AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Independence Day 2024: ಕೆಂಪು ಕೋಟೆಯಲ್ಲಿ ನಡೆಯುವ 78ನೇ ಸ್ವಾತಂತ್ರ್ಯ ದಿನಾಚರಣೆಗೆ 6,000 ಅತಿಥಿಗಳಿಗೆ ಆಹ್ವಾನ; ಹೇಗಿರಲಿದೆ ಸಂಭ್ರಮಾಚರಣೆ?

ಭಾರತವು ತನ್ನ 78ನೇ ಸ್ವಾತಂತ್ರ್ಯ ದಿನವನ್ನು ನಾಳೆ (ಆಗಸ್ಟ್ 15) ಆಚರಿಸುತ್ತಿದೆ. ನೂರಾರು ವರ್ಷಗಳ ಬ್ರಿಟಿಷ್ ಆಳ್ವಿಕೆಯ ನಂತರ 1947ರಲ್ಲಿ ಸ್ವಾತಂತ್ರ್ಯ ಗಳಿಸಿದ ಐತಿಹಾಸಿಕ ಕ್ಷಣವನ್ನು ಈ ದಿನವು ನೆನಪಿಸುತ್ತದೆ. ಇದು ಬ್ರಿಟಿಷರ ಬೆದರಿಕೆಗೆ ಮಣಿಯದೆ, ಬ್ರಿಟಿಷರ ಗುಲಾಮಗಿರಿಯ ಸಂಕೋಲೆಯನ್ನು ಮುರಿಯಲು ವರ್ಷಗಟ್ಟಲೆ ಜೈಲುವಾಸ ಅನುಭವಿಸಿದ ನಮ್ಮ ಸ್ವಾತಂತ್ರ್ಯ ಹೋರಾಟಗಾರರನ್ನು ನಾವು ಸ್ಮರಿಸಬೇಕಾದ ದಿನವಾಗಿದೆ.

Independence Day 2024: ಕೆಂಪು ಕೋಟೆಯಲ್ಲಿ ನಡೆಯುವ 78ನೇ ಸ್ವಾತಂತ್ರ್ಯ ದಿನಾಚರಣೆಗೆ 6,000 ಅತಿಥಿಗಳಿಗೆ ಆಹ್ವಾನ; ಹೇಗಿರಲಿದೆ ಸಂಭ್ರಮಾಚರಣೆ?
ಸ್ವಾತಂತ್ರ್ಯ ದಿನಾಚರಣೆ
ಸುಷ್ಮಾ ಚಕ್ರೆ
|

Updated on:Aug 14, 2024 | 9:31 PM

Share

ನವದೆಹಲಿ: ಭಾರತ 78ನೇ ಸ್ವಾತಂತ್ರ್ಯ ದಿನಾಚರಣೆಗೆ ಸಜ್ಜಾಗಿದೆ. ನಾಳೆ (ಗುರುವಾರ) ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿಯ ಐತಿಹಾಸಿಕ ಕೆಂಪು ಕೋಟೆಯಲ್ಲಿ ರಾಷ್ಟ್ರಧ್ವಜಾರೋಹಣ ಮಾಡಲಿದ್ದಾರೆ ಮತ್ತು ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಸತತ 11ನೇ ಬಾರಿಗೆ ನರೇಂದ್ರ ಮೋದಿ ರಾಷ್ಟ್ರಧ್ವಜಾರೋಹಣ ಮಾಡಲಿರುವುದು ಇನ್ನೊಂದು ವಿಶೇಷ. ತಮ್ಮ ಭಾಷಣದಲ್ಲಿ ನರೇಂದ್ರ ಮೋದಿ ಅವರು ತಮ್ಮ ಸರ್ಕಾರದ ವರದಿ ಕಾರ್ಡ್, ನೀತಿ ಮತ್ತು ಕಾರ್ಯಕ್ರಮದ ಪ್ರಕಟಣೆಗಳನ್ನು ಪ್ರಸ್ತುತಪಡಿಸುತ್ತಾರೆ. ಈ ಬಾರಿ 6 ಸಾವಿರ ಅಥಿತಿಗಳಿಗೆ ಆಹ್ವಾನ ನೀಡಲಾಗಿದೆ.

