AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS: ಕ್ರಿಕೆಟ್​ ಮ್ಯಾಚ್​ ಟಿಕೆಟ್ ಖರೀದಿಗೆಂದು ಏಕಾಏಕಿ ಧಾವಿಸಿ ಬಂದ ಸಾವಿರಾರು ಅಭಿಮಾನಿಗಳು; ಕಾಲ್ತುಳಿತದಿಂದ ನಾಲ್ವರಿಗೆ ತೀವ್ರಗಾಯ

ಕಾಲ್ತುಳಿತದಿಂದ ಕೆಲ ಪೊಲೀಸ್ ಸಿಬ್ಬಂದಿಯೂ ಸೇರಿದಂತೆ ಹಲವು ಅಭಿಮಾನಿಗಳು ತೀವ್ರವಾಗಿ ಗಾಯಗೊಂಡಿದ್ದಾರೆ.

IND vs AUS: ಕ್ರಿಕೆಟ್​ ಮ್ಯಾಚ್​ ಟಿಕೆಟ್ ಖರೀದಿಗೆಂದು ಏಕಾಏಕಿ ಧಾವಿಸಿ ಬಂದ ಸಾವಿರಾರು ಅಭಿಮಾನಿಗಳು; ಕಾಲ್ತುಳಿತದಿಂದ ನಾಲ್ವರಿಗೆ ತೀವ್ರಗಾಯ
ಹೈದರಾಬಾದ್​ನ ಜಿಮ್​ಖಾನ ಸ್ಟೇಡಿಯಂ ಎದುರು ಲಾಠಿ ಚಾರ್ಜ್ ನಡೆಯಿತು.
TV9 Web
| Edited By: |

Updated on:Sep 22, 2022 | 1:31 PM

Share

ಹೈದರಾಬಾದ್: ಭಾರತ ಮತ್ತು ಆಸ್ಟ್ರೇಲಿಯಾ (IND vs AUS) ನಡುವೆ ನಡೆಯಲಿರುವ 2ನೇ ಟಿ20 ಮ್ಯಾಚ್​ಗಾಗಿ ಟಿಕೆಟ್ ಖರೀದಿಸಲು ನಗರದ ಜಿಮ್​ಖಾನಾ ಕ್ರೀಡಾಂಗಣಕ್ಕೆ ಏಕಾಏಕಿ ಸಾವಿರಾರು ಮಂದಿ ನುಗ್ಗಿ ಬಂದಾಗ ಉಂಟಾದ ಗೊಂದಲ ಮತ್ತು ಕಾಲ್ತುಳಿತದಿಂದ ನಾಲ್ವರಿಗೆ ತೀವ್ರ ಗಾಯಗಳಾಗಿವೆ. ಕ್ರೀಡಾಂಗಣದ ಒಳಗೆ ಪ್ರವೇಶಿಸಲೆಂದು ಅಭಿಮಾನಿಗಳು ಗೇಟ್​ ಒಡೆದರು. ಈ ವೇಳೆ ನೂಕಾಟ-ತಳ್ಳಾಟ ನಡೆಯಿತು. ಗದ್ದಲ ಆರಂಭವಾದ ಪೊಲೀಸರು ಸಾಕಷ್ಟು ಸಂಖ್ಯೆಯಲ್ಲಿ ಸ್ಥಳದಲ್ಲಿ ಇರಲಿಲ್ಲ, ಆದರೆ ನಂತರ ಹೆಚ್ಚಿನ ಸಂಖ್ಯೆಯ ಪೊಲೀಸರನ್ನು ನಿಯೋಜಿಸಲಾಯಿತು. ಪೊಲೀಸರು ಲಾಠಿ ಚಾರ್ಜ್ ಮಾಡಿ ಗುಂಪು ಚದುರಿಸಿದರು.

