Seema Haider: ಮೊದಲ ಬಾರಿಗೆ ಭಾರತದ ತ್ರಿವರ್ಣ ಧ್ವಜ ಹಾರಿಸಿ, ಪಾಕಿಸ್ತಾನ ವಿರುದ್ಧ ಘೋಷಣೆ ಕೂಗಿದ ಸೀಮಾ ಹೈದರ್

ತನ್ನ ಪ್ರೀತಿಯನ್ನರಸಿ ಪಾಕಿಸ್ತಾನದಿಂದ ಭಾರತಕ್ಕೆ ಬಂದಿರುವ ಸೀಮಾ ಹೈದರ್ ಸ್ವಾತಂತ್ರ್ಯ ದಿನಾಚರಣೆಯ ಶುಭ ಸಂದರ್ಭದಂದು ಭಾರತದ ತ್ರಿವರ್ಣ ಧ್ವಜ ಹಾರಿಸುವ ಮೂಲಕ ಸ್ವಾತಂತ್ರ್ಯ ದಿನಾಚರಣೆ ಆಚರಿಸಿದ್ದಾರೆ. ಅದೇ ಸಮಯದಲ್ಲಿ ಪಾಕಿಸ್ತಾನ ಮುರ್ದಾಬಾದ್ ಎಂದು ಪಾಕಿಸ್ತಾನ ವಿರೋಧಿ ಘೋಷಣೆಯನ್ನು ಕೂಗಿದ್ದಾರೆ.

Seema Haider: ಮೊದಲ ಬಾರಿಗೆ ಭಾರತದ ತ್ರಿವರ್ಣ ಧ್ವಜ ಹಾರಿಸಿ, ಪಾಕಿಸ್ತಾನ ವಿರುದ್ಧ ಘೋಷಣೆ ಕೂಗಿದ ಸೀಮಾ ಹೈದರ್
ಸೀಮಾ ಹೈದರ್
Follow us
|

Updated on:Aug 15, 2023 | 11:08 AM

ತನ್ನ ಪ್ರೀತಿಯನ್ನರಸಿ ಪಾಕಿಸ್ತಾನದಿಂದ ಭಾರತಕ್ಕೆ ಬಂದಿರುವ ಸೀಮಾ ಹೈದರ್ ಸ್ವಾತಂತ್ರ್ಯ ದಿನಾಚರಣೆಯ ಶುಭ ಸಂದರ್ಭದಂದು ಭಾರತದ ತ್ರಿವರ್ಣ ಧ್ವಜ ಹಾರಿಸುವ ಮೂಲಕ ಸ್ವಾತಂತ್ರ್ಯ ದಿನಾಚರಣೆ(Independence Day) ಆಚರಿಸಿದ್ದಾರೆ. ಅದೇ ಸಮಯದಲ್ಲಿ ಪಾಕಿಸ್ತಾನ ಮುರ್ದಾಬಾದ್ ಎಂದು ಪಾಕಿಸ್ತಾನ(Pakistan) ವಿರೋಧಿ ಘೋಷಣೆಯನ್ನು ಕೂಗಿದ್ದಾರೆ. ಏತನ್ಮಧ್ಯೆ, ಸ್ವಾತಂತ್ರ್ಯ ದಿನದಂದು, ಸೀಮಾ ಅವರು ಹರ್ ಘರ್ ತಿರಂಗಾ ಅಭಿಯಾನದಲ್ಲಿ ಪಾಲ್ಗೊಂಡರು ಮತ್ತು ಪತಿ ಸಚಿನ್ ಅವರೊಂದಿಗೆ ನೋಯ್ಡಾದಲ್ಲಿ ತ್ರಿವರ್ಣ ಧ್ವಜವನ್ನು ಹಾರಿಸಿದರು. ಈ ಸಮಯದಲ್ಲಿ, ಅವರು ತ್ರಿವರ್ಣ ಸೀರೆಯನ್ನು ಧರಿಸಿದ್ದರು.

ಅದೇ ಸಮಯದಲ್ಲಿ, ಮತ್ತೊಂದು ವೀಡಿಯೊ ವೈರಲ್ ಆಗುತ್ತಿದೆ, ಇದರಲ್ಲಿ ಸೀಮಾ ಅವರು ಪಾಕಿಸ್ತಾನ ಮುರ್ದಾಬಾದ್ ಎಂದು ಘೋಷಣೆ ಕೂಗುತ್ತಿದ್ದಾರೆ, ಇದಕ್ಕೂ ಮುನ್ನ ಧ್ವಜಾರೋಹಣ ಮಾಡುವಾಗ ಹಿಂದೂಸ್ತಾನ್ ಜಿಂದಾಬಾದ್ ಎಂಬ ಘೋಷಣೆಗಳನ್ನೂ ಕೂಗಿದ್ದರು.

