AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದ ಕೃಷಿ ಕಾನೂನುಗಳ ಬಗ್ಗೆ ಬ್ರಿಟನ್ ಸಂಸತ್ತಿನಲ್ಲಿ ಚರ್ಚೆ: ವಿದೇಶಿ ಹಸ್ತಕ್ಷೇಪಕ್ಕೆ ಭಾರತದ ತೀವ್ರ ಆಕ್ಷೇಪ

‘ತಪ್ಪು ಕಲ್ಪನೆಗಳು, ಸುಳ್ಳು ಮಾಹಿತಿಯನ್ನು ಆಧರಿಸಿಯೇ ಚರ್ಚೆ ನಡೆದಿದೆ. ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ಮತ್ತು ಅದರ ಆಡಳಿತ ಸಂಸ್ಥೆಗಳಿಗೆ ಅಗೌರವ ತೋರಲಾಗಿದೆ’ ಎಂದು ಲಂಡನ್​ನ ಭಾರತೀಯ ರಾಜತಾಂತ್ರಿಕ ಕಚೇರಿ ಆಕ್ಷೇಪಿಸಿತ್ತು.

ಭಾರತದ ಕೃಷಿ ಕಾನೂನುಗಳ ಬಗ್ಗೆ ಬ್ರಿಟನ್ ಸಂಸತ್ತಿನಲ್ಲಿ ಚರ್ಚೆ: ವಿದೇಶಿ ಹಸ್ತಕ್ಷೇಪಕ್ಕೆ ಭಾರತದ ತೀವ್ರ ಆಕ್ಷೇಪ
ಬ್ರಿಟನ್ ಸಂಸತ್ತು (ಚಿತ್ರ: ಪಿಟಿಐ ಸಂಗ್ರಹ)
Ghanashyam D M | ಡಿ.ಎಂ.ಘನಶ್ಯಾಮ
|

Updated on: Mar 09, 2021 | 10:54 PM

Share

ದೆಹಲಿ: ಬ್ರಿಟನ್ ಸಂಸತ್ತಿನಲ್ಲಿ ಭಾರತದ ಕೃಷಿ ಕಾನೂನುಗಳ ವಿರುದ್ಧ ನಡೆಯುತ್ತಿರುವ ಚಳವಳಿ ಬಗ್ಗೆ ಚರ್ಚೆ ನಡೆಸಿದ ವಿಚಾರವನ್ನು ಗಂಭೀರವಾಗಿ ಪರಿಗಣಿಸಿರುವ ಭಾರತ ಸರ್ಕಾರವು ಮಂಗಳವಾರ ಬ್ರಿಟನ್ ಹೈಕಮಿಷನರ್​ ಮೂಲಕ ಅಧಿಕೃತವಾಗಿ ಆಕ್ಷೇಪ ದಾಖಲಿಸಿತು. ‘ಇದು ಮತ್ತೊಂದು ಸಾರ್ವಭೌಮ ಪ್ರಜಾಪ್ರಭುತ್ವದ ದೇಶದ ಆಂತರಿಕ ವಿಚಾರದಲ್ಲಿ ಹಸ್ತಕ್ಷೇಪ ಮತ್ತು ವೋಟ್​ಬ್ಯಾಂಕ್ ರಾಜಕಾರಣ’ ಎಂದು ಭಾರತ ಸರ್ಕಾರ ಕಟು ಪದಗಳಲ್ಲಿ ತನ್ನ ಅಭಿಪ್ರಾಯ ತಿಳಿಸಿತು. ಭಾರತದ ರೈತರ ಚಳವಳಿಯ ಬಗ್ಗೆ ಮತ್ತೊಂದು ದೇಶದ ಸಂಸತ್ತು ಅಧಿಕೃತವಾಗಿ ಚರ್ಚೆ ನಡೆಸಿದ ವಿದ್ಯಮಾನ ದಾಖಲಾಗಿರುವುದು ಇದೇ ಮೊದಲು.

ಭಾರತದ ಕೃಷಿ ಕಾನೂನುಗಳ ವಿರುದ್ಧ ರೈತರು ನಡೆಸುತ್ತಿರುವ ಹೋರಾಟದ ಬಗ್ಗೆ ಬ್ರಿಟನ್ ಸಂಸತ್ತಿನಲ್ಲಿ ಸೋಮವಾರ 90 ನಿಮಿಷಗಳ ಚರ್ಚೆ ನಡೆಯಿತು. ಲೇಬರ್ ಪಕ್ಷ, ಲಿಬರಲ್ ಡೆಮಾಕ್ರಟ್ ಮತ್ತು ಸ್ಕಾಟಿಷ್ ನ್ಯಾಷನಲ್ ಪಾರ್ಟಿಯ ಕೆಲ ಸಂಸದರು ರೈತ ಚಳವಳಿಯನ್ನು ಭಾರತ ಸರ್ಕಾರ ನಿರ್ವಹಿಸುತ್ತಿರುವ ರೀತಿಯ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದರು. ಭಾರತದ ಪ್ರಧಾನಿಯನ್ನು ಭೇಟಿಯಾದಾಗ ಬ್ರಿಟನ್ ಪ್ರಧಾನಿ ಈ ಕುರಿತು ಚರ್ಚಿಸಲಿದ್ದಾರೆ ಎಂದು ಬ್ರಿಟನ್ ಸರ್ಕಾರ ಚರ್ಚೆಗೆ ಪ್ರತಿಕ್ರಿಯಿಸಿತ್ತು.

