Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೋಕಸಭೆಯಲ್ಲಿ ರೀನೀಟ್ ಎಂದು ಬರೆದ ಟೀಶರ್ಟ್ ಧರಿಸಿ ಪ್ರಮಾಣ ವಚನ ಸ್ವೀಕರಿಸಿದ ಪಪ್ಪು ಯಾದವ್

ಲೋಕಸಭೆಯಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಪಕ್ಷೇತರ ಸಂಸದ ರಾಜೇಶ್ ರಂಜನ್ ಅಲಿಯಾಸ್ ಪಪ್ಪು ಯಾದವ್ ನೀಟ್ ಮರು ಪರೀಕ್ಷೆ , ಬಿಹಾರಕ್ಕೆ ವಿಶೇಷ ಸ್ಥಾನಮಾನ, ಸೀಮಾಂಚಲ್ ಜಿಂದಾಬಾದ್, ಮಾನವತಾವಾದ್ ಜಿಂದಾಬಾದ್, ಭೀಮ್ ಜಿಂದಾಬಾದ್, ಸಂವಿಧಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದು, ಇದಕ್ಕೆ ಸಂಸದರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಲೋಕಸಭೆಯಲ್ಲಿ ರೀನೀಟ್ ಎಂದು ಬರೆದ ಟೀಶರ್ಟ್ ಧರಿಸಿ ಪ್ರಮಾಣ ವಚನ ಸ್ವೀಕರಿಸಿದ ಪಪ್ಪು ಯಾದವ್
ಪಪ್ಪು ಯಾದವ್
Follow us
ರಶ್ಮಿ ಕಲ್ಲಕಟ್ಟ
|

Updated on:Jun 25, 2024 | 9:05 PM

ದೆಹಲಿ ಜೂನ್ 25: ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂಬ ಆರೋಪದ ಹಿನ್ನಲೆಯಲ್ಲಿ ನೀಟ್ ಪರೀಕ್ಷೆಯನ್ನು (NEET-PG 2024)  ರದ್ದುಗೊಳಿಸಬೇಕೆಂಬ ಬೇಡಿಕೆಗಳ ನಡುವೆಯೇ ಬಿಹಾರದ (Bihar) ಪೂರ್ಣೆಯಾದಿಂದ ಗೆದ್ದ ಪಕ್ಷೇತರ ಸಂಸದ ರಾಜೇಶ್ ರಂಜನ್ ಅಲಿಯಾಸ್ ಪಪ್ಪು ಯಾದವ್ (Pappu Yadav) ಅವರು 18 ನೇ ಲೋಕಸಭೆಯ ಸದಸ್ಯರಾಗಿ “RENEET” ಎಂದು ಬರೆದ ಟೀ ಶರ್ಟ್ ಧರಿಸಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಯಾದವ್ ಅವರು ತಮ್ಮ ಪ್ರಮಾಣವಚನದ ನಂತರ ಹಲವಾರು ಘೋಷಣೆಗಳನ್ನು ಕೂಗಿದ್ದು, ಸಂಸತ್​​ನಲ್ಲಿ ವಾಗ್ವಾದಕ್ಕೆ ಕಾರಣವಾಗಿದೆ. ನೀಟ್ ಮರು ಪರೀಕ್ಷೆ , ಬಿಹಾರಕ್ಕೆ ವಿಶೇಷ ಸ್ಥಾನಮಾನ, ಸೀಮಾಂಚಲ್ ಜಿಂದಾಬಾದ್, ಮಾನವತಾವಾದ್ ಜಿಂದಾಬಾದ್, ಭೀಮ್ ಜಿಂದಾಬಾದ್, ಸಂವಿಧಾನ್ ಜಿಂದಾಬಾದ್ ಎಂದು ಅವರು ಘೋಷಣೆ ಕೂಗಿದ್ದಾರೆ.

ಆಡಳಿತಾರೂಢ ಸಮ್ಮಿಶ್ರ ಶಾಸಕರು ತಮ್ಮ ಅಸಮ್ಮತಿ ವ್ಯಕ್ತಪಡಿಸುತ್ತಿದ್ದಂತೆ, ಯಾದವ್, “ನಾನು ಆರು ಬಾರಿ ಸಂಸದನಾಗಿದ್ದೇನೆ. ನೀವು ನನಗೆ ಕಲಿಸುತ್ತಿದ್ದೀರಾ? ನೀವು (ಇತರರ) ಅನುಕಂಪದಿಂದ ಗೆದ್ದಿದ್ದೀರಿ. ನಾನು ಏಕಾಂಗಿಯಾಗಿ ಹೋರಾಡುತ್ತೇನೆ ಎಂದಿದ್ದಾರೆ.

