AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಬೈ ದಾಳಿಯ ಮಾಸ್ಟರ್​ಮೈಂಡ್​ ಹಫೀಜ್​ನನ್ನು ಹಸ್ತಾಂತರಿಸುವಂತೆ ಪಾಕಿಸ್ತಾನವನ್ನು ಕೇಳಿದ ಭಾರತ

ಮುಂಬೈನಲ್ಲಿ ನಡೆದ 26/11 ದಾಳಿಯ ಮಾಸ್ಟರ್ ಮೈಂಡ್ ಮತ್ತು ಲಷ್ಕರ್-ಎ-ತೊಯ್ಬಾದ ಮುಖ್ಯಸ್ಥ ಭಯೋತ್ಪಾದಕ ಹಫೀಜ್ ಸಯೀದ್ ಅನ್ನು ಭಾರತಕ್ಕೆ ಕರೆತರಲು ಭಾರತ ಸರ್ಕಾರವು ಪಾಕಿಸ್ತಾನ ಸರ್ಕಾರದ ಮುಂದೆ ಅಧಿಕೃತ ಬೇಡಿಕೆಯನ್ನು ಇರಿಸಿದೆ. ಲಷ್ಕರ್‌ನಿಂದ ಜೈಷ್​ವರೆಗೆ ಭಯೋತ್ಪಾದಕರನ್ನು ಪೋಷಿಸುವ ಪಾಕಿಸ್ತಾನಕ್ಕೆ ಭಾರತ ಈಗ ದೊಡ್ಡ ಬೇಡಿಕೆ ಇಟ್ಟಿದೆ. ಲಷ್ಕರ್-ಎ-ತೊಯ್ಬಾದ ಸಂಸ್ಥಾಪಕ ಮತ್ತು ಭಾರತದಲ್ಲಿ ಹಲವಾರು ಭಯೋತ್ಪಾದಕ ದಾಳಿಗಳನ್ನು ನಡೆಸಿದ ಹಫೀಜ್ ಸಯೀದ್ ನನ್ನು ನವದೆಹಲಿಗೆ ಹಸ್ತಾಂತರಿಸುವಂತೆ ಭಾರತ ಸರ್ಕಾರವು ಪಾಕಿಸ್ತಾನವನ್ನು ನೇರವಾಗಿ ಕೇಳಿದೆ.

ಮುಂಬೈ ದಾಳಿಯ  ಮಾಸ್ಟರ್​ಮೈಂಡ್​ ಹಫೀಜ್​ನನ್ನು ಹಸ್ತಾಂತರಿಸುವಂತೆ ಪಾಕಿಸ್ತಾನವನ್ನು ಕೇಳಿದ ಭಾರತ
Hafeez
ನಯನಾ ರಾಜೀವ್
|

Updated on: Dec 28, 2023 | 1:44 PM

Share

ಮುಂಬೈನಲ್ಲಿ ನಡೆದ 26/11 ದಾಳಿಯ ಮಾಸ್ಟರ್ ಮೈಂಡ್ ಮತ್ತು ಲಷ್ಕರ್-ಎ-ತೊಯ್ಬಾದ ಮುಖ್ಯಸ್ಥ ಭಯೋತ್ಪಾದಕ ಹಫೀಜ್ ಸಯೀದ್(Hafeez Saeed) ಅನ್ನು ಭಾರತಕ್ಕೆ ಕರೆತರಲು ಭಾರತ ಸರ್ಕಾರವು ಪಾಕಿಸ್ತಾನ ಸರ್ಕಾರದ ಮುಂದೆ ಅಧಿಕೃತ ಬೇಡಿಕೆಯನ್ನು ಇರಿಸಿದೆ. ಲಷ್ಕರ್‌ನಿಂದ ಜೈಷ್​ವರೆಗೆ ಭಯೋತ್ಪಾದಕರನ್ನು ಪೋಷಿಸುವ ಪಾಕಿಸ್ತಾನಕ್ಕೆ ಭಾರತ ಈಗ ದೊಡ್ಡ ಬೇಡಿಕೆ ಇಟ್ಟಿದೆ. ಲಷ್ಕರ್-ಎ-ತೊಯ್ಬಾದ ಸಂಸ್ಥಾಪಕ ಮತ್ತು ಭಾರತದಲ್ಲಿ ಹಲವಾರು ಭಯೋತ್ಪಾದಕ ದಾಳಿಗಳನ್ನು ನಡೆಸಿದ ಹಫೀಜ್ ಸಯೀದ್ ನನ್ನು ನವದೆಹಲಿಗೆ ಹಸ್ತಾಂತರಿಸುವಂತೆ ಭಾರತ ಸರ್ಕಾರವು ಪಾಕಿಸ್ತಾನವನ್ನು ನೇರವಾಗಿ ಕೇಳಿದೆ.

