AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕಿಸ್ತಾನದ ನಾಲ್ಕು ವಾಯುನೆಲೆಗಳ ಮೇಲೆ ದಾಳಿ ನಡೆಸಿದ ಭಾರತ

ಪಾಕಿಸ್ತಾನ ಮತ್ತು ಭಾರತದ ನಡುವೆ ಭಾರೀ ಸಂಘರ್ಷಗಳು ನಡೆಯುತ್ತಿದೆ. ಭಾರತ ನಮ್ಮನ್ನು ಏನು ಮಾಡಲು ಸಾಧ್ಯವಿಲ್ಲ ಎಂದು ಅಹಂಕಾರ ಪಡುತ್ತಿದ್ದ ಪಾಕ್​​​ಗೆ ಭಾರತದ ಸೇನೆ ತಕ್ಕ ಪಾಠ ಕಲಿಸಿದೆ. ಆಪರೇಷನ್​​ ಸಿಂದೂರ್ ಮೂಲಕ ಪಾಕ್​​​ ಮೇಲೆ ದಾಳಿ ನಡೆಸಲು ಪ್ರಾರಂಭಿಸಿದ ಭಾರತ ಇಂದಿಗೂ ದಾಳಿಯ ಮೇಲೆ ದಾಳಿ ನಡೆಸುತ್ತಿದೆ. ಇದೀಗ ಭಾರತ ಪಾಕ್​​​ನ ನಾಲ್ಕು ವಾಯುನೆಲೆಗಳನ್ನು ಗುರಿಯಾಗಿಸಿ ದಾಳಿ ನಡೆಸಿದೆ ಎಂದು ಮೂಲಗಳು ತಿಳಿಸಿದೆ.

ಪಾಕಿಸ್ತಾನದ ನಾಲ್ಕು ವಾಯುನೆಲೆಗಳ ಮೇಲೆ ದಾಳಿ ನಡೆಸಿದ ಭಾರತ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on:May 10, 2025 | 9:52 AM

Share

ಭಾರತ ಮತ್ತು ಪಾಕಿಸ್ತಾನದ ನಡುವೆ ದಾಳಿ, ಪ್ರತಿದಾಳಿಗಳು ನಡೆಯುತ್ತಿದೆ. ಪಾಕಿಸ್ತಾನ ಉಗ್ರರು ಪಹಲ್ಗಾಮ್ (Pahalgam Terror Attack)  ಮೇಲೆ ದಾಳಿ ನಡೆಸಿ ಭಾರತೀಯ ನಾಗರಿಕರನ್ನು ಹತ್ಯೆ ಮಾಡಿದ ನಂತರ ಪಾಕ್​​​ ಹಾಗೂ ಭಾರತದ ನಡುವೆ ಭಾರೀ ಸಂಘರ್ಷಕ್ಕೆ ಕಾರಣವಾಗಿದೆ. ಭಾರತ ನಮ್ಮನ್ನು ಏನು ಮಾಡಲು ಸಾಧ್ಯವಿಲ್ಲ ಎಂದು ಅಹಂಕಾರ ಪಡುತ್ತಿದ್ದ ಪಾಕ್​​​ಗೆ ಭಾರತದ ಸೇನೆ ತಕ್ಕ ಪಾಠ ಕಲಿಸಿದೆ. ಆಪರೇಷನ್​​ ಸಿಂದೂರ್ ಮೂಲಕ ಉಗ್ರರನ್ನು ಗುರಿಯಾಗಿಸಿ ಪಾಕ್​​​​ ಮೇಲೆ ಭಾರತ ಕಳೆದ ಎರಡು – ಮೂರು ದಿನಗಳಿಂದ ದಾಳಿ ನಡೆಸಿದೆ. ಪಾಕ್ ಕೂಡ ಭಾರತದ ಅನೇಕ ಕಡೆ ದಾಳಿ ನಡೆಸಿದೆ.ಆದರೆ ಅದನ್ನು ಭಾರತದ ಸೈನ್ಯ ಹಿಮ್ಮೆಟ್ಟಿಸಿದೆ. ಇದೀಗ ಭಾರತ ಪಾಕ್​​​ನ ನಾಲ್ಕು ವಾಯುನೆಲೆಗಳನ್ನು (Pakistan air bases ) ಗುರಿಯಾಗಿಸಿ ದಾಳಿ ನಡೆಸಿದೆ ಎಂದು ಮೂಲಗಳು ತಿಳಿಸಿದೆ.

