AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಕ್ರೇನ್​ ಮೇಲೆ ಯುದ್ಧದ ಕಾರ್ಮೋಡ; ತಾತ್ಕಾಲಿಕವಾಗಿ ದೇಶ ತೊರೆಯುವಂತೆ ಅಲ್ಲಿರುವ ಭಾರತೀಯರಿಗೆ ಸೂಚನೆ ನೀಡಿದ ರಾಯಭಾರಿ ಕಚೇರಿ

ಉಕ್ರೇನ್​ ರಾಜಧಾನಿ ಕೀವ್​ನಲ್ಲಿರುವ ಭಾರತೀಯ ರಾಯಭಾರಿ ಕಚೇರಿ ಇದೀಗ ಒಂದು ಪ್ರಕಟಣೆ ಹೊರಡಿಸಿದೆ. ಉಕ್ರೇನ್​​ನಲ್ಲಿ ಸದ್ಯ ಯುದ್ಧಭೀತಿ ಆವರಿಸಿದ್ದು, ಅನಿಶ್ಚಿತತೆ ಪರಿಸ್ಥಿತಿ ಇದೆ. ಉಕ್ರೇನ್​​ನಲ್ಲಿರುವ ಭಾರತೀಯರು ಅದರಲ್ಲೂ ವಿದ್ಯಾರ್ಥಿಗಳು ಇಲ್ಲಿರುವುದು ಸುರಕ್ಷಿತವಲ್ಲ ಎಂದು ಹೇಳಿದೆ.

ಉಕ್ರೇನ್​ ಮೇಲೆ ಯುದ್ಧದ ಕಾರ್ಮೋಡ; ತಾತ್ಕಾಲಿಕವಾಗಿ ದೇಶ ತೊರೆಯುವಂತೆ ಅಲ್ಲಿರುವ ಭಾರತೀಯರಿಗೆ ಸೂಚನೆ ನೀಡಿದ ರಾಯಭಾರಿ ಕಚೇರಿ
ಉಕ್ರೇನ್​ ಸಹಾಯಕ್ಕೆ ಅಮೆರಿಕ ಸೇನೆ
TV9 Web
| Edited By: |

Updated on: Feb 15, 2022 | 4:37 PM

Share

ದೆಹಲಿ: ರಷ್ಯಾ-ಉಕ್ರೇನ್​ ಗಡಿಯಲ್ಲಿ (Ukraine-Russia Development) ಯುದ್ಧದ ಕಾರ್ಮೋಡ ಕವಿದಿದೆ. ಉಕ್ರೇನ್​ನ್ನು ರಷ್ಯಾ ಮೂರು ಭಾಗಗಳಲ್ಲಿ ಸುತ್ತುವರಿದಿದ್ದು, ಲಕ್ಷಗಳಷ್ಟು ಸೈನಿಕರನ್ನು ನಿಯೋಜಿಸಿದೆ. ಅಪಾರ ಪ್ರಮಾಣದ ಮಿಲಿಟರಿ ಶಸ್ತ್ರಾಸ್ತ್ರಗಳನ್ನು ಅಲ್ಲಿ ಸಂಗ್ರಹಿಸಿಟ್ಟಿದೆ. ಈ ಎಲ್ಲ ಬೆಳವಣಿಗೆಗಳ ಮಧ್ಯೆ ಭಾರತ, ಉಕ್ರೇನ್ (Ukraine)​​ನಲ್ಲಿರುವ ತನ್ನ ಪ್ರಜೆಗಳಿಗೆ ತಾತ್ಕಾಲಿಕವಾಗಿ ದೇಶವನ್ನು ತೊರೆದು ಭಾರತಕ್ಕೆ (India) ಬರುವಂತೆ ಸೂಚಿಸಿದೆ. ಉಕ್ರೇನ್​​ನಲ್ಲಿ ಸುಮಾರು 20 ಸಾವಿರ ಮಂದಿ ಭಾರತೀಯರು ಇದ್ದಾರೆ. ಅದರಲ್ಲಿ ಬಹುತೇಕರು ಅಂದರೆ ಸುಮಾರು 18 ಸಾವಿರ ಮಂದಿ ವಿದ್ಯಾರ್ಥಿಗಳೇ ಆಗಿದ್ದಾರೆ. ಇತ್ತೀಚೆಗೆ ಉಕ್ರೇನ್​​-ರಷ್ಯಾ ಬೆಳವಣಿಗೆ ಬಗ್ಗೆ ಅಲ್ಲಿನ ಸುದ್ದಿ ಮಾಧ್ಯಮವೊಂದು ವಿದ್ಯಾರ್ಥಿಗಳನ್ನು ಒಳಗೊಂಡ ಪ್ಯಾನಲ್​ ಡಿಸ್ಕಶನ್​ ನಡೆಸಿತ್ತು. ಅದರಲ್ಲಿ ಭಾರತೀಯ ವಿದ್ಯಾರ್ಥಿಗಳೂ ಪಾಲ್ಗೊಂಡು, ಸದ್ಯದ ಅನಿಶ್ಚಿತತೆ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.

