AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಂಧ್ರ ಪ್ರದೇಶ, ತೆಲಂಗಾಣದಲ್ಲಿ ಐಟಿ ದಾಳಿ; ವಂಶಿರಾಂ ಬಿಲ್ಡರ್ಸ್ ಸುಬ್ಬಾರೆಡ್ಡಿ ಮನೆಯಲ್ಲಿ ಶೋಧ

ಹೈದರಾಬಾದ್​​ನ ಜುಬಿಲಿ ಹಿಲ್ಸ್ ರಸ್ತೆ ನಂ.45ರಲ್ಲಿರುವ ವಂಶಿರಾಮ್ ಬಿಲ್ಡರ್ಸ್ ಸುಬ್ಬಾರೆಡ್ಡಿ ಅವರ ಸೋದರ ಮಾವ ಜನಾರ್ದನ ರೆಡ್ಡಿ ಅವರ ಮನೆಯಲ್ಲಿ ತಪಾಸಣೆ ನಡೆಸಲಾಯಿತು. ಹೀಗಾಗಿ ಅವರ ಮನೆಗಳಿಗೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.

ಆಂಧ್ರ ಪ್ರದೇಶ, ತೆಲಂಗಾಣದಲ್ಲಿ ಐಟಿ ದಾಳಿ; ವಂಶಿರಾಂ ಬಿಲ್ಡರ್ಸ್ ಸುಬ್ಬಾರೆಡ್ಡಿ ಮನೆಯಲ್ಲಿ ಶೋಧ
ಐಟಿ ದಾಳಿ
TV9 Web
| Edited By: |

Updated on:Dec 06, 2022 | 12:47 PM

Share

ಮಂಗಳವಾರ ಮುಂಜಾನೆ ಹೈದರಾಬಾದ್ ಮತ್ತು ವಿಜಯವಾಡದ ಹಲವೆಡೆ ಆದಾಯ ತೆರಿಗೆ ಇಲಾಖೆ (Income Tax)ದಾಳಿ ನಡೆಸಿದೆ. ವಂಶಿರಾಂ ಬಿಲ್ಡರ್ಸ್‌ನ ಕಚೇರಿಗಳು ಮತ್ತು ನಿರ್ದೇಶಕರ ಮನೆಗಳಲ್ಲಿ ಬೆಳಗ್ಗೆಯಿಂದ ಐಟಿ ಇಲಾಖೆ ಶೋಧ ನಡೆಸುತ್ತಿದ್ದು, 36 ಸ್ಥಳಗಳಲ್ಲಿ ಏಕಕಾಲದಲ್ಲಿ ಶೋಧ ನಡೆಸಿದೆ. ವಂಶಿರಾಂ ಬಿಲ್ಡರ್ಸ್(Vamseeram builders) ಅಧ್ಯಕ್ಷ ತಿಕ್ಕವರಪು ಸುಬ್ಬಾರೆಡ್ಡಿ ಜತೆಗೆ ನಿರ್ದೇಶಕ ಜನಾರ್ದನರೆಡ್ಡಿ ಅವರ ಮನೆಯಲ್ಲೂ ಶೋಧ ನಡೆಯುತ್ತಿದೆ. ವಂಶಿರಾಂ ಬಿಲ್ಡರ್ ಸುಬ್ಬಾರೆಡ್ಡಿ ಅವರ ಮನೆಯಲ್ಲಿ ತಪಾಸಣೆ ನಡೆಯುತ್ತಿದೆ. ಹೈದರಾಬಾದ್​​ನ ಜುಬಿಲಿ ಹಿಲ್ಸ್ ರಸ್ತೆ ನಂ.45ರಲ್ಲಿರುವ ವಂಶಿರಾಮ್ ಬಿಲ್ಡರ್ಸ್ ಸುಬ್ಬಾರೆಡ್ಡಿ ಅವರ ಸೋದರ ಮಾವ ಜನಾರ್ದನ ರೆಡ್ಡಿ ಅವರ ಮನೆಯಲ್ಲಿ ತಪಾಸಣೆ ನಡೆಸಲಾಯಿತು. ಹೀಗಾಗಿ ಅವರ ಮನೆಗಳಿಗೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು. ಏತನ್ಮಧ್ಯೆ, ತೆಲಂಗಾಣದ ಪ್ರಮುಖ ರಾಜಕೀಯ ನಾಯಕನಿಗೆ ಸಂಬಂಧಿಸಿದ ಹೂಡಿಕೆಗಳ ಹಣಕಾಸು ವ್ಯವಹಾರಗಳ ಮೇಲೆ ಐಟಿ ಅಧಿಕಾರಿಗಳು ಗಮನಹರಿಸಿದ್ದಾರೆ ಎಂದು ವರದಿಯಾಗಿದೆ. ಅದರ ಭಾಗವಾಗಿಯೇ ಈ ದಾಳಿಗಳು ನಡೆಯುತ್ತಿವ ಎಂದು ಹೇಳಲಾಗಿದೆ. ಮತ್ತೊಂದೆಡೆ, ವಿಜಯವಾಡದಲ್ಲಿರುವ ವೈಎಸ್‌ಆರ್‌ಸಿಪಿ ನಾಯಕ ದೇವಿನೇನಿ ಅವಿನಾಶ್ ಅವರ ಮನೆಯಲ್ಲಿ ಐಟಿ ಶೋಧ ನಡೆಯುತ್ತಿದೆ. ಇಂದು ಬೆಳಗ್ಗೆ 6.30ಕ್ಕೆ ಅವಿನಾಶ್ ಮನೆಗೆ ತೆರಳಿದ ಐಟಿ ಅಧಿಕಾರಿಗಳು ಶೋಧ ನಡೆಸಿದ್ದಾರೆ.

