AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Independence Day 2023: ಕೆಂಪು ಕೋಟೆಯಲ್ಲಿ ನಾಳೆ ಧ್ವಜಾರೋಹಣ, ಪ್ರಧಾನಿ ಮೋದಿ ಭಾಷಣ ಲೈವ್​​​ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ

Independence Day: ನಾಳೆ ಪ್ರಧಾನಿ ನರೇಂದ್ರ ಮೋದಿ ಅವರು ದೇಶವನ್ನು ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ದೇಶವನ್ನುದ್ದೇಶಿ ಮಾತನಾಡಲಿದ್ದಾರೆ. ಈ ಕಾರ್ಯಕ್ರಮದಲ್ಲಿ 1,800 ಜನ ಮುಖ್ಯ ಅತಿಥಿಗಳು ಭಾಗವಹಿಸಲಿದ್ದಾರೆ. ಕಾರ್ಯಕ್ರಮವನ್ನು ಲೈವ್​​​ ವೀಕ್ಷಿಸುವುದು ಹೇಗೆ? ಇಲ್ಲಿದೆ.

Independence Day 2023: ಕೆಂಪು ಕೋಟೆಯಲ್ಲಿ ನಾಳೆ ಧ್ವಜಾರೋಹಣ, ಪ್ರಧಾನಿ ಮೋದಿ ಭಾಷಣ ಲೈವ್​​​ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on:Aug 14, 2023 | 12:42 PM

Share

ದೆಹಲಿ, ಆ.14: ಭಾರತವು 76ನೇ ಸ್ವಾತಂತ್ರ್ಯ ದಿನಾಚರಣೆಯನ್ನು (Independence Day) ಆಚರಿಸಿಕೊಳ್ಳಲು ಆಗಸ್ಟ್​​ 15 ಅಂದರೆ ನಾಳೆಯ ದಿನಕ್ಕಾಗಿ ಮುಂದು ನೋಡುತ್ತಿದೆ. ಈ ಪ್ರಯುಕ್ತ ನಾಳೆ ಪ್ರಧಾನಿ ನರೇಂದ್ರ ಮೋದಿ ಅವರು ದೇಶವನ್ನುದ್ದೇಶಿ ಮಾತನಾಡಲಿದ್ದಾರೆ. ಪ್ರಧಾನಿ ಪಟ್ಟ ಏರಿದ ನಂತರ ಪ್ರಧಾನಿ ಮೋದಿ ನೇತೃತ್ವದ ಆಚರಿಸಿದ ಪ್ರತಿಯೊಂದು ಸ್ವಾತಂತ್ರ್ಯ ದಿನಾಚರಣೆ ಸಮಯದಲ್ಲಿ ಕೆಂಪು ಕೋಟೆಯ ಮೇಲೆ ತ್ರಿವರ್ಣ ಧ್ವಜವನ್ನು ಹಾರಿಸಿ, ದೇಶ ಭವಿಷ್ಯಕ್ಕೆ ಅನೇಕ ಹೊಸ ವಿಚಾರಗಳ ಜತೆಗೆ ಹಲವು ಯೋಜನೆಗಳನ್ನು ಘೋಷಣೆ ಮಾಡುತ್ತಾರೆ. ಹಾಗಾಗಿ ಅವರು ಕೆಂಪು ಕೋಟೆಯಲ್ಲಿ ಮಾಡುವ ಪ್ರಮುಖ ಭಾಷಣವನ್ನು ಲೈವ್ ವೀಕ್ಷಣೆ ಮಾಡುವುದು ಹೇಗೆ? ಎಂಬುದ ಬಗ್ಗೆ ಇಲ್ಲಿದೆ ಮಾಹಿತಿ.

