AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS: ಕ್ರಿಕೆಟ್​ ಮ್ಯಾಚ್​ ಟಿಕೆಟ್ ಖರೀದಿಗೆಂದು ಏಕಾಏಕಿ ಧಾವಿಸಿ ಬಂದ ಸಾವಿರಾರು ಅಭಿಮಾನಿಗಳು; ಕಾಲ್ತುಳಿತದಿಂದ ನಾಲ್ವರಿಗೆ ತೀವ್ರಗಾಯ

ಕಾಲ್ತುಳಿತದಿಂದ ಕೆಲ ಪೊಲೀಸ್ ಸಿಬ್ಬಂದಿಯೂ ಸೇರಿದಂತೆ ಹಲವು ಅಭಿಮಾನಿಗಳು ತೀವ್ರವಾಗಿ ಗಾಯಗೊಂಡಿದ್ದಾರೆ.

IND vs AUS: ಕ್ರಿಕೆಟ್​ ಮ್ಯಾಚ್​ ಟಿಕೆಟ್ ಖರೀದಿಗೆಂದು ಏಕಾಏಕಿ ಧಾವಿಸಿ ಬಂದ ಸಾವಿರಾರು ಅಭಿಮಾನಿಗಳು; ಕಾಲ್ತುಳಿತದಿಂದ ನಾಲ್ವರಿಗೆ ತೀವ್ರಗಾಯ
ಹೈದರಾಬಾದ್​ನ ಜಿಮ್​ಖಾನ ಸ್ಟೇಡಿಯಂ ಎದುರು ಲಾಠಿ ಚಾರ್ಜ್ ನಡೆಯಿತು.
TV9 Web
| Edited By: |

Updated on:Sep 22, 2022 | 1:31 PM

Share

ಹೈದರಾಬಾದ್: ಭಾರತ ಮತ್ತು ಆಸ್ಟ್ರೇಲಿಯಾ (IND vs AUS) ನಡುವೆ ನಡೆಯಲಿರುವ 2ನೇ ಟಿ20 ಮ್ಯಾಚ್​ಗಾಗಿ ಟಿಕೆಟ್ ಖರೀದಿಸಲು ನಗರದ ಜಿಮ್​ಖಾನಾ ಕ್ರೀಡಾಂಗಣಕ್ಕೆ ಏಕಾಏಕಿ ಸಾವಿರಾರು ಮಂದಿ ನುಗ್ಗಿ ಬಂದಾಗ ಉಂಟಾದ ಗೊಂದಲ ಮತ್ತು ಕಾಲ್ತುಳಿತದಿಂದ ನಾಲ್ವರಿಗೆ ತೀವ್ರ ಗಾಯಗಳಾಗಿವೆ. ಕ್ರೀಡಾಂಗಣದ ಒಳಗೆ ಪ್ರವೇಶಿಸಲೆಂದು ಅಭಿಮಾನಿಗಳು ಗೇಟ್​ ಒಡೆದರು. ಈ ವೇಳೆ ನೂಕಾಟ-ತಳ್ಳಾಟ ನಡೆಯಿತು. ಗದ್ದಲ ಆರಂಭವಾದ ಪೊಲೀಸರು ಸಾಕಷ್ಟು ಸಂಖ್ಯೆಯಲ್ಲಿ ಸ್ಥಳದಲ್ಲಿ ಇರಲಿಲ್ಲ, ಆದರೆ ನಂತರ ಹೆಚ್ಚಿನ ಸಂಖ್ಯೆಯ ಪೊಲೀಸರನ್ನು ನಿಯೋಜಿಸಲಾಯಿತು. ಪೊಲೀಸರು ಲಾಠಿ ಚಾರ್ಜ್ ಮಾಡಿ ಗುಂಪು ಚದುರಿಸಿದರು.

