AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೆಗಾಸಸ್​ ಸ್ಪೈವೇರ್​​ನ್ನು ಮೋದಿ ಸರ್ಕಾರ 2017ರಲ್ಲಿ ಇಸ್ರೇಲ್​​ನಿಂದ ಖರೀದಿಸಿದ್ದಾಗಿ ವರದಿ; ದೇಶದ್ರೋಹವೆಂದ ರಾಹುಲ್ ಗಾಂಧಿ

ನ್ಯೂಯಾರ್ಕ್​ ಟೈಂ The Battle for the World's Most Powerful Cyberweapon ಎಂಬ ಹೆಡ್​​ಲೈನ್​​ನಲ್ಲಿ ವರದಿ ಪ್ರಕಟಿಸಿದೆ. 2017ರಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಇಸ್ರೇಲ್​ಗೆ ಭೇಟಿ ಕೊಟ್ಟಿದ್ದರು. ಅದೇ ವೇಳೆ ಒಪ್ಪಂದವಾಯಿತು ಎಂದು ಹೇಳಿದೆ.

ಪೆಗಾಸಸ್​ ಸ್ಪೈವೇರ್​​ನ್ನು ಮೋದಿ ಸರ್ಕಾರ 2017ರಲ್ಲಿ ಇಸ್ರೇಲ್​​ನಿಂದ ಖರೀದಿಸಿದ್ದಾಗಿ ವರದಿ; ದೇಶದ್ರೋಹವೆಂದ ರಾಹುಲ್ ಗಾಂಧಿ
ಸಾಂಕೇತಿಕ ಚಿತ್ರ
Follow us
TV9 Web
| Updated By: Lakshmi Hegde

Updated on:Jan 29, 2022 | 2:52 PM

2017ರಲ್ಲಿ ಅತ್ಯಾಧುನಿಕ ಶಸ್ತ್ರಾಸ್ತ್ರಗಳ ಮತ್ತು ಗುಪ್ತಚರ ಇಲಾಖೆಗೆ ಸಂಬಂಧಪಟ್ಟ ಸಾಧನಗಳ ಖರೀದಿ ಒಪ್ಪಂದದ ಭಾಗವಾಗಿ ಅಂದಿನ ಕೇಂದ್ರ ಸರ್ಕಾರ (ಬಿಜೆಪಿ ಸರ್ಕಾರ) ಇಸ್ರೇಲ್​​ನಿಂದ ಪೆಗಾಸಸ್​​ ಸ್ಪೈವೇರ್​​ನ್ನು ಖರೀದಿ ಮಾಡಿತ್ತು ಎಂದು ನ್ಯೂಯಾರ್ಕ್ ಟೈಮ್ಸ್​ ವರದಿ ಮಾಡಿದೆ. ಅದರ ಬೆನ್ನಲ್ಲೇ ಕಾಂಗ್ರೆಸ್​ ಸೇರಿ ಪ್ರತಿಪಕ್ಷಗಳು ಬಿಜೆಪಿ ಸರ್ಕಾರದ ವಿರುದ್ಧ ತೀವ್ರವಾಗಿ ಟೀಕಿಸುತ್ತಿವೆ. ಅಂದಿನ ಶಸ್ತ್ರಾಸ್ತ್ರ ಒಪ್ಪಂದದ ಪ್ಯಾಕೇಜ್​​ನಲ್ಲಿ ಕ್ಷಿಪಣಿ ಖರೀದಿಯೂ ಸೇರ್ಪಡೆಯಾಗಿತ್ತು ಎಂದೂ ನ್ಯೂಯಾರ್ಕ್ ಟೈಂ ವರದಿಯಲ್ಲಿ ಉಲ್ಲೇಖಿಸಿದೆ. ಅಂದಹಾಗೆ, ಈ ಪೆಗಾಸಸ್​ ಸ್ಪೈವೇರ್​​  2021ರಲ್ಲಿ ಭರ್ಜರಿ ಸುದ್ದಿ ಮಾಡಿತ್ತು. ಭಾರತದಲ್ಲಿ ಇಸ್ರೇಲಿ ಮೂಲದ ಪೆಗಾಸಸ್​ ಬಳಸಿ, ರಾಜಕಾರಣಿಗಳು, ಪತ್ರಕರ್ತರು, ಮತ್ತಿತರ ಗಣ್ಯರೆಲ್ಲ ಸೇರಿ 300ಕ್ಕೂ ಹೆಚ್ಚು ಜನರ ಫೋನ್​ ಟ್ಯಾಪ್​ ಮಾಡಲಾಗಿದೆ ಎಂದು ದಿ ವೈರ್​ ಪ್ರಕಟಿಸಿತ್ತು. ಹಾಗೇ ಬಹುಮುಖ್ಯವಾಗಿ ಯಾರೆಲ್ಲರ ಫೋನ್​ ಟ್ಯಾಪ್​ ಆಗಿದೆ ಎಂಬ ಹೆಸರುಗಳನ್ನೂ ಬಹಿರಂಗಪಡಿಸಲಾಗಿತ್ತು. ಅದರಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಚುನಾವಣಾ ತಂತ್ರಜ್ಞ ಪ್ರಶಾಂತ್​ ಕಿಶೋರ್​ ಸೇರಿ ಅನೇಕರ ಹೆಸರುಗಳು ಇದ್ದವು.  ಈ ಪೆಗಾಸಸ್​ ಸ್ನೂಪಿಂಗ್​ ಕುರಿತು ತನಿಖೆ ನಡೆಸಲು ಸುಪ್ರೀಂಕೋರ್ಟ್​​ನಿಂದ ಸಮಿತಿ ರಚಿಸಲಾಗಿದ್ದು, ತನಿಖೆ ನಡೆಯುತ್ತಲೂ ಇದೆ. ಹೀಗಿರುವಾಗ ನ್ಯೂಯಾರ್ಕ್​ ಟೈಮ್ಸ್​ ಹೀಗೆ ವರದಿ ಮಾಡಿದೆ.

ನ್ಯೂಯಾರ್ಕ್​ ಟೈಮ್ಸ್​ The Battle for the World’s Most Powerful Cyberweapon ಎಂಬ ಹೆಡ್​​ಲೈನ್​​ನಲ್ಲಿ ವರದಿ ಪ್ರಕಟಿಸಿದೆ. 2017ರಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಇಸ್ರೇಲ್​ಗೆ ಭೇಟಿ ಕೊಟ್ಟಿದ್ದರು. ಇಸ್ರೇಲ್​ಗೆ ಭೇಟಿ ನೀಡಿದ ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಎಂಬ ಹೆಗ್ಗಳಿಕೆಯೊಂದಿಗೆ ಇತಿಹಾಸ ಸೃಷ್ಟಿಸಿದರು. ಇದೇ ಭೇಟಿ ವೇಳೆ ಭಾರತ -ಇಸ್ರೇಲ್​ ನಡುವೆ 2 ಬಿಲಿಯನ್ ಯುಎಸ್​​ ಡಾಲರ್​ ಮೊತ್ತದ ರಕ್ಷಣಾ ಒಪ್ಪಂದ ನಡೆಯಿತು. ಅದಕ್ಕೆ ಎರಡೂ ದೇಶಗಳು ಸಹಿ ಹಾಕಿದವು. ಇದೇ ವೇಳೆ ಪೆಗಾಸಸ್​ ಸ್ಪೈವೇರ್​​ನ್ನು ಕೂಡ ಭಾರತದ ಕೇಂದ್ರ ಸರ್ಕಾರ ಇಸ್ರೇಲ್​​ನಿಂದ ಖರೀದಿ ಮಾಡಿದೆ. ಈ ಸ್ಪೈವೇರ್​​ನ್ನು ಎನ್ಎಸ್​ಒ ಎಂಬ ಇಸ್ರೇಲ್​ ಸಂಸ್ಥೆ ಉತ್ಪಾದಿಸಿದ್ದು, ಇದು ಮಿಲಿಟರಿ ದರ್ಜೆಯ ಸಾಫ್ಟ್​ವೇರ್​ ಆಗಿದೆ ಎಂದು  ನ್ಯೂಯಾರ್ಕ್ ಟೈಮ್ಸ್ ಹೇಳಿದೆ. ಅಲ್ಲದೆ, ಇಸ್ರೇಲ್​ ಪೆಗಾಸಸ್​ನ್ನು ಕೇವಲ ಭಾರತಕ್ಕೆ ಮಾತ್ರವಲ್ಲ, ಪೋಲೆಂಡ್, ಹಂಗೇರಿಗಳಿಗೂ ಮಾರಾಟ ಮಾಡಿದ್ದಾಗಿ ಉಲ್ಲೇಖಿಸಿದೆ.