ಪಾಕಿಸ್ತಾನದಿಂದ ಹಫೀಜ್ ಸಯೀದ್ ನನ್ನು ಹಸ್ತಾಂತರಿಸುವಂತೆ ಭಾರತ ಒತ್ತಾಯಿಸಿದೆ. ಪುಲ್ವಾಮಾದಲ್ಲಿ ನಡೆದ ಉಗ್ರರ ದಾಳಿಯ ಮಾಸ್ಟರ್ ಮೈಂಡ್ ಹಫೀಜ್ ಸಯೀದ್ ಎಂದು ಭಾರತ ಹೇಳಿದೆ ಎಂದು ಪಾಕ್ ಮಾಧ್ಯಮಗಳು ಹೇಳಿವೆ. ಈ ಬಗ್ಗೆ ಮೋದಿ ಸರ್ಕಾರ ಪಾಕಿಸ್ತಾನದ ವಿದೇಶಾಂಗ ಸಚಿವಾಲಯಕ್ಕೆ ಔಪಚಾರಿಕ ಅರ್ಜಿಯನ್ನೂ ನೀಡಿದೆ. ಭಾರತದ ಈ ಬೇಡಿಕೆಯ ನಂತರ ಇದೀಗ ಪಾಕಿಸ್ತಾನ ಸರ್ಕಾರಕ್ಕೆ ಸಂಕಷ್ಟ ಎದುರಾಗಿದೆ.

ಪಾಕಿಸ್ತಾನದ ವಿದೇಶಾಂಗ ಸಚಿವಾಲಯವು ಭಾರತದ ಬೇಡಿಕೆಯನ್ನು ಇನ್ನೂ ಖಚಿತಪಡಿಸಿಲ್ಲ ಅಥವಾ ನಿರಾಕರಿಸಿಲ್ಲ ಎಂದು ಪಾಕಿಸ್ತಾನಿ ಮಾಧ್ಯಮಗಳು ವರದಿ ಮಾಡಿವೆ. ಪ್ರಸ್ತುತ ಭಾರತ ಮತ್ತು ಪಾಕಿಸ್ತಾನದ ನಡುವೆ ಯಾವುದೇ ಹಸ್ತಾಂತರ ಒಪ್ಪಂದವಿಲ್ಲ. ಪಾಕಿಸ್ತಾನಿ ವಿಶ್ಲೇಷಕ ಮತ್ತು ಹಿರಿಯ ಪತ್ರಕರ್ತ ಐಜಾಜ್ ಸಯೀದ್ ಪ್ರಕಾರ, ಚುನಾವಣೆಗೆ ಮುನ್ನ ಹಫೀಜ್ ಸಯೀದ್‌ನನ್ನು ಹಸ್ತಾಂತರಿಸಲು ಪಾಕಿಸ್ತಾನ ಯಾವುದೇ ಕ್ರಮ ಕೈಗೊಳ್ಳುವ ಸಾಧ್ಯತೆಯಿಲ್ಲ.