ಪಪ್ಪು ಯಾದವ್ ಪ್ರಮಾಣ ವಚನ

ಪಪ್ಪು ಯಾದವ್ ಅವರು ತಮ್ಮ ಜನ ಅಧಿಕಾರ ಪಕ್ಷವನ್ನು ಲೋಕಸಭೆ ಚುನಾವಣೆಗೆ ಮುಂಚಿತವಾಗಿ ಕಾಂಗ್ರೆಸ್‌ನೊಂದಿಗೆ ವಿಲೀನಗೊಳಿಸಿದರು. ಆದರೆ ಮಿತ್ರಪಕ್ಷ ಆರ್​​ಜೆಡಿ ಏಕಪಕ್ಷೀಯವಾಗಿ ಜೆಡಿ(ಯು) ಶಾಸಕಿ ಬೀಮಾ ಭಾರ್ತಿ ಅವರ ಉಮೇದುವಾರಿಕೆಯನ್ನು ಘೋಷಿಸಿದಾಗ ಪೂರ್ಣೆಯಾದಿಂದ ಸ್ಪರ್ಧಿಸುವ ಅವರ ಭರವಸೆಯು ವಿಫಲವಾಯಿತು. ಪಪ್ಪು ಯಾದವ್ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ 23 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಭಾರ್ತಿ ಮೂರನೇ ಸ್ಥಾನ ಗಳಿಸಿ ಠೇವಣಿ ಕಳೆದುಕೊಂಡರು. ಯಾದವ್ ಅವರು 1990 ರ ದಶಕದಲ್ಲಿ ಮೂರು ಬಾರಿ ಕ್ಷೇತ್ರವನ್ನು ಪ್ರತಿನಿಧಿಸಿದ್ದರು.

18ನೇ ಲೋಕಸಭೆಯ ಮೊದಲ ಅಧಿವೇಶನದ ಎರಡನೇ ದಿನವೂ ಸದಸ್ಯರು ಪ್ರಮಾಣ ವಚನ ಸ್ವೀಕರಿಸಿದ ಬಳಿಕ ವಿವಿಧ ಘೋಷಣೆಗಳನ್ನು ಕೂಗಿದರು. ಪ್ರಮಾಣ ವಚನ ಸ್ವೀಕರಿಸಿದ ನಂತರ ಹಲವು ಸಂಸದರು ಜೈ ಹಿಂದ್, ಜೈ ಮಹಾರಾಷ್ಟ್ರ, ಜೈ ಭೀಮ್ ಹಾಗೂ ಜೈ ಶಿವಾಜಿ ಘೋಷಣೆಗಳನ್ನು ಕೂಗಿದರು.

ಇದನ್ನೂ ಓದಿ:Asaduddin Owaisi: ಸದನದಲ್ಲಿ ಜೈ ಭೀಮ್, ಜೈ ಪ್ಯಾಲೆಸ್ತೀನ್ ಘೋಷಣೆ ಕೂಗಿದ ಅಸಾದುದ್ದೀನ್ ಓವೈಸಿ; ವಿಡಿಯೋ ವೈರಲ್

ಕಾಂಗ್ರೆಸ್‌ನ ಹೊರ ಮಣಿಪುರ ಸಂಸದ ಆಲ್‌ಫ್ರೆಡ್ ಎಸ್ ಆರ್ಥರ್ ಅವರು ಇಂಗ್ಲಿಷ್‌ನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದು “ಮಣಿಪುರ ಮೇ ನ್ಯಾಯ ದಿಲಾಯೆ, ದೇಶ್ ಬಚಾಯಿಯೇ” ಎಂದು ಹೇಳಿದ್ದಾರೆ. ಪ್ರಮಾಣವಚನ ಸ್ವೀಕರಿಸಿದ ನಂತರ ಅಸಾದುದ್ದೀನ್ ಓವೈಸಿ, ಜೈ ಭೀಮ್, ಜೈ ತೆಲಂಗಾಣ ಮತ್ತು ಜೈ ಪ್ಯಾಲೆಸ್ತೀನ್ ಘೋಷಣೆಗಳನ್ನು ಕೂಗಿದ್ದಾರೆ.ಹಲವು ಬಿಜೆಪಿ ಸದಸ್ಯರು ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮಾತನಾಡಿದ ಹಂಗಾಮಿ ಸ್ಪೀಕರ್ ಭರ್ತೃಹರಿ ಮಹತಾಬ್, ಓವೈಸಿ ಅವರು ಆಕ್ಷೇಪಾರ್ಹವಾಗಿ ಏನಾದರೂ ಹೇಳಿದ್ದರೆ ಅದನ್ನು ಕಲಾಪದ ದಾಖಲೆಯಿಂದ ತೆಗೆದುಹಾಕಲಾಗುವುದು ಎಂದು ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:02 pm, Tue, 25 June 24

