AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಪ ರಾಷ್ಟ್ರಪತಿ ಸ್ಥಾನದಿಂದ ಜಗದೀಪ್ ಧಂಖರ್ ವಜಾಗೊಳಿಸಲು ವಿರೋಧ ಪಕ್ಷ ನೋಟಿಸ್ ಸಲ್ಲಿಸುವ ಸಾಧ್ಯತೆ

ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧಂಖರ್ ಅವರನ್ನು ಪ್ರತಿಪಕ್ಷಗಳ ವಿರುದ್ಧ ಪಕ್ಷಪಾತಿ ಎಂದು ಪದೇ ಪದೇ ಆರೋಪಿಸುತ್ತಿರುವ ಕಾಂಗ್ರೆಸ್ ನೇತೃತ್ವದ ಇಂಡಿಯಾ ಬ್ಲಾಕ್, ಅವರನ್ನು ಭಾರತದ ಉಪ ರಾಷ್ಟ್ರಪತಿ ಸ್ಥಾನದಿಂದ ತೆಗೆದುಹಾಕಲು ನೋಟಿಸ್ ಸಲ್ಲಿಸುವ ಸಾಧ್ಯತೆಯಿದೆ.

ಉಪ ರಾಷ್ಟ್ರಪತಿ ಸ್ಥಾನದಿಂದ ಜಗದೀಪ್ ಧಂಖರ್ ವಜಾಗೊಳಿಸಲು ವಿರೋಧ ಪಕ್ಷ ನೋಟಿಸ್ ಸಲ್ಲಿಸುವ ಸಾಧ್ಯತೆ
ಜಗದೀಪ್ ಧಂಖರ್
ಸುಷ್ಮಾ ಚಕ್ರೆ
|

Updated on:Aug 09, 2024 | 10:44 PM

Share

ನವದೆಹಲಿ: ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧಂಖರ್ ಮತ್ತು ಇಂಡಿಯಾ ಬ್ಲಾಕ್ ಪಕ್ಷಗಳ ನಡುವಿನ ಸಂಬಂಧ ಮತ್ತಷ್ಟು ಹದಗೆಟ್ಟಿದೆ. ಹೀಗಾಗಿ, ಉಪರಾಷ್ಟ್ರಪತಿಯನ್ನು ಅವರ ಕಚೇರಿಯಿಂದ ಪದಚ್ಯುತಗೊಳಿಸುವ ನಿರ್ಣಯವನ್ನು ಮಂಡಿಸಲು ಪ್ರತಿಪಕ್ಷಗಳು ನೋಟಿಸ್ ಸಲ್ಲಿಸಲು ಚಿಂತನೆ ನಡೆಸಿವೆ. ನೋಟಿಸ್‌ನ ಸಮಯವನ್ನು ಚರ್ಚಿಸಿ ನಿರ್ಧರಿಸಲಾಗುವುದು ಎಂದು ಅವರು ಹೇಳಿದ್ದಾರೆ.

ಸಂವಿಧಾನದ ಪರಿಚ್ಛೇದ 67(ಬಿ) ಪ್ರಕಾರ, “ರಾಜ್ಯಗಳ ಕೌನ್ಸಿಲ್ (ರಾಜ್ಯಸಭೆ) ನಿರ್ಣಯದ ಮೂಲಕ ಉಪರಾಷ್ಟ್ರಪತಿಯನ್ನು ಅವರ ಹುದ್ದೆಯಿಂದ ತೆಗೆದುಹಾಕಬಹುದು. ಜಗದೀಪ್ ಧಂಖರ್ ವಿರುದ್ಧ ಕ್ರಮ ಕೈಗೊಳ್ಳುವ ಪ್ರಸ್ತಾವನೆಗೆ 87 ಸದಸ್ಯರು ಸಹಿ ಹಾಕಿದ್ದಾರೆ ಎಂದು ವಿರೋಧ ಪಕ್ಷದ ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಸ್ವಾತಂತ್ರ್ಯ ದಿನಾಚರಣೆಗೂ ಮೊದಲು ಬಿಜೆಪಿಯಿಂದ ಭಾರತದಾದ್ಯಂತ ‘ಹರ್ ಘರ್ ತಿರಂಗ’ ಅಭಿಯಾನ

