಐಟಿ) ಇಂದು ದಾಳಿ ನಡೆಸಿದೆ. ರಾಹುಲ್ ಕನಾಲ್​, ಸದಾನಂದ್ ಕದಮ್​ ಮತ್ತು ಉಪ ಪ್ರಾದೇಶಿಕ ಸಾರಿಗೆ ಅಧಿಕಾರಿ ಭಜರಂಗ್ ಖರ್ಮಟೆಯವರಿಗೆ ಸೇರಿದ, ಮುಂಬೈ ಮತ್ತು ಪುಣೆಯಲ್ಲಿರುವ ಸ್ಥಳಗಳಲ್ಲಿ ಐಟಿ ರೈಡ್ ಆಗಿದೆ. ಇವರಲ್ಲಿ ರಾಹುಲ್ ಕನಾಲ್​, ಶಿವಸೇನೆ ಯುವ ನಾಯಕ, ಮಹಾರಾಷ್ಟ್ರ ಪ್ರವಾಸೋದ್ಯಮ ಇಲಾಖೆ ಸಚಿವ, ಸಿಎಂ ಉದ್ಧವ್​ ಠಾಕ್ರೆ ಪುತ್ರ ಆದಿತ್ಯ ಠಾಕ್ರೆಯ ಆಪ್ತ ಸ್ನೇಹಿತ. ಇನ್ನು ಸದಾನಂದ್ ಕದಮ್​, ಶಿವಸೇನೆ ನಾಯಕ ರಾಮದಾಸ್​ ಕದಮ್​ ಅವರ ಸೋದರ ಮತ್ತು ಶಿವಸೇನೆ ನಾಯಕ, ಸಾರಿಗೆ ಸಚಿವ ಅನಿಲ್​ ಪರಬ್​​ರ ವ್ಯಾಪಾರ ಪಾಲುದಾರ. ಭಜರಂಗ್ ಖರ್ಮಟೆಯೂ ಕೂಡ ಅನಿಲ್ ಪರಬ್​​ ಅವರ ಆಪ್ತರು ಎನ್ನಲಾಗಿದೆ.

ಇವರಲ್ಲಿ ಭಜರಂಗ್​ ಖರ್ಮಟೆಯವರನ್ನು ಈ ಹಿಂದೆ ಮಾಜಿ ಸಚಿವ ಅನಿಲ್​ ದೇಶ್​ಮುಖ್​ (ವಸೂಲಿ ಪ್ರಕರಣದಲ್ಲಿ ಇದೀಗ ಬಂಧಿತರಾಗಿರುವ)ಗೆ ಸಂಬಂಧಪಟ್ಟ ಪ್ರಕರಣದಲ್ಲೂ ಇ.ಡಿ.ವಿಚಾರಣೆಗೆ ಒಳಪಡಿಸಿತ್ತು. ಮಹಾರಾಷ್ಟ್ರದ ಗೃಹ ಮತ್ತು ಸಾರಿಗೆ ಇಲಾಖೆಯಲ್ಲಿ ನಡೆದ ವರ್ಗಾವಣೆ, ನೇಮಕಾತಿಗೆ ಸಂಬಂಧಪಟ್ಟು ವಿಚಾರಣೆ ನಡೆಸಿ ಅವರ ಹೇಳಿಕೆಯನ್ನು ರೆಕಾರ್ಡ್ ಮಾಡಲಾಗಿತ್ತು. ಇದೀಗ ಈ ಮೂವರಿಗೆ ಸೇರಿದ ಸ್ಥಳಗಳ ಮೇಲೆ ಐಟಿ ದಾಳಿಯಾದ ಬಗ್ಗೆ ಪ್ರತಿಕ್ರಿಯೆ ನೀಡಿದ ಆದಿತ್ಯ ಠಾಕ್ರೆ, ಕೇಂದ್ರದ ತನಿಖಾದಳಗಳನ್ನು ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ. ಪಶ್ಚಿಮ ಬಂಗಾಳದಲ್ಲಿ, ಆಂಧ್ರಪ್ರದೇಶದಲ್ಲಿ ಆಗಿದ್ದೂ ಇದೇ. ಈಗ ಮಹಾರಾಷ್ಟ್ರದಲ್ಲೂ ಹೀಗೆ ರೇಡ್​ಗಳು ನಡೆಯುತ್ತಿವೆ. ಕೇಂದ್ರದ ತನಿಖಾ ದಳಗಳೆಲ್ಲ ಬಿಜೆಪಿಯ ಪ್ರಚಾರಕ್ಕೆ ಬಳಕೆಯಾಗುತ್ತಿವೆ. ಇದೆಲ್ಲ ಮಹಾರಾಷ್ಟ್ರದಲ್ಲಿ ನಡೆಯುವುದಿಲ್ಲ ಎಂದಿದ್ದಾರೆ. ಕಳೆದ ತಿಂಗಳು ಆದಾಯ ತೆರಿಗೆ ಇಲಾಖೆ ಶಿವಸೇನೆ ನಾಯಕ ಯಶ್ವಂತ್ ಜಾಧವ್​ ಅವರಿಗೆ ಸೇರಿದ ಸ್ಥಳಗಳಲ್ಲಿ ರೇಡ್ ಮಾಡಿತ್ತು. ಇವರಿಗೆ ಆಪ್ತರಾಗಿದ್ದ ಗುತ್ತಿಗೆದಾರರ ಮನೆ ಮೇಲೂ ದಾಳಿ ನಡೆದಿತ್ತು. ಅಂದಿನ ದಾಳಿ ಸಂದರ್ಭದಲ್ಲಿ ಯಶ್ವಂತ್ ಜಾಧವ್​ ಮತ್ತು ಅವರ ಕುಟುಂಬದವರ ಹೆಸರಿನಲ್ಲಿದ್ದ ಸುಮಾರು 130 ಕೋಟಿ ರೂಪಾಯಿ ಆಸ್ತಿಯನ್ನು ಅದು ಜಪ್ತಿ ಮಾಡಿತ್ತು.

ಇದನ್ನೂ ಓದಿ: David warner: ಕೊಹ್ಲಿಯಂತೆ ಮೈದಾನದಲ್ಲೇ ಡೇವಿಡ್ ವಾರ್ನರ್ ಸಖತ್ ಸ್ಟೆಪ್: ವಿಡಿಯೋ ವೈರಲ್

Published On - 6:41 pm, Tue, 8 March 22

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?