ಪಾಕಿಸ್ತಾನ ಮುರ್ದಾಬಾದ್ ಘೋಷಣೆ ಕೂಗಿದ ಸೀಮಾ ಹೈದರ್

ಇದಕ್ಕೂ ಮುನ್ನ ಸೀಮಾ ಹೈದರ್ ಅವರು ತಮ್ಮ ವಕೀಲ ಎಪಿ ಸಿಂಗ್ ಅವರ ಸಮ್ಮುಖದಲ್ಲಿ ಮನೆಯ ಛಾವಣಿಯ ಮೇಲೆ ತ್ರಿವರ್ಣ ಧ್ವಜವನ್ನು ಹಾರಿಸಿದರು.

ಮತ್ತಷ್ಟು ಓದಿ:ಅಕ್ರಮವಾಗಿ ಪಾಕಿಸ್ತಾನದಿಂದ ಭಾರತಕ್ಕೆ ಬಂದ ಸೀಮಾ ಹೈದರ್​ಗೆ ಬಾಲಿವುಡ್ ಸಿನಿಮಾದಲ್ಲಿ ನಟಿಸೋ ಚಾನ್ಸ್​

ಅಲ್ಲಿ ಸುತ್ತಮುತ್ತಲಿನ ಮನೆಗಳ ಜನರು ತಮ್ಮ ಮನೆಯ ಛಾವಣಿಯ ಮೇಲೆ ಜಮಾಯಿಸಿ ಈ ಅಭಿಯಾನದ ಭಾಗವಾದರು. ಇದೀಗ ವೈರಲ್ ಆಗುತ್ತಿರುವ ವೀಡಿಯೋದಲ್ಲಿ ಸೀಮಾ ಪಾಕಿಸ್ತಾನ್ ಮುರ್ದಾಬಾದ್ ಮತ್ತು ಹಿಂದೂಸ್ತಾನ್ ಜಿಂದಾಬಾದ್ ಎಂಬ ಘೋಷಣೆಗಳನ್ನು ಕೂಗುತ್ತಿರುವುದು ಕಂಡುಬಂದಿದೆ.

ಸೀಮಾಳ ಮಡಿಲಲ್ಲಿ ಪುಟ್ಟ ಹುಡುಗಿಯೊಬ್ಬಳು ಕಾಣಿಸಿಕೊಂಡಿದ್ದಾಳೆ, ಪಾಕಿಸ್ತಾನ ಮುರ್ದಾಬಾದ್ ಎಂಬ ಘೋಷಣೆಗಳನ್ನೂ ಕೂಗುತ್ತಿದ್ದಾಳೆ. ಈ ವೇಳೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಜಮಾಯಿಸಿ ಘೋಷಣೆಗಳನ್ನು ಕೂಗುತ್ತಿರುವುದು ಕಂಡು ಬಂದಿದೆ.

ಕಳೆದ ಕೆಲವು ದಿನಗಳಿಂದ ಸೀಮಾ ಹೈದರ್ ಹಾಗೂ ಸಚಿನ್ ಮೀನಾ ಸುದ್ದಿ ಎಲ್ಲೆಡೆ ಹರಿದಾಡುತ್ತಿದೆ. ಮೊನ್ನೆ ಭಾನುವಾರವೂ ಸೀಮಾ ಹೈದರ್ ಭಾರತ್ ಮಾತಾ ಕೀ ಜೈ ಎಂಬ ಘೋಷಣೆಗಳನ್ನು ಕೂಗಿದ್ದರು.

2019 ರಲ್ಲಿ PUBG ಗೇಮ್ ಆಡುವಾಗ ಸೀಮಾ ಸಚಿನ್ ಜೊತೆ ಸಂಪರ್ಕಕ್ಕೆ ಬಂದಿದ್ದಾಳೆ, ನಂತರ ಇಬ್ಬರ ನಡುವೆ ಸಂಭಾಷಣೆ ಹೆಚ್ಚಾಗಿತ್ತು, ಪ್ರೀತಿ ಮೊಳಕೆವೊಡೆದಿತ್ತು, ಬಳಿಕ ಮದುವೆಯಾಗಲು ನಿರ್ಧರಿಸಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:06 am, Tue, 15 August 23