ಪ್ರಧಾನಿ ಮೋದಿ ಅವರು ಅಧಿಕಾರಕ್ಕೆ ಬಂದು ಹತ್ತು ವರ್ಷ ಕಳೆದಿದೆ. ಇದು ಅವರು ಕೆಂಪು ಕೋಟೆಯಲ್ಲಿ ಮಾಡುತ್ತಿರುವ 10ನೇ ಭಾಷಣ. ನಾಳೆ ಬೆಳಿಗ್ಗೆ 7.30ಕ್ಕೆ ಮೋದಿ ಅವರು ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ದೇಶವನ್ನುದ್ದೇಶಿ ಭಾಷಣ ಮಾಡಲಿದ್ದಾರೆ.

ಸ್ವಾತಂತ್ರ್ಯ ದಿನದ ಭಾಷಣ ಲೈವ್ ಅನ್ನು ಎಲ್ಲಿ ವೀಕ್ಷಿಸಬೇಕು

ಸಾಮಾಜಿಕ ಮಾಧ್ಯಮ ವೇದಿಕೆಯಲ್ಲಿ ಲೈವ್

ಭಾರತ ಸರ್ಕಾರವು ತನ್ನ ಅಧಿಕೃತ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ನೇರ ಪ್ರಸಾರ ಮಾಡುತ್ತದೆ. ಪ್ರಧಾನಿ ಮೋದಿಯವರ ಭಾಷಣವನ್ನು ಯೂಟ್ಯೂಬ್ ಚಾನೆಲ್ ಮತ್ತು ಅವರ ಇತರ ಸಾಮಾಜಿಕ ಮಾಧ್ಯಮ ಖಾತೆಗಳಲ್ಲಿ ಲೈವ್ ನೋಡಬಹುದು.

ಟಿವಿ ಸುದ್ದಿ ವಾಹಿನಿಗಳು

ಕೆಂಪು ಕೋಟೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಮತ್ತು ಪ್ರಧಾನಿ ಮೋದಿ ಅವರ ಭಾಷಣವನ್ನು ದೂರದರ್ಶನ ಮತ್ತು ಇತರ ಹಲವಾರು ಸುದ್ದಿ ವಾಹಿನಿಗಳು ನೇರ ಪ್ರಸಾರ ಮಾಡುತ್ತವೆ.

ಇದನ್ನೂ ಓದಿ:  ದಿಲ್ಲಿಯಲ್ಲಿ ಸ್ವಾತಂತ್ರ್ಯೋತ್ಸವದ ತಯಾರಿ ಹೇಗಿದೆ? ಈ ಬಾರಿ ವಿಶೇಷ ಏನು? ಫೋಟೋಗಳಲ್ಲಿ ನೋಡಿ

1,800 ಜನ ವಿಶೇಷ ಅತಿಥಿಯಾಗಿ ಭಾಗಿ

ಕೇಂದ್ರ ಸರ್ಕಾರ ಸ್ವಾತಂತ್ರ್ಯ ದಿನಾಚರಣೆಗೆ ವಿವಿಧ ಕ್ಷೇತ್ರಗಳಲ್ಲಿ ಗುರುತಿಸಕೊಂಡಿರುವ 1,800 ಜನರನ್ನು ವಿಶೇಷ ಅತಿಥಿಗಳಾಗಿ ಆಹ್ವಾನಿಸಿದೆ. ರಕ್ಷಣಾ ಸಚಿವಾಲಯದ ಅಧಿಕೃತ ಪ್ರಕಟಣೆಯ ಪ್ರಕಾರ, ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಗೌರವಿಸು ನಿಟ್ಟಿನಲ್ಲಿ ಮತ್ತು ಅವರ ಜತೆಗೆ ಸ್ವಾತಂತ್ರ್ಯ ದಿನಾಚರಣೆ ಆಚರಣೆ ಮಾಡಲಾಗುತ್ತದೆ ಎಂದು ಹೇಳಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 12:41 pm, Mon, 14 August 23

Follow Us
Akshay Pallamajalu
Akshay Pallamajalu

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?