AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೀಜಿಂಗ್​ ಚಳಿಗಾಲದ ಒಲಿಂಪಿಕ್ಸ್​​ಗೆ ಭಾರತದಿಂದ ರಾಜತಾಂತ್ರಿಕ ಬಹಿಷ್ಕಾರ; ಚೀನಾ ನಿರ್ಧಾರಕ್ಕೆ ಛೀಮಾರಿ ಹಾಕಿದ ಯುಎಸ್​

ಒಲಿಂಪಿಕ್ಸ್​ನಲ್ಲಿ ಕ್ರೀಡಾಜ್ಯೋತಿ ಹೊತ್ತೊಯ್ಯಲು ಗಲ್ವಾನ್ ಸಂಘರ್ಷದಲ್ಲಿ ಪಾಲ್ಗೊಂಡಿದ್ದ ಕಮಾಂಡರ್​​ನನ್ನು ಆಯ್ಕೆ ಮಾಡಿದ್ದನ್ನು ಯುಎಸ್​ನ ಜನಪ್ರತಿನಿಧಿ, ರಿಪಬ್ಲಿಕನ್ ಪಕ್ಷದ ಸೆನೆಟರ್ ಜಿಮ್ ರಿಶ್ ಖಂಡಿಸಿದ್ದಾರೆ.

ಬೀಜಿಂಗ್​ ಚಳಿಗಾಲದ ಒಲಿಂಪಿಕ್ಸ್​​ಗೆ ಭಾರತದಿಂದ ರಾಜತಾಂತ್ರಿಕ ಬಹಿಷ್ಕಾರ; ಚೀನಾ ನಿರ್ಧಾರಕ್ಕೆ ಛೀಮಾರಿ ಹಾಕಿದ ಯುಎಸ್​
ಸಾಂಕೇತಿಕ ಚಿತ್ರ
TV9 Web
| Edited By: |

Updated on: Feb 03, 2022 | 8:14 PM

Share

ಚೀನಾದಲ್ಲಿ ನಡೆಯಲಿರುವ ಚಳಿಗಾಲದ ಒಲಿಂಪಿಕ್ಸ್​ಗೆ ರಾಜತಾಂತ್ರಿಕ ಬಹಿಷ್ಕಾರವನ್ನು (Diplomatic ban on the Beijing Winter Olympics) ಹೇರಲು ಭಾರತ ನಿರ್ಧರಿಸಿದೆ. 2020ರಲ್ಲಿ ಗಲ್ವಾನ್​ ಕಣಿವೆಯಲ್ಲಿ ಭಾರತದ ಸೈನಿಕರ ಮೇಲೆ ಚೀನಾದ ಪೀಪಲ್ಸ್ ಲಿಬರೇಶನ್ ಆರ್ಮಿ ಸೈನಿಕರು(China PLA) ದಾಳಿ ನಡೆಸಿ, ಭಾರತದ 20ಕ್ಕೂ ಹೆಚ್ಚು ಸೈನಿಕರು ಹುತಾತ್ಮರಾಗಿದ್ದಾರೆ. ಅಂದಿನಿಂದಲೂ ಭಾರತ ಮತ್ತು ಚೀನಾ ನಡುವಿನ ಸಂಘರ್ಷ ಮತ್ತೊಂದು ಹಂತಕ್ಕೆ ಮೇಲೆರಿದ್ದು, ಈಗಲೂ ಸಹ ಗಡಿಯಲ್ಲಿ ಚೀನಾ ಉಪಟಳಕೊಡುತ್ತಲೇ ಇದೆ. ಈ ಮಧ್ಯೆ ನಾಳೆ (ಫೆ.4)ಯಿಂದ ಬೀಜಿಂಗ್​​ನಲ್ಲಿ ಚಳಿಗಾಲದ ಒಲಿಂಪಿಕ್ಸ್ ನಡೆಯಲಿದೆ. ಆದರೆ ಚೀನಾ ಒಲಿಂಪಿಕ್ಸ್​​ನಲ್ಲಿ ಕ್ರೀಡಾಜ್ಯೋತಿ ಹೊತ್ತೊಯ್ಯಲು (Torch Relay) ಗಲ್ವಾನ್​ ಕಣಿವೆಯಲ್ಲಿ ಭಾರತದ ಸೈನಿಕರ ಮೇಲೆ ದಾಳಿ ಮಾಡಿದವರಲ್ಲಿ ಒಬ್ಬನಾದ ಕಮಾಂಡರ್​  ಚಿ ಫ್ಯಾಬಾವೋ ಎಂಬಾತನನ್ನು ನಿಯೋಜಿಸಿದೆ. ಗಲ್ವಾನ್​ನಲ್ಲಿ ಭಾರತೀಯ ಯೋಧರ ಮೇಲೆ ದಾಳಿ ಮಾಡಿದವನೇ ಕ್ರೀಡಾ ಜ್ಯೋತಿ ಹೊತ್ತೊಯ್ಯುತ್ತಾನೆ ಎಂದಾದ ಮೇಲೆ ನಾವು ಒಲಿಂಪಿಕ್ಸ್​​ಗೆ ರಾಜತಾಂತ್ರಿಕ ಬಹಿಷ್ಕಾರ ಹಾಕುತ್ತೇವೆ ಎಂದು ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಸ್ಪಷ್ಟಪಡಿಸಿದೆ.