ತಾಜಾ ಸುದ್ದಿ
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇ ದಾಟಿ ಕಾರಿಗೆ ಡಿಕ್ಕಿ ಹೊಡೆದ KSRTC ಬಸ
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇ ದಾಟಿ ಕಾರಿಗೆ ಡಿಕ್ಕಿ ಹೊಡೆದ KSRTC ಬಸ
ನಿನ್ನೆ ದೆಹಲಿಯಲ್ಲಿದ್ದ ಕೇಂದ್ರ ಸಚಿವ ಸೋಮಣ್ಣರಿಂದ ಇಂದು ಬೆಂಗಳೂರಲ್ಲಿ ಸಭೆ
ನಿನ್ನೆ ದೆಹಲಿಯಲ್ಲಿದ್ದ ಕೇಂದ್ರ ಸಚಿವ ಸೋಮಣ್ಣರಿಂದ ಇಂದು ಬೆಂಗಳೂರಲ್ಲಿ ಸಭೆ
ದೈವ ಕ್ಷೇತ್ರದಲ್ಲಿ ಪವಾಡ; ಆಫ್ ಮಾಡಿದ್ದರೂ ತನ್ನಂತಾನೆ ಚಲಿಸಿದ ಆಟೋ
ದೈವ ಕ್ಷೇತ್ರದಲ್ಲಿ ಪವಾಡ; ಆಫ್ ಮಾಡಿದ್ದರೂ ತನ್ನಂತಾನೆ ಚಲಿಸಿದ ಆಟೋ
ಸಿಎಂ/ಡಿಸಿಎಂ ಅಗಬೇಕೆನ್ನುವವರು ಮತ್ತೊಮ್ಮೆ ಚುನಾವಣೆ ಎದುರಿಸಲಿ:ಡಿಕೆ ಸುರೇಶ್
ಸಿಎಂ/ಡಿಸಿಎಂ ಅಗಬೇಕೆನ್ನುವವರು ಮತ್ತೊಮ್ಮೆ ಚುನಾವಣೆ ಎದುರಿಸಲಿ:ಡಿಕೆ ಸುರೇಶ್
ಶಿವಕುಮಾರ್ ಸಿಎಂ ಆಗಬೇಕು ಎಂದಷ್ಟೇ ಹೇಳಿದ್ದು: ಚಂದ್ರಶೇಖರನಾಥ ಸ್ವಾಮೀಜಿ
ಶಿವಕುಮಾರ್ ಸಿಎಂ ಆಗಬೇಕು ಎಂದಷ್ಟೇ ಹೇಳಿದ್ದು: ಚಂದ್ರಶೇಖರನಾಥ ಸ್ವಾಮೀಜಿ
ಸೋಲಿಗೆ ಮಾಧ್ಯಮಗಳ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡಿದ ಡಿಕೆ ಸುರೇಶ್
ಸೋಲಿಗೆ ಮಾಧ್ಯಮಗಳ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡಿದ ಡಿಕೆ ಸುರೇಶ್
ಹಣವನ್ನು ಗಾಳಿಯಲ್ಲಿ ತೂರಿ ಹುಟ್ಟುಹಬ್ಬ ಆಚರಿಸಿಕೊಂಡ ಹುಬ್ಬಳ್ಳಿಯ ಯುವಕ
ಹಣವನ್ನು ಗಾಳಿಯಲ್ಲಿ ತೂರಿ ಹುಟ್ಟುಹಬ್ಬ ಆಚರಿಸಿಕೊಂಡ ಹುಬ್ಬಳ್ಳಿಯ ಯುವಕ
ಯುವಕರ ನೆಚ್ಚಿನ ಸ್ಟೈಲಿಶ್ ಕ್ಯಾಸಿಯೋ G Shock ಸ್ಮಾರ್ಟ್​ವಾಚ್ ಬಿಡುಗಡೆ
ಯುವಕರ ನೆಚ್ಚಿನ ಸ್ಟೈಲಿಶ್ ಕ್ಯಾಸಿಯೋ G Shock ಸ್ಮಾರ್ಟ್​ವಾಚ್ ಬಿಡುಗಡೆ
‘ಎಲ್ಲರಿಗೂ ನೋವಿದೆ’; ದರ್ಶನ್ ಪ್ರಕರಣದಲ್ಲಿ ಸುಮಲತಾ, ರಾಕ್​ಲೈನ್ ಮೌನ ಏಕೆ?
‘ಎಲ್ಲರಿಗೂ ನೋವಿದೆ’; ದರ್ಶನ್ ಪ್ರಕರಣದಲ್ಲಿ ಸುಮಲತಾ, ರಾಕ್​ಲೈನ್ ಮೌನ ಏಕೆ?
ಮನೆಯಲ್ಲಿ ಚಪ್ಪಲಿ ಹಾಕಿಕೊಂಡು ಓಡಾಡಬಾರದು, ಈ ಬಗ್ಗೆ ಆಧ್ಯಾತ್ಮದಲ್ಲೇನಿದೆ?
ಮನೆಯಲ್ಲಿ ಚಪ್ಪಲಿ ಹಾಕಿಕೊಂಡು ಓಡಾಡಬಾರದು, ಈ ಬಗ್ಗೆ ಆಧ್ಯಾತ್ಮದಲ್ಲೇನಿದೆ?