ಉಕ್ರೇನ್​ ರಾಜಧಾನಿ ಕೀವ್​ನಲ್ಲಿರುವ ಭಾರತೀಯ ರಾಯಭಾರಿ ಕಚೇರಿ ಇದೀಗ ಒಂದು ಪ್ರಕಟಣೆ ಹೊರಡಿಸಿದೆ. ಉಕ್ರೇನ್​​ನಲ್ಲಿ ಸದ್ಯ ಯುದ್ಧಭೀತಿ ಆವರಿಸಿದ್ದು, ಅನಿಶ್ಚಿತತೆ ಪರಿಸ್ಥಿತಿ ಇದೆ. ಉಕ್ರೇನ್​​ನಲ್ಲಿರುವ ಭಾರತೀಯರು ಅದರಲ್ಲೂ ವಿದ್ಯಾರ್ಥಿಗಳು ಇಲ್ಲಿರುವುದು ಸುರಕ್ಷಿತವಲ್ಲ. ತಾತ್ಕಾಲಿಕವಾಗಿ ಭಾರತಕ್ಕೆ ಮರಳುವುದು ಉತ್ತಮ. ಅಲ್ಲದೆ, ಭಾರತಕ್ಕೆ ಮರಳಲು ಆಗದೆ ಇರುವವರು ಆದಷ್ಟು ಮನೆಯಲ್ಲೇ ಇರಿ. ಉಕ್ರೇನ್​ನೊಳಗೂ ಅನಗತ್ಯವಾಗಿ ಪ್ರಯಾಣ ಮಾಡುವುದು ಬೇಡ  ಎಂದು ಹೇಳಿದೆ. ಅಷ್ಟೇ ಅಲ್ಲ, ಉಕ್ರೇನ್​ನಲ್ಲಿರುವ ಭಾರತೀಯರು ಸದ್ಯ ಏನೇ ಕಷ್ಟ ಬಂದರೂ ರಾಯಭಾರಿ ಕಚೇರಿಯನ್ನು ಸಂಪರ್ಕಿಸಿ. ನೀವು ಯಾವ ಪರಿಸ್ಥಿತಿಯಲ್ಲಿ ಇದ್ದೀರಿ ಎಂಬುದನ್ನು ನಮಗೆ ತಿಳಿಸಿ. ನಿಮಗೆ ಎಲ್ಲ ರೀತಿಯ ಸೇವೆಯನ್ನೂ ನಾವೂ ಒದಗಿಸುತ್ತೇವೆ ಎಂದೂ ಹೇಳಿದೆ.

ಭಾರತ ಮತ್ತು ರಷ್ಯಾ ನಡುವೆ ಕಾರ್ಯತಂತ್ರ ಸಂಬಂಧ ಅತ್ಯುತ್ತಮವಾಗಿದೆ. ಇದೇ ಕಾರಣಕ್ಕೆ ಭಾರತ ಇಷ್ಟು ದಿನ ರಷ್ಯಾ -ಉಕ್ರೇನ್​ ಸಂಘರ್ಷದ ಬಗ್ಗೆ ಏನೂ ಹೇಳಿಕೆ ನೀಡಿರಲಿಲ್ಲ. ಉಕ್ರೇನ್​ ಮೇಲೆ ದಂಡೆತ್ತಿ ಹೋಗುವ ಸನ್ನದ್ಧ ಸ್ಥಿತಿಯಲ್ಲಿರುವ ರಷ್ಯಾವನ್ನು ಯುಎಸ್​ ತೀವ್ರವಾಗಿ ಟೀಕಿಸುತ್ತಿದೆ. ಜೋ ಬೈಡನ್​ ಈಗಾಗಲೇ ರಷ್ಯಾ ಅಧ್ಯಕ್ಷರಿಗೆ ಕರೆ ಮಾಡಿ ಖಡಕ್​ ಎಚ್ಚರಿಕೆಯನ್ನೂ ನೀಡಿದ್ದಾರೆ. ಆದರೆ ಇದುವರೆಗೆ ಭಾರತ ಮೌನವಾಗಿಯೇ ಇತ್ತು. ಈಗಲೂ ರಷ್ಯಾವನ್ನು ಟೀಕಿಸದೆ ಇದ್ದರೂ ಕೂಡ ಉಕ್ರೇನ್​ನಲ್ಲಿರುವ ಭಾರತೀಯರಿಗೆ ತಾತ್ಕಾಲಿಕವಾಗಿ ದೇಶ ತೊರೆಯುವಂತೆ ಸೂಚಿಸಿದೆ. ಅಲ್ಲದೆ, ರಷ್ಯಾ ಮತ್ತು ಉಕ್ರೇನ್​ ನಡುವಿನ ಬಿಕ್ಕಟ್ಟನ್ನು ರಾಜತಾಂತ್ರಿಕ ಪ್ರಯತ್ನಗಳ ಮೂಲಕ, ಶಾಂತಿಯುತವಾಗಿ ಪರಿಹರಿಸಿಕೊಳ್ಳಬೇಕು ಎಂದು ಒತ್ತಾಯಿಸಿದೆ.

ಇದನ್ನೂ ಓದಿ: ಹುಬ್ಬಳ್ಳಿಯ ತಮ್ಮ ನೆಚ್ಚಿನ ಹೋಟೆಲ್​ಗೆ ಪತ್ನಿ ಸಮೇತರಾಗಿ ಆಗಮಿಸಿ ಇಷ್ಟದ ತಿಂಡಿ ಸವಿದರು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