AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲ್ಲಿದ್ದಲು ಗಣಿ ಕಂಪನಿಯ ಹೆಸರನ್ನು ಅಕ್ರಮ ಕಲ್ಲಿದ್ದಲು ನಿಕ್ಷೇಪಗಳ ಹಂಚಿಕೆ ಪಟ್ಟಿಯಲ್ಲಿ ಸೇರಿಸಿದ್ದಕ್ಕೆ ಕೇಂದ್ರ ಸರ್ಕಾರಕ್ಕೆ ₹1 ಲಕ್ಷ ದಂಡ

Coalgate Scam ಸ್ಕ್ರೀನಿಂಗ್ ಕಮಿಟಿ ರೂಟ್ ಮೂಲಕ ಕಲ್ಲಿದ್ದಲು ನಿಕ್ಷೇಪವನ್ನು ಮಂಜೂರು ಮಾಡಲಾಗಿಲ್ಲ ಮತ್ತು ಎಂಎಂಡಿಆರ್ ಕಾಯಿದೆಯ ಪ್ರಕಾರ ಅದರ ಹಂಚಿಕೆಯನ್ನು ಕಟ್ಟುನಿಟ್ಟಾಗಿ ನಿಗದಿಪಡಿಸಲಾಗಿದೆ ಎಂದು ಅರ್ಜಿದಾರರು ಸೂಚಿಸಿದರು

ಕಲ್ಲಿದ್ದಲು ಗಣಿ ಕಂಪನಿಯ ಹೆಸರನ್ನು ಅಕ್ರಮ ಕಲ್ಲಿದ್ದಲು ನಿಕ್ಷೇಪಗಳ ಹಂಚಿಕೆ ಪಟ್ಟಿಯಲ್ಲಿ ಸೇರಿಸಿದ್ದಕ್ಕೆ ಕೇಂದ್ರ ಸರ್ಕಾರಕ್ಕೆ ₹1 ಲಕ್ಷ ದಂಡ
ಪ್ರಾತಿನಿಧಿಕ ಚಿತ್ರ
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on:Aug 18, 2022 | 12:57 PM

