AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಕ್ರೇನ್​ ಮೇಲೆ ಯುದ್ಧದ ಕಾರ್ಮೋಡ; ತಾತ್ಕಾಲಿಕವಾಗಿ ದೇಶ ತೊರೆಯುವಂತೆ ಅಲ್ಲಿರುವ ಭಾರತೀಯರಿಗೆ ಸೂಚನೆ ನೀಡಿದ ರಾಯಭಾರಿ ಕಚೇರಿ

ಉಕ್ರೇನ್​ ರಾಜಧಾನಿ ಕೀವ್​ನಲ್ಲಿರುವ ಭಾರತೀಯ ರಾಯಭಾರಿ ಕಚೇರಿ ಇದೀಗ ಒಂದು ಪ್ರಕಟಣೆ ಹೊರಡಿಸಿದೆ. ಉಕ್ರೇನ್​​ನಲ್ಲಿ ಸದ್ಯ ಯುದ್ಧಭೀತಿ ಆವರಿಸಿದ್ದು, ಅನಿಶ್ಚಿತತೆ ಪರಿಸ್ಥಿತಿ ಇದೆ. ಉಕ್ರೇನ್​​ನಲ್ಲಿರುವ ಭಾರತೀಯರು ಅದರಲ್ಲೂ ವಿದ್ಯಾರ್ಥಿಗಳು ಇಲ್ಲಿರುವುದು ಸುರಕ್ಷಿತವಲ್ಲ ಎಂದು ಹೇಳಿದೆ.

ಉಕ್ರೇನ್​ ಮೇಲೆ ಯುದ್ಧದ ಕಾರ್ಮೋಡ; ತಾತ್ಕಾಲಿಕವಾಗಿ ದೇಶ ತೊರೆಯುವಂತೆ ಅಲ್ಲಿರುವ ಭಾರತೀಯರಿಗೆ ಸೂಚನೆ ನೀಡಿದ ರಾಯಭಾರಿ ಕಚೇರಿ
ಉಕ್ರೇನ್​ ಸಹಾಯಕ್ಕೆ ಅಮೆರಿಕ ಸೇನೆ
TV9 Web
| Edited By: |

Updated on: Feb 15, 2022 | 4:37 PM

Share

ದೆಹಲಿ: ರಷ್ಯಾ-ಉಕ್ರೇನ್​ ಗಡಿಯಲ್ಲಿ (Ukraine-Russia Development) ಯುದ್ಧದ ಕಾರ್ಮೋಡ ಕವಿದಿದೆ. ಉಕ್ರೇನ್​ನ್ನು ರಷ್ಯಾ ಮೂರು ಭಾಗಗಳಲ್ಲಿ ಸುತ್ತುವರಿದಿದ್ದು, ಲಕ್ಷಗಳಷ್ಟು ಸೈನಿಕರನ್ನು ನಿಯೋಜಿಸಿದೆ. ಅಪಾರ ಪ್ರಮಾಣದ ಮಿಲಿಟರಿ ಶಸ್ತ್ರಾಸ್ತ್ರಗಳನ್ನು ಅಲ್ಲಿ ಸಂಗ್ರಹಿಸಿಟ್ಟಿದೆ. ಈ ಎಲ್ಲ ಬೆಳವಣಿಗೆಗಳ ಮಧ್ಯೆ ಭಾರತ, ಉಕ್ರೇನ್ (Ukraine)​​ನಲ್ಲಿರುವ ತನ್ನ ಪ್ರಜೆಗಳಿಗೆ ತಾತ್ಕಾಲಿಕವಾಗಿ ದೇಶವನ್ನು ತೊರೆದು ಭಾರತಕ್ಕೆ (India) ಬರುವಂತೆ ಸೂಚಿಸಿದೆ. ಉಕ್ರೇನ್​​ನಲ್ಲಿ ಸುಮಾರು 20 ಸಾವಿರ ಮಂದಿ ಭಾರತೀಯರು ಇದ್ದಾರೆ. ಅದರಲ್ಲಿ ಬಹುತೇಕರು ಅಂದರೆ ಸುಮಾರು 18 ಸಾವಿರ ಮಂದಿ ವಿದ್ಯಾರ್ಥಿಗಳೇ ಆಗಿದ್ದಾರೆ. ಇತ್ತೀಚೆಗೆ ಉಕ್ರೇನ್​​-ರಷ್ಯಾ ಬೆಳವಣಿಗೆ ಬಗ್ಗೆ ಅಲ್ಲಿನ ಸುದ್ದಿ ಮಾಧ್ಯಮವೊಂದು ವಿದ್ಯಾರ್ಥಿಗಳನ್ನು ಒಳಗೊಂಡ ಪ್ಯಾನಲ್​ ಡಿಸ್ಕಶನ್​ ನಡೆಸಿತ್ತು. ಅದರಲ್ಲಿ ಭಾರತೀಯ ವಿದ್ಯಾರ್ಥಿಗಳೂ ಪಾಲ್ಗೊಂಡು, ಸದ್ಯದ ಅನಿಶ್ಚಿತತೆ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.

