AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದಲ್ಲಿ 105 ಕೋಟಿ ಡೋಸ್​​ಗೂ ಹೆಚ್ಚು ಕೊವಿಡ್​ 19 ಲಸಿಕೆ ನೀಡಿಕೆ; ಆರೋಗ್ಯ ಸಚಿವರಿಂದ ಟ್ವೀಟ್​​

ಭಾರತ ಅಕ್ಟೋಬರ್​ 21ರಂದು 100 ಕೋಟಿ ಡೋಸ್​ ಲಸಿಕೆ ನೀಡಿಕೆಯ ದಾಖಲೆ ನಿರ್ಮಿಸಿದೆ. ಅಂದು ಪ್ರಧಾನಿ ನರೇಂದ್ರ ಮೋದಿ, ಆರೋಗ್ಯ ಸಚಿವ ಮನ್​ಸುಖ್​ ಮಾಂಡವಿಯಾ ಸೇರಿ ಅನೇಕ ಗಣ್ಯರು ಇಲ್ಲಿನ ಆರೋಗ್ಯ ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸಿದ್ದರು.

ಭಾರತದಲ್ಲಿ 105 ಕೋಟಿ ಡೋಸ್​​ಗೂ ಹೆಚ್ಚು ಕೊವಿಡ್​ 19 ಲಸಿಕೆ ನೀಡಿಕೆ; ಆರೋಗ್ಯ ಸಚಿವರಿಂದ ಟ್ವೀಟ್​​
ಕೊರೊನಾ ಲಸಿಕೆ ಸಾಂಕೇತಿಕ ಚಿತ್ರ
TV9 Web
| Updated By: Lakshmi Hegde|

Updated on:Oct 30, 2021 | 9:44 AM

Share

ದೇಶದಲ್ಲಿ ಕೊರೊನಾ ಲಸಿಕೆ ಅಭಿಯಾನ (Covid 19 Vaccine Drive) ವೇಗದಿಂದ ಸಾಗುತ್ತಿದೆ. ಈಗಾಗಲೇ 100 ಕೋಟಿ ಡೋಸ್​ ನೀಡಿಕೆ ಮುಗಿದು ದಾಖಲೆ ಸೃಷ್ಟಿಯಾಗಿದೆ. ಶುಕ್ರವಾರ ಅಂದರೆ ಅಕ್ಟೋಬರ್​ 29ರ ವೇಳೆಗೆ 105 ಕೋಟಿಗೂ ಹೆಚ್ಚು ಡೋಸ್​ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.  ಶುಕ್ರವಾರ ಒಂದೇ ದಿನ ಸಂಜೆ 7ಗಂಟೆವರೆಗೆ 51 ಲಕ್ಷಕ್ಕೂ ಅಧಿಕ ಡೋಸ್​ ಲಸಿಕೆ ನೀಡಲಾಗಿತ್ತು ಎಂದು ಹೇಳಿದೆ. 

