AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Independence Day Flag: ತ್ರಿವರ್ಣ ಧ್ವಜದ ಇತಿಹಾಸ, ಮಹತ್ವ ಕುರಿತ ಕುತೂಹಲಕಾರಿ ಮಾಹಿತಿ ಇಲ್ಲಿದೆ

ಆಗಸ್ಟ್​ 15ರಂದು 76ನೇ ಸ್ವಾತಂತ್ರೋತ್ಸವದ ಹಬ್ಬ ನಡೆಯಲಿದೆ. ದೇಶದಲ್ಲೆಡೆ ತ್ರಿವರ್ಣ ಧ್ವಜ ಹಾರಡಲಿದೆ. ರಾಷ್ಟ್ರಧ್ವಜ ನಮ್ಮ ರಾಷ್ಟ್ರೀಯ ಹೆಮ್ಮೆಯ ಸಂಕೇತವಾಗಿದೆ. ಇದು ಭಾರತದ ಜನರ ಭರವಸೆ ಮತ್ತು ಆಕಾಂಕ್ಷೆಗಳನ್ನು ಪ್ರತಿನಿಧಿಸುತ್ತದೆ. ಈ ಧ್ವಜವು ನಮ್ಮ ದೇಶದ ನಾಗರಿಕರ ಸ್ವಾತಂತ್ರ್ಯದ ಜೊತೆಗೆ ಬ್ರಿಟಿಷರ ದಬ್ಬಾಳಿಕೆಯಿಂದ ಮುಕ್ತತೆಯನ್ನು ಸಾರುತ್ತದೆ.

Independence Day Flag: ತ್ರಿವರ್ಣ ಧ್ವಜದ ಇತಿಹಾಸ, ಮಹತ್ವ ಕುರಿತ ಕುತೂಹಲಕಾರಿ ಮಾಹಿತಿ ಇಲ್ಲಿದೆ
ತ್ರಿವರ್ಣ ಧ್ವಜ
Follow us
ಗಂಗಾಧರ​ ಬ. ಸಾಬೋಜಿ
|

Updated on:Aug 12, 2023 | 7:55 PM

ಆಗಸ್ಟ್​ 15ರಂದು ದೇಶದಲ್ಲೆಡೆ 76ನೇ ಸ್ವಾತಂತ್ರೋತ್ಸವದ (Independence Day 2023) ಹಬ್ಬ ನಡೆಯಲಿದೆ. ಸ್ವಾತಂತ್ರೋತ್ಸವ ಅಂದರೆ ತ್ಯಾಗ ಬಲಿದಾನವನ್ನ ಸ್ಮರಿಸುವ ದಿನ. ಕನಸಿನ ಭಾರತದ ತೇರನ್ನ ಎಳೆಯುವ ಸುದಿನ. 90 ವರ್ಷಗಳ ನಿರಂತರ ಹೋರಾಟದ ಫಲವೇ 1947ರ ಆಗಸ್ಟ್ 15ರಂದು ಭಾರತಕ್ಕೆ ಬ್ರಿಟಿಷರಿಂದ ಸ್ವಾತಂತ್ರ್ಯ ಸಿಕ್ಕಿತ್ತು. ಈ ಶುಭ ದಿನದಂದು ತ್ರಿವರ್ಣ ಧ್ವಜವನ್ನು ಬಾನೆತ್ತರಕ್ಕೆ ಹಾರಿಸಲಾಗುತ್ತದೆ. ಈ ದಿನವನ್ನು ರಾಷ್ಟ್ರದಾದ್ಯಂತ ವೈಭವದಿಂದ ಆಚರಿಸಲಾಗುತ್ತದೆ.

ಭಾರತದ ರಾಷ್ಟ್ರೀಯ ಧ್ವಜ ಅಥವಾ ತ್ರಿವರ್ಣ ಧ್ವಜವು ನಮ್ಮ ರಾಷ್ಟ್ರೀಯ ಹೆಮ್ಮೆಯ ಸಂಕೇತವಾಗಿದೆ. ತ್ರಿವರ್ಣ ಧ್ವಜವು ಭಾರತದ ಜನರ ಭರವಸೆ ಮತ್ತು ಆಕಾಂಕ್ಷೆಗಳನ್ನು ಪ್ರತಿನಿಧಿಸುತ್ತದೆ. ಆದ್ದರಿಂದ, ಭಾರತೀಯರಾದ ನಾವು ತ್ರಿವರ್ಣ ಧ್ವಜದ ಇತಿಹಾಸ ಮತ್ತು ಮಹತ್ವವನ್ನು ತಿಳಿದುಕೊಂಡಿರಬೇಕು.

