AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tax on EPF Interest: ಪಿಎಫ್ ಮೇಲಿನ ಬಡ್ಡಿಗೆ ವರ್ಷಕ್ಕೆ 5 ಲಕ್ಷ ರೂ. ತನಕ ತೆರಿಗೆ ವಿನಾಯಿತಿ ಘೋಷಿಸಿದ ಕೇಂದ್ರ

ಇಪಿಎಫ್ ಮೇಲಿನ ಬಡ್ಡಿಗೆ ವರ್ಷಕ್ಕೆ 5 ಲಕ್ಷ ರೂಪಾಯಿ ತನಕ ತೆರಿಗೆ ವಿನಾಯಿತಿ ಘೋಷಿಸಿದ್ದಾರೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್. ಆದರೆ ಷರತ್ತು ಅನ್ವಯ ಆಗುತ್ತದೆ ಎಂಬುದನ್ನು ಗಮನಿಸಬೇಕು.

Tax on EPF Interest: ಪಿಎಫ್ ಮೇಲಿನ ಬಡ್ಡಿಗೆ ವರ್ಷಕ್ಕೆ 5 ಲಕ್ಷ ರೂ. ತನಕ ತೆರಿಗೆ ವಿನಾಯಿತಿ ಘೋಷಿಸಿದ ಕೇಂದ್ರ
ಸಾಂದರ್ಭಿಕ ಚಿತ್ರ
Srinivas Mata
|

Updated on: Mar 24, 2021 | 5:50 PM

Share

ನವದೆಹಲಿ: ಉದ್ಯೋಗಿಗಳು ಜಮೆ ಮಾಡಿದ ಭವಿಷ್ಯ ನಿಧಿ (ಪ್ರಾವಿಡೆಂಟ್ ಫಂಡ್) ಮೊತ್ತದ ಮೇಲಿನ ವಾರ್ಷಿಕ ಬಡ್ಡಿ ಗಳಿಕೆಗೆ ಇರುವ ತೆರಿಗೆ ವಿನಾಯಿತಿ ಮೊತ್ತದ ಮಿತಿಯನ್ನು ನಿರ್ದಿಷ್ಟ ಪ್ರಕರಣಗಳಲ್ಲಿ 5 ಲಕ್ಷ ರೂಪಾಯಿ ತನಕ ಏರಿಕೆ ಮಾಡುವುದಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಗಳವಾರದಂದು ಲೋಕಸಭೆಯಲ್ಲಿ ಹೇಳಿದ್ದಾರೆ. ಕೇಂದ್ರ ಬಜೆಟ್ ಮಂಡಿಸುವ ವೇಳೆಯಲ್ಲಿ, ಪಿಎಫ್ ಮೇಲಿನ ಬಡ್ಡಿಗೆ ತೆರಿಗೆ ವಿನಾಯಿತಿ ಮೊತ್ತವನ್ನು ರೂ. 2.5 ಲಕ್ಷ ರೂಪಾಯಿಗೆ ಮಿತಿಗೊಳಿಸುವ ಪ್ರಸ್ತಾವ ಮಾಡಿದ್ದರು. ಉದ್ಯೋಗಿ ಮತ್ತು ಉದ್ಯೋಗದಾತ ಇಬ್ಬರದೂ ಸೇರಿ ಪ್ರಾವಿಡೆಂಟ್ ಫಂಡ್​ಗೆ ಜಮೆ ಮಾಡಿದ ಮೊತ್ತದ ಮೇಲಿನ ಬಡ್ಡಿಯು ವಾರ್ಷಿಕವಾಗಿ ಗರಿಷ್ಠ ತೆರಿಗೆ ವಿನಾಯಿತಿ 2.5 ಲಕ್ಷ ರೂಪಾಯಿ ಎಂದು ನಿಗದಿ ಮಾಡಿದ್ದರು.