ಟ್ವೀಟ್​ ಮಾಡಿರುವ ಕೇಂದ್ರ ಆರೋಗ್ಯ ಸಚಿವ ಮನ್​ಸುಖ್​ ಮಾಂಡವಿಯಾ, ಇಲ್ಲಿಯವರೆಗೆ 105 ಕೋಟಿ ಡೋಸ್​ ಲಸಿಕೆ ನೀಡಲಾಗಿದೆ. ಇದು ವಿಜಯ.. ಭಾರತದ ಜನರಿಗೆ ಅಭಿನಂದನೆಗಳು. ಕೊವಿಡ್​ 19 ಲಸಿಕೆ ಅಭಿಯಾನ ಹೊಸ ದಾಖಲೆಗಳನ್ನು ನಿರ್ಮಿಸಿದೆ ಎಂದು ಹೇಳಿದ್ದಾರೆ. ದೇಶದಲ್ಲಿ ಕೊರೊನಾ ವೈರಸ್​​ ವಿರುದ್ಧ ಲಸಿಕೆ ಅಭಿಯಾನ ಜನವರಿ 16ರಂದು ಶುರುವಾಗಿದೆ. ಮೊದಲ ಹಂತದಲ್ಲಿ ಕೊರೊನಾ ವಾರಿಯರ್ಸ್​ಗೆ ನೀಡಲಾಗಿತ್ತು. ಎರಡನೇ ಹಂತದ ಕೊರೊನಾ ಲಸಿಕೆ ನೀಡಿಕೆ ಮಾರ್ಚ್​ 1ರಿಂದ ಪ್ರಾರಂಭವಾಗಿ, 60 ವರ್ಷ ಮೇಲ್ಪಟ್ಟವರಿಗೆ ಮತ್ತು 45 ವರ್ಷ ಮೇಲ್ಪಟ್ಟು, ಬೇರೆ ಕೆಲವು ರೋಗಗಳಿಂದ ಬಳಲುತ್ತಿರುವವರಿಗೆ ನೀಡಲಾಯಿತು. ಹಾಗೇ, ಏಪ್ರಿಲ್​ 1ರಿಂದ 45 ವರ್ಷ ಮೇಲ್ಪಟ್ಟ ಎಲ್ಲರಿಗೂ ನೀಡಲು ಶುರು ಮಾಡಲಾಯಿತು. ಅದಾದ ನಂತರ ಮೇ 1ರಿಂದ 18 ವರ್ಷ ಮೇಲ್ಪಟ್ಟವರಿಗೆ ಕೊರೊನಾ ಲಸಿಕೆ ನೀಡಲು ಪ್ರಾರಂಭ ಮಾಡಲಾಯಿತು.

ಭಾರತ ಅಕ್ಟೋಬರ್​ 21ರಂದು 100 ಕೋಟಿ ಡೋಸ್​ ಲಸಿಕೆ ನೀಡಿಕೆಯ ದಾಖಲೆ ನಿರ್ಮಿಸಿದೆ. ಅಂದು ಪ್ರಧಾನಿ ನರೇಂದ್ರ ಮೋದಿ, ಆರೋಗ್ಯ ಸಚಿವ ಮನ್​ಸುಖ್​ ಮಾಂಡವಿಯಾ ಸೇರಿ ಅನೇಕ ಗಣ್ಯರು ಇಲ್ಲಿನ ಆರೋಗ್ಯ ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸಿದ್ದರು. ದೇಶದ ಜನರ ಸಹಕಾರಕ್ಕೆ ಕೃತಜ್ಞತೆಯನ್ನೂ ಹೇಳಿದ್ದರು. ಭಾರತದ ಲಸಿಕೆ ಅಭಿಯಾನದ ಸಾಧನೆಯನ್ನು ವಿಶ್ವ ಆರೋಗ್ಯ ಸಂಸ್ಥೆ ಶ್ಲಾಘಿಸಿದೆ. ಶತಕೋಟಿ ಡೋಸ್​ ಲಸಿಕೆ ನೀಡಿದ ಎರಡನೇ ದೇಶ ಭಾರತ. ಅದರ ಬೆನ್ನಲ್ಲೇ ಇಲ್ಲಿ ಲಸಿಕೆ ಅಭಿಯಾನವನ್ನು ಇನ್ನಷ್ಟು ವೇಗಗೊಳಿಸಲಾಗಿದೆ.

ಇದನ್ನೂ ಓದಿ: Rajinikanth: ರಜನಿಕಾಂತ್​ಗೆ ಹೃದಯದ ಸಮಸ್ಯೆ; ಆಸ್ಪತ್ರೆಗೆ ದಾಖಲಾಗಿರುವ ತಲೈವಾ ಆರೋಗ್ಯ ಸ್ಥಿತಿ ಈಗ ಹೇಗಿದೆ?

ಜಿಮ್​ನಲ್ಲಿ ಪುನೀತ್ ರಾಜ್​ಕುಮಾರ್ ವರ್ಕೌಟ್​​: ಹೇಗಿರುತ್ತಿತ್ತು ಗೊತ್ತಾ ಅಪ್ಪು ಕಸರತ್ತು​? ಇಲ್ಲಿದೆ ವಿಡಿಯೋ​

Published On - 9:40 am, Sat, 30 October 21

ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?