AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Independence Day 2022: ರಾಷ್ಟ್ರಧ್ವಜದ ಮಧ್ಯೆ ಇರುವ ಅಶೋಕ ಚಕ್ರದ 10 ಕುತೂಹಲಕಾರಿ ಸಂಗತಿಗಳು

Independence Day: ಭಾರತದ ರಾಷ್ಟ್ರಧ್ವಜದ ಮಧ್ಯೆ ಇರುವ ಅಶೋಕ ಚಕ್ರವನ್ನು ಸಮಯದ ಚಕ್ರ ಎಂದೂ ಕರೆಯಲಾಗುತ್ತದೆ. ಪ್ರೀತಿ, ಧೈರ್ಯ, ತಾಳ್ಮೆ, ಸ್ವಯಂ ತ್ಯಾಗ, ಸತ್ಯತೆ, ಸದಾಚಾರ, ನಂಬಿಕೆ ಸೇರಿದಂತೆ ಒಟ್ಟು 24 ತತ್ವಗಳನ್ನು ಪ್ರತಿನಿಧಿಸುತ್ತದೆ.

Independence Day 2022: ರಾಷ್ಟ್ರಧ್ವಜದ ಮಧ್ಯೆ ಇರುವ ಅಶೋಕ ಚಕ್ರದ 10 ಕುತೂಹಲಕಾರಿ ಸಂಗತಿಗಳು
ಭಾರತದ ರಾಷ್ಟ್ರ ಧ್ವಜImage Credit source: iStock Photo
TV9 Web
| Updated By: Rakesh Nayak Manchi|

Updated on: Aug 13, 2022 | 4:00 PM

Share

ಭಾರತ ಸ್ವಾತಂತ್ರ್ಯಗೊಂಡು 2022ರ ಆಗಸ್ಟ್ 15ಕ್ಕೆ 75 ವರ್ಷಗಳು ತುಂಬುತ್ತವೆ. ಈ ನಿಟ್ಟಿನಲ್ಲಿ ದೇಶಾದ್ಯಂತ ಸ್ವಾತಂತ್ರ್ಯದ ಅಮೃತ ಮಹೋತ್ಸವವನ್ನು ಆಚರಿಸಲಾಗುತ್ತಿದ್ದು, ಸಲಕ ಸಿದ್ಧತೆಗಳು ನಡೆಯುತ್ತಿವೆ. ಈಗಾಗಲೇ ಆಜಾದಿ ಕಾ ಅಮೃತ ಮಹೋತ್ಸವ ಆಚರಣೆಯಡಿ ಹರ್​ ಘರ್ ತಿರಂಗ ಅಭಿಯಾನವನ್ನು ನಡೆಸಲಾಗುತ್ತಿದೆ. ಅದರಂತೆ ದೇಶಾದ್ಯಂತ ಸರ್ಕಾರಿ ಕಚೇರಿಗಳು, ಖಾಸಗಿ ಕಂಪನಿಗಳು, ದೇಶವಾಸಿಗಳ ಮನೆಗಳಲ್ಲೂ ರಾಷ್ಟ್ರಧ್ವಜವನ್ನು ಹಾರಿಸಲಾಗುತ್ತಿದೆ. ಈ ರಾಷ್ಟ್ರಧ್ವಜದಲ್ಲಿನ ಕೇಸರಿ ಬಣ್ಣ ಧೈರ್ಯ, ಪರಿತ್ಯಾ, ದೇಶದ ಒಳಿತಿಗಾಗಿ ನಡೆಯುವ ಬಲಿದಾನದ ಸಂಕೇತವನ್ನು ಸೂಚಿಸಿದರೆ, ಬಿಳಿ ಬಣ್ಣವು ಸತ್ಯ, ಶಾಂತಿಯನ್ನು ಮತ್ತು ಹಸಿರು ಬಣ್ಣ ಪ್ರಗತಿಯ ಸಂಕೇವೂ ಆಗಿದೆ. ಜೊತೆಗೆ ಮನುಷ್ಯ ಮತ್ತು ಪ್ರಕೃತಿ ನಡುವಿನ ಅವಿನಾಭಾವ ಸಂಬಂಧವನ್ನು ತಿಳಿಸುತ್ತದೆ. ಈ ಬಣ್ಣಗಳ ನಡುವೆ ಇರುವ ಅಶೋಕ ಚಕ್ರವೂ ತನ್ನದೇ ಆದ ಸಂಕೇತವನ್ನು ಹೊಂದಿದೆ. ಈ ಚಕ್ರವು ಧರ್ಮವನ್ನು ಪ್ರತಿನಿಧಿಸುತ್ತದೆ. ಈ ಚಕ್ರದ ಇನ್ನಷ್ಟು ಸಂಗತಿಗಳು ಇಲ್ಲಿವೆ ನೋಡಿ

