AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BIG NEWS: ಲಡಾಖ್​ನ ಗೋಗ್ರಾದಿಂದ ತಮ್ಮ ಸೇನೆಯನ್ನು ಸಂಪೂರ್ಣವಾಗಿ ಹಿಂಪಡೆದ ಭಾರತ ಹಾಗೂ ಚೀನಾ

ಲಡಾಖ್​ನ ಗೋಗ್ರಾ ಪ್ರದೇಶದಿಂದ ಭಾರತ ಮತ್ತು ಚೀನಾ ತನ್ನ ಸೈನ್ಯವನ್ನು ಹಿಂದಕ್ಕೆ ಕರೆಸಿಕೊಳ್ಳುವ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದೆ.

BIG NEWS: ಲಡಾಖ್​ನ ಗೋಗ್ರಾದಿಂದ ತಮ್ಮ ಸೇನೆಯನ್ನು ಸಂಪೂರ್ಣವಾಗಿ ಹಿಂಪಡೆದ ಭಾರತ ಹಾಗೂ ಚೀನಾ
India and China
TV9 Web
| Edited By: |

Updated on:Sep 13, 2022 | 4:30 PM

Share

ಲಡಾಖ್​ನ ಗೋಗ್ರಾ ಪ್ರದೇಶದಿಂದ ಭಾರತ ಮತ್ತು ಚೀನಾ ತನ್ನ ಸೈನ್ಯವನ್ನು ಹಿಂದಕ್ಕೆ ಕರೆಸಿಕೊಳ್ಳುವ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದೆ. ಭಾರತ ಮತ್ತು ಚೀನಾದ ಸೇನೆಗಳು ಇಂದು ಪೂರ್ವ ಲಡಾಖ್ ಸೆಕ್ಟರ್‌ನ ಗಸ್ತು ಪಾಯಿಂಟ್-15 ಬಳಿಯಿಂದ ತನ್ನ ಸೈನ್ಯವನ್ನು ಹಿಂದಕ್ಕೆ ಕರೆಸಿಕೊಳ್ಳುವ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ ಎಂದು ಸರ್ಕಾರದ ಮೂಲಗಳು ತಿಳಿಸಿದೆ. ಪೂರ್ವ ಲಡಾಖ್‌ನ ಪೆಟ್ರೋಲಿಂಗ್ ಪಾಯಿಂಟ್-15 ಬಳಿಯ ಗೋಗ್ರಾ ಹೈಟ್ಸ್-ಹಾಟ್ ಸ್ಪ್ರಿಂಗ್ಸ್ ಪ್ರದೇಶದಲ್ಲಿ (Gogra Heights-Hot Springs) ಭಾರತ ಮತ್ತು ಚೀನಾ ನಡುವಿನ ಬಿಕ್ಕಟ್ಟು ಅಂತಿಮವಾಗಿ ಕೊನೆಗೊಂಡಿದೆ. ಭಾರತ ಮತ್ತು ಚೀನಾದ ಸೇನೆಗಳು ಮಂಗಳವಾರ ಒಪ್ಪಿಗೆ ಸೂಚಿಸಿದ್ದು, ಕಳೆದ ವಾರ ಘೋಷಿಸಿದ ಪಡೆಗಳ ಹಿಂಪಡೆಯುವಿಕೆ ಪೂರ್ಣಗೊಳಿಸಿದವು.

