AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ ಬೇಕಾ, ಇಂಡಿಯಾ ಇರಲಿನಾ? ದೇಶಕ್ಕೆ ಯಾವುದು ಅಧಿಕೃತ ಹೆಸರು?

ದೆಹಲಿ: ಭಾರತವನ್ನು ಹಿಂದೂಸ್ತಾನ, ಇಂಡಿಯಾ, ಭಾರತ, ಭರತ ಭೂಮಿ, ಭಾರತವರ್ಷ ಎಂಬ ಹಲವು ಹೆಸರುಗಳಿಂದ ಕರೆಯಲಾಗುತ್ತದೆ. ಬ್ರಿಟಿಷರ ಆಡಳಿತಾವಧಿಯಲ್ಲಿ ಭಾರತವನ್ನು ಇಂಡಿಯಾ ಎಂದು ಕರೆಯುತ್ತಿದ್ದರು. ಅದಕ್ಕೂ ಮುನ್ನ ಮೊಘಲರು ಹಿಂದೂಸ್ತಾನ್ ಎಂದು ಕರೆಯುತ್ತಿದ್ದರು. ಇಂಡಿಯಾ- ಭಾರತ ಆಕ್ಷೇಪಗಳು ಅಂಬೇಡ್ಕರ್ ಕಾಲದಿಂದಲೂ ಇವೆ ಬ್ರಿಟಿಷರ ಆಡಳಿತದಿಂದ ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕಾಗ ಡಾ. ಬಿ.ಆರ್. ಅಂಬೇಡ್ಕರ್ ಅಧ್ಯಕ್ಷತೆಯ ಸಂವಿಧಾನ ರಚನೆ ಸಭೆಯಲ್ಲಿ ಈ ವಿಷಯ ತೀವ್ರವಾಗಿ ಚರ್ಚೆಯಾಯಿತು. ಭಾರತ ಎಂಬುದು ದೇಶದ ಪ್ರಾಥಮಿಕ ಹೆಸರಾಗಿದೆ. ಆದ್ರೆ ಇಂಡಿಯಾ ಎಂಬುದು ಆಂಗ್ಲ […]

ಭಾರತ ಬೇಕಾ, ಇಂಡಿಯಾ ಇರಲಿನಾ? ದೇಶಕ್ಕೆ ಯಾವುದು ಅಧಿಕೃತ ಹೆಸರು?
ಸಾಧು ಶ್ರೀನಾಥ್​
| Edited By: |

Updated on:Jun 02, 2020 | 1:47 PM

Share

ದೆಹಲಿ: ಭಾರತವನ್ನು ಹಿಂದೂಸ್ತಾನ, ಇಂಡಿಯಾ, ಭಾರತ, ಭರತ ಭೂಮಿ, ಭಾರತವರ್ಷ ಎಂಬ ಹಲವು ಹೆಸರುಗಳಿಂದ ಕರೆಯಲಾಗುತ್ತದೆ. ಬ್ರಿಟಿಷರ ಆಡಳಿತಾವಧಿಯಲ್ಲಿ ಭಾರತವನ್ನು ಇಂಡಿಯಾ ಎಂದು ಕರೆಯುತ್ತಿದ್ದರು. ಅದಕ್ಕೂ ಮುನ್ನ ಮೊಘಲರು ಹಿಂದೂಸ್ತಾನ್ ಎಂದು ಕರೆಯುತ್ತಿದ್ದರು.

ಇಂಡಿಯಾ- ಭಾರತ ಆಕ್ಷೇಪಗಳು ಅಂಬೇಡ್ಕರ್ ಕಾಲದಿಂದಲೂ ಇವೆ ಬ್ರಿಟಿಷರ ಆಡಳಿತದಿಂದ ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕಾಗ ಡಾ. ಬಿ.ಆರ್. ಅಂಬೇಡ್ಕರ್ ಅಧ್ಯಕ್ಷತೆಯ ಸಂವಿಧಾನ ರಚನೆ ಸಭೆಯಲ್ಲಿ ಈ ವಿಷಯ ತೀವ್ರವಾಗಿ ಚರ್ಚೆಯಾಯಿತು. ಭಾರತ ಎಂಬುದು ದೇಶದ ಪ್ರಾಥಮಿಕ ಹೆಸರಾಗಿದೆ. ಆದ್ರೆ ಇಂಡಿಯಾ ಎಂಬುದು ಆಂಗ್ಲ ಭಾಷೆಯ ಹೆಸರಾಗಿದೆ ಎಂದು ಆಕ್ಷೇಪಗಳು ವ್ಯಕ್ತವಾಗಿದ್ದವು.