ಈ ವರ್ಷದ ಸ್ವಾತಂತ್ರ್ಯ ದಿನಾಚರಣೆಯ ಥೀಮ್:

‘ವೀಕ್ಷಿತ್ ಭಾರತ್ @ 2047’ ಇದು ಈ ವರ್ಷದ ಸ್ವಾತಂತ್ರ್ಯ ದಿನದ ಥೀಮ್ ಆಗಿದೆ. ಇದು 2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಮಾಡುವ ಸರ್ಕಾರದ ದೃಷ್ಟಿಕೋನವನ್ನು ಬಿಂಬಿಸುತ್ತದೆ.

ಇದನ್ನೂ ಓದಿ: Independence Day: ನಮ್ಮ ರಾಷ್ಟ್ರಧ್ವಜದ ಇತಿಹಾಸದ ಬಗ್ಗೆ ನಿಮಗೆಷ್ಟು ಗೊತ್ತು?

ಏನು ವಿಶೇಷ?:

– ಸ್ವಾತಂತ್ರ್ಯ ದಿನಾಚರಣೆಯನ್ನು ವೀಕ್ಷಿಸಲು 6,000 ವಿಶೇಷ ಅತಿಥಿಗಳನ್ನು ಆಹ್ವಾನಿಸಲಾಗಿದೆ.

– ಯುವಕರು, ಬುಡಕಟ್ಟು ಸಮುದಾಯ, ರೈತರು, ಮಹಿಳೆಯರು, ಆಶಾ ಕಾರ್ಯಕರ್ತೆಯರು, ಶುಶ್ರೂಷಕಿಯರು, ಅಂಗನವಾಡಿ ಕಾರ್ಯಕರ್ತೆಯರು ಸಮಾರಂಭಕ್ಕೆ ಸಾಕ್ಷಿಯಾಗಲಿದ್ದಾರೆ.

– ಇತ್ತೀಚೆಗೆ ಮುಕ್ತಾಯಗೊಂಡ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಭಾಗವಹಿಸಿದ್ದ ಭಾರತೀಯ ತುಕಡಿಗೂ ಆಹ್ವಾನ ನೀಡಲಾಗಿದೆ.

– ವಿವಿಧ ರಾಜ್ಯಗಳು/ ಕೇಂದ್ರಾಡಳಿತ ಪ್ರದೇಶಗಳ ಸುಮಾರು 2,000 ಜನರು ಸಾಂಪ್ರದಾಯಿಕ ಉಡುಪುಗಳನ್ನು ಧರಿಸಿ ಕೆಂಪುಕೋಟೆಯ ಭವ್ಯ ಸಮಾರಂಭಕ್ಕೆ ಸಾಕ್ಷಿಯಾಗುತ್ತಾರೆ.

ಸಮಾರಂಭ ಹೇಗೆ ನಡೆಯುತ್ತದೆ?:

– ಪ್ರಧಾನಿ ನರೇಂದ್ರ ಮೋದಿ ಅವರನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್, ಸಂಜಯ್ ಸೇಠ್ ಮತ್ತು ರಕ್ಷಣಾ ಕಾರ್ಯದರ್ಶಿ ಗಿರಿಧರ್ ಅರಮನೆ ಅವರು ಬರಮಾಡಿಕೊಳ್ಳಲಿದ್ದಾರೆ.

– ಪ್ರಧಾನ ಮಂತ್ರಿ ಗಾರ್ಡ್ ಆಫ್ ಆನರ್ ಅನ್ನು ಪರಿಶೀಲಿಸುತ್ತಾರೆ.

– ಗಾರ್ಡ್ ಆಫ್ ಆನರ್ ತುಕಡಿಯು ಸೇನೆ, ನೌಕಾಪಡೆ, ವಾಯುಪಡೆ ಮತ್ತು ದೆಹಲಿ ಪೊಲೀಸರ ತಲಾ ಒಬ್ಬ ಅಧಿಕಾರಿ ಮತ್ತು 24 ಸಿಬ್ಬಂದಿಯನ್ನು ಒಳಗೊಂಡಿರುತ್ತದೆ.

– ಬಳಿಕ ಪ್ರಧಾನಮಂತ್ರಿಯವರು ಕೆಂಪು ಕೋಟೆಯ ಕೋಟೆಗೆ ಹೋಗುತ್ತಾರೆ.