ಮತ್ತಷ್ಟು ಓದಿ: Hafiz Saeed 26/11ರ ಮಾಸ್ಟರ್ ಮೈಂಡ್ ಉಗ್ರ ಹಫೀಜ್ ಸಯೀದ್‌ಗೆ 31 ವರ್ಷ ಜೈಲು ಶಿಕ್ಷೆ ಪ್ರಕಟಿಸಿದ ಪಾಕ್ ಕೋರ್ಟ್

ಸದ್ಯ ಹಫೀಜ್ ಸಯೀದ್ ಜೈಲಿನಲ್ಲಿದ್ದಾನೆ ಎಂದು ಅವರು ಹೇಳಿದ್ದಾರೆ. ಹಫೀಜ್ ಸಯೀದ್ ಪಾಕಿಸ್ತಾನದ ಚುನಾವಣೆಗಳ ಮೇಲೆ ಪ್ರಭಾವ ಬೀರಬಹುದು ಎಂದು ಐಜಾಜ್ ಹೇಳಿದ್ದಾರೆ.

ಹಫೀಜ್ ಸಯೀದ್ ಅವರ ಪಕ್ಷ ಪಾಕಿಸ್ತಾನ್ ಮರ್ಕಝಿ ಮುಸ್ಲಿಂ ಲೀಗ್ ಮುಂದಿನ ವರ್ಷ ಪಾಕಿಸ್ತಾನದಲ್ಲಿ ನಡೆಯಲಿರುವ ಸಾರ್ವತ್ರಿಕ ಚುನಾವಣೆಯಲ್ಲಿ ಪಾಲ್ಗೊಳ್ಳುವುದಾಗಿ ಘೋಷಿಸಿರುವ ಸಂದರ್ಭದಲ್ಲೇ ಭಾರತ ಈ ಬೇಡಿಕೆಯನ್ನು ಮುಂದಿಟ್ಟಿದೆ. ಹಫೀಜ್ ಸಯೀದ್ 26/11 ಮುಂಬೈ ದಾಳಿಯ ಮಾಸ್ಟರ್ ಮೈಂಡ್ ಕೂಡ. ವಿಶ್ವಸಂಸ್ಥೆ ಕೂಡ ಹಫೀಜ್ ಸಯೀದ್ ನನ್ನು ಭಯೋತ್ಪಾದಕ ಎಂದು ಘೋಷಿಸಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ನನ್ನ ಅತ್ತೆ ಮಕ್ಕಳು ಜೀತಕ್ಕೆ ಇದ್ದರು: ಭಾವುಕವಾಗಿ ಮಾತನಾಡಿದ ದುನಿಯಾ ವಿಜಯ್
ನನ್ನ ಅತ್ತೆ ಮಕ್ಕಳು ಜೀತಕ್ಕೆ ಇದ್ದರು: ಭಾವುಕವಾಗಿ ಮಾತನಾಡಿದ ದುನಿಯಾ ವಿಜಯ್
ಬೆಂಗಳೂರಿನಲ್ಲಿಲ್ಲೂ ಗನ್​ ತೋರಿಸಿ ಬಂಗಾರದ ಅಂಗಡಿ ದರೋಡೆ
ಬೆಂಗಳೂರಿನಲ್ಲಿಲ್ಲೂ ಗನ್​ ತೋರಿಸಿ ಬಂಗಾರದ ಅಂಗಡಿ ದರೋಡೆ
ಜೈಲಿಗೆ ಕರೆದೊಯ್ಯವಾಗ ಅಡ್ಡಹಾಕಿದ ರಾಜೀವ್ ಗೌಡನ ಬೆಂಬಲಿಗರಿಗೆ ಲಾಠಿ ರುಚಿ!
