AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಗ್ರಾ: ಶೂ ವ್ಯಾಪಾರಿ ಮನೆ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ, 40 ಕೋಟಿ ರೂ. ನಗದು ಪತ್ತೆ

ಇತ್ತೀಚಿನ ಬೆಳವಣಿಗೆಯಲ್ಲಿ, ಆದಾಯ ತೆರಿಗೆ ಇಲಾಖೆಯು ಉತ್ತರ ಪ್ರದೇಶದ ಆಗ್ರಾದಲ್ಲಿ ಪ್ರಮುಖ ಶೂ ವ್ಯಾಪಾರಿಗಳ ನಿವಾಸಗಳ ಮನೆ ಮೇಲೆ ದಾಳಿ ನಡೆಸಿದೆ. ಅಧಿಕಾರಿಗಳು ಇದುವರೆಗೆ 40 ಕೋಟಿ ರೂಪಾಯಿ ನಗದು, ಹಲವಾರು ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ.

ಆಗ್ರಾ: ಶೂ ವ್ಯಾಪಾರಿ ಮನೆ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ, 40 ಕೋಟಿ ರೂ. ನಗದು ಪತ್ತೆ
ಹಣ
ನಯನಾ ರಾಜೀವ್
|

Updated on: May 19, 2024 | 11:11 AM

Share

ಆಗ್ರಾದ ಶೂ ವ್ಯಾಪಾರಿ ಮನೆ ಮೇಲೆ ಆದಾಯ ತೆರಿಗೆ ಇಲಾಖೆ(Income Tax Department) ಅಧಿಕಾರಿಗಳು ದಾಳಿ ನಡೆಸಿದ್ದು, 40 ಕೋಟಿ ರೂ. ನಗದನ್ನು ವಶಪಡಿಸಿಕೊಂಡಿದ್ದಾರೆ. ಉತ್ತರ ಪ್ರದೇಶದ ನಗರದಲ್ಲಿ ಕನಿಷ್ಠ ಮೂವರು ಶೂ ವ್ಯಾಪಾರಿಗಳ ಮೇಲೆ ದಾಳಿ ನಡೆಸಲಾಗಿದ್ದು, ಈ ಸಂದರ್ಭದಲ್ಲಿ ಭಾರಿ ಪ್ರಮಾಣದ ನಗದು ವಶಪಡಿಸಿಕೊಳ್ಳಲಾಗಿದೆ.

500 ರೂಪಾಯಿ ನೋಟುಗಳ ಹಲವಾರು ಬಂಡಲ್‌ಗಳನ್ನು ಪಾದರಕ್ಷೆ ಕಂಪನಿಯ ಮಾಲೀಕರ ನಿವಾಸದಲ್ಲಿ ಅಧಿಕಾರಿಗಳು ಪತ್ತೆ ಮಾಡಿದ್ದಾರೆ. ನೋಟುಗಳನ್ನು ಎಣಿಸಲು ಬ್ಯಾಂಕ್ ಅಧಿಕಾರಿಗಳು ಮತ್ತು ನೌಕರರನ್ನು ಕರೆಸಲಾಯಿತು. ಇತ್ತೀಚೆಗೆ ದೇಶದಲ್ಲಿ ನಡೆದ 2ನೇ ಅತಿದೊಡ್ಡ ದಾಳಿಯೂ ಇದಾಗಿದೆ. ಇದೇ ತಿಂಗಳ ಮೇ 6 ರಂದು ಜಾರ್ಖಂಡ್‌ನಲ್ಲಿ ದಾಳಿ ನಡೆಸಿದ್ದ ಇಡಿ ಅಧಿಕಾರಿಗಳ ತಂಡ ಸಚಿವರ ಆಪ್ತ ಕಾರ್ಯದರ್ಶಿ ಸಂಜೀವ್ ಲಾಲ್ ಮತ್ತು ಅವರ ಮನೆ ಕೆಲಸಗಾರ ಜಹಾಂಗೀರ್ ಆಲಂ ಮನೆಯಲ್ಲಿ ಸಿಕ್ಕ 35 ಕೋಟಿ ರೂ.ಗಳನ್ನು ವಶಪಡಿಸಿಕೊಂಡಿತ್ತು.

