AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಲ್ಲರಿಗೂ ನ್ಯಾಯ ಕೊಡಿಸುವ ಉದ್ದೇಶದಿಂದ ಮೂರು ಹೊಸ ಕ್ರಿಮಿನಲ್ ಕಾನೂನುಗಳನ್ನು ಜಾರಿಗೆ ತಂದಿದ್ದೇವೆ: ಮೋದಿ

ಇತ್ತೀಚೆಗಷ್ಟೇ ಕೇಂದ್ರ ಸರ್ಕಾರವು ಈ ವರ್ಷದ ಜುಲೈನಲ್ಲಿ ಜಾರಿಗೆ ತಂದ ಮೂರು ಹೊಸ ಕ್ರಿಮಿನಲ್ ಕಾನೂನುಗಳು ಎಲ್ಲರಿಗೂ ನ್ಯಾಯ ಖಾತ್ರಿಪಡಿಸುವ ಗುರಿಯನ್ನು ಹೊಂದಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಗುರುವಾರ ಹೇಳಿದ್ದಾರೆ. ಕೆಂಪುಕೋಟೆಯಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಎಲ್ಲರಿಗೂ ನ್ಯಾಯವನ್ನು ಖಚಿತಪಡಿಸಿಕೊಳ್ಳಲು ನಾವು ಮೂರು ಹೊಸ ಕ್ರಿಮಿನಲ್ ಕಾನೂನುಗಳನ್ನು ತಂದಿದ್ದೇವೆ. ಹೊಸ ಕ್ರಿಮಿನಲ್ ಕಾನೂನುಗಳಲ್ಲಿ ನಾವು ಶಿಕ್ಷೆಗಿಂತ ನ್ಯಾಯಕ್ಕೆ ಆದ್ಯತೆ ನೀಡಿದ್ದೇವೆ ಎಂದರು.

ಎಲ್ಲರಿಗೂ ನ್ಯಾಯ ಕೊಡಿಸುವ ಉದ್ದೇಶದಿಂದ ಮೂರು ಹೊಸ ಕ್ರಿಮಿನಲ್ ಕಾನೂನುಗಳನ್ನು ಜಾರಿಗೆ ತಂದಿದ್ದೇವೆ: ಮೋದಿ
ನರೇಂದ್ರ ಮೋದಿ
ನಯನಾ ರಾಜೀವ್
|

Updated on: Aug 15, 2024 | 9:45 AM

Share

ಈ ವರ್ಷದ ಜುಲೈನಲ್ಲಿ ಜಾರಿಗೆ ತಂದ ಮೂರು ಹೊಸ ಕ್ರಿಮಿನಲ್ ಕಾನೂನುಗಳು ಎಲ್ಲರಿಗೂ ನ್ಯಾಯ ಖಾತ್ರಿಪಡಿಸುವ ಗುರಿಯನ್ನು ಹೊಂದಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಗುರುವಾರ ಹೇಳಿದ್ದಾರೆ. ಕೆಂಪುಕೋಟೆಯಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಎಲ್ಲರಿಗೂ ನ್ಯಾಯವನ್ನು ಖಚಿತಪಡಿಸಿಕೊಳ್ಳಲು ನಾವು ಮೂರು ಹೊಸ ಕ್ರಿಮಿನಲ್ ಕಾನೂನುಗಳನ್ನು ತಂದಿದ್ದೇವೆ. ಹೊಸ ಕ್ರಿಮಿನಲ್ ಕಾನೂನುಗಳಲ್ಲಿ ನಾವು ಶಿಕ್ಷೆಗಿಂತ ನ್ಯಾಯಕ್ಕೆ ಆದ್ಯತೆ ನೀಡಿದ್ದೇವೆ ಎಂದರು.

