AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS: ಕ್ರಿಕೆಟ್​ ಮ್ಯಾಚ್​ ಟಿಕೆಟ್ ಖರೀದಿಗೆಂದು ಏಕಾಏಕಿ ಧಾವಿಸಿ ಬಂದ ಸಾವಿರಾರು ಅಭಿಮಾನಿಗಳು; ಕಾಲ್ತುಳಿತದಿಂದ ನಾಲ್ವರಿಗೆ ತೀವ್ರಗಾಯ

ಕಾಲ್ತುಳಿತದಿಂದ ಕೆಲ ಪೊಲೀಸ್ ಸಿಬ್ಬಂದಿಯೂ ಸೇರಿದಂತೆ ಹಲವು ಅಭಿಮಾನಿಗಳು ತೀವ್ರವಾಗಿ ಗಾಯಗೊಂಡಿದ್ದಾರೆ.

IND vs AUS: ಕ್ರಿಕೆಟ್​ ಮ್ಯಾಚ್​ ಟಿಕೆಟ್ ಖರೀದಿಗೆಂದು ಏಕಾಏಕಿ ಧಾವಿಸಿ ಬಂದ ಸಾವಿರಾರು ಅಭಿಮಾನಿಗಳು; ಕಾಲ್ತುಳಿತದಿಂದ ನಾಲ್ವರಿಗೆ ತೀವ್ರಗಾಯ
ಹೈದರಾಬಾದ್​ನ ಜಿಮ್​ಖಾನ ಸ್ಟೇಡಿಯಂ ಎದುರು ಲಾಠಿ ಚಾರ್ಜ್ ನಡೆಯಿತು.
TV9 Web
| Edited By: |

Updated on:Sep 22, 2022 | 1:31 PM

Share

ಹೈದರಾಬಾದ್: ಭಾರತ ಮತ್ತು ಆಸ್ಟ್ರೇಲಿಯಾ (IND vs AUS) ನಡುವೆ ನಡೆಯಲಿರುವ 2ನೇ ಟಿ20 ಮ್ಯಾಚ್​ಗಾಗಿ ಟಿಕೆಟ್ ಖರೀದಿಸಲು ನಗರದ ಜಿಮ್​ಖಾನಾ ಕ್ರೀಡಾಂಗಣಕ್ಕೆ ಏಕಾಏಕಿ ಸಾವಿರಾರು ಮಂದಿ ನುಗ್ಗಿ ಬಂದಾಗ ಉಂಟಾದ ಗೊಂದಲ ಮತ್ತು ಕಾಲ್ತುಳಿತದಿಂದ ನಾಲ್ವರಿಗೆ ತೀವ್ರ ಗಾಯಗಳಾಗಿವೆ. ಕ್ರೀಡಾಂಗಣದ ಒಳಗೆ ಪ್ರವೇಶಿಸಲೆಂದು ಅಭಿಮಾನಿಗಳು ಗೇಟ್​ ಒಡೆದರು. ಈ ವೇಳೆ ನೂಕಾಟ-ತಳ್ಳಾಟ ನಡೆಯಿತು. ಗದ್ದಲ ಆರಂಭವಾದ ಪೊಲೀಸರು ಸಾಕಷ್ಟು ಸಂಖ್ಯೆಯಲ್ಲಿ ಸ್ಥಳದಲ್ಲಿ ಇರಲಿಲ್ಲ, ಆದರೆ ನಂತರ ಹೆಚ್ಚಿನ ಸಂಖ್ಯೆಯ ಪೊಲೀಸರನ್ನು ನಿಯೋಜಿಸಲಾಯಿತು. ಪೊಲೀಸರು ಲಾಠಿ ಚಾರ್ಜ್ ಮಾಡಿ ಗುಂಪು ಚದುರಿಸಿದರು.

