AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಕ್ಷಣಾ ಸಹಕಾರವನ್ನು ಹೆಚ್ಚಿಸಲು ‘ಭವಿಷ್ಯದ ಮಾರ್ಗಸೂಚಿ’ ಕಾರ್ಯಪಡೆ ರಚಿಸಲು ಭಾರತ-ತಾಂಜಾನಿಯಾ ಒಪ್ಪಿಗೆ

ಭಾರತ ಮತ್ತು ತಾಂಜಾನಿಯಾ ಎರಡೂ ದೇಶಗಳ ನಡುವೆ ರಕ್ಷಣಾ ಸಹಕಾರವನ್ನು ಹೆಚ್ಚಿಸಲು ಐದು ವರ್ಷಗಳ 'ಭವಿಷ್ಯದ ಮಾರ್ಗಸೂಚಿ'ಯನ್ನು ಸಿದ್ಧಪಡಿಸಲು ಕಾರ್ಯಪಡೆಯ ರಚನೆಗೆ ಒಪ್ಪಿಕೊಂಡಿವೆ. ತಾಂಜಾನಿಯಾದಲ್ಲಿ ಮುಂದಿನ ಜಂಟಿ ರಕ್ಷಣಾ ಸಹಕಾರ ಸಭೆಯನ್ನು ಮುಂಚಿನ ದಿನಾಂಕದಲ್ಲಿ ನಡೆಸಲು ತೀರ್ಮಾನಿಸಲಾಗಿದೆ.

ರಕ್ಷಣಾ ಸಹಕಾರವನ್ನು ಹೆಚ್ಚಿಸಲು 'ಭವಿಷ್ಯದ ಮಾರ್ಗಸೂಚಿ' ಕಾರ್ಯಪಡೆ ರಚಿಸಲು ಭಾರತ-ತಾಂಜಾನಿಯಾ ಒಪ್ಪಿಗೆ
ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ತಾಂಜೇನಿಯಾದ ರಕ್ಷಣಾ ಸಚಿವೆ ಡಾ. ಸ್ಟೆರ್ಗೊಮೆನಾ ಲಾರೆನ್ಸ್ ಟ್ಯಾಕ್ಸ್Image Credit source: Twitter/@rajnathsingh
TV9 Web
| Updated By: Rakesh Nayak Manchi|

Updated on:Aug 27, 2022 | 7:29 AM

Share

ದೆಹಲಿ: ಶುಕ್ರವಾರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ತಾಂಜೇನಿಯಾದ ರಕ್ಷಣಾ ಮತ್ತು ರಾಷ್ಟ್ರೀಯ ಸೇವಾ ಸಚಿವ ಡಾ. ಸ್ಟೆರ್ಗೊಮೆನಾ ಲಾರೆನ್ಸ್ ಟ್ಯಾಕ್ಸ್ ನಡುವೆ ದೆಹಲಿಯಲ್ಲಿ ದ್ವಿಪಕ್ಷೀಯ ಸಭೆ ನಡೆದಿದ್ದು, ಹಲವಾರು ಸಮಸ್ಯೆಗಳ ಕುರಿತು ನವದೆಹಲಿಯಲ್ಲಿ ಚರ್ಚೆಗಳನ್ನು ನಡೆಸಿದ್ದಾರೆ. ಮಾತುಕತೆ ವೇಳೆ ಎರಡೂ ದೇಶಗಳ ನಡುವಿನ ರಕ್ಷಣಾ ಸಹಕಾರದ ವಿಚಾರವನ್ನೂ ಪ್ರಸ್ತಾಪಿಸಲಾಗಿದೆ. ಎರಡೂ ದೇಶಗಳ ನಡುವೆ ರಕ್ಷಣಾ ಸಹಕಾರವನ್ನು ಹೆಚ್ಚಿಸಲು ಐದು ವರ್ಷಗಳ ‘ಭವಿಷ್ಯದ ಮಾರ್ಗಸೂಚಿ’ಯನ್ನು ಸಿದ್ಧಪಡಿಸಲು ಕಾರ್ಯಪಡೆಯ ರಚನೆಗೆ ಪರಸ್ಪರ ಒಪ್ಪಿಗೆ ಸೂಚಿಸಲಾಗಿದ್ದು, ತಾಂಜಾನಿಯಾದಲ್ಲಿ ಮುಂದಿನ ಜಂಟಿ ರಕ್ಷಣಾ ಸಹಕಾರ ಸಭೆಯನ್ನು ಮುಂಚಿನ ದಿನಾಂಕದಲ್ಲಿ ನಡೆಸಲು ತೀರ್ಮಾನಿಸಲಾಗಿದೆ.

