AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ ಬೇಕಾ, ಇಂಡಿಯಾ ಇರಲಿನಾ? ದೇಶಕ್ಕೆ ಯಾವುದು ಅಧಿಕೃತ ಹೆಸರು?

ದೆಹಲಿ: ಭಾರತವನ್ನು ಹಿಂದೂಸ್ತಾನ, ಇಂಡಿಯಾ, ಭಾರತ, ಭರತ ಭೂಮಿ, ಭಾರತವರ್ಷ ಎಂಬ ಹಲವು ಹೆಸರುಗಳಿಂದ ಕರೆಯಲಾಗುತ್ತದೆ. ಬ್ರಿಟಿಷರ ಆಡಳಿತಾವಧಿಯಲ್ಲಿ ಭಾರತವನ್ನು ಇಂಡಿಯಾ ಎಂದು ಕರೆಯುತ್ತಿದ್ದರು. ಅದಕ್ಕೂ ಮುನ್ನ ಮೊಘಲರು ಹಿಂದೂಸ್ತಾನ್ ಎಂದು ಕರೆಯುತ್ತಿದ್ದರು. ಇಂಡಿಯಾ- ಭಾರತ ಆಕ್ಷೇಪಗಳು ಅಂಬೇಡ್ಕರ್ ಕಾಲದಿಂದಲೂ ಇವೆ ಬ್ರಿಟಿಷರ ಆಡಳಿತದಿಂದ ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕಾಗ ಡಾ. ಬಿ.ಆರ್. ಅಂಬೇಡ್ಕರ್ ಅಧ್ಯಕ್ಷತೆಯ ಸಂವಿಧಾನ ರಚನೆ ಸಭೆಯಲ್ಲಿ ಈ ವಿಷಯ ತೀವ್ರವಾಗಿ ಚರ್ಚೆಯಾಯಿತು. ಭಾರತ ಎಂಬುದು ದೇಶದ ಪ್ರಾಥಮಿಕ ಹೆಸರಾಗಿದೆ. ಆದ್ರೆ ಇಂಡಿಯಾ ಎಂಬುದು ಆಂಗ್ಲ […]

ಭಾರತ ಬೇಕಾ, ಇಂಡಿಯಾ ಇರಲಿನಾ? ದೇಶಕ್ಕೆ ಯಾವುದು ಅಧಿಕೃತ ಹೆಸರು?
ಸಾಧು ಶ್ರೀನಾಥ್​
| Edited By: |

Updated on:Jun 02, 2020 | 1:47 PM

Share

ದೆಹಲಿ: ಭಾರತವನ್ನು ಹಿಂದೂಸ್ತಾನ, ಇಂಡಿಯಾ, ಭಾರತ, ಭರತ ಭೂಮಿ, ಭಾರತವರ್ಷ ಎಂಬ ಹಲವು ಹೆಸರುಗಳಿಂದ ಕರೆಯಲಾಗುತ್ತದೆ. ಬ್ರಿಟಿಷರ ಆಡಳಿತಾವಧಿಯಲ್ಲಿ ಭಾರತವನ್ನು ಇಂಡಿಯಾ ಎಂದು ಕರೆಯುತ್ತಿದ್ದರು. ಅದಕ್ಕೂ ಮುನ್ನ ಮೊಘಲರು ಹಿಂದೂಸ್ತಾನ್ ಎಂದು ಕರೆಯುತ್ತಿದ್ದರು.

ಇಂಡಿಯಾ- ಭಾರತ ಆಕ್ಷೇಪಗಳು ಅಂಬೇಡ್ಕರ್ ಕಾಲದಿಂದಲೂ ಇವೆ ಬ್ರಿಟಿಷರ ಆಡಳಿತದಿಂದ ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕಾಗ ಡಾ. ಬಿ.ಆರ್. ಅಂಬೇಡ್ಕರ್ ಅಧ್ಯಕ್ಷತೆಯ ಸಂವಿಧಾನ ರಚನೆ ಸಭೆಯಲ್ಲಿ ಈ ವಿಷಯ ತೀವ್ರವಾಗಿ ಚರ್ಚೆಯಾಯಿತು. ಭಾರತ ಎಂಬುದು ದೇಶದ ಪ್ರಾಥಮಿಕ ಹೆಸರಾಗಿದೆ. ಆದ್ರೆ ಇಂಡಿಯಾ ಎಂಬುದು ಆಂಗ್ಲ ಭಾಷೆಯ ಹೆಸರಾಗಿದೆ ಎಂದು ಆಕ್ಷೇಪಗಳು ವ್ಯಕ್ತವಾಗಿದ್ದವು.