ಇದೇ ವಿಷಯಕ್ಕೆ ಸಂಬಂಧಿಸಿದಂತೆ ಭಾರತದಲ್ಲಿರುವ ಬ್ರಿಟಿಷ್​ ರಾಯಭಾರಿ ಅಲೆಕ್ಸ್ ಎಲ್ಲಿಸ್ ಅವರನ್ನು ಕಚೇರಿಗೆ ಕರೆಸಿಕೊಂಡ ವಿದೇಶಾಂಗ ಇಲಾಖೆ ಕಾರ್ಯದರ್ಶಿ ಹರ್ಷ ಶ್ರಿಂಗ್ಲಾ, ‘ಭಾರತದ ಕೃಷಿ ಸುಧಾರಣೆ ಕಾನೂನುಗಳಂಥ ಸೂಕ್ಷ್ಮ ವಿಷಯದ ಬಗ್ಗೆ ಅನಿರೀಕ್ಷಿತವಾಗಿ ಬ್ರಿಟನ್​ ಸಂಸತ್ತಿನಲ್ಲಿ ಚರ್ಚೆ ನಡೆದ ಬಗ್ಗೆ ಕಟು ಶಬ್ದಗಳಲ್ಲಿ ಆಕ್ಷೇಪ ದಾಖಲಿಸಿದರು’ ಎಂದು ಪತ್ರಿಕಾ ಹೇಳಿಕೆ ತಿಳಿಸಿದೆ. ಮತ್ತೊಂದು ಸಾರ್ವಭೌಮ ಪ್ರಜಾಪ್ರಭುತ್ವ ದೇಶದ ಆಂತರಿಕ ರಾಜಕಾರಣದಲ್ಲಿ ಹೀಗೆ ಮೂಗು ತೂರಿಸುವುದು ತಪ್ಪು. ಬ್ರಿಟನ್ ಸಂಸದರು ಸತ್ಯವನ್ನು ತಪ್ಪಾಗಿ ಅರ್ಥೈಸುವ ಮೂಲಕ ವೋಟ್​ಬ್ಯಾಂಕ್ ರಾಜಕಾರಣ ಮಾಡುವುದರಿಂದ ದೂರು ಇರಬೇಕು ಎಂದು ಸಲಹೆ ಮಾಡಿದರು.

ಬ್ರಿಟನ್ ಸಂಸತ್ತಿನಲ್ಲಿ ಚರ್ಚೆ ನಡೆದ ನಂತರ ಲಂಡನ್​ನಲ್ಲಿರುವ ಭಾರತದ ರಾಜತಾಂತ್ರಿಕ ಕಚೇರಿಯೂ ಆಕ್ಷೇಪದ ಹೇಳಿಕೆ ಬಿಡುಗಡೆ ಮಾಡಿತ್ತು. ‘ತಪ್ಪು ಕಲ್ಪನೆಗಳು, ಸುಳ್ಳು ಮಾಹಿತಿಯನ್ನು ಆಧರಿಸಿಯೇ ಚರ್ಚೆ ನಡೆದಿದೆ. ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ಮತ್ತು ಅದರ ಆಡಳಿತ ಸಂಸ್ಥೆಗಳಿಗೆ ಅಗೌರವ ತೋರಲಾಗಿದೆ’ ಎಂದು ಲಂಡನ್​ನ ಭಾರತೀಯ ರಾಜತಾಂತ್ರಿಕ ಕಚೇರಿ ಆಕ್ಷೇಪಿಸಿತ್ತು.

‘ಬ್ರಿಟಿಷ್ ಪತ್ರಕರ್ತರೂ ಸೇರಿದಂತೆ ವಿಶ್ವದ ಹಲವು ದೇಶಗಳ ಪತ್ರಕರ್ತರು ಭಾರತದಲ್ಲಿದ್ದಾರೆ. ಸ್ವತಃ ತಮ್ಮ ಕಣ್ಣುಗಳಿಂದ ಭಾರತದಲ್ಲಿ ಏನು ನಡೆಯುತ್ತಿದೆ ಎಂಬುದನ್ನು ನೋಡುತ್ತಿದ್ದಾರೆ. ಹೀಗಿರುವಾಗ ಮಾಧ್ಯಮಗಳ ಸ್ವಾತಂತ್ರ್ಯ ಕಿತ್ತುಕೊಳ್ಳುವ ಪ್ರಮೇಯವೇ ಉದ್ಭವಿಸುವುದಿಲ್ಲ’ ಎಂದು ರಾಜತಾಂತ್ರಿಕ ಕಚೇರಿಯ ಹೇಳಿಕೆ ತಿಳಿಸಿತ್ತು.

ಇದನ್ನೂ ಓದಿ: ದೆಹಲಿ ಗಡಿಭಾಗದಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಗೆ ಮಹಿಳೆಯರ ಬೆಂಬಲ; ಕೃಷಿ ಕಾಯ್ದೆ ಹಿಂಪಡೆಯಲು ಒತ್ತಾಯ

ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್