ತ್ರಿವರ್ಣ ಧ್ವಜದ ಇತಿಹಾಸ ಮತ್ತು ಮಹತ್ವ

ಪ್ರಪಂಚದ ಪ್ರತಿಯೊಂದು ಸ್ವತಂತ್ರ ರಾಷ್ಟ್ರವೂ ತನ್ನದೇ ಆದ ಧ್ವಜವನ್ನು ಹೊಂದಿದ್ದು, ಅದು ಸ್ವತಂತ್ರದ  ಸಂಕೇತವಾಗಿದೆ. ಆಗಸ್ಟ್ 15, 1947 ರಂದು ಭಾರತವು ಬ್ರಿಟಿಷರಿಂದ ಸ್ವಾತಂತ್ರ್ಯ ಪಡೆಯುವ ಕೆಲವು ದಿನಗಳ ಮೊದಲು ಜುಲೈ 22, 1947 ರಂದು ನಡೆದ ಸಂವಿಧಾನ ಸಭೆಯಲ್ಲಿ ಭಾರತದ ರಾಷ್ಟ್ರೀಯ ಧ್ವಜವನ್ನು ಪ್ರಸ್ತುತ ರೂಪದಲ್ಲಿ ಅಂಗೀಕರಿಸಲ್ಪಟ್ಟಿತು. 1916 ರಲ್ಲಿ, ಪಿಂಗಲಿ ವೆಂಕಯ್ಯ ಎಂಬ ಲೇಖಕನು ಖಾದಿ ಬಟ್ಟೆಯಿಂದ ಮೊದಲ ಬಾರಿಗೆ ಧ್ವಜವನ್ನು ತಯಾರು ಮಾಡಿದರು.

ತ್ರಿವರ್ಣದ ಮೂರು ಬಣ್ಣಗಳ ವಿವರ

ನಮ್ಮ ತ್ರಿವರ್ಣ ಧ್ವಜವು ಮೂರು ಬಣ್ಣಗಳನ್ನು ಹೊಂದಿದೆ. ಮೇಲ್ಭಾಗದಲ್ಲಿ ಕೇಸರಿ, ಮಧ್ಯದಲ್ಲಿ ಬಿಳಿ ಮತ್ತು ಕೆಳಭಾಗದಲ್ಲಿ ಕಡು ಹಸಿರು. ಮಧ್ಯ ಭಾಗದಲ್ಲಿ 24 ಕಡ್ಡಿಗಳನ್ನು ಹೊಂದಿರುವ ಅಶೋಕ ಚಕ್ರವಿದೆ. ಧ್ವಜದ ಅಗಲ ಮತ್ತು ಅದರ ಉದ್ದದ 2: 3 ಅನುಪಾತದಲ್ಲಿದೆ.

ಇದನ್ನೂ ಓದಿ: Independence Day 2023: ಭಾರತದ ರಾಷ್ಟ್ರಗೀತೆ ‘ಜನ ಗಣ ಮನ’ದ ಬಗ್ಗೆ ತಿಳಿಯಬೇಕಾದ ವಿಷಯಗಳು ಮತ್ತು ಗೀತೆಯ ಅರ್ಥ

ಕೇಸರಿ: ಇದು ಧೈರ್ಯ, ನಿಸ್ವಾರ್ಥತೆ ಮತ್ತು ಶಕ್ತಿಯ ಸಂಕೇತವಾಗಿದೆ.

ಬಿಳಿ: ಸತ್ಯ, ಶಾಂತಿ ಮತ್ತು ಶುದ್ಧತೆಯ ಸಂಕೇತವಾಗಿದೆ. ಈ ಬಣ್ಣವು ದೇಶದಲ್ಲಿ ಸಂತೋಷ ಮತ್ತು ಶಾಂತಿಯ ಉಪಯುಕ್ತತೆಯನ್ನು ತೋರಿಸುತ್ತದೆ.