ಹೀಗೆ ಗಲ್ವಾನ್​ ಸಂಘರ್ಷದಲ್ಲಿ ಭಾಗವಹಿಸಿದ್ದ ಸೈನಿಕನನ್ನು ಒಲಿಂಪಿಕ್ಸ್​ ಕ್ರೀಡಾಜ್ಯೋತಿ ಹೊತ್ತೊಯ್ಯಲು ನಿಯೋಜಿಸಿದ ಚೀನಾದ ನಿರ್ಧಾರ ನಿಜಕ್ಕೂ ವಿಷಾದನೀಯ. ಇದೇ ಕಾರಣಕ್ಕೆ ಬೀಜಿಂಗ್​​ನಲ್ಲಿರುವ ನಮ್ಮ ರಾಯಭಾರಿ ಒಲಿಂಪಿಕ್ಸ್​​ ಉದ್ಘಾಟನಾ ಮತ್ತು ಸಮಾರೋಪ ಸಮಾರಂಭಗಳಲ್ಲಿ ಪಾಲ್ಗೊಳ್ಳುತ್ತಿಲ್ಲ. ಚೀನಾ ಒಲಿಂಪಿಕ್ಸ್​ನ್ನು ರಾಜಕೀಯಗೊಳಿಸಿದೆ ಎಂದು ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ತಿಳಿಸಿದ್ದಾರೆ.

ಯುಎಸ್​ನಿಂದ ಛೀಮಾರಿ:  ಅಮೆರಿಕ ಈಗಾಗಲೇ ಚೀನಾ ವಿಂಟರ್ ಒಲಿಂಪಿಕ್ಸ್​ಗೆ ರಾಜತಾಂತ್ರಿಕ ಬಹಿಷ್ಕಾರ ಘೋಷಿಸಿದೆ. ಇನ್ನು ಒಲಿಂಪಿಕ್ಸ್​ನಲ್ಲಿ ಕ್ರೀಡಾಜ್ಯೋತಿ ಹೊತ್ತೊಯ್ಯಲು ಗಲ್ವಾನ್ ಸಂಘರ್ಷದಲ್ಲಿ ಪಾಲ್ಗೊಂಡಿದ್ದ ಕಮಾಂಡರ್​​ನನ್ನು ಆಯ್ಕೆ ಮಾಡಿದ್ದನ್ನು ಯುಎಸ್​ನ ಜನಪ್ರತಿನಿಧಿ, ರಿಪಬ್ಲಿಕನ್ ಪಕ್ಷದ ಸೆನೆಟರ್ ಜಿಮ್ ರಿಶ್ ಖಂಡಿಸಿದ್ದಾರೆ. ಹಾಗೇ, ಚೀನಾವನ್ನು ಟೀಕಿಸಿ, ಇಂಥ ನಿರ್ಧಾರ ಕೈಗೊಳ್ಳುವುದು ನಿಜಕ್ಕೂ ನಾಚಿಕೆಗೇಡು. ಯುಎಸ್ ಭಾರತದ ಸಾರ್ವಭೌಮತ್ವವನ್ನು ಸದಾ ಬೆಂಬಲಿಸುತ್ತದೆ ಎಂದು ಹೇಳಿದ್ದಾರೆ.