ಸಭೆಯಲ್ಲಿ ದ್ವಿಪಕ್ಷೀಯ, ಪ್ರಾದೇಶಿಕ ಮತ್ತು ರಕ್ಷಣಾ ಕೈಗಾರಿಕಾ ಸಹಕಾರಕ್ಕೆ ಸಂಬಂಧಿಸಿದ ವ್ಯಾಪಕ ಶ್ರೇಣಿಯ ವಿಷಯಗಳನ್ನು ಚರ್ಚಿಸಲಾಯಿತು. ಇಬ್ಬರು ರಕ್ಷಣಾ ಮಂತ್ರಿಗಳು ಮಿಲಿಟರಿ ಚಟುವಟಿಕೆಗಳನ್ನು ಪರಿಶೀಲಿಸಿದರು ಮತ್ತು ರಕ್ಷಣಾ ಉದ್ಯಮದ ಸಹಕಾರವನ್ನು ಕೇಂದ್ರೀಕರಿಸಿ ಎಲ್ಲಾ ಡೊಮೇನ್‌ಗಳಲ್ಲಿ ಸಹಕಾರವನ್ನು ಹೆಚ್ಚಿಸುವ ಮಾರ್ಗಗಳ ಕುರಿತು ಚರ್ಚಿಸಿದರು ಎಂದು ಸಚಿವಾಲಯದ ಹೇಳಿಕೆ ತಿಳಿಸಿದೆ.

ಅಕ್ಟೋಬರ್ 18 ರಿಂದ 22ರ ನಡುವೆ ಗುಜರಾತ್‌ನ ಗಾಂಧಿನಗರದಲ್ಲಿ ನಡೆಯಲಿರುವ ಭಾರತ-ಆಫ್ರಿಕಾ ಡಿಫೆನ್ಸ್ ಡೈಲಾಗ್ ಮತ್ತು ಡೆಫ್ ಎಕ್ಸ್‌ಪೋಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ತಾಂಜೇನಿಯಾದ ಪ್ರತಿನಿಧಿಯನ್ನು ಆಹ್ವಾನಿಸಿದ್ದಾರೆ. ಇದಕ್ಕೂ ಮುನ್ನ ತಾಂಜೇನಿಯಾದ ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಿ ಹುತಾತ್ಮ ಯೋಧರಿಗೆ ನಮನ ಸಲ್ಲಿಸಿ ಗೌರವ ವಂದನೆ ಸಲ್ಲಿಸಿದರು.

ಭಾರತೀಯ ರಕ್ಷಣಾ ಕೈಗಾರಿಕೆಗಳೊಂದಿಗೆ ಸಂವಾದಕ್ಕಾಗಿ ಹೈದರಾಬಾದ್‌ಗೆ ಹೊರಡುವ ಮೊದಲು ಡಾ. ಟ್ಯಾಕ್ಸ್ ವಾರ್‌ಗೇಮಿಂಗ್ ಡೆವಲಪ್‌ಮೆಂಟ್ ಸೆಂಟರ್ ಮತ್ತು ಇನ್ಫರ್ಮೇಷನ್ ಫ್ಯೂಷನ್ ಸೆಂಟರ್ ಹಿಂದೂ ಮಹಾಸಾಗರ ಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ ಎಂದು ಹೇಳಿಕೆ ಸೇರಿಸಲಾಗಿದೆ.

ಮತ್ತಷ್ಟು ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:29 am, Sat, 27 August 22