ಈ ಬಗ್ಗೆ ಎರಡು ದಿನಗಳ ಹಿಂದೆ ಸದನದ ನಾಯಕ ಜೆಪಿ ನಡ್ಡಾ ಅವರಿಗೆ ಅನೌಪಚಾರಿಕವಾಗಿ ತಿಳಿಸಲಾಗಿದೆ ಎಂದು ಮೂಲವೊಂದು ತಿಳಿಸಿದೆ. ಪ್ರತಿಪಕ್ಷಗಳು ಸದನವನ್ನು ನಿಯಮಗಳು ಮತ್ತು ಸಂಪ್ರದಾಯಗಳ ಮೂಲಕ ನಡೆಸಬೇಕೆಂದು ಬಯಸುತ್ತವೆ ಮತ್ತು ಸದಸ್ಯರ ವಿರುದ್ಧ ವೈಯಕ್ತಿಕ ಟೀಕೆಗಳು ಸ್ವೀಕಾರಾರ್ಹವಲ್ಲ ಎಂದು ಮೂಲಗಳು ತಿಳಿಸಿವೆ.

ಇಡೀ ವಿರೋಧ ಪಕ್ಷದ ವಿರುದ್ಧ ಅಧ್ಯಕ್ಷರು “ಪಕ್ಷಪಾತ” ರೀತಿಯಲ್ಲಿ ವರ್ತಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿ ಜಗದೀಪ್ ಧಂಖರ್ ಮತ್ತು ಇಂಡಿಯಾ ಬ್ಲಾಕ್ ಪಕ್ಷಗಳು ಇಂದು ಮತ್ತೊಮ್ಮೆ ಕಿತ್ತಾಡಿಕೊಂಡವು.

ಇದನ್ನೂ ಓದಿ: ವಿರೋಧಪಕ್ಷದ ಸದಸ್ಯರು ಹೇಳಿದಂತೆ ಸರ್ಕಾರ ಕುಣಿಯಲಾಗಲ್ಲ: ಪ್ರಿಯಾಂಕ್ ಖರ್ಗೆ

ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮಾತನಾಡಲು ಅವಕಾಶವಿಲ್ಲ. ಆಗಾಗ ಅಡ್ಡಿಪಡಿಸಲಾಗುತ್ತದೆ ಮತ್ತು ಅವರ ಮೈಕ್‌ಗಳನ್ನು ಆಗಾಗ ಆಫ್ ಮಾಡಲಾಗುತ್ತದೆ ಎಂದು ರಾಜ್ಯಸಭೆಯಲ್ಲಿ ಕಾಂಗ್ರೆಸ್‌ನ ಉಪ ನಾಯಕ ಪ್ರಮೋದ್ ತಿವಾರಿ ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:43 pm, Fri, 9 August 24

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
ಐಪಿಎಲ್‌ನಲ್ಲಿ ಇತಿಹಾಸ ನಿರ್ಮಿಸಿದ ಸಾಯಿ ಸುದರ್ಶನ್
ಐಪಿಎಲ್‌ನಲ್ಲಿ ಇತಿಹಾಸ ನಿರ್ಮಿಸಿದ ಸಾಯಿ ಸುದರ್ಶನ್
ಓಡಿಹೋಗುತ್ತಾಳೆಂದು ಹೆಂಡತಿಯನ್ನು ಕಟ್ಟಿಹಾಕಿದ ಗಂಡ!
ಓಡಿಹೋಗುತ್ತಾಳೆಂದು ಹೆಂಡತಿಯನ್ನು ಕಟ್ಟಿಹಾಕಿದ ಗಂಡ!
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