ಮೋದಿ ಸರ್ಕಾರದಿಂದ ದೇಶದ್ರೋಹ ! ನ್ಯೂಯಾರ್ಕ್​ ಟೈಮ್ಸ್ ವರದಿ ಮಾಡಿದ ಬೆನ್ನಲ್ಲೇ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಟ್ವೀಟ್​ ಮಾಡಿದ್ದಾರೆ. ಪ್ರಜಾಪ್ರಭುತ್ವದ ಪ್ರಾಥಮಿಕ ಸಂಸ್ಥೆಗಳು, ರಾಜಕಾರಣಿಗಳು, ಸಾರ್ವಜನಿಕ ವಲಯದ ಕೆಲವು ವ್ಯಕ್ತಿಗಳ ಮೇಲೆ ಕಣ್ಣಿಡಲು ಮೋದಿ ಸರ್ಕಾರ ಈ ಪೆಗಾಸಸ್​​ನ್ನು ಖರೀದಿಸಿದೆ. ಇದರಿಂದಾಗಿ ಸರ್ಕಾರಿ ಕಾರ್ಯಕಾರಿಗಳು, ಪ್ರತಿಪಕ್ಷಗಳ ನಾಯಕರು, ಸಶಸ್ತ್ರ ಪಡೆಗಳು, ನ್ಯಾಯಾಂಗ ಕ್ಷೇತ್ರದ ಅನೇಕರ ಫೋನ್​ ಟ್ಯಾಪ್​ ಆಗಿದೆ. ಇದು ದೇಶದ್ರೋಹ. ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ದೇಶದ್ರೋಹವನ್ನೇ ಮಾಡಿತು ಎಂದು ಆರೋಪಿಸಿದ್ದಾರೆ.

ರಾಜ್ಯಸಭೆ ಪ್ರತಿಪಕ್ಷ ನಾಯಕ, ಹಿರಿಯ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ್​ ಖರ್ಗೆ ಟ್ವೀಟ್​ ಮಾಡಿ, ಮೋದಿ ಸರ್ಕಾರ ಯಾಕೆ ಭಾರತದ ಶತ್ರುವಿನಿಂತೆ ವರ್ತಿಸುತ್ತಿದೆ. ಭಾರತದ ನಾಗರಿಕರ ವಿರುದ್ಧ ಯುದ್ಧಸ್ನೇಹಿ ಶಸ್ತ್ರಗಳನ್ನು ಬಳಸುವುದು ಯಾಕೆ? ಹೀಗೆ ಅಕ್ರಮ ಪೆಗಾಸಸ್​ ಮೂಲಕ ಸ್ನೂಪಿಂಗ್​ ಮಾಡುವುದು ದೇಶದ್ರೋಹ. ಕಾನೂನಿಗಿಂತ ದೊಡ್ಡವರು ಯಾರೂ ಇಲ್ಲ. ನಮಗೆ ನ್ಯಾಯ ಸಿಗುತ್ತದೆ ಎಂಬ ಭರವಸೆ ಇದೆ ಎಂದಿದ್ದಾರೆ.

ಇನ್ನು 2021ರಲ್ಲಿ ಈ ಪೆಗಾಸಸ್​​ನ ಸುದ್ದಿ ಹೊರಬಿದ್ದಾಗ ದೊಡ್ಡ ಮಟ್ಟದಲ್ಲಿ ವಿವಾದ ಸೃಷ್ಟಿಯಾಗಿತ್ತು. ಗೃಹ ಸಚಿವ ಅಮಿತ್ ಶಾ ಸೇರಿ ಹಲವರು ಸಚಿವರು ರಾಜೀನಾಮೆ ನೀಡಬೇಕು ಎಂದು ಪ್ರತಿಪಕ್ಷಗಳು ಆಗ್ರಹಿಸಿದ್ದವು. ಹೀಗೆ ಇದೇ ವಿಚಾರದಲ್ಲಿ ಗಲಾಟೆ ನಡೆಯುತ್ತ, ತನಿಖೆಗೆ ಆದೇಶ ಮಾಡುತ್ತ, ಸಂಸತ್ತಿನ ಮುಂಗಾರು ಅಧಿವೇಶನಕ್ಕೂ ತಡೆಯುಂಟಾಗಿತ್ತು.

ಇದನ್ನೂ ಓದಿ: ಹಣ ಡಬಲ್ ಮಾಡಿಕೊಡುವುದಾಗಿ ವಂಚಿಸುತ್ತಿದ್ದ ಗ್ಯಾಂಗ್ ಸೆರೆ; 20 ಕೋಟಿ ಮೊತ್ತದ ನಕಲಿ ನೋಟು, 2 ಕಾರುಗಳು ವಶಕ್ಕೆ

