AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದಲ್ಲಿ 105 ಕೋಟಿ ಡೋಸ್​​ಗೂ ಹೆಚ್ಚು ಕೊವಿಡ್​ 19 ಲಸಿಕೆ ನೀಡಿಕೆ; ಆರೋಗ್ಯ ಸಚಿವರಿಂದ ಟ್ವೀಟ್​​

ಭಾರತ ಅಕ್ಟೋಬರ್​ 21ರಂದು 100 ಕೋಟಿ ಡೋಸ್​ ಲಸಿಕೆ ನೀಡಿಕೆಯ ದಾಖಲೆ ನಿರ್ಮಿಸಿದೆ. ಅಂದು ಪ್ರಧಾನಿ ನರೇಂದ್ರ ಮೋದಿ, ಆರೋಗ್ಯ ಸಚಿವ ಮನ್​ಸುಖ್​ ಮಾಂಡವಿಯಾ ಸೇರಿ ಅನೇಕ ಗಣ್ಯರು ಇಲ್ಲಿನ ಆರೋಗ್ಯ ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸಿದ್ದರು.

ಭಾರತದಲ್ಲಿ 105 ಕೋಟಿ ಡೋಸ್​​ಗೂ ಹೆಚ್ಚು ಕೊವಿಡ್​ 19 ಲಸಿಕೆ ನೀಡಿಕೆ; ಆರೋಗ್ಯ ಸಚಿವರಿಂದ ಟ್ವೀಟ್​​
ಕೊರೊನಾ ಲಸಿಕೆ ಸಾಂಕೇತಿಕ ಚಿತ್ರ
TV9 Web
| Edited By: |

Updated on:Oct 30, 2021 | 9:44 AM

Share

ದೇಶದಲ್ಲಿ ಕೊರೊನಾ ಲಸಿಕೆ ಅಭಿಯಾನ (Covid 19 Vaccine Drive) ವೇಗದಿಂದ ಸಾಗುತ್ತಿದೆ. ಈಗಾಗಲೇ 100 ಕೋಟಿ ಡೋಸ್​ ನೀಡಿಕೆ ಮುಗಿದು ದಾಖಲೆ ಸೃಷ್ಟಿಯಾಗಿದೆ. ಶುಕ್ರವಾರ ಅಂದರೆ ಅಕ್ಟೋಬರ್​ 29ರ ವೇಳೆಗೆ 105 ಕೋಟಿಗೂ ಹೆಚ್ಚು ಡೋಸ್​ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.  ಶುಕ್ರವಾರ ಒಂದೇ ದಿನ ಸಂಜೆ 7ಗಂಟೆವರೆಗೆ 51 ಲಕ್ಷಕ್ಕೂ ಅಧಿಕ ಡೋಸ್​ ಲಸಿಕೆ ನೀಡಲಾಗಿತ್ತು ಎಂದು ಹೇಳಿದೆ. 

