AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IT Raids: ಬಾಲಿವುಡ್​ ನಿರ್ದೇಶಕ ಅನುರಾಗ್​ ಕಶ್ಯಪ್, ನಟಿ ತಾಪ್ಸಿ ಪನ್ನು ಸೇರಿ ಹಲವರ ಮನೆ, ಕಚೇರಿ ಮೇಲೆ ಐಟಿ ದಾಳಿ

ಮುಂಬೈ: ತೆರಿಗೆ ವಂಚನೆ ಆರೋಪದಡಿ ಬಾಲಿವುಡ್ ನಿರ್ದಶಕ ಅನುರಾಗ್​ ಕಶ್ಯಪ್, ನಿರ್ಮಾಪಕ ವಿಕಾಸ್​ ಬಹಲ್​ ​ ಮತ್ತು ನಟಿ ತಾಪ್ಸೀ ಪನ್ನು ನಿವಾಸದ ಮೇಲೆ ಐಟಿ ದಾಳಿ ನಡೆದಿದೆ ಎಂದು ಮೂಲಗಳು ತಿಳಿಸಿವೆ. ಅಲ್ಲದೆ ನಿರ್ಮಾಪಕ ಮಧು ಮಂಟೇನಾ ನಿವಾಸವನ್ನೂ ಐಟಿ ಅಧಿಕಾರಿಗಳು ಪರಿಶೀಲನೆ ಮಾಡಿದ್ದಾರೆ. ಅದರಲ್ಲೂ ಮುಖ್ಯವಾಗಿ ತೆರಿಗೆ ವಂಚನೆ ಆರೋಪ ಸಿನಿ ನಿರ್ಮಾಣ, ವಿತರಣಾ ಸಂಸ್ಥೆ ಫ್ಯಾಂಟಮ್ ಫಿಲ್ಮ್ಸ್​ ವಿರುದ್ಧ ಕೇಳಿಬಂದಿದ್ದು, ಇದಕ್ಕೆ ಸಂಬಂಧಪಟ್ಟವರ ಮನೆ, ಕಚೇರಿ ಸೇರಿ ಮುಂಬೈನ ಒಟ್ಟು 22 ಪ್ರದೇಶಗಳಲ್ಲಿ […]

IT Raids: ಬಾಲಿವುಡ್​ ನಿರ್ದೇಶಕ ಅನುರಾಗ್​ ಕಶ್ಯಪ್, ನಟಿ ತಾಪ್ಸಿ ಪನ್ನು ಸೇರಿ ಹಲವರ ಮನೆ, ಕಚೇರಿ ಮೇಲೆ ಐಟಿ ದಾಳಿ
ಅನುರಾಗ್​ ಕಶ್ಯಪ್​ ಮತ್ತು ತಾಪ್ಸೀ ಪನ್ನು
Lakshmi Hegde
|

Updated on:Mar 03, 2021 | 2:00 PM

Share

ಮುಂಬೈ: ತೆರಿಗೆ ವಂಚನೆ ಆರೋಪದಡಿ ಬಾಲಿವುಡ್ ನಿರ್ದಶಕ ಅನುರಾಗ್​ ಕಶ್ಯಪ್, ನಿರ್ಮಾಪಕ ವಿಕಾಸ್​ ಬಹಲ್​ ​ ಮತ್ತು ನಟಿ ತಾಪ್ಸೀ ಪನ್ನು ನಿವಾಸದ ಮೇಲೆ ಐಟಿ ದಾಳಿ ನಡೆದಿದೆ ಎಂದು ಮೂಲಗಳು ತಿಳಿಸಿವೆ. ಅಲ್ಲದೆ ನಿರ್ಮಾಪಕ ಮಧು ಮಂಟೇನಾ ನಿವಾಸವನ್ನೂ ಐಟಿ ಅಧಿಕಾರಿಗಳು ಪರಿಶೀಲನೆ ಮಾಡಿದ್ದಾರೆ. ಅದರಲ್ಲೂ ಮುಖ್ಯವಾಗಿ ತೆರಿಗೆ ವಂಚನೆ ಆರೋಪ ಸಿನಿ ನಿರ್ಮಾಣ, ವಿತರಣಾ ಸಂಸ್ಥೆ ಫ್ಯಾಂಟಮ್ ಫಿಲ್ಮ್ಸ್​ ವಿರುದ್ಧ ಕೇಳಿಬಂದಿದ್ದು, ಇದಕ್ಕೆ ಸಂಬಂಧಪಟ್ಟವರ ಮನೆ, ಕಚೇರಿ ಸೇರಿ ಮುಂಬೈನ ಒಟ್ಟು 22 ಪ್ರದೇಶಗಳಲ್ಲಿ ಐಟಿ ಕಾರ್ಯಾಚರಣೆ ನಡೆಯುತ್ತಿದೆ ಎಂದು ಮೂಲಗಳು ತಿಳಿಸಿವೆ.