ಈ ವರ್ಷದ ಜುಲೈನಲ್ಲಿ, ಮೂರು ಹೊಸ ಕ್ರಿಮಿನಲ್ ಕಾನೂನುಗಳು — ಭಾರತೀಯ ನ್ಯಾಯ ಸಂಹಿತಾ (BNS), ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ (BNSS), ಮತ್ತು ಭಾರತೀಯ ಸಾಕ್ಷಿ ಅಧಿನಿಯಮ್ (BSA)ಜಾರಿಗೆ ತರಲಾಗಿದೆ. ಕೆಲಸ ಮಾಡುವ ಮಹಿಳೆಯರಿಗೆ, ಹೆರಿಗೆ ರಜೆಯನ್ನು 12 ವಾರಗಳಿಂದ 26 ವಾರಗಳಿಗೆ ಹೆಚ್ಚಿಸಲಾಗಿದೆ.

ನಾವು ಮಹಿಳೆಯರನ್ನು ಗೌರವಿಸುವುದು ಮಾತ್ರವಲ್ಲ ಹೆಣ್ಣುಮಕ್ಕಳ ವಿಚಾರದಲ್ಲಿ ಸೂಕ್ಷ್ಮ ನಿರ್ಧಾರಗಳನ್ನು ತೆಗೆದುಕೊಳ್ಳಲಾಗುತ್ತಿದೆ. ತನ್ನ ಮಗುವನ್ನು ಗುಣಮಟ್ಟದ ನಾಗರಿಕನನ್ನಾಗಿ ಮಾಡಲು ತಾಯಿಯ ಅವಶ್ಯಕತೆಗಳಿಗೆ ಅಡ್ಡಿಯಾಗುವುದಿಲ್ಲ ಎಂದರು.

ಮತ್ತಷ್ಟು ಓದಿ: ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ್ದರಿಂದ ಸ್ವಾತಂತ್ರ್ಯ ಬಂತು, ನೀವು ದೇಶಕ್ಕಾಗಿ ಬದುಕಿ, ಸಮೃದ್ಧಿ ಬರುತ್ತದೆ: ಮೋದಿ

ಲೆಕ್ಕವಿಲ್ಲದಷ್ಟು ಸವಾಲುಗಳಿವೆ. ಒಳಗೆ ಸವಾಲುಗಳಿವೆ, ಹೊರಗೆಯೂ ಸವಾಲುಗಳಿವೆ. ನಾವು ಬಲಶಾಲಿಯಾದಂತೆ, ಗಮನ ಹೆಚ್ಚಾದಂತೆ ಸವಾಲುಗಳೂ ಹೆಚ್ಚುತ್ತಿವೆ. ಅಂತಹ ಶಕ್ತಿಗಳಿಗೆ ನಾನು ಹೇಳಲು ಬಯಸುತ್ತೇನೆ – ಭಾರತದ ಅಭಿವೃದ್ಧಿಯು ಯಾರಿಗೂ ತೊಂದರೆ ತರುವುದಿಲ್ಲ, ಬುದ್ಧನ ಆದೇಶ ಪಾಲಿಸುತ್ತೇವೆ.

ಯುದ್ಧ ನಮ್ಮ ಮಾರ್ಗವಲ್ಲ,ಆದ್ದರಿಂದ ಭಾರತದ ಪ್ರಗತಿಯ ಬಗ್ಗೆ ಜಗತ್ತು ಚಿಂತಿಸಬೇಕಾಗಿಲ್ಲ,ನೀವು ಭಾರತದ ಮೌಲ್ಯಗಳನ್ನು ಅರ್ಥಮಾಡಿಕೊಳ್ಳಬೇಕು, ಭಾರತದ ಸಾವಿರಾರು ವರ್ಷಗಳ ಇತಿಹಾಸವನ್ನು ಅರ್ಥಮಾಡಿಕೊಳ್ಳಬೇಕು, ನಮ್ಮನ್ನು ಬಿಕ್ಕಟ್ಟು ಎಂದು ಪರಿಗಣಿಸಬೇಡಿ ಎಂದಿದ್ದಾರೆ.

ಸ್ವಾತಂತ್ರ್ಯ ದಿನದ ವಿಶೇಷ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್  ಮಾಡಿ

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು