AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ-ಬಾಂಗ್ಲಾದೇಶ ನಡುವೆ ಇಂದಿನಿಂದ ಮತ್ತೆ ರೈಲು ಸಂಚಾರ

ಭಾರತ-ಬಾಂಗ್ಲಾದೇಶ ನಡುವೆ ಸಂಚರಿಸುವ ಮೂರನೇ ರೈಲಾದ ಮಿಥಾಲಿ ಎಕ್ಸ್​ಪ್ರೆಸ್​ ಜೂನ್ 1ರಿಂದ ಸಂಚಾರ ಆರಂಭಿಸಲಿದೆ.

ಭಾರತ-ಬಾಂಗ್ಲಾದೇಶ ನಡುವೆ ಇಂದಿನಿಂದ ಮತ್ತೆ ರೈಲು ಸಂಚಾರ
ಕೊಲ್ಕತ್ತಾ-ಢಾಕಾ ರೈಲು
TV9 Web
| Edited By: |

Updated on:May 29, 2022 | 9:26 AM

Share

ಕೊಲ್ಕತ್ತಾ: ಕೊವಿಡ್-19 ಪಿಡುಗಿನ ಕಾರಣದಿಂದ ರದ್ದಾಗಿದ್ದ ಭಾರತ ಮತ್ತು ಬಾಂಗ್ಲಾದೇಶ ನಡುವೆ ರೈಲು ಸಂಚಾರವು (India Bangladesh Train Service) ಇಂದಿನಿಂದ ಮತ್ತೆ ಆರಂಭವಾಗಿದೆ. ಸರ್ಕಾರದ ಈ ನಡೆಯು ಭಾರತ ಮತ್ತು ಬಾಂಗ್ಲಾದೇಶ ಎರಡೂ ದೇಶಗಳ ಜನರಿಗೆ ಅನುಕೂಲ ಕಲ್ಪಿಸಲಿದೆ. ಕೊಲ್ಕತ್ತಾ-ಢಾಕಾ-ಕೊಲ್ಕತ್ತಾ ಮೈತ್ರಿ ಎಕ್ಸ್​ಪ್ರೆಸ್​, ಕೊಲ್ಕತ್ತಾ-ಖುಲ್​ನಾ-ಕೊಲ್ಕತ್ತಾ ಬಂಧನ್ ಎಕ್ಸ್​ಪ್ರೆಸ್​ ರೈಲುಗಳು ಮೇ 29ರಿಂದ ಮತ್ತೆ ಸಂಚಾರ ಆರಂಭಿಸಲಿವೆ ಎಂದು ಈಶಾನ್ಯ ರೈಲ್ವೆಯ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಏಕಲವ್ಯ ಚಕ್ರವರ್ತಿ ಮಾಹಿತಿ ನೀಡಿದರು.

ಭಾರತ-ಬಾಂಗ್ಲಾದೇಶ ನಡುವೆ ಸಂಚರಿಸುವ ಮೂರನೇ ರೈಲಾದ ಮಿಥಾಲಿ ಎಕ್ಸ್​ಪ್ರೆಸ್​ ಜೂನ್ 1ರಿಂದ ಸಂಚಾರ ಆರಂಭಿಸಲಿದ್ದು ನ್ಯೂ ಜಲ್​ಗೈಪುರಿಯಿಂದ ಢಾಕಾಗೆ ಪ್ರಯಾಣ ಬೆಳೆಸಲಿದೆ. ಈ ಮೂರೂ ರೈಲುಗಳ ಎಲ್ಲ ಟಿಕೆಟ್​ಗಳು ಈಗಾಗಲೇ ಮಾರಾಟವಾಗಿವೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಅವಧಿಗೆ ಮೊದಲೇ ನಿಲ್ದಾಣ ತಲುಪಿದ ರೈಲು: ಪ್ರಯಾಣಿಕರ ಡ್ಯಾನ್ಸ್

ನಾವು ಪ್ರಯಾಣಿಸುವಾಗ ಪ್ರತಿ ಬಾರಿಯೂ ನಾವು ತಲುಪಬೇಕಾದ ಸ್ಥಳವನ್ನು ಸರಿಯಾದ ಸಮಯಕ್ಕೆ ತಲುಪುತ್ತೇವೆ ಎಂದು ಹೇಳಲು ಸಾಧ್ಯವಿಲ್ಲ. ಅದರಲ್ಲೂ ಬಸ್, ಕ್ಯಾಬ್, ರೈಲಿನಲ್ಲಿ ಓಡಾಡುವಾಗ ಸಮಯದಲ್ಲಿ ವ್ಯತ್ಯಾಸವಾಗುತ್ತಲೇ ಇರುತ್ತದೆ. ಆದರೆ, ರೈಲು ತನ್ನ ನಿಗದಿತ ಸಮಯಕ್ಕಿಂತ 20 ನಿಮಿಷಗಳ ಮೊದಲು ನಿಲ್ದಾಣವನ್ನು ತಲುಪಿದ ಹಿನ್ನೆಲೆಯಲ್ಲಿ ಬಹಳ ಖುಷಿಯಾದ ಪ್ರಯಾಣಿಕರು ರೈಲ್ವೆ ಸ್ಟೇಷನ್​ನಲ್ಲೇ (Railway Station) ಡ್ಯಾನ್ಸ್​ ಮಾಡಿ, ಸಂಭ್ರಮಾಚರಣೆ ಮಾಡಿರುವ ವಿಡಿಯೋ ಇದೀಗ ವೈರಲ್ (Video Viral) ಆಗಿದೆ. ಈ ವಿಡಿಯೋವನ್ನು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ (Ashwini Vaishnaw) ಕೂಡ ಟ್ವಿಟರ್​ನಲ್ಲಿ ಶೇರ್ ಮಾಡಿಕೊಂಡಿದ್ದಾರೆ.

ಬಾಂದ್ರಾ-ಹರಿದ್ವಾರ ರೈಲು ಬುಧವಾರ ರಾತ್ರಿ 10.15ಕ್ಕೆ ಮಧ್ಯಪ್ರದೇಶದ ರತ್ಲಾಮ್ ನಿಲ್ದಾಣಕ್ಕೆ ಬಂದಾಗ ಖುಷಿಯಾದ ಪ್ರಯಾಣಿಕರು ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ ಡ್ಯಾನ್ಸ್​ ಮಾಡಿದರು. ಈ ವಿಡಿಯೋವನ್ನು ಸಚಿವ ಅಶ್ವಿನಿ ವೈಷ್ಣವ್ ಶೇರ್ ಮಾಡಿಕೊಂಡಿದ್ದಾರೆ. ಅಲ್ಲದೆ, ಪ್ರಯಾಣಿಕರಿಗೆ 10 ನಿಮಿಷಗಳ ಸಾಮಾನ್ಯ ನಿಲುಗಡೆ ಸಮಯಕ್ಕಿಂತ ಸಾಕಷ್ಟು ಹೆಚ್ಚು ಸಮಯ ಸಿಕ್ಕಿದ್ದರಿಂದ ಅವರೆಲ್ಲರೂ ರೈಲಿನಿಂದ ಪ್ಲಾಟ್​ಫಾರ್ಮ್​ಗೆ ಇಳಿದು ಗರ್ಬಾ ನೃತ್ಯ ಪ್ರದರ್ಶಿಸುತ್ತಿರುವುದನ್ನು ವಿಡಿಯೋ ಮಾಡಿಕೊಳ್ಳಲಾಗಿದೆ.

ಕರ್ನಾಟಕದ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ. ದೇಶದ ಇತರ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:26 am, Sun, 29 May 22

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?