AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತಿಪಕ್ಷಗಳ ಮೈತ್ರಿಕೂಟ ‘ಇಂಡಿಯಾ’ ಸನಾತನ ಧರ್ಮವನ್ನು ನಾಶಮಾಡಲು ಪ್ರಯತ್ನಿಸುತ್ತಿದೆ: ನರೇಂದ್ರ ಮೋದಿ

ಪ್ರತಿಪಕ್ಷಗಳ ಮೈತ್ರಿ ಕೂಟ ‘ಇಂಡಿಯಾ’ವು ಸನಾತನ ಧರ್ಮ(Sanatana Dharma)ವನ್ನು ನಾಶಮಾಡಲು ಪ್ರಯತ್ನಿಸುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ(Narendra Modi) ಹೇಳಿದ್ದಾರೆ. ಪತ್ರಿಪಕ್ಷಗಳ ಒಕ್ಕೂಟವು ಸನಾತನ ಧರ್ಮ, ದೇಶದ ಮೂಲ ಸಂಸ್ಕೃತಿ ಹಾಗೂ ನಾಗರಿಕರಿಗೆ ಅಪಾಯವನ್ನು ತಂದೊಡ್ಡುತ್ತಿದೆ ಎಂದು ಆರೋಪಿಸಿದ್ದಾರೆ. ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಸನಾತನ ಧರ್ಮವನ್ನು ಡೆಂಗ್ಯೂ, ಮಲೇರಿಯಾ ಹಾಗೂ ಕೊರೊನಾಗೆ ಹೋಲಿಕೆ ಮಾಡಿದ್ದರು.

ಪ್ರತಿಪಕ್ಷಗಳ ಮೈತ್ರಿಕೂಟ ‘ಇಂಡಿಯಾ’ ಸನಾತನ ಧರ್ಮವನ್ನು ನಾಶಮಾಡಲು ಪ್ರಯತ್ನಿಸುತ್ತಿದೆ: ನರೇಂದ್ರ ಮೋದಿ
ನರೇಂದ್ರ ಮೋದಿImage Credit source: India Today
ನಯನಾ ರಾಜೀವ್
|

Updated on:Sep 14, 2023 | 1:16 PM

Share

ಸಾಗರ್, ಸೆಪ್ಟೆಂಬರ್ 14: ಪ್ರತಿಪಕ್ಷಗಳ ಮೈತ್ರಿ ಕೂಟ ‘ಇಂಡಿಯಾ’ವು ಸನಾತನ ಧರ್ಮ(Sanatana Dharma)ವನ್ನು ನಾಶಮಾಡಲು ಪ್ರಯತ್ನಿಸುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ(Narendra Modi) ಹೇಳಿದ್ದಾರೆ. ಪತ್ರಿಪಕ್ಷಗಳ ಒಕ್ಕೂಟವು ಸನಾತನ ಧರ್ಮ, ದೇಶದ ಮೂಲ ಸಂಸ್ಕೃತಿ ಹಾಗೂ ನಾಗರಿಕರಿಗೆ ಅಪಾಯವನ್ನು ತಂದೊಡ್ಡುತ್ತಿದೆ ಎಂದು ಆರೋಪಿಸಿದ್ದಾರೆ. ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಸನಾತನ ಧರ್ಮವನ್ನು ಡೆಂಗ್ಯೂ, ಮಲೇರಿಯಾ ಹಾಗೂ ಕೊರೊನಾಗೆ ಹೋಲಿಕೆ ಮಾಡಿದ್ದರು.

ಹೇಗೆ ಈ ರೋಗಗಳ ವಿರುದ್ಧ ಹೋರಾಡಿದರೆ ಯಾವುದೇ ಪ್ರಯೋಜನವಿಲ್ಲವೋ, ಅದನ್ನು ಬುಡದಿಂದಲೇ ನಿರ್ಮೂಲನೆ ಮಾಡುವ ಅಗತ್ಯವಿದೆಯೋ ಹಾಗೆಯೇ ಸನಾತನ ಧರ್ಮವನ್ನು ಕೂಡ ನಿರ್ಮೂಲನೆ ಮಾಬೇಕು ಎಂಬ ಹೇಳಿಕೆ ವಿವಾದವನ್ನು ಹುಟ್ಟುಹಾಕಿದೆ.