Published On - 2:37 pm, Sat, 29 January 22

ಲಿಫ್ಟ್​ನಲ್ಲಿದ್ದ9 ಜನರನ್ನ ಗೋಡೆ ಕೊರೆದು ರಕ್ಷಿಸಿದ ರೋಚಕ ವಿಡಿಯೋ!
ಲಿಫ್ಟ್​ನಲ್ಲಿದ್ದ9 ಜನರನ್ನ ಗೋಡೆ ಕೊರೆದು ರಕ್ಷಿಸಿದ ರೋಚಕ ವಿಡಿಯೋ!
ಪುರುಷರು ವಾಹನ ಓಡಿಸಲು ಪರದಾಡಿದ ರಸ್ತೇಲಿ ಸಲೀಸಾಗಿ ಸ್ಕೂಟರ್ ಓಡಿಸಿದ ಯುವತಿ
ಪುರುಷರು ವಾಹನ ಓಡಿಸಲು ಪರದಾಡಿದ ರಸ್ತೇಲಿ ಸಲೀಸಾಗಿ ಸ್ಕೂಟರ್ ಓಡಿಸಿದ ಯುವತಿ
ರಾಕೇಶ್ ಪೂಜಾರಿಗೆ ಆರೋಗ್ಯ ಸಮಸ್ಯೆ ಇತ್ತ: ಗೆಳೆಯ ಕೊಟ್ಟ ಉತ್ತರ
ರಾಕೇಶ್ ಪೂಜಾರಿಗೆ ಆರೋಗ್ಯ ಸಮಸ್ಯೆ ಇತ್ತ: ಗೆಳೆಯ ಕೊಟ್ಟ ಉತ್ತರ
ಮಳೆಗಾಲ ಸಮೀಪದಲ್ಲಿದೆ, ನಗರದಲ್ಲಿ ಮರ ಗಣತಿ ಶುರುಮಾಡಲು ಇದು ಸಕಾಲ
ಮಳೆಗಾಲ ಸಮೀಪದಲ್ಲಿದೆ, ನಗರದಲ್ಲಿ ಮರ ಗಣತಿ ಶುರುಮಾಡಲು ಇದು ಸಕಾಲ
ಹೊತ್ತಿ ಉರಿದ ಗೋದಾಮು, 60ಕ್ಕೂ ಹೆಚ್ಚು ಗಾಡಿ ನೀರು ಹಾಕಿದ್ರೂ ಆರದ ಬೆಂಕಿ
ಹೊತ್ತಿ ಉರಿದ ಗೋದಾಮು, 60ಕ್ಕೂ ಹೆಚ್ಚು ಗಾಡಿ ನೀರು ಹಾಕಿದ್ರೂ ಆರದ ಬೆಂಕಿ
ಸಾಮಾನ್ಯ ಸಂಗತಿಯೆಂಬಂತೆ ಘಟನೆ ವಿವರಿಸಿದ ಮೃತ ಬಾಲಕನ ತಂದೆ
ಸಾಮಾನ್ಯ ಸಂಗತಿಯೆಂಬಂತೆ ಘಟನೆ ವಿವರಿಸಿದ ಮೃತ ಬಾಲಕನ ತಂದೆ
ಮದುವೆಗೆಂದು ಮಂಗಳೂರಿಗೆ ಹೊರಟ್ಟಿದ್ದ ಬಸ್ ಶಿರಾಡಿ ಘಾಟಿನಲ್ಲಿ ಪಲ್ಟಿ
ಮದುವೆಗೆಂದು ಮಂಗಳೂರಿಗೆ ಹೊರಟ್ಟಿದ್ದ ಬಸ್ ಶಿರಾಡಿ ಘಾಟಿನಲ್ಲಿ ಪಲ್ಟಿ
ಆದಂಪುರ ಏರ್​ಬೇಸ್​​ ಭೇಟಿ ಬಳಿಕ ಮೋದಿ ಮಾತು: ಇಲ್ಲಿದೆ ನೇರಪ್ರಸಾರ
ಆದಂಪುರ ಏರ್​ಬೇಸ್​​ ಭೇಟಿ ಬಳಿಕ ಮೋದಿ ಮಾತು: ಇಲ್ಲಿದೆ ನೇರಪ್ರಸಾರ
ಇಡೀ ವಿಶ್ವವೇ ಭಾರತೀಯ ಸೈನಿಕರ ಕಾರ್ಯವನ್ನು ಕೊಂಡಾಡುತ್ತಿದೆ: ಶಾಸಕ
ಇಡೀ ವಿಶ್ವವೇ ಭಾರತೀಯ ಸೈನಿಕರ ಕಾರ್ಯವನ್ನು ಕೊಂಡಾಡುತ್ತಿದೆ: ಶಾಸಕ
ನಾಗರಿಕರ ಹೆಸರಿನಲ್ಲಿ ರಾಜ್ಯಾದ್ಯಂತ ತಿರಂಗಾ ಯಾತ್ರೆ: ಆರ್ ಅಶೋಕ್
ನಾಗರಿಕರ ಹೆಸರಿನಲ್ಲಿ ರಾಜ್ಯಾದ್ಯಂತ ತಿರಂಗಾ ಯಾತ್ರೆ: ಆರ್ ಅಶೋಕ್