ಶನಿವಾರ ಅಂದರೆ ಇಂದು ಮುಂಜಾನೆ, ಭಾರತ ಪಾಕಿಸ್ತಾನದ ಹಲವಾರು ಸ್ಥಳಗಳಲ್ಲಿ ದಾಳಿ ನಡೆಸಿದೆ. ಪಾಕಿಸ್ತಾನದ ಹಲವು ಕಡೆ ಸ್ಫೋಟಗಳ ಶಬ್ದಗಳು ಕೇಳಿಬಂದಿದೆ. ಪಾಕಿಸ್ತಾನವು ತನ್ನ ಮೂರು ವಾಯುನೆಲೆಗಳನ್ನು ಗುರಿಯಾಗಿಸಿಕೊಂಡಿದೆ ಎಂದು ಹೇಳಿಕೊಂಡಿದೆ. ರಾಜಧಾನಿ ಇಸ್ಲಾಮಾಬಾದ್ ಬಳಿಯ ರಾವಲ್ಪಿಂಡಿಯ ಗ್ಯಾರಿಸನ್ ನಗರದಲ್ಲಿರುವ ನೂರ್ ಖಾನ್ ವಾಯುನೆಲೆ, ಚಕ್ವಾಲ್ ನಗರದ ಮುರಿಯ್ ವಾಯುನೆಲೆ ಮತ್ತು ಪೂರ್ವ ಪಂಜಾಬ್ ಪ್ರಾಂತ್ಯದ ಜಾಂಗ್ ಜಿಲ್ಲೆಯ ರಫಿಕಿ ವಾಯುನೆಲೆಗಳ ಮೇಲೆ ಭಾರತ ದಾಳಿಯನ್ನು ನಡೆಸಿದೆ ಎಂದು ಹೇಳಲಾಗಿದೆ.

ಇದನ್ನೂ ಓದಿ
Image
ಪಾಕಿಸ್ತಾನಕ್ಕೆ ಸಾಲ ನೀಡುವ ನಿಲುವಳಿಗೆ ಭಾರತ ಮತದಾನ ಮಾಡದ್ದು ಯಾಕೆ?
Image
ಭಾರತದ ವಿರೋಧದ ನಡುವೆಯೂ ಪಾಕಿಸ್ತಾನಕ್ಕೆ ಸಾಲ ಕೊಟ್ಟ IMF
Image
ಪಾಕ್​ ಜನ ಪ್ರಧಾನಿ ಶೆಹಬಾಜ್ ವಿರುದ್ಧ ಗರಂ ಆಗಿದ್ದೇಕೆ?
Image
ಭಾರತದಿಂದ ಎರಡನೇ ಬಾರಿ ದಾಳಿ, ಅಕ್ಷರಶಃ ನಲುಗಿದ ಪಾಕ್, ಏನೇನಾಯ್ತು?

