AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂಡಿಯಾ ಮೈತ್ರಿಕೂಟ ಅನ್ಯಾಯದ ವಿರುದ್ಧ ಒಗ್ಗಟ್ಟಾಗಿ ಹೋರಾಡುತ್ತದೆ: ಬಂಗಾಳದಲ್ಲಿ ರಾಹುಲ್ ಗಾಂಧಿ

ಟಿಎಂಸಿಯೊಂದಿಗಿನ ಜಟಾಪಟಿಯ ನಡುವೆಯೇ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ನ್ಯಾಯ್ ಯಾತ್ರೆ ಇಂದು ಪಶ್ಚಿಮ ಬಂಗಾಳವನ್ನು ಪ್ರವೇಶಿಸಿದ್ದು, ಪಶ್ಚಿಮ ಬಂಗಾಳಕ್ಕೆ ಬಂದಿದ್ದಕ್ಕೆ ಖುಷಿಯಾಗಿದೆ. ನಿಮ್ಮ ಮಾತನ್ನು ಕೇಳಲು ಮತ್ತು ನಿಮ್ಮೊಂದಿಗೆ ನಿಲ್ಲಲು ನಾವು ಇಲ್ಲಿಗೆ ಬಂದಿದ್ದೇವೆ ಎಂದು ಕಾಂಗ್ರೆಸ್ ಸಂಸದ ಹೇಳಿದ್ದಾರೆ.

ಇಂಡಿಯಾ ಮೈತ್ರಿಕೂಟ ಅನ್ಯಾಯದ ವಿರುದ್ಧ ಒಗ್ಗಟ್ಟಾಗಿ ಹೋರಾಡುತ್ತದೆ: ಬಂಗಾಳದಲ್ಲಿ ರಾಹುಲ್ ಗಾಂಧಿ
ರಾಹುಲ್ ಗಾಂಧಿ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on:Jan 25, 2024 | 5:07 PM

Share

ದೆಹಲಿ ಜನವರಿ 25: ಮುಂಬರುವ ಲೋಕಸಭೆ ಚುನಾವಣೆಗೆ (Lok sabha Election) ಪಶ್ಚಿಮ ಬಂಗಾಳದಲ್ಲಿ ಇಂಡಿಯಾ ಬಣದಲ್ಲಿನ (INDIA) ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ತೃಣಮೂಲ ಕಾಂಗ್ರೆಸ್ ನಾಯಕಿ ಮಮತಾ ಬ್ಯಾನರ್ಜಿ (Mamata Banerjee) ಹೇಳಿದ ಒಂದು ದಿನದ ನಂತರ, ಸಂಸದ ರಾಹುಲ್ ಗಾಂಧಿ(Rahul Gandhi)ಅವರು ಗುರುವಾರ ಇಂಡಿಯಾ ಬ್ಲಾಕ್ ಅನ್ಯಾಯ ವಿರುದ್ಧ ಹೋರಾಡಲಿದೆ ಎಂದು ಹೇಳಿದ್ದಾರೆ.

ಪಶ್ಚಿಮ ಬಂಗಾಳಕ್ಕೆ ಬಂದಿರುವುದು ಸಂತಸ ತಂದಿದೆ ಎಂದು ವಯನಾಡ್ ಸಂಸದರು ಹೇಳಿದ್ದಾರೆ. ಟಿಎಂಸಿಯೊಂದಿಗಿನ ಜಟಾಪಟಿಯ ನಡುವೆಯೇ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ನ್ಯಾಯ್ ಯಾತ್ರೆ ಇಂದು ಪಶ್ಚಿಮ ಬಂಗಾಳವನ್ನು ಪ್ರವೇಶಿಸಿತು. ಪಶ್ಚಿಮ ಬಂಗಾಳಕ್ಕೆ ಬಂದಿದ್ದಕ್ಕೆ ಖುಷಿಯಾಗಿದೆ. ನಿಮ್ಮ ಮಾತನ್ನು ಕೇಳಲು ಮತ್ತು ನಿಮ್ಮೊಂದಿಗೆ ನಿಲ್ಲಲು ನಾವು ಇಲ್ಲಿಗೆ ಬಂದಿದ್ದೇವೆ. ಬಿಜೆಪಿ-ಆರ್​​ಎಸ್ಎಸ್ ದ್ವೇಷ, ಹಿಂಸಾಚಾರ ಮತ್ತು ಅನ್ಯಾಯವನ್ನು ಹರಡುತ್ತಿವೆ. ಆದ್ದರಿಂದ, ಇಂಡಿಯಾ ಮೈತ್ರಿಕೂಟ ಅನ್ಯಾಯದ ವಿರುದ್ಧ ಒಟ್ಟಾಗಿ ಹೋರಾಡಲಿದೆ ಎಂದು ಅವರು ಹೇಳಿರುವುದಾಗಿ ಎಎನ್ಐ ಸುದ್ದಿಸಂಸ್ಥೆ ವರದಿ ಮಾಡಿದೆ.