ಟ್ವೀಟ್​ ಮಾಡಿರುವ ಕೇಂದ್ರ ಆರೋಗ್ಯ ಸಚಿವ ಮನ್​ಸುಖ್​ ಮಾಂಡವಿಯಾ, ಇಲ್ಲಿಯವರೆಗೆ 105 ಕೋಟಿ ಡೋಸ್​ ಲಸಿಕೆ ನೀಡಲಾಗಿದೆ. ಇದು ವಿಜಯ.. ಭಾರತದ ಜನರಿಗೆ ಅಭಿನಂದನೆಗಳು. ಕೊವಿಡ್​ 19 ಲಸಿಕೆ ಅಭಿಯಾನ ಹೊಸ ದಾಖಲೆಗಳನ್ನು ನಿರ್ಮಿಸಿದೆ ಎಂದು ಹೇಳಿದ್ದಾರೆ. ದೇಶದಲ್ಲಿ ಕೊರೊನಾ ವೈರಸ್​​ ವಿರುದ್ಧ ಲಸಿಕೆ ಅಭಿಯಾನ ಜನವರಿ 16ರಂದು ಶುರುವಾಗಿದೆ. ಮೊದಲ ಹಂತದಲ್ಲಿ ಕೊರೊನಾ ವಾರಿಯರ್ಸ್​ಗೆ ನೀಡಲಾಗಿತ್ತು. ಎರಡನೇ ಹಂತದ ಕೊರೊನಾ ಲಸಿಕೆ ನೀಡಿಕೆ ಮಾರ್ಚ್​ 1ರಿಂದ ಪ್ರಾರಂಭವಾಗಿ, 60 ವರ್ಷ ಮೇಲ್ಪಟ್ಟವರಿಗೆ ಮತ್ತು 45 ವರ್ಷ ಮೇಲ್ಪಟ್ಟು, ಬೇರೆ ಕೆಲವು ರೋಗಗಳಿಂದ ಬಳಲುತ್ತಿರುವವರಿಗೆ ನೀಡಲಾಯಿತು. ಹಾಗೇ, ಏಪ್ರಿಲ್​ 1ರಿಂದ 45 ವರ್ಷ ಮೇಲ್ಪಟ್ಟ ಎಲ್ಲರಿಗೂ ನೀಡಲು ಶುರು ಮಾಡಲಾಯಿತು. ಅದಾದ ನಂತರ ಮೇ 1ರಿಂದ 18 ವರ್ಷ ಮೇಲ್ಪಟ್ಟವರಿಗೆ ಕೊರೊನಾ ಲಸಿಕೆ ನೀಡಲು ಪ್ರಾರಂಭ ಮಾಡಲಾಯಿತು.

ಭಾರತ ಅಕ್ಟೋಬರ್​ 21ರಂದು 100 ಕೋಟಿ ಡೋಸ್​ ಲಸಿಕೆ ನೀಡಿಕೆಯ ದಾಖಲೆ ನಿರ್ಮಿಸಿದೆ. ಅಂದು ಪ್ರಧಾನಿ ನರೇಂದ್ರ ಮೋದಿ, ಆರೋಗ್ಯ ಸಚಿವ ಮನ್​ಸುಖ್​ ಮಾಂಡವಿಯಾ ಸೇರಿ ಅನೇಕ ಗಣ್ಯರು ಇಲ್ಲಿನ ಆರೋಗ್ಯ ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸಿದ್ದರು. ದೇಶದ ಜನರ ಸಹಕಾರಕ್ಕೆ ಕೃತಜ್ಞತೆಯನ್ನೂ ಹೇಳಿದ್ದರು. ಭಾರತದ ಲಸಿಕೆ ಅಭಿಯಾನದ ಸಾಧನೆಯನ್ನು ವಿಶ್ವ ಆರೋಗ್ಯ ಸಂಸ್ಥೆ ಶ್ಲಾಘಿಸಿದೆ. ಶತಕೋಟಿ ಡೋಸ್​ ಲಸಿಕೆ ನೀಡಿದ ಎರಡನೇ ದೇಶ ಭಾರತ. ಅದರ ಬೆನ್ನಲ್ಲೇ ಇಲ್ಲಿ ಲಸಿಕೆ ಅಭಿಯಾನವನ್ನು ಇನ್ನಷ್ಟು ವೇಗಗೊಳಿಸಲಾಗಿದೆ.

ಇದನ್ನೂ ಓದಿ: Rajinikanth: ರಜನಿಕಾಂತ್​ಗೆ ಹೃದಯದ ಸಮಸ್ಯೆ; ಆಸ್ಪತ್ರೆಗೆ ದಾಖಲಾಗಿರುವ ತಲೈವಾ ಆರೋಗ್ಯ ಸ್ಥಿತಿ ಈಗ ಹೇಗಿದೆ?

ಜಿಮ್​ನಲ್ಲಿ ಪುನೀತ್ ರಾಜ್​ಕುಮಾರ್ ವರ್ಕೌಟ್​​: ಹೇಗಿರುತ್ತಿತ್ತು ಗೊತ್ತಾ ಅಪ್ಪು ಕಸರತ್ತು​? ಇಲ್ಲಿದೆ ವಿಡಿಯೋ​

Published On - 9:40 am, Sat, 30 October 21

‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್