ಉಕ್ರೇನ್​ ರಾಜಧಾನಿ ಕೀವ್​ನಲ್ಲಿರುವ ಭಾರತೀಯ ರಾಯಭಾರಿ ಕಚೇರಿ ಇದೀಗ ಒಂದು ಪ್ರಕಟಣೆ ಹೊರಡಿಸಿದೆ. ಉಕ್ರೇನ್​​ನಲ್ಲಿ ಸದ್ಯ ಯುದ್ಧಭೀತಿ ಆವರಿಸಿದ್ದು, ಅನಿಶ್ಚಿತತೆ ಪರಿಸ್ಥಿತಿ ಇದೆ. ಉಕ್ರೇನ್​​ನಲ್ಲಿರುವ ಭಾರತೀಯರು ಅದರಲ್ಲೂ ವಿದ್ಯಾರ್ಥಿಗಳು ಇಲ್ಲಿರುವುದು ಸುರಕ್ಷಿತವಲ್ಲ. ತಾತ್ಕಾಲಿಕವಾಗಿ ಭಾರತಕ್ಕೆ ಮರಳುವುದು ಉತ್ತಮ. ಅಲ್ಲದೆ, ಭಾರತಕ್ಕೆ ಮರಳಲು ಆಗದೆ ಇರುವವರು ಆದಷ್ಟು ಮನೆಯಲ್ಲೇ ಇರಿ. ಉಕ್ರೇನ್​ನೊಳಗೂ ಅನಗತ್ಯವಾಗಿ ಪ್ರಯಾಣ ಮಾಡುವುದು ಬೇಡ  ಎಂದು ಹೇಳಿದೆ. ಅಷ್ಟೇ ಅಲ್ಲ, ಉಕ್ರೇನ್​ನಲ್ಲಿರುವ ಭಾರತೀಯರು ಸದ್ಯ ಏನೇ ಕಷ್ಟ ಬಂದರೂ ರಾಯಭಾರಿ ಕಚೇರಿಯನ್ನು ಸಂಪರ್ಕಿಸಿ. ನೀವು ಯಾವ ಪರಿಸ್ಥಿತಿಯಲ್ಲಿ ಇದ್ದೀರಿ ಎಂಬುದನ್ನು ನಮಗೆ ತಿಳಿಸಿ. ನಿಮಗೆ ಎಲ್ಲ ರೀತಿಯ ಸೇವೆಯನ್ನೂ ನಾವೂ ಒದಗಿಸುತ್ತೇವೆ ಎಂದೂ ಹೇಳಿದೆ.

ಭಾರತ ಮತ್ತು ರಷ್ಯಾ ನಡುವೆ ಕಾರ್ಯತಂತ್ರ ಸಂಬಂಧ ಅತ್ಯುತ್ತಮವಾಗಿದೆ. ಇದೇ ಕಾರಣಕ್ಕೆ ಭಾರತ ಇಷ್ಟು ದಿನ ರಷ್ಯಾ -ಉಕ್ರೇನ್​ ಸಂಘರ್ಷದ ಬಗ್ಗೆ ಏನೂ ಹೇಳಿಕೆ ನೀಡಿರಲಿಲ್ಲ. ಉಕ್ರೇನ್​ ಮೇಲೆ ದಂಡೆತ್ತಿ ಹೋಗುವ ಸನ್ನದ್ಧ ಸ್ಥಿತಿಯಲ್ಲಿರುವ ರಷ್ಯಾವನ್ನು ಯುಎಸ್​ ತೀವ್ರವಾಗಿ ಟೀಕಿಸುತ್ತಿದೆ. ಜೋ ಬೈಡನ್​ ಈಗಾಗಲೇ ರಷ್ಯಾ ಅಧ್ಯಕ್ಷರಿಗೆ ಕರೆ ಮಾಡಿ ಖಡಕ್​ ಎಚ್ಚರಿಕೆಯನ್ನೂ ನೀಡಿದ್ದಾರೆ. ಆದರೆ ಇದುವರೆಗೆ ಭಾರತ ಮೌನವಾಗಿಯೇ ಇತ್ತು. ಈಗಲೂ ರಷ್ಯಾವನ್ನು ಟೀಕಿಸದೆ ಇದ್ದರೂ ಕೂಡ ಉಕ್ರೇನ್​ನಲ್ಲಿರುವ ಭಾರತೀಯರಿಗೆ ತಾತ್ಕಾಲಿಕವಾಗಿ ದೇಶ ತೊರೆಯುವಂತೆ ಸೂಚಿಸಿದೆ. ಅಲ್ಲದೆ, ರಷ್ಯಾ ಮತ್ತು ಉಕ್ರೇನ್​ ನಡುವಿನ ಬಿಕ್ಕಟ್ಟನ್ನು ರಾಜತಾಂತ್ರಿಕ ಪ್ರಯತ್ನಗಳ ಮೂಲಕ, ಶಾಂತಿಯುತವಾಗಿ ಪರಿಹರಿಸಿಕೊಳ್ಳಬೇಕು ಎಂದು ಒತ್ತಾಯಿಸಿದೆ.

ಇದನ್ನೂ ಓದಿ: ಹುಬ್ಬಳ್ಳಿಯ ತಮ್ಮ ನೆಚ್ಚಿನ ಹೋಟೆಲ್​ಗೆ ಪತ್ನಿ ಸಮೇತರಾಗಿ ಆಗಮಿಸಿ ಇಷ್ಟದ ತಿಂಡಿ ಸವಿದರು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