Share

ದೆಹಲಿ: ಕಲ್ಲಿದ್ದಲು ಹಗರಣದಲ್ಲಿ (Coalgate scam) ನಡೆದ ಅಕ್ರಮ ಕಲ್ಲಿದ್ದಲು ನಿಕ್ಷೇಪಗಳ ಹಂಚಿಕೆ ಪಟ್ಟಿಯಲ್ಲಿ(coal block allotments) ಕಲ್ಲಿದ್ದಲು ಗಣಿ ಕಂಪನಿಯ ಹೆಸರನ್ನು ತಪ್ಪಾಗಿ ನಮೂದಿಸಿದ್ದಕ್ಕಾಗಿ ಸುಪ್ರೀಂಕೋರ್ಟ್ ಬುಧವಾರ ಕೇಂದ್ರ ಸರ್ಕಾರಕ್ಕೆ ಒಂದು ಲಕ್ಷ ರೂಪಾಯಿ ದಂಡ ವಿಧಿಸಿದೆ. ದೂರುದಾರ ಕಂಪನಿಯಾದ ಬಿಎಲ್ಎ ಇಂಡಸ್ಟ್ರೀಸ್ ಪೈವೇಟ್ ಲಿಮಿಟೆಡ್  (BLA Industries Pvt Ltd)ಗಣಿ ಮತ್ತು ಖನಿಜ (ಅಭಿವೃದ್ಧಿ ಮತ್ತು ನಿಯಂತ್ರಣ) ಕಾಯಿದೆ, 1957 (MMDR ಕಾಯಿದೆ) ಅಡಿಯಲ್ಲಿ ಕಾರ್ಯವಿಧಾನವನ್ನು ಅನುಸರಿಸಿ ಕಾನೂನು ಮಾರ್ಗದ ಮೂಲಕ ಅರ್ಜಿ ಸಲ್ಲಿಸಿದ್ದು, ಮೇ 21, 1998 ರಂದು ಕೇಂದ್ರ ಸರ್ಕಾರದ ಅನುಮೋದನೆಯ ನಂತರ ಮಧ್ಯಪ್ರದೇಶ ರಾಜ್ಯವು ಗಣಿಗಾರಿಕೆ ಗುತ್ತಿಗೆಯನ್ನು ನೀಡಿತು ಎಂದು ನ್ಯಾಯಾಲಯ ಗಮನಿಸಿದೆ. 2014 ಆಗಸ್ಟ್ ತಿಂಗಳಲ್ಲಿ ಕಲ್ಲಿದ್ದಲು ನಿಕ್ಷೇಪಗಳನ್ನು ರದ್ದು ಪಡಿಸಿದ್ದು ಸ್ಕ್ರೀನಿಂಗ್ ಕಮಿಟಿ ರೂಟ್ ಅಥವಾ ಕೇಂದ್ರ ಸರ್ಕಾರದ ವಿತರಣಾ ಮಾರ್ಗದ ಮೂಲಕ ಹಂಚಿಕೆ ಮಾಡಲಾಗಿದೆ. ಆದರೆ, ಕಲ್ಲಿದ್ದಲು ನಿಕ್ಷೇಪ ಹಂಚಿಕೆ ಪ್ರಕರಣದಲ್ಲಿ ಸುಪ್ರೀಂಕೋರ್ಟ್‌ಗೆ ಕೇಂದ್ರ ಸರ್ಕಾರ ಸಲ್ಲಿಸಿದ ಅಫಿಡವಿಟ್‌ನಲ್ಲಿ, ಸ್ಕ್ರೀನಿಂಗ್ ಕಮಿಟಿ ರೂಟ್ ಮೂಲಕ ಮಾಡಿದ ಹಂಚಿಕೆಗಳ ಪಟ್ಟಿಯಲ್ಲಿ ಅರ್ಜಿದಾರರ ಕಂಪನಿಯ ಹೆಸರನ್ನು ಉಲ್ಲೇಖಿಸಲಾಗಿದೆ. ಕಲ್ಲಿದ್ದಲು ಗಣಿಗಳ (ವಿಶೇಷ ನಿಬಂಧನೆಗಳು) ಸುಗ್ರೀವಾಜ್ಞೆ 2014 ರಲ್ಲಿ ವಿವರ ಪಟ್ಟಿಯಲ್ಲಿಯೂ ಅರ್ಜಿದಾರರ ಹೆಸರನ್ನು   ಸೇರಿಸಲಾಗಿದೆ. ಇದು ಅರ್ಜಿದಾರರಿಗೆ ನೀಡಲಾದ ಗಣಿಗಾರಿಕೆ ಗುತ್ತಿಗೆಯನ್ನು ರದ್ದುಪಡಿಸಲು ಕಾರಣವಾಯಿತು.

ಸ್ಕ್ರೀನಿಂಗ್ ಕಮಿಟಿ ರೂಟ್ ಮೂಲಕ ಕಲ್ಲಿದ್ದಲು ನಿಕ್ಷೇಪವನ್ನು ಮಂಜೂರು ಮಾಡಲಾಗಿಲ್ಲ ಮತ್ತು ಎಂಎಂಡಿಆರ್ ಕಾಯಿದೆಯ ಪ್ರಕಾರ ಅದರ ಹಂಚಿಕೆಯನ್ನು ಕಟ್ಟುನಿಟ್ಟಾಗಿ ನಿಗದಿಪಡಿಸಲಾಗಿದೆ ಎಂದು ಅರ್ಜಿದಾರರು ಸೂಚಿಸಿದರು. ಕೋಲ್ ಗೇಟ್ ಅಥವಾ ಕಲ್ಲಿದ್ದಲು ಹಗರಣದ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ತೀರ್ಪಿನ ಆಧಾರದ ಮೇಲೆ ಕೇಂದ್ರ ಸರ್ಕಾರವು ಹೆಚ್ಚಿಸಿದ ಹೆಚ್ಚುವರಿ ಶುಲ್ಕದ ಬೇಡಿಕೆಯನ್ನು ಪ್ರಶ್ನಿಸಿ ಆರ್ಟಿಕಲ್ 32 ರ ಅಡಿಯಲ್ಲಿ ರಿಟ್ ಅರ್ಜಿಯನ್ನು ಸಲ್ಲಿಸುವ ಮೂಲಕ ಪ್ರಸ್ತುತ ಕಂಪನಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ.