ರಜತ್ ಕಿಶನ್ ರೀಲ್ಸ್ ಕೇಸ್: ಪೊಲೀಸ್ ಠಾಣೆಗೆ ಅಲೆದಾಡಿದ ಪತ್ನಿ ಅಕ್ಷಿತಾ
ರಜತ್ ಕಿಶನ್ ರೀಲ್ಸ್ ಕೇಸ್: ಪೊಲೀಸ್ ಠಾಣೆಗೆ ಅಲೆದಾಡಿದ ಪತ್ನಿ ಅಕ್ಷಿತಾ
ಹೇಳಿದ ಸತ್ಯವನ್ನು ಬಿಜೆಪಿಗೆ ಜೀರ್ಣಿಸಿಕೊಳ್ಳಲಾಗುತ್ತಿಲ್ಲ: ಶಿವಕುಮಾರ್
ಹೇಳಿದ ಸತ್ಯವನ್ನು ಬಿಜೆಪಿಗೆ ಜೀರ್ಣಿಸಿಕೊಳ್ಳಲಾಗುತ್ತಿಲ್ಲ: ಶಿವಕುಮಾರ್
ರಾಜಣ್ಣ ನನಗೆ ದೂರು ನೀಡಲು ಬರಲ್ಲ, ಪೊಲೀಸ್ ಠಾಣೆಗೆ ನೀಡಬೇಕು: ಪರಮೇಶ್ವರ್
ರಾಜಣ್ಣ ನನಗೆ ದೂರು ನೀಡಲು ಬರಲ್ಲ, ಪೊಲೀಸ್ ಠಾಣೆಗೆ ನೀಡಬೇಕು: ಪರಮೇಶ್ವರ್
ಶಿವಕುಮಾರ್ ತಮಿಳುನಾಡುನಿಂದ ಒಪ್ಪಿಗೆ ತಂದರೆಂದು ಭಾವಿಸಿದ್ದೆ: ಸಿಟಿ ರವಿ
ಶಿವಕುಮಾರ್ ತಮಿಳುನಾಡುನಿಂದ ಒಪ್ಪಿಗೆ ತಂದರೆಂದು ಭಾವಿಸಿದ್ದೆ: ಸಿಟಿ ರವಿ
ಮೀಸಲಾತಿ ಕುರಿತು ನಿತೀಶ್ ಕುಮಾರ್, ರಾಬ್ರಿ ದೇವಿ ನಡುವೆ ತೀವ್ರ ವಾಗ್ವಾದ
ಮೀಸಲಾತಿ ಕುರಿತು ನಿತೀಶ್ ಕುಮಾರ್, ರಾಬ್ರಿ ದೇವಿ ನಡುವೆ ತೀವ್ರ ವಾಗ್ವಾದ
ಹನಿಟ್ರ್ಯಾಪ್​: ರಾಜಣ್ಣ, ಪರಮೇಶ್ವರ್​ ದಿಢೀರ್ ಜಂಟಿ ಸುದ್ದಿಗೋಷ್ಠಿ ಲೈವ್​
ಹನಿಟ್ರ್ಯಾಪ್​: ರಾಜಣ್ಣ, ಪರಮೇಶ್ವರ್​ ದಿಢೀರ್ ಜಂಟಿ ಸುದ್ದಿಗೋಷ್ಠಿ ಲೈವ್​
ವಿನಯ್-ರಜತ್ ಅವರ ಮಹಜರಿಗೆ ಕರೆತಂದ ಪೊಲೀಸರು: ವಿಡಿಯೋ
ವಿನಯ್-ರಜತ್ ಅವರ ಮಹಜರಿಗೆ ಕರೆತಂದ ಪೊಲೀಸರು: ವಿಡಿಯೋ
ಕೇವಲ ಒಬ್ಬ ಕಾರ್ಯಕರ್ತನ ಹಿಂದೆ ಹತ್ತಾರು ಪೊಲೀಸರು!
ಕೇವಲ ಒಬ್ಬ ಕಾರ್ಯಕರ್ತನ ಹಿಂದೆ ಹತ್ತಾರು ಪೊಲೀಸರು!
ಹನಿಟ್ರ್ಯಾಪ್‌ನಲ್ಲಿ ನನ್ನದೂ ತಪ್ಪಿದೆ ಎಂದಿದ್ಯಾಕೆ ರಾಜಣ್ಣ..?
ಹನಿಟ್ರ್ಯಾಪ್‌ನಲ್ಲಿ ನನ್ನದೂ ತಪ್ಪಿದೆ ಎಂದಿದ್ಯಾಕೆ ರಾಜಣ್ಣ..?
ರಾಜಣ್ಣ ದೂರು ನೀಡಿದರೆ ಸರ್ಕಾರ ತನಿಖೆ ಮಾಡಿಸಲು ಸಿದ್ಧವಿದೆ: ಚಲುವರಾಯಸ್ವಾಮಿ
ರಾಜಣ್ಣ ದೂರು ನೀಡಿದರೆ ಸರ್ಕಾರ ತನಿಖೆ ಮಾಡಿಸಲು ಸಿದ್ಧವಿದೆ: ಚಲುವರಾಯಸ್ವಾಮಿ