ಮೇ 2020 ರಲ್ಲಿ ಪ್ರಾರಂಭವಾದ ಪೂರ್ವ ಲಡಾಖ್‌ನ ಹಲವಾರು ಪ್ರದೇಶಗಳಲ್ಲಿ ಗಡಿ ನಿಯಂತ್ರಣ ರೇಖೆಯ ಉದ್ದಕ್ಕೂ ಇರುವ ಬಿಕ್ಕಟ್ಟಿನ ನಂತರ ಈ ಪ್ರದೇಶದಲ್ಲಿ ಉದ್ಭವಿಸಿದ ತಾತ್ಕಾಲಿಕ ಮೂಲಸೌಕರ್ಯಗಳನ್ನು ತೆರವು ಮಾಡುವುದನ್ನು ಎರಡೂ ಸೇನೆಗಳು ಪರಿಶೀಲಿಸಿವೆ ಎಂದು ಭಾರತೀಯ ಸರ್ಕಾರದ ಮೂಲಗಳು ತಿಳಿಸಿವೆ. ಸೋಮವಾರ  ಸೇನಾ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ, ಹಿಂಪಡೆಯುವ ಪ್ರಕ್ರಿಯೆಯು ನಿಗದಿಯಂತೆ ನಡೆಯುತ್ತಿದೆ ಎಂದು ಹೇಳಿದ್ದಾರೆ. ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಸೆಪ್ಟೆಂಬರ್ 9 ರಂದು ಗೋಗ್ರಾ-ಹಾಟ್‌ಸ್ಪ್ರಿಂಗ್ಸ್ ಪ್ರದೇಶದಲ್ಲಿನ ಹಿಂಪಡೆಯುವಿಕೆಯನ್ನು ಸೆಪ್ಟೆಂಬರ್ 12 ರೊಳಗೆ ಪೂರ್ಣಗೊಳಿಸಲಾಗುವುದು ಎಂದು ಹೇಳಿತ್ತು.

ಹೇಳಲಾದ ಘರ್ಷಣೆಯ ಹಂತದಲ್ಲಿ ನಿರ್ಗಮಿಸುವ ಒಪ್ಪಂದದ ನಂತರ, ಜೆನ್ ಪಾಂಡೆ ಲಡಾಖ್‌ಗೆ ಪ್ರಯಾಣಿಸಿದ್ದರು. ಶನಿವಾರ ಅವರು ಪೂರ್ವ ಲಡಾಖ್ ವಲಯದ ಒಟ್ಟಾರೆ ಭದ್ರತಾ ಪರಿಸ್ಥಿತಿಯ ಸಮಗ್ರ ಪರಿಶೀಲನೆ ನಡೆಸಿದರು.

ಮೇ 5, 2020 ರಂದು ಪ್ಯಾಂಗಾಂಗ್ ಸರೋವರ ಪ್ರದೇಶದಲ್ಲಿ ಭಾರತೀಯ ಸೇನೆ ಮತ್ತು ಚೀನಾದ ಪೀಪಲ್ಸ್ ಲಿಬರೇಶನ್ ಆರ್ಮಿ ನಡುವಿನ ಹಿಂಸಾತ್ಮಕ ಘರ್ಷಣೆಯ ನಂತರ ಪೂರ್ವ ಲಡಾಖ್‌ನಲ್ಲಿ ಬಿಕ್ಕಟ್ಟು ಪ್ರಾರಂಭವಾಯಿತು. ಇಲ್ಲಿಯವರೆಗೆ ಭಾರತ ಮತ್ತು ಚೀನಾ 16 ಸುತ್ತುಗಳ ಕಾರ್ಪ್ಸ್ ಕಮಾಂಡರ್ ಮಟ್ಟದ ಮಾತುಕತೆಗಳನ್ನು ಅಡೆತಡೆಗಳನ್ನು ಪರಿಹರಿಸಲು ನಡೆಸಿವೆ. ಇದರಲ್ಲಿ ಪ್ಯಾಂಗೊಂಗ್ ಸರೋವರ ಮತ್ತು ಗಾಲ್ವಾನ್ ಕಣಿವೆಯಲ್ಲಿ, ಜೂನ್ 2020 ರಲ್ಲಿ ಉಭಯ ಸೇನೆಗಳ ನಡುವೆ ಹಿಂಸಾತ್ಮಕ ಘರ್ಷಣೆ ನಡೆದಿದ್ದು ಎರಡೂ ಕಡೆಗಳಲ್ಲಿ ಅನೇಕ ಸಾವುನೋವುಗಳಿಗೆ ಕಾರಣವಾಯಿತು.

Published On - 2:21 pm, Tue, 13 September 22

ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿ ಮನೆ ಮುಂದೆ ಫೈರಿಂಗ್‌: ಶಾಕಿಂಗ್ ರಿಯಾಕ್ಷನ್
ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿ ಮನೆ ಮುಂದೆ ಫೈರಿಂಗ್‌: ಶಾಕಿಂಗ್ ರಿಯಾಕ್ಷನ್
ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ
ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