ಜೈಲಿಗೆ ಕರೆದೊಯ್ಯವಾಗ ಅಡ್ಡಹಾಕಿದ ರಾಜೀವ್ ಗೌಡನ ಬೆಂಬಲಿಗರಿಗೆ ಲಾಠಿ ರುಚಿ!
ಏಮ್ಸ್ ಆಸ್ಪತ್ರೆಯೊಳಗೆ ಲಿಫ್ಟ್​ನಲ್ಲೇ ಮಾಂಗಲ್ಯ ದೋಚಿ ಕಳ್ಳ ಪರಾರಿ
ಏಮ್ಸ್ ಆಸ್ಪತ್ರೆಯೊಳಗೆ ಲಿಫ್ಟ್​ನಲ್ಲೇ ಮಾಂಗಲ್ಯ ದೋಚಿ ಕಳ್ಳ ಪರಾರಿ
ವಿಜಯಪುರ ರಾಬರಿ: ಟಾರ್ಗೆಟ್ಟೇ ಬೇರೆ, ದರೋಡೆ ಮಾಡಿದ ಬಂಗಾರದ ಅಂಗಡಿಯೇ ಬೇರೆ!
ವಿಜಯಪುರ ರಾಬರಿ: ಟಾರ್ಗೆಟ್ಟೇ ಬೇರೆ, ದರೋಡೆ ಮಾಡಿದ ಬಂಗಾರದ ಅಂಗಡಿಯೇ ಬೇರೆ!
10ನೇ ದಿನ ಉತ್ಖನನ ವೇಳೆ ಲಕ್ಕುಂಡಿಯಲ್ಲಿ ಮತ್ತೊಂದು ಪ್ರಾಚ್ಯಾವಶೇಷ ಪತ್ತೆ!
10ನೇ ದಿನ ಉತ್ಖನನ ವೇಳೆ ಲಕ್ಕುಂಡಿಯಲ್ಲಿ ಮತ್ತೊಂದು ಪ್ರಾಚ್ಯಾವಶೇಷ ಪತ್ತೆ!
ಕಾವ್ಯಾ ಗೌಡ ಪತಿಯಿಂದ ಕೊಲೆ ಬೆದರಿಕೆ? ಎಲ್ಲವನ್ನೂ ವಿವರಿಸಿದ ಸಂಬಂಧಿ ಪ್ರೇಮಾ
ಕಾವ್ಯಾ ಗೌಡ ಪತಿಯಿಂದ ಕೊಲೆ ಬೆದರಿಕೆ? ಎಲ್ಲವನ್ನೂ ವಿವರಿಸಿದ ಸಂಬಂಧಿ ಪ್ರೇಮಾ
ಹಲ್ಲೆ, ಅತ್ಯಾಚಾರ ಬೆದರಿಕೆ, ಕಳ್ಳತನ ಆರೋಪ: ನಟಿ ಕಾವ್ಯಾ ಗೌಡ ಹೇಳಿದ್ದೇನು?
ಹಲ್ಲೆ, ಅತ್ಯಾಚಾರ ಬೆದರಿಕೆ, ಕಳ್ಳತನ ಆರೋಪ: ನಟಿ ಕಾವ್ಯಾ ಗೌಡ ಹೇಳಿದ್ದೇನು?
ಶಿವಮೊಗ್ಗ: ಶಾಲೆಯಲ್ಲಿ ನೀಡಿದ ಮಾತ್ರೆ ನುಂಗಿ 59 ವಿದ್ಯಾರ್ಥಿಗಳು ಅಸ್ವಸ್ಥ
ಶಿವಮೊಗ್ಗ: ಶಾಲೆಯಲ್ಲಿ ನೀಡಿದ ಮಾತ್ರೆ ನುಂಗಿ 59 ವಿದ್ಯಾರ್ಥಿಗಳು ಅಸ್ವಸ್ಥ
'ಮಿನಿ ಕಾಶ್ಮೀರ'ದಲ್ಲಿ ಮಕ್ಕಳ ಆಟ
'ಮಿನಿ ಕಾಶ್ಮೀರ'ದಲ್ಲಿ ಮಕ್ಕಳ ಆಟ