ವಂಶಿರಾಂ ಬಿಲ್ಡರ್ಸ್ ಮೇಲಿನ ದಾಳಿಯು ತೆಲಂಗಾಣ ರಾಜ್ಯದ ಪ್ರಮುಖ ಬಿಲ್ಡರ್‌ಗಳಾದ ಸುರೇಶ್ ಚುಕ್ಕಪಲ್ಲಿ ಅವರ ಫೀನಿಕ್ಸ್ ಗ್ರೂಪ್ ಮತ್ತು ಇತರ ಪ್ರಮುಖ ಇನ್‌ಫ್ರಾ ಗುಂಪುಗಳಾದ ಸುಮಧುರ, ವಾಸವಿ ಮತ್ತು ಸಾಹಿತಿ ಇನ್‌ಫ್ರಾ ವೆಂಚರ್ಸ್ ಹಲವಾರು ರಾಜಕೀಯ ನಾಯಕರಿಂದ ಹಣಕಾಸು ಹೂಡಿಕೆಗೆ ಸಂಬಂಧಿಸಿದಂತೆ ಪರಸ್ಪರ ಸಂಪರ್ಕ ಹೊಂದಿದೆ ಎಂದು ಸಾಕ್ಷಿ ಡಾಟ್ ಕಾಂ ವರದಿ ಮಾಡಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:40 pm, Tue, 6 December 22