ಹೆಚ್ಚಿನ ಅದಾಯ ಬರುವಂಥವರು ತಮ್ಮ ಹೆಚ್ಚುವರಿ ಹಣವನ್ನು ಜನಸಾಮಾನ್ಯರ ನಿವೃತ್ತಿ ನಿಧಿಯಲ್ಲಿ ತೊಡಗಿಸುವುದನ್ನು ತಪ್ಪಿಸಬೇಕು ಎಂಬ ಕಾರಣಕ್ಕೆ ಈ ನಿರ್ಧಾರಕ್ಕೆ ಬರಲಾಗಿದೆ. ಲೋಕಸಭೆಯಲ್ಲಿ ಹಣಕಾಸು ಮಸೂದೆ 2021ರ ಬಗ್ಗೆ ಚರ್ಚೆ ನಡೆಯುವಾಗ ಅವರು ಪ್ರತಿಕ್ರಿಯೆ ನೀಡಿದ್ದಾರೆ. ತೆರಿಗೆರಹಿತ ಮೊತ್ತದ ಮಿತಿಯನ್ನು ವರ್ಷಕ್ಕೆ ಗರಿಷ್ಠ 5 ಲಕ್ಷ ರೂಪಾಯಿಗೆ ಏರಿಕೆ ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ. ಆದರೆ ಈ ವಿನಾಯಿತಿಗೆ ಷರತ್ತು ಹಾಕಲಾಗಿದೆ. 5 ಲಕ್ಷ ರೂಪಾಯಿ ತನಕದ ಕೊಡುಗೆಯಲ್ಲಿ ಉದ್ಯೋಗದಾತರ ಜಮೆಯು ಕಾನೂನುಬದ್ಧ ಮಿತಿಯಾದ ಮೂಲವೇತನದ (ಬೇಸಿಕ್ ಪೇ) ಶೇಕಡಾ 12ರ ಆಚೆಗೆ ಇರುವಂತಿಲ್ಲ. “ಯಾವ ಪ್ರಕರಣದಲ್ಲಿ ಪಿಎಫ್​ಗೆ ಉದ್ಯೋಗದಾತರ ಕೊಡುಗೆ ಇರುವುದಿಲ್ಲವೋ ಅಂಥ ಪ್ರಕರಣಗಳಲ್ಲಿ ಮಾತ್ರ ತೆರಿಗೆ ವಿನಾಯಿತಿ ಮಿತಿಯನ್ನು 5 ಲಕ್ಷ ರೂಪಾಯಿಗೆ ಏರಿಸಲಾಗುವುದು,” ಎಂದಿದ್ದಾರೆ.

ಬಹುತೇಕ ಸಂದರ್ಭಗಳಲ್ಲಿ ಇದು ಉದ್ಯೋಗಿ ಮತ್ತು ಉದ್ಯೋಗದಾತರ ಕೊಡುಗೆ ಆಗಿರುತ್ತದೆ. ಆದರೆ ಉದ್ಯೋಗಿ ಮಾತ್ರ ಜಮೆ ಮಾಡಿದಂಥ ಹಾಗೂ ಉದ್ಯೋಗದಾತರ ಹಣ ಹಾಕದ ಸನ್ನಿವೇಶಗಳಲ್ಲಿ ಮೊತ್ತವನ್ನು 5 ಲಕ್ಷ ರೂಪಾಯಿಗೆ ಏರಿಕೆ ಮಾಡಲಾಗಿದೆ ಎಂದಿದ್ದಾರೆ. ಹೊಸ ನಿಯಮಚು ಏಪ್ರಿಲ್ 1ನೇ ತಾರೀಕಿನಿಂದ ಜಾರಿಗೆ ಬರಲಿದೆ. ಶೇ 92ರಿಂದ ಶೇ 93ರಷ್ಟು ಮಂದಿ ರೂ. 2.5 ಲಕ್ಷದ ಮಿತಿಗೆ ಬರುತ್ತಾರೆ. ಅಂಥವರಿಗೆ ಭರವಸೆ ನೀಡಿದ ಬಡ್ಡಿಗೆ ಯೋಜನೆ ಅಡಿ ತೆರಿಗೆಮುಕ್ತವಾಗಿರುತ್ತದೆ. ಈ ನಡೆಯಿಂದ ಸಣ್ಣ ಮತ್ತು ಮಧ್ಯಮ ಪ್ರಮಾಣದ ತೆರಿಗೆ ಪಾವತಿದಾರರ ಮೇಲೆ ಯಾವುದೇ ಪರಿಣಾಮ ಆಗುವುದಿಲ್ಲ ಎಂದು ನಿರ್ಮಲಾ ತಿಳಿಸಿದ್ದಾರೆ.

ಕಾರ್ಮಿಕರ ಭವಿಷ್ಯ ನಿಧಿ ಒಕ್ಕೂಟಕ್ಕೆ (ಇಪಿಎಫ್​ಒ) ಆರು ಕೋಟಿ ಚಂದಾದಾರರಿದ್ದಾರೆ. ಹಣಕಾಸು ಮಸೂದೆಯು ಆ ನಂತರ 127 ಅಧಿಕೃತ ತಿದ್ದುಪಡಿಯೊಂದಿಗೆ ಕೆಳಮನೆಯಲ್ಲಿ ಧ್ವನಿಮತದ ಮೂಲಕ ಅಂಗೀಕರಿಸಲಾಯಿತು.

ಇದನ್ನೂ ಓದಿ: ಇಪಿಎಫ್, ಕ್ರೆಡಿಟ್ ಕಾರ್ಡ್, ಎಲ್​ಪಿಜಿ, ಬ್ಯಾಂಕ್ ಡೆಪಾಸಿಟ್ ಇನ್ಷೂರೆನ್ಸ್ ಬಗ್ಗೆ ನಿಮಗೆಷ್ಟು ಗೊತ್ತು?

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