ಇದನ್ನೂ ಓದಿ: Independence Day 2023: ಸ್ವಾತಂತ್ರ್ಯ ದಿನಾಚರಣೆಯ ರಜಾದಿನದಲ್ಲಿ ರುಚಿಯಾದ ಆಹಾರ ಸವಿಯಲು ಈ ತಾಣಗಳಿಗೆ ಭೇಟಿ ನೀಡಿ

ಹಸಿರು: ಅಶ್ವದಳ, ಬೆಳವಣಿಗೆ ಮತ್ತು ಫಲವತ್ತತೆಯ ಸಂಕೇತವಾಗಿದೆ. ಜೊತೆಗೆ ಸಮೃದ್ಧಿಯನ್ನು ಪ್ರತಿನಿಧಿಸುತ್ತದೆ.

ಭಾರತ ಸರ್ಕಾರದ ಪ್ರಕಾರ, ರಾಷ್ಟ್ರೀಯ ಧ್ವಜವನ್ನು ಹಾರಿಸುವುದರಲ್ಲಿ ಮಾಡಬೇಕಾದ ಮತ್ತು ಮಾಡಬಾರದ ಕೆಲವು ನಿಯಮಗಳು ಹೀಗಿವೆ.

  • ತ್ರಿವರ್ಣ ಧ್ವಜವನ್ನು ಶಿಕ್ಷಣ ಸಂಸ್ಥೆಗಳಲ್ಲಿ (ಶಾಲೆಗಳು, ಕಾಲೇಜುಗಳು, ಕ್ರೀಡಾ ಶಿಬಿರಗಳು, ಸ್ಕೌಟ್ ಶಿಬಿರಗಳು, ಇತ್ಯಾದಿ) ಹಾರಿಸುವ ಮೂಲಕ ಗೌರವಿಸುವುದು.
  • ಸಾರ್ವಜನಿಕ, ಖಾಸಗಿ ಸಂಸ್ಥೆ ಅಥವಾ ಶಿಕ್ಷಣ ಸಂಸ್ಥೆಯ ಸದಸ್ಯರು ಎಲ್ಲಾ ದಿನಗಳು ಮತ್ತು ಸಂದರ್ಭಗಳಲ್ಲಿ ರಾಷ್ಟ್ರೀಯ ಧ್ವಜವನ್ನು ಹಾರಿಸಬಹುದು. ವಿಧ್ಯುಕ್ತ ಅಥವಾ ರಾಷ್ಟ್ರಧ್ವಜದ ಘನತೆ ಮತ್ತು ಗೌರವಕ್ಕೆ ಅನುಗುಣವಾಗಿರಬೇಕು.
  • ಧ್ವಜವನ್ನು ಸಾಮುದಾಯಿಕ ಲಾಭಗಳಿಗೆ, ಬಟ್ಟೆಗಳ ಮೇಲೆ ಬಳಸುವಂತಿಲ್ಲ. ಸಾಧ್ಯವಾದಷ್ಟು, ಸೂರ್ಯೋದಯದಿಂದ ಸೂರ್ಯಾಸ್ತದವರೆಗೆ ಅದನ್ನು ಹಾರಿಸಬೇಕು.
  • ಧ್ವಜವನ್ನು ಉದ್ದೇಶಪೂರ್ವಕವಾಗಿ ನೆಲವನ್ನು ಸ್ಪರ್ಶಿಸಲು ಅಥವಾ ನೀರಿನಲ್ಲಿ ಹಾಕುವಂತಿಲ್ಲ. ವಾಹನಗಳು, ರೈಲುಗಳು, ದೋಣಿಗಳು ಅಥವಾ ವಿಮಾನಗಳ ಮೇಲ್ಭಾಗ ಮತ್ತು ಬದಿಗಳಲ್ಲಿ ಅಥವಾ ಹಿಂಭಾಗದಲ್ಲಿ ಹಾರಿಸುವಂತಿಲ್ಲ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:53 pm, Sat, 12 August 23