ಟಿಕೆಟ್​ಗಾಗಿ ಬೆಳಿಗ್ಗೆ 5 ಗಂಟೆಯಿಂದಲೇ ಅಭಿಮಾನಿಗಳು ಕ್ರೀಡಾಂಗಣದ ಎದುರು ನಿಂತಿದ್ದರು. ಟಿಕೆಟ್ ಕೌಂಟರ್​ಗಳನ್ನು 10 ಗಂಟೆಗೆ ತೆರೆದ ಕ್ರೀಡಾಂಗಣದ ಸಿಬ್ಬಂದಿ ಏಕಕಾಲಕ್ಕೆ 20 ಮಂದಿಯನ್ನು ಮಾತ್ರ ಒಳಗೆ ಬಿಟ್ಟು, ಟಿಕೆಟ್ ಕೊಡುತ್ತಿದ್ದರು. ಟಿಕೆಟ್ ವಿತರಣೆ ತಡವಾಗುತ್ತಿದೆ ಎಂದು ಆರೋಪಿಸಿದ ಅಭಿಮಾನಿಗಳು ಏಕಾಏಕಿ ಒಳನುಗ್ಗಲು ಯತ್ನಿಸಿದರು. ಕೇವಲ ನಗದನ್ನು ಮಾತ್ರ ಸ್ವೀಕರಿಸಿ ಟಿಕೆಟ್ ವಿತರಿಸಲಾಗುತ್ತಿದೆ. ಆನ್​ಲೈನ್ ಪೇಮೆಂಟ್​ಗೆ ಅವಕಾಶವಿಲ್ಲ ಎನ್ನುವುದೂ ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿತ್ತು.

ಒಬ್ಬರಿಗೆ ಎರಡು ಟಿಕೆಟ್ ಮಾತ್ರ ಕೊಡಲಾಗುತ್ತಿದೆ. ಟಿಕೆಟ್​ಗಾಗಿ ಬರುವವರು ಆಧಾರ್​ ಕಾರ್ಡ್​ನ ಜೆರಾಕ್ಸ್​ ಪ್ರತಿಯೊಂದಿಗೆ ಇಮೇಲ್ ವಿಳಾಸ ಹಾಗೂ ಮೊಬೈಲ್ ನಂಬರ್ ಕೊಡಬೇಕು ಎಂಬ ಷರತ್ತು ವಿಧಿಸಲಾಗಿತ್ತು. ಮೂರು ವರ್ಷಗಳಿಂದ ಪ್ರತ್ಯಕ್ಷ ಮ್ಯಾಚ್ ನೋಡಲು ಸಾಧ್ಯವಾಗದಿದ್ದ ಅಭಿಮಾನಿಗಳು ಟಿಕೆಟ್​ ಖರೀದಿಗಾಗಿ ಕಾತರದಿಂದ ಕಾಯುತ್ತಿದ್ದರು. ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಉಪ್ಪಲ್ ಕ್ರೀಡಾಂಗಣದಲ್ಲಿ ಸೆಪ್ಟೆಂಬರ್ 25ರಂದು ಪಂದ್ಯ ನಡೆಯಲಿದೆ. ಆನ್​ಲೈನ್​ನಲ್ಲಿ 15 ಸಾವಿರ ಟಿಕೆಟ್​ಗಳನ್ನು ಮಾರಾಟ ಮಾಡಲಾಗಿದೆ. ಆಫ್​ಲೈನ್​ನಲ್ಲಿ 15 ಸಾವಿರ ಟಿಕೆಟ್ ಮಾರಲಾಗುತ್ತಿದೆ.

ಕಾಲ್ತುಳಿತದಿಂದ ಕೆಲ ಪೊಲೀಸ್ ಸಿಬ್ಬಂದಿಯೂ ಸೇರಿದಂತೆ ಹಲವು ಅಭಿಮಾನಿಗಳು ತೀವ್ರವಾಗಿ ಗಾಯಗೊಂಡಿದ್ತದಾರೆ. ತಕ್ಷಣ ಅವರನ್ನು ಆಸ್ಪತ್ರೆಗಳಿಗೆ ದಾಖಲಿಸಲಾಯಿತು.

Published On - 1:24 pm, Thu, 22 September 22

Follow Us
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್