ಕತ್ರಿಗುಪ್ಪೆಯಲ್ಲಿ ಗ್ಯಾಂಗ್​ ವಾರ್, ಲಾಂಗು ಮಚ್ಚಿನ ಹೊಡೆತಕ್ಕೆ ಕಾರು ಪೀಸ್!
ಕತ್ರಿಗುಪ್ಪೆಯಲ್ಲಿ ಗ್ಯಾಂಗ್​ ವಾರ್, ಲಾಂಗು ಮಚ್ಚಿನ ಹೊಡೆತಕ್ಕೆ ಕಾರು ಪೀಸ್!
ಬಿಜೆಪಿ ಶಾಸಕ ಶರಣು ಸಲಗರ ವಿರುದ್ಧ ಎಫ್ಐಆರ್ ದಾಖಲು
ಬಿಜೆಪಿ ಶಾಸಕ ಶರಣು ಸಲಗರ ವಿರುದ್ಧ ಎಫ್ಐಆರ್ ದಾಖಲು
ಪೊಲೀಸರ ಕಣ್ಣಿಗೆ ಬಿದ್ದ ಚಿರತೆ, ಗ್ರಾಮಸ್ಥರಲ್ಲಿ ಆತಂಕ
ಪೊಲೀಸರ ಕಣ್ಣಿಗೆ ಬಿದ್ದ ಚಿರತೆ, ಗ್ರಾಮಸ್ಥರಲ್ಲಿ ಆತಂಕ
ಕರ್ನಾಟಕವನ್ನೇ ಬೆಚ್ಚಿ ಬೀಳಿಸಿದ ದರೋಡೆ ಪ್ರಕರಣಗಳ ಲಿಸ್ಟ್ ಇಲ್ಲಿದೆ ನೋಡಿ!
ಕರ್ನಾಟಕವನ್ನೇ ಬೆಚ್ಚಿ ಬೀಳಿಸಿದ ದರೋಡೆ ಪ್ರಕರಣಗಳ ಲಿಸ್ಟ್ ಇಲ್ಲಿದೆ ನೋಡಿ!
ಅಬ್ಬರಿಸಿದ ಸಾಲ್ಟ್ ಅ್ಯಂಡ್ ಪೆಪ್ಪರ್: ಪ್ಲೇಆಫ್​ಗೆ ನೈಟ್ ರೈಡರ್ಸ್​
ಅಬ್ಬರಿಸಿದ ಸಾಲ್ಟ್ ಅ್ಯಂಡ್ ಪೆಪ್ಪರ್: ಪ್ಲೇಆಫ್​ಗೆ ನೈಟ್ ರೈಡರ್ಸ್​
ಡಿಕೆಶಿ​ಗೆ 16 ಲಕ್ಷ ರೂ ಮೌಲ್ಯದ ಗಿಫ್ಟ್: ಅಂಥದ್ದೇನಿದೆ? ಇಲ್ಲಿದೆ ನೋಡಿ
ಡಿಕೆಶಿ​ಗೆ 16 ಲಕ್ಷ ರೂ ಮೌಲ್ಯದ ಗಿಫ್ಟ್: ಅಂಥದ್ದೇನಿದೆ? ಇಲ್ಲಿದೆ ನೋಡಿ
ಈ ಡ್ಯಾನ್ಸ್ ನೋಡಲು ಎರಡು ಕಣ್ಣು ಸಾಲದು; ನಮ್ರತಾ-ಸಂಗೀತಾ ಪ್ರೀತಿಯ ಅಪ್ಪುಗೆ
ಈ ಡ್ಯಾನ್ಸ್ ನೋಡಲು ಎರಡು ಕಣ್ಣು ಸಾಲದು; ನಮ್ರತಾ-ಸಂಗೀತಾ ಪ್ರೀತಿಯ ಅಪ್ಪುಗೆ
ಅಮೆರಿಕದಲ್ಲಿ ಎರಡು ಹೆಲಿಕಾಪ್ಟರ್​ಗಳ ನಡುವೆ ಡಿಕ್ಕಿ, ಪೈಲಟ್ ಸಾವು
ಅಮೆರಿಕದಲ್ಲಿ ಎರಡು ಹೆಲಿಕಾಪ್ಟರ್​ಗಳ ನಡುವೆ ಡಿಕ್ಕಿ, ಪೈಲಟ್ ಸಾವು
ಮತ್ತೆ ಅಶ್ವಿನಿ-ಗಿಲ್ಲಿ ಮಧ್ಯೆ ದೊಡ್ಡ ಫೈಟ್; ಕೊಟ್ಟ ಶಿಕ್ಷೆ ಘನಘೋರ
ಮತ್ತೆ ಅಶ್ವಿನಿ-ಗಿಲ್ಲಿ ಮಧ್ಯೆ ದೊಡ್ಡ ಫೈಟ್; ಕೊಟ್ಟ ಶಿಕ್ಷೆ ಘನಘೋರ
104 ಮೀಟರ್​ ಸಿಕ್ಸರ್​ನೊಂದಿಗೆ ಹೊಸ ಮೈಲುಗಲ್ಲು ದಾಟಿದ ಮ್ಯಾಕ್ಸ್​ವೆಲ್
104 ಮೀಟರ್​ ಸಿಕ್ಸರ್​ನೊಂದಿಗೆ ಹೊಸ ಮೈಲುಗಲ್ಲು ದಾಟಿದ ಮ್ಯಾಕ್ಸ್​ವೆಲ್