ರಕ್ಷಣಾ ಮೂಲಗಳ ಪ್ರಕಾರ, ಸೇನೆಯು ಪಾಕಿಸ್ತಾನದ ಪೋಸ್ಟ್‌ಗಳು ಮತ್ತು ಭಯೋತ್ಪಾದಕ ಉಡಾವಣಾ ಪ್ಯಾಡ್‌ಗಳನ್ನು ನಾಶಪಡಿಸಿದೆ. ಈಗಾಗಲೇ ಭಾರತ ಶ್ರೀನಗರದಲ್ಲಿ ಆಕಾಶದೆತ್ತರಕ್ಕೆ ಚಿಮ್ಮುವ ಕ್ಷಿಪಣಿ ವ್ಯವಸ್ಥೆಗಳನ್ನು ಸಕ್ರಿಯಗೊಳಿಸಲಾಗಿದೆ ಎಂದು ಸೇನೆ ಹೇಳಿದೆ. ಎಲ್‌ಒಸಿಯಲ್ಲಿ ಭಾರೀ ಗುಂಡಿನ ಚಕಮಕಿ ನಡೆಯುತ್ತಿದೆ. ಪಾಕಿಸ್ತಾನವು ಭಾರತೀಯ ನಗರಗಳು ಮತ್ತು ಭದ್ರತಾ ತಾಣಗಳ ಮೇಲೆ ಗುರಿಯಾಗಿಸಿಕೊಂಡು ನಿರಂತರವಾಗಿ ದಾಳಿ ನಡೆಸುತ್ತಿದೆ. ಇದಕ್ಕೆ ಪ್ರತಿಯಾಗಿ ಭಾರತ ಪ್ರತಿದಾಳಿಯನ್ನು ನಡೆಸಿದೆ. ಶುಕ್ರವಾರ, ಪಾಕಿಸ್ತಾನವು ಜಮ್ಮು ಮತ್ತು ಕಾಶ್ಮೀರದಿಂದ ಗುಜರಾತ್‌ವರೆಗಿನ ಗಡಿಯುದ್ದಕ್ಕೂ 26 ಸ್ಥಳಗಳನ್ನು ಗುರಿಯಾಗಿಸಲು ಸಶಸ್ತ್ರ ಡ್ರೋನ್‌ಗಳನ್ನು ಕಳಿಸಿದೆ. ಇನ್ನು ವಿಮಾನ ನಿಲ್ದಾಣಗಳು ಮತ್ತು ವಾಯುನೆಲೆಗಳು ಸೇರಿದಂತೆ ಪ್ರಮುಖ ನೆಲೆಗಳ ಮೇಲೆ ಎರಡನೇ ದಿನದ ರಾತ್ರಿಯೂ ದಾಳಿಯನ್ನು ನಡೆಸಿದೆ, ಆದರೆ ಭಾರತೀಯ ಪಡೆ ಅದನ್ನು ವಿಫಲಗೊಳಿಸಿದೆ ಎಂದು ರಕ್ಷಣಾ ಮೂಲಗಳು ತಿಳಿಸಿದೆ.

ಇದನ್ನೂ ಓದಿ: ಭಾರತ ಪಾಕಿಸ್ತಾನ ಉದ್ವಿಗ್ನತೆ: ಕಳೆದ 12 ಗಂಟೆ ಅವಧಿಯಲ್ಲಿ ಏನೇನಾಯ್ತು? ಇಲ್ಲಿವೆ ಮುಖ್ಯಾಂಶಗಳು

ಗುರುವಾರ ರಾತ್ರಿ, ದೇಶದ ಉತ್ತರ ಮತ್ತು ಪಶ್ಚಿಮ ಭಾಗಗಳ 15 ನಗರಗಳಲ್ಲಿನ ಮಿಲಿಟರಿ ತಾಣಗಳನ್ನು ಗುರಿಯಾಗಿಸಿ ಪಾಕಿಸ್ತಾನ ದಾಳಿಯನ್ನು ನಡೆಸಿತ್ತು. ಆದರೆ ಭಾರತದ ಸೇನೆ ಅದನ್ನು ವಿಫಲಗೊಳಿಸಿದೆ. ನಂತರ ಭಾರತ ಪಾಕ್ ಮೇಲೆ ಡ್ರೋನ್‌ಗಳು ಮತ್ತು ಕ್ಷಿಪಣಿ ದಾಳಿಯನ್ನು ನಡೆಸಿದೆ.

ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:51 am, Sat, 10 May 25

Follow Us
Akshay Pallamajalu
Akshay Pallamajalu

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More