‘ಜೂನಿಯರ್’ ಸಿನಿಮಾದ ಯಶಸ್ಸು, ನಿರ್ದೇಶಕ ರಾಧಾಕೃಷ್ಣ ಹೇಳಿದ್ದೇನು?
‘ಜೂನಿಯರ್’ ಸಿನಿಮಾದ ಯಶಸ್ಸು, ನಿರ್ದೇಶಕ ರಾಧಾಕೃಷ್ಣ ಹೇಳಿದ್ದೇನು?
ಏನೂ ಅರಿಯದ ಮಗುವನ್ನು ಸಾಯಿಸುವ ಮಾನಸಿಕತೆಗೆ ಏನೆನ್ನಬೇಕು?
ಏನೂ ಅರಿಯದ ಮಗುವನ್ನು ಸಾಯಿಸುವ ಮಾನಸಿಕತೆಗೆ ಏನೆನ್ನಬೇಕು?
ಸ್ಟಂಟ್ ದೃಶ್ಯಕ್ಕೆ ಎಷ್ಟು ಶ್ರಮ ಪಟ್ಟಿದ್ದಾರೆ ಕಿರೀಟಿ: ವಿಡಿಯೋ ನೋಡಿ
ಸ್ಟಂಟ್ ದೃಶ್ಯಕ್ಕೆ ಎಷ್ಟು ಶ್ರಮ ಪಟ್ಟಿದ್ದಾರೆ ಕಿರೀಟಿ: ವಿಡಿಯೋ ನೋಡಿ
ರೌಡಿಶೀಟರ್ ಬಿಕ್ಲು ಶಿವ ಬರ್ಬರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ರೌಡಿಶೀಟರ್ ಬಿಕ್ಲು ಶಿವ ಬರ್ಬರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ಸ್ವಜನ ಪಕ್ಷಪಾತ, ಭ್ರಷ್ಟಾಚಾರದಿಂದ ಸಿದ್ದರಾಮಯ್ಯ ಗಾವುದ ದೂರ: ಮಹದೇವಪ್ಪ
ಸ್ವಜನ ಪಕ್ಷಪಾತ, ಭ್ರಷ್ಟಾಚಾರದಿಂದ ಸಿದ್ದರಾಮಯ್ಯ ಗಾವುದ ದೂರ: ಮಹದೇವಪ್ಪ
ಖಜಾನೆ ತುಂಬಿಸಿಕೊಳ್ಳಲು ರಾಜ್ಯ ಸರ್ಕಾರ ವಾಮಮಾರ್ಗ ಅನುಸರಿಸಿದೆ: ಸಿಟಿ ರವಿ
ಖಜಾನೆ ತುಂಬಿಸಿಕೊಳ್ಳಲು ರಾಜ್ಯ ಸರ್ಕಾರ ವಾಮಮಾರ್ಗ ಅನುಸರಿಸಿದೆ: ಸಿಟಿ ರವಿ
ನಾಲ್ಕು ದಿನಗಳ ಅಂತರದಲ್ಲಿ ಇಬ್ಬರು ಮಹಿಳೆಯರನ್ನು ಬಲಿಪಡೆದ ಬಿಎಂಟಿಸಿ ಬಸ್
ನಾಲ್ಕು ದಿನಗಳ ಅಂತರದಲ್ಲಿ ಇಬ್ಬರು ಮಹಿಳೆಯರನ್ನು ಬಲಿಪಡೆದ ಬಿಎಂಟಿಸಿ ಬಸ್
ಅಪ್ರಾಪ್ತೆಯ ಕೊರಳಿಗೆ ಚಾಕು ಹಿಡಿದ ಪಾಗಲ್ ಪ್ರೇಮಿ,
ಅಪ್ರಾಪ್ತೆಯ ಕೊರಳಿಗೆ ಚಾಕು ಹಿಡಿದ ಪಾಗಲ್ ಪ್ರೇಮಿ,
ಸಿಎಂ ಗಾದಿಗಾಗಿ ತಿಕ್ಕಾಟ ಜೋರಾಗಿರುವ ಸೂಚನೆಗಳು ಸ್ಪಷ್ಟ!
ಸಿಎಂ ಗಾದಿಗಾಗಿ ತಿಕ್ಕಾಟ ಜೋರಾಗಿರುವ ಸೂಚನೆಗಳು ಸ್ಪಷ್ಟ!
ಕಲಬುರಗಿ ಜಿಲ್ಲೆಯ ಹಲವಾರು ಕಡೆ ತುಂಬಿ ಹರಿಯುತ್ತಿರುವ ಹಳ್ಳಕೊಳ್ಳಗಳು
ಕಲಬುರಗಿ ಜಿಲ್ಲೆಯ ಹಲವಾರು ಕಡೆ ತುಂಬಿ ಹರಿಯುತ್ತಿರುವ ಹಳ್ಳಕೊಳ್ಳಗಳು