AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಸೇನೆ ಆಪ್ತರಿಗೆ ಸೇರಿದ 12 ಸ್ಥಳಗಳಲ್ಲಿ ಐಟಿ ದಾಳಿ; ಬಿಜೆಪಿ ವಿರುದ್ಧ ಆದಿತ್ಯ ಠಾಕ್ರೆ ಕಿಡಿ

ಭಜರಂಗ್​ ಖರ್ಮಟೆಯವರನ್ನು ಈ ಹಿಂದೆ ಮಾಜಿ ಸಚಿವ ಅನಿಲ್​ ದೇಶ್​ಮುಖ್​ (ವಸೂಲಿ ಪ್ರಕರಣದಲ್ಲಿ ಇದೀಗ ಬಂಧಿತರಾಗಿರುವ)ಗೆ ಸಂಬಂಧಪಟ್ಟ ಪ್ರಕರಣದಲ್ಲೂ ಇ.ಡಿ.ವಿಚಾರಣೆಗೆ ಒಳಪಡಿಸಿತ್ತು.

ಶಿವಸೇನೆ ಆಪ್ತರಿಗೆ ಸೇರಿದ 12 ಸ್ಥಳಗಳಲ್ಲಿ ಐಟಿ ದಾಳಿ; ಬಿಜೆಪಿ ವಿರುದ್ಧ ಆದಿತ್ಯ ಠಾಕ್ರೆ ಕಿಡಿ
ಆದಿತ್ಯ ಠಾಕ್ರೆ
TV9 Web
| Edited By: |

Updated on:Mar 08, 2022 | 6:45 PM

Share

ಮಹಾರಾಷ್ಟ್ರದಲ್ಲಿ ಶಿವಸೇನೆ ಪ್ರಮುಖ ನಾಯಕರ ಆಪ್ತರಿಗೆ ಸಂಬಂಧಪಟ್ಟ ಸ್ಥಳಗಳ ಮೇಲೆ ಆದಾಯ ತೆರಿಗೆ ಇಲಾಖೆ (ಐಟಿ) ಇಂದು ದಾಳಿ ನಡೆಸಿದೆ. ರಾಹುಲ್ ಕನಾಲ್​, ಸದಾನಂದ್ ಕದಮ್​ ಮತ್ತು ಉಪ ಪ್ರಾದೇಶಿಕ ಸಾರಿಗೆ ಅಧಿಕಾರಿ ಭಜರಂಗ್ ಖರ್ಮಟೆಯವರಿಗೆ ಸೇರಿದ, ಮುಂಬೈ ಮತ್ತು ಪುಣೆಯಲ್ಲಿರುವ ಸ್ಥಳಗಳಲ್ಲಿ ಐಟಿ ರೈಡ್ ಆಗಿದೆ. ಇವರಲ್ಲಿ ರಾಹುಲ್ ಕನಾಲ್​, ಶಿವಸೇನೆ ಯುವ ನಾಯಕ, ಮಹಾರಾಷ್ಟ್ರ ಪ್ರವಾಸೋದ್ಯಮ ಇಲಾಖೆ ಸಚಿವ, ಸಿಎಂ ಉದ್ಧವ್​ ಠಾಕ್ರೆ ಪುತ್ರ ಆದಿತ್ಯ ಠಾಕ್ರೆಯ ಆಪ್ತ ಸ್ನೇಹಿತ. ಇನ್ನು ಸದಾನಂದ್ ಕದಮ್​, ಶಿವಸೇನೆ ನಾಯಕ ರಾಮದಾಸ್​ ಕದಮ್​ ಅವರ ಸೋದರ ಮತ್ತು ಶಿವಸೇನೆ ನಾಯಕ, ಸಾರಿಗೆ ಸಚಿವ ಅನಿಲ್​ ಪರಬ್​​ರ ವ್ಯಾಪಾರ ಪಾಲುದಾರ. ಭಜರಂಗ್ ಖರ್ಮಟೆಯೂ ಕೂಡ ಅನಿಲ್ ಪರಬ್​​ ಅವರ ಆಪ್ತರು ಎನ್ನಲಾಗಿದೆ.