– ಜನರಲ್ ಆಫೀಸರ್ ಕಮಾಂಡಿಂಗ್ (GoC), ದೆಹಲಿ ಏರಿಯಾ ಲೆಫ್ಟಿನೆಂಟ್ ಜನರಲ್ ಭವ್ನಿಶ್ ಕುಮಾರ್ ಅವರು ರಾಷ್ಟ್ರಧ್ವಜವನ್ನು ಆರೋಹಿಸಲು ಪ್ರಧಾನ ಮಂತ್ರಿಯನ್ನು ರಾಂಪಾರ್ಟ್‌ಗಳ ಮೇಲಿರುವ ವೇದಿಕೆಗೆ ಕರೆದೊಯ್ಯುತ್ತಾರೆ.

– ಲೆಫ್ಟಿನೆಂಟ್ ಸಂಜೀತ್ ಸೈನಿ ಅವರು ರಾಷ್ಟ್ರ ಧ್ವಜಾರೋಹಣದಲ್ಲಿ ಪ್ರಧಾನ ಮಂತ್ರಿಗೆ ಸಹಾಯ ಮಾಡುತ್ತಾರೆ. ಇದನ್ನು 1721 ಫೀಲ್ಡ್ ಬ್ಯಾಟರಿಯ (ಸೆರೆಮೋನಿಯಲ್) ಧೀರ ಗನ್ನರ್‌ಗಳಿಂದ 21 ಗನ್ ಸೆಲ್ಯೂಟ್‌ನೊಂದಿಗೆ ಸಿಂಕ್ರೊನೈಸ್ ಮಾಡಲಾಗುತ್ತದೆ.

– ಧ್ವಜದ ದಾರವನ್ನು ಬಿಚ್ಚಿದ ನಂತರ ತ್ರಿವರ್ಣ ಧ್ವಜವು ‘ರಾಷ್ಟ್ರೀಯ ಸೆಲ್ಯೂಟ್’ ಅನ್ನು ಸ್ವೀಕರಿಸುತ್ತದೆ.

– ಪಂಜಾಬ್ ರೆಜಿಮೆಂಟ್ ಮಿಲಿಟರಿ ಬ್ಯಾಂಡ್, ರಾಷ್ಟ್ರಗೀತೆಯನ್ನು ನುಡಿಸುತ್ತದೆ.

ಇದನ್ನೂ ಓದಿ: ಕೆಂಪುಕೋಟೆಯಲ್ಲಿ 11ನೇ ಬಾರಿ ಧ್ವಜಾರೋಹಣ ಮಾಡಲಿರೋ PM ಮೋದಿ; ಹೇಗಿದೆ ಸಿದ್ಧತೆ?

– ರಾಷ್ಟ್ರೀಯ ಧ್ವಜವನ್ನು ಬಿಚ್ಚಿದ ತಕ್ಷಣ, ಲೈನ್ ಆಸ್ಟರ್ನ್ ರಚನೆಯಲ್ಲಿ ಭಾರತೀಯ ವಾಯುಪಡೆಯ ಎರಡು ಅತ್ಯಾಧುನಿಕ ಲಘು ಹೆಲಿಕಾಪ್ಟರ್‌ಗಳು ಧ್ವಜಾರೋಹಣದ ಸ್ಥಳದಲ್ಲಿ ಹೂವಿನ ದಳಗಳನ್ನು ಸುರಿಸುತ್ತವೆ.

– ಇದಾದ ನಂತರ, ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

– ಅವರ ಭಾಷಣದ ಕೊನೆಯಲ್ಲಿ, ರಾಷ್ಟ್ರೀಯ ಕೆಡೆಟ್ ಕಾರ್ಪ್ಸ್ (NCC)ನ ಕೆಡೆಟ್‌ಗಳು ರಾಷ್ಟ್ರಗೀತೆಯನ್ನು ಹಾಡುತ್ತಾರೆ.

– ದೇಶಾದ್ಯಂತ ವಿವಿಧ ಶಾಲೆಗಳಿಂದ ಒಟ್ಟು 2,000 ಕೆಡೆಟ್‌ಗಳು (ಸೇನೆ, ನೌಕಾಪಡೆ ಮತ್ತು ವಾಯುಪಡೆ) ಆಚರಣೆಯಲ್ಲಿ ಭಾಗವಹಿಸಲಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:18 pm, Wed, 14 August 24

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!