  1. ಗೆರೆಗಳಿಂದ ಪ್ರತಿನಿಧಿಸುವ ಅಶೋಕ ಚಕ್ರವು ಧರ್ಮಚಕ್ರದವನ್ನು ಸೂಚಿಸುತ್ತದೆ.
  2. ಅಶೋಕ ಚಕ್ರವು ತ್ರಿವರ್ಣ ಧ್ವಜದ ಮಧ್ಯದಲ್ಲಿದೆ ಮತ್ತು 24 ಗೆರೆಗಳನ್ನು ಹೊಂದಿದೆ. ಇದನ್ನು 1947ರ ಜುಲೈ 22 ರಂದು ಅಂಗೀಕರಿಸಲಾಯಿತು.
  3. ಅಶೋಕ ಚಕ್ರವನ್ನು ಕರ್ತವ್ಯದ ಚಕ್ರ ಎಂದೂ ಕರೆಯುತ್ತಾರೆ.
  4. ಭಾರತದ ಧ್ವಜದ ಬಿಳಿ ಬಣ್ಣದ ಮೇಲ್ಭಾಗದಲ್ಲಿ ನೀಲಿ ಬಣ್ಣದಲ್ಲಿ ಅಶೋಕ ಚಕ್ರವನ್ನು ಪ್ರದರ್ಶಿಸಲಾಗುತ್ತದೆ.
  5. ಜಲಂಧರ್‌ನ ಲಾಲಾ ಹಂಸರಾಜ್ ಅವರು ರಾಷ್ಟ್ರಧ್ವಜದಲ್ಲಿ ಚರಕ ಸೇರ್ಪಡಗೆ ಸಲಹೆ ನೀಡಿದ್ದರು. ಅದರಂತೆ ಮೊದಲು ಕೆಸರಿ, ಬಿಳಿ, ಹಸಿರು ಬಣ್ಣದ ತ್ರಿವರ್ಣ ಧ್ವಜದಲ್ಲಿ ಚರಕವನ್ನು ಸೇರಿಸಲಾಯಿತು.
  6. ನಂತರ ಚರಕದ ಬದಲಿಗೆ ಭಾರತದ ತ್ರಿವರ್ಣ ಧ್ವಜದಲ್ಲಿ ಅಶೋಕ ಚಕ್ರವನ್ನು ಬಳಸಲಾಯಿತು.
  7. ಅಶೋಕನ ಹಲವಾರು ಶಾಸನಗಳಲ್ಲಿ ಕಂಡುಬರುವ ‘ತಿರುಗುವ ಚಕ್ರ’ವನ್ನು ಅಶೋಕ ಚಕ್ರ ಎಂದು ಕರೆಯಲಾಗುತ್ತದೆ, ಅವುಗಳಲ್ಲಿ ಪ್ರಮುಖವಾದ ಅಶೋಕನ ಸಿಂಹ ಭಾರತದ ರಾಷ್ಟ್ರ ಲಾಂಛನವಾಗಿದೆ.
  8. ಪ್ರತಿಯೊಂದು ಚಕ್ರವು ಜೀವನದ ಒಂದು ತತ್ವ ಮತ್ತು ದಿನದ 24 ಗಂಟೆಗಳನ್ನೂ ಸಂಕೇತಿಸುತ್ತದೆ, ಅದಕ್ಕಾಗಿಯೇ ಇದನ್ನು ‘ಸಮಯದ ಚಕ್ರ’ ಎಂದೂ ಕರೆಯುತ್ತಾರೆ.
  9. ಈ ಚಕ್ರವು ಹಿಂದೂ ಧರ್ಮ, ಜೈನ ಧರ್ಮ ಮತ್ತು ವಿಶೇಷವಾಗಿ ಬೌದ್ಧ ಧರ್ಮದ ಧಾರ್ಮಿಕ ಲಕ್ಷಣವಾದ ‘ಧರ್ಮದ ಚಕ್ರ’ದ ಮಾದರಿಯಲ್ಲಿದೆ.
  10. ಕಡ್ಡಿಗಳು ಪ್ರತಿನಿಧಿಸುವ 24 ತತ್ವಗಳಲ್ಲಿ ಪ್ರೀತಿ, ಧೈರ್ಯ, ತಾಳ್ಮೆ, ಸ್ವಯಂ ತ್ಯಾಗ, ಸತ್ಯತೆ, ಸದಾಚಾರ, ಆಧ್ಯಾತ್ಮಿಕ ಜ್ಞಾನ, ನೈತಿಕತೆ, ಕಲ್ಯಾಣ, ಉದ್ಯಮ, ನಂಬಿಕೆ ಮತ್ತು ಸಮೃದ್ಧಿಯೂ ಸೇರಿದೆ.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