2020ರ ಜೂನ್​ 15-16ರಂದು ಗಲ್ವಾನ್​ ಕಣಿವೆಯಲ್ಲಿ ಭಾರತದ ಮೇಲೆ ಚೀನಾ ಸೈನಿಕರು ದಾಳಿ ನಡೆಸಿದ್ದರು. ಗುಂಡಿನ ದಾಳಿ ನಡೆಸದೆ, ದೊಡ್ಡದೊಡ್ಡ ಕೋಲು, ಬಡಿಗೆಗಳಿಂದ ಹೊಡೆದೇ ಯೋಧರನ್ನು ಹತ್ಯೆ ಮಾಡಿದ್ದರು. ಚೀನಾ ದಾಳಿಯಿಂದ ಮೃತಪಟ್ಟ ಸೈನಿಕರ ಸಂಖ್ಯೆಯನ್ನು ಭಾರತ ಬಹಿರಂಗಪಡಿಸಿದ್ದರೂ, ಚೀನಾ ತನ್ನ ಸೈನಿಕರು ಎಷ್ಟು ಮಂದಿ ಮೃತಪಟ್ಟಿದ್ದಾರೆ ಎಂದು ಹೇಳಿರಲಿಲ್ಲ. ಗಲಾಟೆ ನಡೆದ ಒಂದು ವರ್ಷದ ನಂತರ ಚೀನಾ, ಗಲ್ವಾನ್​ ಸಂಘರ್ಷದಲ್ಲಿ ನಾವು 4 ಯೋಧರನ್ನು ಕಳೆದುಕೊಂಡಿದ್ದೇವೆ ಎಂದು ಹೇಳಿತ್ತು. ಆದರೆ ಇದೀಗ ಆಸ್ಟ್ರೇಲಿಯಾ ಪತ್ರಿಕೆ ಕ್ಲಾಕ್ಸೋನ್​ ಒಂದು ತನಿಖಾ ವರದಿ ಪ್ರಕಟಿಸಿದೆ. ಇದರಲ್ಲಿ, ಗಲ್ವಾನ್​ ಸಂಘರ್ಷದ ಸಮಯಲ್ಲಿ ಚೀನಾದ ಸುಮಾರು 38 ಸೈನಿಕರು ಸತ್ತಿದ್ದಾರೆ. ಇವರಲ್ಲಿ ಬಹುತೇಕರು ಗಲ್ವಾನ್​ ನದಿಯನ್ನು ಕತ್ತಲಲ್ಲಿ ದಾಟಲು ಹೋಗಿ, ಅದರಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ವರದಿ ಮಾಡಿದೆ.

ಇದನ್ನು ಓದಿ: ವೈರಲ್ ಆಗಿರುವ ಸೂಟ್​ಕೇಸ್ ಯುವತಿಯ ವಿಡಿಯೋಗೂ ನಮಗೂ ಸಂಬಂಧವಿಲ್ಲ; ಮಣಿಪಾಲ ವಿವಿ ಸ್ಪಷ್ಟನೆ

ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?