ಈ ಹೇಳಿಕೆಗೆ ಸರಿಯಾದ ಪ್ರತಿಕ್ರಿಯೆ ನೀಡುವಂತೆ ಪ್ರಧಾನಿ ಮೋದಿ ತನ್ನ ಸಚಿವರಿಗೆ ಒತ್ತಾಯಿಸಿದ್ದಾರೆ. ಮಧ್ಯಪ್ರದೇಶದ ಸಾಗರ್ ಜಿಲ್ಲೆಯಲ್ಲಿ ಸಾರ್ವಜನಿಕ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಪ್ರತಿಪಕ್ಷಗಳ ‘ಘಮಂಡಿಯಾ’ ಮೈತ್ರಿಯು ಸನಾತನ ಧರ್ಮವನ್ನು ನಾಶಮಾಡಲು ಬಯಸುತ್ತಿದೆ ಎಂದು ಹೇಳಿದರು.

ಮತ್ತಷ್ಟು ಓದಿ: ಸನಾತನ ಧರ್ಮದ ಬಗ್ಗೆ ಉದಯನಿಧಿ ಹೇಳಿಕೆ ವಿವಾದ: ತಕ್ಕ ಉತ್ತರ ನೀಡಬೇಕು ಎಂದ ನರೇಂದ್ರ ಮೋದಿ

ಕೆಲವು ಗುಂಪುಗಳು ದೇಶ ಮತ್ತು ಸಮಾಜವನ್ನು ವಿಭಜಿಸುವ ಕೆಲಸ ಮಾಡುತ್ತಿವೆ, ಅವು ಈಗ ಒಟ್ಟಾಗಿ ಇಂಡಿಯಾ ಎಂಬ ಕೂಟವನ್ನು ರಚಿಸಿದ್ದಾರೆ. ಭಾರತದ ಸಂಸ್ಕೃತಿಯ ಮೇಲೆ ದಾಳಿ ಮಾಡಲು ಗುಪ್ತ ಕಾರ್ಯಸೂಚಿಯನ್ನು ಸಹ ಸಿದ್ಧಪಡಿಸಿದ್ದಾರೆ.

ಇಂಡಿಯಾ ಮೈತ್ರಿಯು ಸನಾತನ ಧರ್ಮವನ್ನು ಕೊನೆಗೊಳಿಸುವ ಉದ್ದೇಶದಿಂದಲೇ ಹುಟ್ಟಿಕೊಂಡಿದೆ ಎಂದು ಮೋದಿ ದಾಳಿ ನಡೆಸಿದ್ದಾರೆ. ಸನಾತನ ಧರ್ಮದ ನಿರ್ಮೂಲನೆ ಎಂಬ ಕೂಗು ಎಲ್ಲೆ ಮೀರಿದ್ದು, ಅದನ್ನು ವಿರೋಧಿಸದೆ ಇರಬಾರದು.

ಇಂದು ಅವರು ಬಹಿರಂಗವಾಗಿ ಸನಾತನವನ್ನು ಗುರಿಯಾಗಿಸಲು ಪ್ರಾರಂಭಿಸಿದ್ದಾರೆ, ನಾಳೆ ಅವರು ನಮ್ಮ ಮೇಲೆ ದಾಳಿಯನ್ನು ಹೆಚ್ಚಿಸುತ್ತಾರೆ. ದೇಶಾದ್ಯಂತ ಇರುವ ಎಲ್ಲಾ ಸನಾತನಿಗಳು ಮತ್ತು ನಮ್ಮ ದೇಶವನ್ನು ಪ್ರೀತಿಸುವ ಜನರು ಎಚ್ಚರವಾಗಿರಬೇಕು ಎಂದು ಪ್ರಧಾನಿ ಮೋದಿ ಕರೆ ನೀಡಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 1:14 pm, Thu, 14 September 23

Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್