ಅನುರಾಗ್ ಕಶ್ಯಪ್​ ಅವರ ಫ್ಯಾಂಟಮ್ ಸಿನಿ ಹೌಸ್​ 2018ರಲ್ಲೇ ನಿಷ್ಕ್ರಿಯಗೊಂಡಿದ್ದು, ಸದ್ಯ ಕೆಲಸ ನಿರ್ವಹಿಸುತ್ತಿಲ್ಲ. ಈ ಸಿನಿಮಾ ನಿರ್ಮಾಣ ಮತ್ತು ವಿತರಣಾ ಕಂಪನಿಯನ್ನು 2011ರಲ್ಲಿ ಅನುರಾಗ್​ ಕಶ್ಯಪ್​, ವಿಕ್ರಮಾದಿತ್ಯ ಮೋಟ್​ವಾನೆ, ನಿರ್ಮಾಪಕರಾದ ಮಧು ಮಂಟೇನಾ, ವಿಕಾಸ್ ಬಹಲ್​ ಸೇರಿ ಪ್ರಾರಂಭ ಮಾಡಿದ್ದರು. ಈ ಕಂಪನಿಗೆ ಸಂಬಂಧಪಟ್ಟವರನ್ನು ಇದೀಗ ಐಟಿ ಟಾರ್ಗೆಟ್ ಮಾಡಿದೆ. ತೆರಿಗೆ ವಂಚನೆ ಆರೋಪ ಕೇಳಿಬರುತ್ತಿದೆ.

ಇವರಲ್ಲಿ ಅನುರಾಗ್ ಕಶ್ಯಪ್​ ಮತ್ತು ತಾಪ್ಸಿ ಪನ್ನು ಹಲವು ರಾಷ್ಟ್ರೀಯ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತಿದವರು. ಸದ್ಯ ಕೃಷಿ ಕಾಯ್ದೆ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರ ಪರವಾಗಿ ಮಾತನಾಡಿದ್ದ ತಾಪ್ಸಿ ಪನ್ನು, ವ್ಯವಸ್ಥೆಯನ್ನು ಸರಿಪಡಿಸುವಂತೆ ಸರ್ಕಾರಕ್ಕೆ ಸಲಹೆಯನ್ನೂ ನೀಡಿದ್ದರು. ಇನ್ನು ಅನುರಾಗ್ ಕಶ್ಯಪ್​ 2019ರಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ಪ್ರತಿಭಟನಾಕಾರರಿಗೆ ಹಿಂಸೆ ನೀಡಲಾಗುತ್ತಿದೆ ಎಂದು ಸರ್ಕಾರದ ನಡೆಯನ್ನು ಖಂಡಿಸಿದ್ದರು. ಹಾಗೇ, ಸುಶಾಂತ್​ ಸಿಂಗ್​ ಸತ್ತಾಗ ಅವರ ಗೆಳತಿ ರಿಯಾರನ್ನು ವಹಿಸಿಕೊಂಡು ಮಾತನಾಡಿದ್ದರು. ಬಾಲಿವುಡ್ ಹುಳುಕು ಎತ್ತಿದ ಇತರ ನಟ-ನಟಿಯರ ನಡೆಯನ್ನು ಖಂಡಿಸಿದ್ದಾರೆ.

ಇದನ್ನೂ ಓದಿ: ‘ಅನಾರೋಗ್ಯ..ಸರ್ಜರಿ’: ಬಾಲಿವುಡ್​ ಬಿಗ್​ ಬಿ ಅಮಿತಾಭ್​ ಬಚ್ಚನ್​ ಪೋಸ್ಟ್​ ನೋಡಿ ಅಭಿಮಾನಿಗಳಲ್ಲಿ ಆತಂಕ​

Published On - 1:58 pm, Wed, 3 March 21

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?