ಟಿಕೆಟ್​ಗಾಗಿ ಬೆಳಿಗ್ಗೆ 5 ಗಂಟೆಯಿಂದಲೇ ಅಭಿಮಾನಿಗಳು ಕ್ರೀಡಾಂಗಣದ ಎದುರು ನಿಂತಿದ್ದರು. ಟಿಕೆಟ್ ಕೌಂಟರ್​ಗಳನ್ನು 10 ಗಂಟೆಗೆ ತೆರೆದ ಕ್ರೀಡಾಂಗಣದ ಸಿಬ್ಬಂದಿ ಏಕಕಾಲಕ್ಕೆ 20 ಮಂದಿಯನ್ನು ಮಾತ್ರ ಒಳಗೆ ಬಿಟ್ಟು, ಟಿಕೆಟ್ ಕೊಡುತ್ತಿದ್ದರು. ಟಿಕೆಟ್ ವಿತರಣೆ ತಡವಾಗುತ್ತಿದೆ ಎಂದು ಆರೋಪಿಸಿದ ಅಭಿಮಾನಿಗಳು ಏಕಾಏಕಿ ಒಳನುಗ್ಗಲು ಯತ್ನಿಸಿದರು. ಕೇವಲ ನಗದನ್ನು ಮಾತ್ರ ಸ್ವೀಕರಿಸಿ ಟಿಕೆಟ್ ವಿತರಿಸಲಾಗುತ್ತಿದೆ. ಆನ್​ಲೈನ್ ಪೇಮೆಂಟ್​ಗೆ ಅವಕಾಶವಿಲ್ಲ ಎನ್ನುವುದೂ ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿತ್ತು.

ಒಬ್ಬರಿಗೆ ಎರಡು ಟಿಕೆಟ್ ಮಾತ್ರ ಕೊಡಲಾಗುತ್ತಿದೆ. ಟಿಕೆಟ್​ಗಾಗಿ ಬರುವವರು ಆಧಾರ್​ ಕಾರ್ಡ್​ನ ಜೆರಾಕ್ಸ್​ ಪ್ರತಿಯೊಂದಿಗೆ ಇಮೇಲ್ ವಿಳಾಸ ಹಾಗೂ ಮೊಬೈಲ್ ನಂಬರ್ ಕೊಡಬೇಕು ಎಂಬ ಷರತ್ತು ವಿಧಿಸಲಾಗಿತ್ತು. ಮೂರು ವರ್ಷಗಳಿಂದ ಪ್ರತ್ಯಕ್ಷ ಮ್ಯಾಚ್ ನೋಡಲು ಸಾಧ್ಯವಾಗದಿದ್ದ ಅಭಿಮಾನಿಗಳು ಟಿಕೆಟ್​ ಖರೀದಿಗಾಗಿ ಕಾತರದಿಂದ ಕಾಯುತ್ತಿದ್ದರು. ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಉಪ್ಪಲ್ ಕ್ರೀಡಾಂಗಣದಲ್ಲಿ ಸೆಪ್ಟೆಂಬರ್ 25ರಂದು ಪಂದ್ಯ ನಡೆಯಲಿದೆ. ಆನ್​ಲೈನ್​ನಲ್ಲಿ 15 ಸಾವಿರ ಟಿಕೆಟ್​ಗಳನ್ನು ಮಾರಾಟ ಮಾಡಲಾಗಿದೆ. ಆಫ್​ಲೈನ್​ನಲ್ಲಿ 15 ಸಾವಿರ ಟಿಕೆಟ್ ಮಾರಲಾಗುತ್ತಿದೆ.

ಕಾಲ್ತುಳಿತದಿಂದ ಕೆಲ ಪೊಲೀಸ್ ಸಿಬ್ಬಂದಿಯೂ ಸೇರಿದಂತೆ ಹಲವು ಅಭಿಮಾನಿಗಳು ತೀವ್ರವಾಗಿ ಗಾಯಗೊಂಡಿದ್ತದಾರೆ. ತಕ್ಷಣ ಅವರನ್ನು ಆಸ್ಪತ್ರೆಗಳಿಗೆ ದಾಖಲಿಸಲಾಯಿತು.

Published On - 1:24 pm, Thu, 22 September 22

ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!
ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!
ಶಾಲಾ ಬಸ್​ ಚಾಲಕರ ತಪಾಸಣೆ: ಮದ್ಯಪಾನ ಮಾಡಿ ಸಿಕ್ಕಿಬಿದ್ದ 26 ಚಾಲಕರು
ಶಾಲಾ ಬಸ್​ ಚಾಲಕರ ತಪಾಸಣೆ: ಮದ್ಯಪಾನ ಮಾಡಿ ಸಿಕ್ಕಿಬಿದ್ದ 26 ಚಾಲಕರು
ಭೈರತಿ ಸುರೇಶ್ ನೀವು 7 ತಿಂಗಳಿಗೆ ಹುಟ್ಟಿದವರಂತೆ ಆಡ್ಬೇಡಿ
ಭೈರತಿ ಸುರೇಶ್ ನೀವು 7 ತಿಂಗಳಿಗೆ ಹುಟ್ಟಿದವರಂತೆ ಆಡ್ಬೇಡಿ