ಇವರಲ್ಲಿ ಭಜರಂಗ್​ ಖರ್ಮಟೆಯವರನ್ನು ಈ ಹಿಂದೆ ಮಾಜಿ ಸಚಿವ ಅನಿಲ್​ ದೇಶ್​ಮುಖ್​ (ವಸೂಲಿ ಪ್ರಕರಣದಲ್ಲಿ ಇದೀಗ ಬಂಧಿತರಾಗಿರುವ)ಗೆ ಸಂಬಂಧಪಟ್ಟ ಪ್ರಕರಣದಲ್ಲೂ ಇ.ಡಿ.ವಿಚಾರಣೆಗೆ ಒಳಪಡಿಸಿತ್ತು. ಮಹಾರಾಷ್ಟ್ರದ ಗೃಹ ಮತ್ತು ಸಾರಿಗೆ ಇಲಾಖೆಯಲ್ಲಿ ನಡೆದ ವರ್ಗಾವಣೆ, ನೇಮಕಾತಿಗೆ ಸಂಬಂಧಪಟ್ಟು ವಿಚಾರಣೆ ನಡೆಸಿ ಅವರ ಹೇಳಿಕೆಯನ್ನು ರೆಕಾರ್ಡ್ ಮಾಡಲಾಗಿತ್ತು. ಇದೀಗ ಈ ಮೂವರಿಗೆ ಸೇರಿದ ಸ್ಥಳಗಳ ಮೇಲೆ ಐಟಿ ದಾಳಿಯಾದ ಬಗ್ಗೆ ಪ್ರತಿಕ್ರಿಯೆ ನೀಡಿದ ಆದಿತ್ಯ ಠಾಕ್ರೆ, ಕೇಂದ್ರದ ತನಿಖಾದಳಗಳನ್ನು ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ. ಪಶ್ಚಿಮ ಬಂಗಾಳದಲ್ಲಿ, ಆಂಧ್ರಪ್ರದೇಶದಲ್ಲಿ ಆಗಿದ್ದೂ ಇದೇ. ಈಗ ಮಹಾರಾಷ್ಟ್ರದಲ್ಲೂ ಹೀಗೆ ರೇಡ್​ಗಳು ನಡೆಯುತ್ತಿವೆ. ಕೇಂದ್ರದ ತನಿಖಾ ದಳಗಳೆಲ್ಲ ಬಿಜೆಪಿಯ ಪ್ರಚಾರಕ್ಕೆ ಬಳಕೆಯಾಗುತ್ತಿವೆ. ಇದೆಲ್ಲ ಮಹಾರಾಷ್ಟ್ರದಲ್ಲಿ ನಡೆಯುವುದಿಲ್ಲ ಎಂದಿದ್ದಾರೆ. ಕಳೆದ ತಿಂಗಳು ಆದಾಯ ತೆರಿಗೆ ಇಲಾಖೆ ಶಿವಸೇನೆ ನಾಯಕ ಯಶ್ವಂತ್ ಜಾಧವ್​ ಅವರಿಗೆ ಸೇರಿದ ಸ್ಥಳಗಳಲ್ಲಿ ರೇಡ್ ಮಾಡಿತ್ತು. ಇವರಿಗೆ ಆಪ್ತರಾಗಿದ್ದ ಗುತ್ತಿಗೆದಾರರ ಮನೆ ಮೇಲೂ ದಾಳಿ ನಡೆದಿತ್ತು. ಅಂದಿನ ದಾಳಿ ಸಂದರ್ಭದಲ್ಲಿ ಯಶ್ವಂತ್ ಜಾಧವ್​ ಮತ್ತು ಅವರ ಕುಟುಂಬದವರ ಹೆಸರಿನಲ್ಲಿದ್ದ ಸುಮಾರು 130 ಕೋಟಿ ರೂಪಾಯಿ ಆಸ್ತಿಯನ್ನು ಅದು ಜಪ್ತಿ ಮಾಡಿತ್ತು.

ಇದನ್ನೂ ಓದಿ: David warner: ಕೊಹ್ಲಿಯಂತೆ ಮೈದಾನದಲ್ಲೇ ಡೇವಿಡ್ ವಾರ್ನರ್ ಸಖತ್ ಸ್ಟೆಪ್: ವಿಡಿಯೋ ವೈರಲ್

Published On - 6:41 pm, Tue, 8 March 22

ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?