ತಾನು ಮತ್ತ ಕಾಂಗ್ರೆಸ್ ಪಕ್ಷ ಮಮತಾ ಬ್ಯಾನರ್ಜಿ ಅವರೊಂದಿಗೆ “ಒಳ್ಳೆಯ ವೈಯಕ್ತಿಕ ಸಂಬಂಧವನ್ನು” ಹೊಂದಿದ್ದೇವೆ. ಎರಡೂ ಕಡೆಯಿಂದ ವಿಮರ್ಶಾತ್ಮಕ ಟೀಕೆಗಳು ಮುಂಬರುವ ಲೋಕಸಭೆ ಚುನಾವಣೆಗೆ ಸೀಟು ಹಂಚಿಕೆ ಮಾತುಕತೆಗಳ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ರಾಹುಲ್ ಈ ಹಿಂದೆ ಹೇಳಿದ್ದರು.

ಗುರುವಾರ, ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಕೂಡ ಮಮತಾ ಇಂಡಿಯಾ ಮೈತ್ರಿಕೂಟದ ಪ್ರಮುಖ ಭಾಗ ಎಂದು ಪುನರುಚ್ಚರಿಸಿದರು. 28 ಪಕ್ಷಗಳನ್ನು ಒಳಗೊಂಡಿರುವ ಇಂಡಿಯಾ ಮೈತ್ರಿಕೂಟದ ಪ್ರಮುಖ ಆಧಾರ ಸ್ತಂಭ ಟಿಎಂಸಿ ಎಂದು ನಾನು ಹೇಳಿದ್ದೇನೆ. ಮಮತಾ ಬ್ಯಾನರ್ಜಿ ದೇಶದ ಅನುಭವಿ ಮತ್ತು ಪವರ್ ಪುಲ್ ನಾಯಕಿ. ನಾವು ಅವರನ್ನು ಗೌರವಿಸುತ್ತೇವೆ. ಅವರು ನಮ್ಮ ದೇಶದ ರಾಜಕೀಯದಲ್ಲಿ ವಿಶೇಷ ಸ್ಥಾನ ಮತ್ತು ಗುರುತನ್ನು ಹೊಂದಿದ್ದಾರೆಂದು ಎಲ್ಲರಿಗೂ ತಿಳಿದಿದೆ ಎಂದು ಜೈರಾಮ್ ರಮೇಶ್ ಹೇಳಿದ್ದಾರೆ.

ಇದನ್ನೂ ಓದಿ: ಎಡಪಕ್ಷಗಳು ಇಂಡಿಯಾ ಬ್ಲಾಕ್‌ನ ಕಾರ್ಯಸೂಚಿಯನ್ನು ನಿಯಂತ್ರಿಸುತ್ತಿವೆ: ಮಮತಾ ಬ್ಯಾನರ್ಜಿ

ಅವರು ಕೂಡ ಬಿಜೆಪಿಯನ್ನು ಸೋಲಿಸಲು ಬಯಸುತ್ತಾರೆ ಎಂದು ನನಗೆ ತುಂಬಾ ವಿಶ್ವಾಸವಿದೆ, ನಮಗೂ ಅದೇ ಬೇಕು. ನಾವು ಒಟ್ಟಾಗಿ ಹೋರಾಡುತ್ತೇವೆ. ನಾವು ಇಂಡಿಯಾ ಮೈತ್ರಿಯನ್ನು ಯಶಸ್ವಿಗೊಳಿಸುತ್ತೇವೆ. ಅದು ನಮ್ಮ ಕರ್ತವ್ಯ ಎಂದಿದ್ದಾರೆ ಜೈರಾಮ್ ರಮೇಶ್.

ಭಾರತ್ ಜೋಡೋ ನ್ಯಾಯ್ ಯಾತ್ರೆ ಇಂದು ಬೆಳಗ್ಗೆ ಅಸ್ಸಾಂನಿಂದ ಪಶ್ಚಿಮ ಬಂಗಾಳವನ್ನು ದಾಟಿದೆ. ಅಸ್ಸಾಂ ಕಾಂಗ್ರೆಸ್ ಮುಖ್ಯಸ್ಥೆ ಅಂಗಿಕಾ ದತ್ತಾ ಅವರು ಪಕ್ಷದ ಬಂಗಾಳ ಘಟಕದ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಅವರಿಗೆ ‘ತ್ರಿವರ್ಣ ಧ್ವಜ’ ಹಸ್ತಾಂತರಿಸಿದರು.

ಏತನ್ಮಧ್ಯೆ, ರಾಹುಲ್ ಮಾರ್ಗದ ರಸ್ತೆಬದಿಯಲ್ಲಿ ನಿಂತಿದ್ದ ಹಲವಾರು ಟಿಎಂಸಿ ಬೆಂಬಲಿಗರು ” ಬಂಗಾಳಕ್ಕೆ ದೀದಿ ಸಾಕು” ಎಂದು ಬರೆದಿರುವ ಬ್ಯಾನರ್‌ಗಳನ್ನು ಹಿಡಿದಿದ್ದರು ಎಂದು ಎಎನ್‌ಐ ವರದಿ ಮಾಡಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:03 pm, Thu, 25 January 24

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