ಸದ್ಯ 40 ಕೋಟಿ ರೂ. ಜಪ್ತಿ ಮಾಡಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಜಪ್ತಿ ಮಾಡಿದ ಹಣವನ್ನು ಇನ್ನೂ ಏಣಿಕೆ ಮಾಡಲಾಗುತ್ತಿದ್ದು, ಹಣದ ಮೊತ್ತ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ತೆರಿಗೆ ವಂಚನೆ ಮತ್ತು ಅಕ್ರಮ ಆಸ್ತಿ ಹೊಂದಿರುವ ಶಂಕೆಯ ಮೇಲೆ ಇಲಾಖೆ ದಾಳಿ ನಡೆಸಿದೆ.

ಮತ್ತಷ್ಟು ಓದಿ: ಬೆಂಗಳೂರಿನ ಕೆಲ ಖಾಸಗಿ ಕಂಪನಿಗಳ ಮೇಲೆ ಐಟಿ ರೇಡ್​​

ಶೂ ವ್ಯಾಪಾರಿಗಳು ತೆರಿಗೆ ವಂಚಿಸುತ್ತಿರುವ ಬಗ್ಗೆ ಇಲಾಖೆಗೆ ಮಾಹಿತಿ ಸಿಕ್ಕಿತ್ತು. ಇದಾದ ಬಳಿಕ ಮಧ್ಯಾಹ್ನ 3 ಗಂಟೆಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಮೂವರು ಉದ್ಯಮಿಗಳ ಶೋರೂಂಗಳಿಗೆ ಆಗಮಿಸಿ ಶಾಪಿಂಗ್ ಮಾಡಲು ಬಂದಿದ್ದವರನ್ನು ಹೊರಗೆ ಕಳುಹಿಸಿ ಶೋಧ ಕಾರ್ಯ ಆರಂಭಿಸಿದರು. ಸದ್ಯ ದಾಳಿ ನಡೆಯುತ್ತಿದೆ. ಆದಾಯ ತೆರಿಗೆ ಇಲಾಖೆ ತಂಡಗಳು ಕಡತಗಳು ಮತ್ತು ಸಾಧನಗಳನ್ನು ಪರಿಶೀಲಿಸುತ್ತಿವೆ.

ಇದಕ್ಕೂ ಮುನ್ನ ಆದಾಯ ತೆರಿಗೆ ಇಲಾಖೆ ಗುಜರಾತ್‌ನ ಅಹಮದಾಬಾದ್ ಮತ್ತು ವಡೋದರಾದಲ್ಲಿ ದಾಳಿ ನಡೆಸಿತ್ತು. ರಿಯಲ್ ಎಸ್ಟೇಟ್ ಗ್ರೂಪ್ ಮಾಧವ್ ಗ್ರೂಪ್ ಆಫ್ ಇಂಡಸ್ಟ್ರೀಸ್ ಮೇಲೆ ಐಟಿ ಇಲಾಖೆ ದಾಳಿ ನಡೆಸಿದೆ. ರಿಯಲ್ ಎಸ್ಟೇಟ್ ಮತ್ತು ಸರ್ಕಾರಿ ಮೂಲಸೌಕರ್ಯ ಯೋಜನೆಗಳಿಗೆ ಹೆಸರುವಾಸಿಯಾದ ಗುಂಪು, ಎರಡು ನಗರಗಳಾದ್ಯಂತ 27 ಸ್ಥಳಗಳಲ್ಲಿ ದಾಳಿಗಳನ್ನು ನಡೆಸಿತು. ಐಟಿ ಇಲಾಖೆಯ 50ಕ್ಕೂ ಹೆಚ್ಚು ಅಧಿಕಾರಿಗಳು ದಾಳಿ ನಡೆಸಿದ ತಂಡದಲ್ಲಿ ಭಾಗಿಯಾಗಿದ್ದರು. ದಾಳಿ ನಡೆಸಿದ ಗುಂಪಿನ ಆವರಣಗಳು ವಡೋದರದ ಸುಭಾನ್‌ಪುರದಲ್ಲಿರುವ ಅವರ ಕಚೇರಿಯನ್ನು ಒಳಗೊಂಡಿತ್ತು. ಕರ್ನಾಟಕ, ದೆಹಲಿ, ಮಧ್ಯಪ್ರದೇಶ, ಉತ್ತರಾಖಂಡ ಮತ್ತು ಮಹಾರಾಷ್ಟ್ರದಲ್ಲಿ ಅಸ್ತಿತ್ವವನ್ನು ಹೊಂದಿರುವ ಮಾಧವ್ ಗ್ರೂಪ್ 2010 ರಲ್ಲಿ ಸ್ಥಾಪನೆಯಾದಾಗಿನಿಂದ ಪರಿಶೀಲನೆಯಲ್ಲಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