ಟಿಕೆಟ್​ಗಾಗಿ ಬೆಳಿಗ್ಗೆ 5 ಗಂಟೆಯಿಂದಲೇ ಅಭಿಮಾನಿಗಳು ಕ್ರೀಡಾಂಗಣದ ಎದುರು ನಿಂತಿದ್ದರು. ಟಿಕೆಟ್ ಕೌಂಟರ್​ಗಳನ್ನು 10 ಗಂಟೆಗೆ ತೆರೆದ ಕ್ರೀಡಾಂಗಣದ ಸಿಬ್ಬಂದಿ ಏಕಕಾಲಕ್ಕೆ 20 ಮಂದಿಯನ್ನು ಮಾತ್ರ ಒಳಗೆ ಬಿಟ್ಟು, ಟಿಕೆಟ್ ಕೊಡುತ್ತಿದ್ದರು. ಟಿಕೆಟ್ ವಿತರಣೆ ತಡವಾಗುತ್ತಿದೆ ಎಂದು ಆರೋಪಿಸಿದ ಅಭಿಮಾನಿಗಳು ಏಕಾಏಕಿ ಒಳನುಗ್ಗಲು ಯತ್ನಿಸಿದರು. ಕೇವಲ ನಗದನ್ನು ಮಾತ್ರ ಸ್ವೀಕರಿಸಿ ಟಿಕೆಟ್ ವಿತರಿಸಲಾಗುತ್ತಿದೆ. ಆನ್​ಲೈನ್ ಪೇಮೆಂಟ್​ಗೆ ಅವಕಾಶವಿಲ್ಲ ಎನ್ನುವುದೂ ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿತ್ತು.

ಒಬ್ಬರಿಗೆ ಎರಡು ಟಿಕೆಟ್ ಮಾತ್ರ ಕೊಡಲಾಗುತ್ತಿದೆ. ಟಿಕೆಟ್​ಗಾಗಿ ಬರುವವರು ಆಧಾರ್​ ಕಾರ್ಡ್​ನ ಜೆರಾಕ್ಸ್​ ಪ್ರತಿಯೊಂದಿಗೆ ಇಮೇಲ್ ವಿಳಾಸ ಹಾಗೂ ಮೊಬೈಲ್ ನಂಬರ್ ಕೊಡಬೇಕು ಎಂಬ ಷರತ್ತು ವಿಧಿಸಲಾಗಿತ್ತು. ಮೂರು ವರ್ಷಗಳಿಂದ ಪ್ರತ್ಯಕ್ಷ ಮ್ಯಾಚ್ ನೋಡಲು ಸಾಧ್ಯವಾಗದಿದ್ದ ಅಭಿಮಾನಿಗಳು ಟಿಕೆಟ್​ ಖರೀದಿಗಾಗಿ ಕಾತರದಿಂದ ಕಾಯುತ್ತಿದ್ದರು. ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಉಪ್ಪಲ್ ಕ್ರೀಡಾಂಗಣದಲ್ಲಿ ಸೆಪ್ಟೆಂಬರ್ 25ರಂದು ಪಂದ್ಯ ನಡೆಯಲಿದೆ. ಆನ್​ಲೈನ್​ನಲ್ಲಿ 15 ಸಾವಿರ ಟಿಕೆಟ್​ಗಳನ್ನು ಮಾರಾಟ ಮಾಡಲಾಗಿದೆ. ಆಫ್​ಲೈನ್​ನಲ್ಲಿ 15 ಸಾವಿರ ಟಿಕೆಟ್ ಮಾರಲಾಗುತ್ತಿದೆ.

ಕಾಲ್ತುಳಿತದಿಂದ ಕೆಲ ಪೊಲೀಸ್ ಸಿಬ್ಬಂದಿಯೂ ಸೇರಿದಂತೆ ಹಲವು ಅಭಿಮಾನಿಗಳು ತೀವ್ರವಾಗಿ ಗಾಯಗೊಂಡಿದ್ತದಾರೆ. ತಕ್ಷಣ ಅವರನ್ನು ಆಸ್ಪತ್ರೆಗಳಿಗೆ ದಾಖಲಿಸಲಾಯಿತು.

Published On - 1:24 pm, Thu, 22 September 22

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