ಭಾರತದ ಪರ ಒಲವಿದೆ ಎಂದು ಸುಪ್ರೀಂಕೋರ್ಟ್​ಗೆ ಅರ್ಜಿ! ನಂತರ ಸಂವಿಧಾನದಲ್ಲಿ ಇಂಡಿಯಾ ಮತ್ತು ಭಾರತ ಎಂದು ಎರಡು ಹೆಸರುಗಳನ್ನು ಉಲ್ಲೇಖಿಸಲಾಯಿತು. ಇದರಲ್ಲಿ ಭಾರತ ಎಂಬುದು ಪ್ರಾಥಮಿಕ ಹೆಸರಾಗಿದ್ದು, ತುಂಬಾ ಜನರಿಗೆ ಇದರ ಪರ ಒಲವಿದೆ. ಆದ್ದರಿಂದ ಇಂಡಿಯಾ ಎಂಬ ಹೆಸರನ್ನು ತೆಗೆದು ಕೇವಲ ಭಾರತ ಎಂಬ ಹೆಸರನ್ನು ಅಧಿಕೃತಗೊಳಿಸುವಂತೆ ದೆಹಲಿ ಮೂಲದ ಅರ್ಜಿದಾರರೊಬ್ಬರು ಇದೀಗ ಸುಪ್ರೀಂಕೋರ್ಟ್​ಗೆ ಮನವಿ ಸಲ್ಲಿಸಿದ್ದಾರೆ.

ಇಂಡಿಯಾ ಎನ್ನುವುದು ಬ್ರಿಟಿಷರ ಗುಲಾಮಗಿರಿಯ ಸಂಕೇತ ಸಂವಿಧಾನದ 1ನೇ ವಿಧಿಯನ್ನು ತಿದ್ದುಪಡಿ ಮಾಡಲು ಅರ್ಜಿದಾರರು ಪ್ರಯತ್ನಿಸಿದ್ದಾರೆ. ಏಕೆಂದರೆ 1ನೇ ವಿಧಿಯು ದೇಶದ ಹೆಸರು ಮತ್ತು ಅದರ ಪ್ರದೇಶಗಳನ್ನು ವ್ಯಾಖ್ಯಾನಿಸುತ್ತದೆ. ಇಂಡಿಯಾ ಎನ್ನುವುದು ಬ್ರಿಟಿಷರು ಇಟ್ಟ ಗುಲಾಮಗಿರಿಯ ಸಂಕೇತವಾಗಿದೆ. ಹಾಗಾಗಿ ಭಾರತ್ ಅಥವಾ ಹಿಂದುಸ್ತಾನ ಎಂಬುದು ದೇಶದ ಹೆಸರಾಗಿದೆ. ಹೀಗಾಗಿ ಭಾರತ ಹೆಸರನ್ನು ಅಧಿಕೃತಗೊಳಿಸುವಂತೆ ಅರ್ಜಿದಾರರು ಮನವಿ ಮಾಡಿದ್ದಾರೆ.

ಗಮನಾರ್ಹವೆಂದ್ರೆ, ಇಂದು ನಡೆಯಬೇಕಿದ್ದ ಈ ಅರ್ಜಿಯ ವಿಚಾರಣೆಯು ಭಾರತದ ಸರ್ವೋಚ್ಛ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಎಸ್ ಎ ಬೋಬ್ಡೆ ಅನುಪಸ್ಥಿತಿಯಿಂದಾಗಿ, ಅನಿರ್ದಿಷ್ಟಾವಧಿಗೆ ಮುಂದೂಡಿಕೆಯಾಗಿದೆ.

Published On - 1:44 pm, Tue, 2 June 20

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