AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಂಧ್ರ ಪ್ರದೇಶ, ತೆಲಂಗಾಣದಲ್ಲಿ ಐಟಿ ದಾಳಿ; ವಂಶಿರಾಂ ಬಿಲ್ಡರ್ಸ್ ಸುಬ್ಬಾರೆಡ್ಡಿ ಮನೆಯಲ್ಲಿ ಶೋಧ

ಹೈದರಾಬಾದ್​​ನ ಜುಬಿಲಿ ಹಿಲ್ಸ್ ರಸ್ತೆ ನಂ.45ರಲ್ಲಿರುವ ವಂಶಿರಾಮ್ ಬಿಲ್ಡರ್ಸ್ ಸುಬ್ಬಾರೆಡ್ಡಿ ಅವರ ಸೋದರ ಮಾವ ಜನಾರ್ದನ ರೆಡ್ಡಿ ಅವರ ಮನೆಯಲ್ಲಿ ತಪಾಸಣೆ ನಡೆಸಲಾಯಿತು. ಹೀಗಾಗಿ ಅವರ ಮನೆಗಳಿಗೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.

ಆಂಧ್ರ ಪ್ರದೇಶ, ತೆಲಂಗಾಣದಲ್ಲಿ ಐಟಿ ದಾಳಿ; ವಂಶಿರಾಂ ಬಿಲ್ಡರ್ಸ್ ಸುಬ್ಬಾರೆಡ್ಡಿ ಮನೆಯಲ್ಲಿ ಶೋಧ
ಐಟಿ ದಾಳಿ
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on:Dec 06, 2022 | 12:47 PM

Share

ಮಂಗಳವಾರ ಮುಂಜಾನೆ ಹೈದರಾಬಾದ್ ಮತ್ತು ವಿಜಯವಾಡದ ಹಲವೆಡೆ ಆದಾಯ ತೆರಿಗೆ ಇಲಾಖೆ (Income Tax)ದಾಳಿ ನಡೆಸಿದೆ. ವಂಶಿರಾಂ ಬಿಲ್ಡರ್ಸ್‌ನ ಕಚೇರಿಗಳು ಮತ್ತು ನಿರ್ದೇಶಕರ ಮನೆಗಳಲ್ಲಿ ಬೆಳಗ್ಗೆಯಿಂದ ಐಟಿ ಇಲಾಖೆ ಶೋಧ ನಡೆಸುತ್ತಿದ್ದು, 36 ಸ್ಥಳಗಳಲ್ಲಿ ಏಕಕಾಲದಲ್ಲಿ ಶೋಧ ನಡೆಸಿದೆ. ವಂಶಿರಾಂ ಬಿಲ್ಡರ್ಸ್(Vamseeram builders) ಅಧ್ಯಕ್ಷ ತಿಕ್ಕವರಪು ಸುಬ್ಬಾರೆಡ್ಡಿ ಜತೆಗೆ ನಿರ್ದೇಶಕ ಜನಾರ್ದನರೆಡ್ಡಿ ಅವರ ಮನೆಯಲ್ಲೂ ಶೋಧ ನಡೆಯುತ್ತಿದೆ. ವಂಶಿರಾಂ ಬಿಲ್ಡರ್ ಸುಬ್ಬಾರೆಡ್ಡಿ ಅವರ ಮನೆಯಲ್ಲಿ ತಪಾಸಣೆ ನಡೆಯುತ್ತಿದೆ. ಹೈದರಾಬಾದ್​​ನ ಜುಬಿಲಿ ಹಿಲ್ಸ್ ರಸ್ತೆ ನಂ.45ರಲ್ಲಿರುವ ವಂಶಿರಾಮ್ ಬಿಲ್ಡರ್ಸ್ ಸುಬ್ಬಾರೆಡ್ಡಿ ಅವರ ಸೋದರ ಮಾವ ಜನಾರ್ದನ ರೆಡ್ಡಿ ಅವರ ಮನೆಯಲ್ಲಿ ತಪಾಸಣೆ ನಡೆಸಲಾಯಿತು. ಹೀಗಾಗಿ ಅವರ ಮನೆಗಳಿಗೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು. ಏತನ್ಮಧ್ಯೆ, ತೆಲಂಗಾಣದ ಪ್ರಮುಖ ರಾಜಕೀಯ ನಾಯಕನಿಗೆ ಸಂಬಂಧಿಸಿದ ಹೂಡಿಕೆಗಳ ಹಣಕಾಸು ವ್ಯವಹಾರಗಳ ಮೇಲೆ ಐಟಿ ಅಧಿಕಾರಿಗಳು ಗಮನಹರಿಸಿದ್ದಾರೆ ಎಂದು ವರದಿಯಾಗಿದೆ. ಅದರ ಭಾಗವಾಗಿಯೇ ಈ ದಾಳಿಗಳು ನಡೆಯುತ್ತಿವ ಎಂದು ಹೇಳಲಾಗಿದೆ. ಮತ್ತೊಂದೆಡೆ, ವಿಜಯವಾಡದಲ್ಲಿರುವ ವೈಎಸ್‌ಆರ್‌ಸಿಪಿ ನಾಯಕ ದೇವಿನೇನಿ ಅವಿನಾಶ್ ಅವರ ಮನೆಯಲ್ಲಿ ಐಟಿ ಶೋಧ ನಡೆಯುತ್ತಿದೆ. ಇಂದು ಬೆಳಗ್ಗೆ 6.30ಕ್ಕೆ ಅವಿನಾಶ್ ಮನೆಗೆ ತೆರಳಿದ ಐಟಿ ಅಧಿಕಾರಿಗಳು ಶೋಧ ನಡೆಸಿದ್ದಾರೆ.

ವಂಶಿರಾಂ ಬಿಲ್ಡರ್ಸ್ ಮೇಲಿನ ದಾಳಿಯು ತೆಲಂಗಾಣ ರಾಜ್ಯದ ಪ್ರಮುಖ ಬಿಲ್ಡರ್‌ಗಳಾದ ಸುರೇಶ್ ಚುಕ್ಕಪಲ್ಲಿ ಅವರ ಫೀನಿಕ್ಸ್ ಗ್ರೂಪ್ ಮತ್ತು ಇತರ ಪ್ರಮುಖ ಇನ್‌ಫ್ರಾ ಗುಂಪುಗಳಾದ ಸುಮಧುರ, ವಾಸವಿ ಮತ್ತು ಸಾಹಿತಿ ಇನ್‌ಫ್ರಾ ವೆಂಚರ್ಸ್ ಹಲವಾರು ರಾಜಕೀಯ ನಾಯಕರಿಂದ ಹಣಕಾಸು ಹೂಡಿಕೆಗೆ ಸಂಬಂಧಿಸಿದಂತೆ ಪರಸ್ಪರ ಸಂಪರ್ಕ ಹೊಂದಿದೆ ಎಂದು ಸಾಕ್ಷಿ ಡಾಟ್ ಕಾಂ ವರದಿ ಮಾಡಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:40 pm, Tue, 6 December 22

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?