AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದಿಂದ ಕೊರೊನಾ ಲಸಿಕೆ ರಫ್ತಿಗೆ ಏಳು ತಿಂಗಳು ನಿಷೇಧ

ಈ ಲಸಿಕೆ ತುರ್ತು ಬಳಕೆಗೆ ಭಾನುವಾರ ಅನುಮತಿ ಸಿಕ್ಕಿದೆ. ಭಾರತದ ಜನರಿಗೆ ಮೊದಲು ಔಷಧ ಸಿಗುವಂತೆ ನೋಡಿಕೊಳ್ಳಲು ಏಳು ತಿಂಗಳ ಕಾಲ ಭಾರತ ಔಷಧ ರಫ್ತು ಮಾಡುವಂತಿಲ್ಲ.

ಭಾರತದಿಂದ ಕೊರೊನಾ ಲಸಿಕೆ ರಫ್ತಿಗೆ ಏಳು ತಿಂಗಳು ನಿಷೇಧ
ಪ್ರಾತಿನಿಧಿಕ ಚಿತ್ರ
ರಾಜೇಶ್ ದುಗ್ಗುಮನೆ
| Edited By: |

Updated on: Jan 04, 2021 | 9:48 PM

Share

ನವದೆಹಲಿ: ಆಕ್ಸ್​ಫರ್ಡ್​ ವಿಶ್ವವಿದ್ಯಾಲಯ ಹಾಗೂ-ಆಸ್ಟ್ರಾಜೆನೆಕಾ ಅಭಿವೃದ್ಧಿಪಡಿಸಿದ ಕೊರೊನಾ ಲಸಿಕೆಯನ್ನು ಸೆರಮ್​ ಇನ್​​ಸ್ಟಿಟ್ಯೂಟ್​ ಆಫ್​ ಇಂಡಿಯಾ ಭಾರತದಲ್ಲಿ ತಯಾರಿಸುತ್ತಿದೆ. ಆದರೆ, ಇದನ್ನು ಏಳು ತಿಂಗಳು ರಫ್ತು ಮಾಡಲು ಅನುಮತಿ ನೀಡುವುದಿಲ್ಲ ಎಂದು ಸೆರಮ್​ ಇನ್​​ಸ್ಟಿಟ್ಯೂಟ್​ ಆಫ್​ ಇಂಡಿಯಾದ ಮುಖ್ಯಸ್ಥ ಅದರ್​ ಪೂನಾವಾಲಾ ತಿಳಿಸಿದ್ದಾರೆ.

ಆಕ್ಸ್​ಫರ್ಡ್​ ವಿಶ್ವವಿದ್ಯಾಲಯ ಹಾಗೂ-ಆಸ್ಟ್ರಾಜೆನೆಕಾ ಅಭಿವೃದ್ಧಿಪಡಿಸಿದ ಕೊರೊನಾ ಲಸಿಕೆ ತುರ್ತು ಬಳಕೆಗೆ ಭಾನುವಾರ ಅನುಮತಿ ಸಿಕ್ಕಿದೆ. ಭಾರತದ ಜನರಿಗೆ ಮೊದಲು ಔಷಧ ಸಿಗುವಂತೆ ನೋಡಿಕೊಳ್ಳಲು ಏಳು ತಿಂಗಳ ಕಾಲ ಭಾರತ ಔಷಧ ರಫ್ತು ಮಾಡುವಂತಿಲ್ಲ. ಅಲ್ಲದೆ, ಖಾಸಗಿ ಮಾರುಕಟ್ಟೆಗೆ ಇದನ್ನು ಮಾರುವಂತಿಲ್ಲ ಎನ್ನುವ ಷರತ್ತು ವಿಧಿಸಲಾಗಿದೆ ಎಂದಿರುವ ಪೂನಾವಾಲಾ ಭಾರತ ಸರ್ಕಾರಕ್ಕೆ ಮಾತ್ರ ಔಷಧ ನೀಡುತ್ತಿದ್ದೇವೆ ಎಂದು ತಿಳಿಸಿದ್ದಾರೆ.

ವಿಶ್ವದ ಅತಿ ದೊಡ್ಡ ಔಷಧ ಉತ್ಪಾದನಾ ಸಂಸ್ಥೆ ಸೆರಮ್​ ಇನ್​ಸ್ಟಿಟ್ಯೂಟ್​ ಭಾರತದಲ್ಲಿ ಕೊರೊನಾ ಔಷಧ ಉತ್ಪಾದನೆ ಮಾಡಲಿದ್ದು, ಇದರಲ್ಲಿ ಬಹುತೇಕ ಔಷಧವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರಗಳು ಕಾಯ್ದಿರಿಸಿಕೊಂಡಿವೆ. ಹೀಗಾಗಿ, ಬಡ ರಾಷ್ಟ್ರಗಳು ಔಷಧ ಪಡೆಯಲು ಕೆಲ ವರ್ಷ ಕಾಯಬೇಕಿದೆ.

ಆಕ್ಸ್​​ಫರ್ಡ್​ ವಿಜ್ಞಾನಿಗಳು ಸಂಶೋಧಿಸಿರುವ ಕೊರೊನಾ ಔಷಧ ಮಾನವ ಬಳಕೆಗೆ ಸಿದ್ಧ!

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