ಭಾರತದ ಪರ ಒಲವಿದೆ ಎಂದು ಸುಪ್ರೀಂಕೋರ್ಟ್​ಗೆ ಅರ್ಜಿ! ನಂತರ ಸಂವಿಧಾನದಲ್ಲಿ ಇಂಡಿಯಾ ಮತ್ತು ಭಾರತ ಎಂದು ಎರಡು ಹೆಸರುಗಳನ್ನು ಉಲ್ಲೇಖಿಸಲಾಯಿತು. ಇದರಲ್ಲಿ ಭಾರತ ಎಂಬುದು ಪ್ರಾಥಮಿಕ ಹೆಸರಾಗಿದ್ದು, ತುಂಬಾ ಜನರಿಗೆ ಇದರ ಪರ ಒಲವಿದೆ. ಆದ್ದರಿಂದ ಇಂಡಿಯಾ ಎಂಬ ಹೆಸರನ್ನು ತೆಗೆದು ಕೇವಲ ಭಾರತ ಎಂಬ ಹೆಸರನ್ನು ಅಧಿಕೃತಗೊಳಿಸುವಂತೆ ದೆಹಲಿ ಮೂಲದ ಅರ್ಜಿದಾರರೊಬ್ಬರು ಇದೀಗ ಸುಪ್ರೀಂಕೋರ್ಟ್​ಗೆ ಮನವಿ ಸಲ್ಲಿಸಿದ್ದಾರೆ.

ಇಂಡಿಯಾ ಎನ್ನುವುದು ಬ್ರಿಟಿಷರ ಗುಲಾಮಗಿರಿಯ ಸಂಕೇತ ಸಂವಿಧಾನದ 1ನೇ ವಿಧಿಯನ್ನು ತಿದ್ದುಪಡಿ ಮಾಡಲು ಅರ್ಜಿದಾರರು ಪ್ರಯತ್ನಿಸಿದ್ದಾರೆ. ಏಕೆಂದರೆ 1ನೇ ವಿಧಿಯು ದೇಶದ ಹೆಸರು ಮತ್ತು ಅದರ ಪ್ರದೇಶಗಳನ್ನು ವ್ಯಾಖ್ಯಾನಿಸುತ್ತದೆ. ಇಂಡಿಯಾ ಎನ್ನುವುದು ಬ್ರಿಟಿಷರು ಇಟ್ಟ ಗುಲಾಮಗಿರಿಯ ಸಂಕೇತವಾಗಿದೆ. ಹಾಗಾಗಿ ಭಾರತ್ ಅಥವಾ ಹಿಂದುಸ್ತಾನ ಎಂಬುದು ದೇಶದ ಹೆಸರಾಗಿದೆ. ಹೀಗಾಗಿ ಭಾರತ ಹೆಸರನ್ನು ಅಧಿಕೃತಗೊಳಿಸುವಂತೆ ಅರ್ಜಿದಾರರು ಮನವಿ ಮಾಡಿದ್ದಾರೆ.

ಗಮನಾರ್ಹವೆಂದ್ರೆ, ಇಂದು ನಡೆಯಬೇಕಿದ್ದ ಈ ಅರ್ಜಿಯ ವಿಚಾರಣೆಯು ಭಾರತದ ಸರ್ವೋಚ್ಛ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಎಸ್ ಎ ಬೋಬ್ಡೆ ಅನುಪಸ್ಥಿತಿಯಿಂದಾಗಿ, ಅನಿರ್ದಿಷ್ಟಾವಧಿಗೆ ಮುಂದೂಡಿಕೆಯಾಗಿದೆ.

Published On - 1:44 pm, Tue, 2 June 20

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