ಉಡುಪಿ: ಶರವೇಗದ ನದಿಯಲ್ಲಿ ದೋಣಿ ನಡೆಸುವ ಧೀರ ಮಹಿಳೆ, ವಿಡಿಯೋ ನೋಡಿ
ಉಡುಪಿ: ಶರವೇಗದ ನದಿಯಲ್ಲಿ ದೋಣಿ ನಡೆಸುವ ಧೀರ ಮಹಿಳೆ, ವಿಡಿಯೋ ನೋಡಿ
ಯುವಮುಖಂಡರನ್ನು ಸೆಳೆಯುವಲ್ಲಿ ಈಶ್ವರಪ್ಪ ವಿಫಲರಾದಂತೆ ಕಾಣಿಸುತ್ತದೆ
ಯುವಮುಖಂಡರನ್ನು ಸೆಳೆಯುವಲ್ಲಿ ಈಶ್ವರಪ್ಪ ವಿಫಲರಾದಂತೆ ಕಾಣಿಸುತ್ತದೆ
ನಮ್ಮಿಂದ ಆದ ಅಗೌರವವನ್ನು ರಚಿತಾ ರಾಮ್ ಸ್ಪಷ್ಟಪಡಿಸಬೇಕು; ರಾಜಶೇಖರ್
ನಮ್ಮಿಂದ ಆದ ಅಗೌರವವನ್ನು ರಚಿತಾ ರಾಮ್ ಸ್ಪಷ್ಟಪಡಿಸಬೇಕು; ರಾಜಶೇಖರ್
ಅರಬ್ಬೀ ಸಮುದ್ರದಲ್ಲಿ ಭಾರೀ ಅಲೆಗಳು: ಮಂಗಳೂರಿನ ಎಲ್ಲಾ ಬೀಚ್​ಗಳಿಗೆ ನಿರ್ಬಂಧ
ಅರಬ್ಬೀ ಸಮುದ್ರದಲ್ಲಿ ಭಾರೀ ಅಲೆಗಳು: ಮಂಗಳೂರಿನ ಎಲ್ಲಾ ಬೀಚ್​ಗಳಿಗೆ ನಿರ್ಬಂಧ
‘ಥಗ್ ಲೈಫ್’ ಬಿಡುಗಡೆ ಆದರೆ, ಪರೋಕ್ಷ ಎಚ್ಚರಿಕೆ ಕೊಟ್ಟ ಪ್ರವೀಣ್ ಶೆಟ್ಟಿ
‘ಥಗ್ ಲೈಫ್’ ಬಿಡುಗಡೆ ಆದರೆ, ಪರೋಕ್ಷ ಎಚ್ಚರಿಕೆ ಕೊಟ್ಟ ಪ್ರವೀಣ್ ಶೆಟ್ಟಿ
ಗೋಲ್ಡ್ ಸುರೇಶ್ ವಿರುದ್ಧ ಲಕ್ಷ ಲಕ್ಷ ವಂಚನೆ ಮಾಡಿದ ಆರೋಪ
ಗೋಲ್ಡ್ ಸುರೇಶ್ ವಿರುದ್ಧ ಲಕ್ಷ ಲಕ್ಷ ವಂಚನೆ ಮಾಡಿದ ಆರೋಪ
ರಾಮೋಜಿ ಫಿಲ್ಮ್​ಸಿಟಿಯಲ್ಲಿ 16 ಮಹಾನಟಿಯರ ಭರ್ಜರಿ ಫೋಟೋಶೂಟ್
ರಾಮೋಜಿ ಫಿಲ್ಮ್​ಸಿಟಿಯಲ್ಲಿ 16 ಮಹಾನಟಿಯರ ಭರ್ಜರಿ ಫೋಟೋಶೂಟ್
ಸಕಲೇಶಪುರ: ರಸ್ತೆಯಲ್ಲೇ ಕಾಡಾನೆಗಳ ಪರೇಡ್! ಬೆಚ್ಚಿಬಿದ್ದ ಗ್ರಾಮಸ್ಥರು
ಸಕಲೇಶಪುರ: ರಸ್ತೆಯಲ್ಲೇ ಕಾಡಾನೆಗಳ ಪರೇಡ್! ಬೆಚ್ಚಿಬಿದ್ದ ಗ್ರಾಮಸ್ಥರು
ಸಚಿವ ಶಿವರಾಜ್ ತಂಗಡಗಿ ಬೆಂಗಾವಲು ಪಡೆ ವಾಹನ ಅಪಘಾತ, ಇಬ್ಬರಿಗೆ ಗಾಯ
ಸಚಿವ ಶಿವರಾಜ್ ತಂಗಡಗಿ ಬೆಂಗಾವಲು ಪಡೆ ವಾಹನ ಅಪಘಾತ, ಇಬ್ಬರಿಗೆ ಗಾಯ
Daily Devotional: ಈ 5 ವಿಷಯಗಳನ್ನ ಯಾರಿಗೂ ಹೇಳಬಾರದು
Daily Devotional: ಈ 5 ವಿಷಯಗಳನ್ನ ಯಾರಿಗೂ ಹೇಳಬಾರದು