ಮುಖ್ಯ ನ್ಯಾಯಮೂರ್ತಿ ಎನ್ ವಿ ರಮಣ, ನ್ಯಾಯಮೂರ್ತಿ ಕೃಷ್ಣ ಮುರಾರಿ ಮತ್ತು ನ್ಯಾಯಮೂರ್ತಿ ಹೀಮಾ ಕೊಹ್ಲಿಯವರ ನ್ಯಾಯಪೀಠವು ಅರ್ಜಿದಾರರ ವಾದವನ್ನು ಒಪ್ಪಿದೆ. 1997ರ 26-27ರಂದು ನಡೆದ ಸ್ಕ್ರೀನಿಂಗ್ ಕಮಿಟಿ ಸಭೆಗಳಲ್ಲಿ ಅರ್ಜಿದಾರರು ಭಾಗವಹಿಸಿದ್ದರು ಎಂಬುದನ್ನು ಒಪ್ಪಿಕೊಂಡಾಗ ಅಂತಹ ಸಭೆಗಳಲ್ಲಿ ಭಾಗವಹಿಸುವುದರಿಂದ ಅದು ನೇರವಾಗಿ ಕೇಂದ್ರ ಸರ್ಕಾರಕ್ಕೆ ಅರ್ಜಿ ಸಲ್ಲಿಸಿದೆ ಎಂದು ಅರ್ಥವಾಗುವುದಿಲ್ಲ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

ಅರ್ಜಿದಾರರ ಪರವಾಗಿ ಗಣಿಗಾರಿಕೆ ಗುತ್ತಿಗೆ ಕೇಂದ್ರ ಸರ್ಕಾರ ಮತ್ತು/ಅಥವಾ ಸ್ಕ್ರೀನಿಂಗ್ ಕಮಿಟಿ ನೇರವಾಗಿ ನೀಡಿದ ಯಾವುದೇ ಹಂಚಿಕೆ ಪತ್ರವನ್ನು ಆಧರಿಸಿಲ್ಲ, ಆದರೆ ಸ್ವತಂತ್ರ ಪರಿಗಣನೆಯ ಮೇಲೆ ಸ್ಥಾಪಿಸಲಾಗಿದೆ ಎಂದು ಮಧ್ಯಪ್ರದೇಶ ರಾಜ್ಯದ ಅಫಿಡವಿಟ್ ಸ್ಪಷ್ಟಪಡಿಸಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಇದು ಎಂಎಂಡಿಆರ್ ಕಾಯಿದೆಯ ನಿಬಂಧನೆಗಳ ಪ್ರಕಾರ ಎಂಸಿ ನಿಯಮಗಳನ್ನು ಪಾಲಿಸಿದೆ.  ಈ ಹಿನ್ನೆಲೆಯಲ್ಲಿ ಕೇಂದ್ರವು ಅರ್ಜಿದಾರರ ಹೆಸರನ್ನು ಅಕ್ರಮ ಹಂಚಿಕೆದಾರರ ಪಟ್ಟಿಯಲ್ಲಿ ಸೇರಿಸಬಾರದಿತ್ತು ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ. ಅರ್ಜಿದಾರರು ಹೊರತೆಗೆಯಲಾದ ಕಲ್ಲಿದ್ದಲಿನ ಮೇಲೆ ಕೇಂದ್ರವು ಹೆಚ್ಚುವರಿ ಸುಂಕವನ್ನು ಕೋರುವಂತಿಲ್ಲ ಎಂದು ಹೇಳಿದ ನ್ಯಾಯಾಲಯ ಕೇಂದ್ರದ ಬೇಡಿಕೆಯನ್ನು ರದ್ದುಗೊಳಿಸಿತು.

Published On - 12:46 pm, Thu, 18 August 22

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್