AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

2031ರ ವೇಳೆಗೆ ಭಾರತ ವಿಶ್ವದ 2ನೇ ಅತಿದೊಡ್ಡ ಆರ್ಥಿಕತೆಯಾಗಬಹುದು: ಆರ್‌ಬಿಐ ಡೆಪ್ಯುಟಿ ಗವರ್ನರ್

ಆರ್ಥಿಕ ಅಭಿವೃದ್ಧಿಯಲ್ಲಿ ಭಾರತದ ಪ್ರಯಾಣ ಪ್ರಯಾಸಕರವಾದುದು. ಕಳೆದ ಹಣಕಾಸು ವರ್ಷದಲ್ಲಿ 2023-24 ರಲ್ಲಿ ಭಾರತವು 3.6 ಟ್ರಿಲಿಯನ್ ಅಮೆರಿಕನ್ ಡಾಲರ್ ಆರ್ಥಿಕತೆಯಾಗಿದೆ ಎಂದು ಹೇಳಿದರು. ಭಾರತವು ಪ್ರಸ್ತುತ ವಿನಿಮಯ ದರದಲ್ಲಿ ₹ 295.4 ಲಕ್ಷ ಕೋಟಿ ಅಥವಾ 3.6 ಟ್ರಿಲಿಯನ್ ಅಮೆರಿಕನ್ ಡಾಲರ್ ಆರ್ಥಿಕತೆಯಾಗಿದೆ.

2031ರ ವೇಳೆಗೆ ಭಾರತ ವಿಶ್ವದ 2ನೇ ಅತಿದೊಡ್ಡ ಆರ್ಥಿಕತೆಯಾಗಬಹುದು: ಆರ್‌ಬಿಐ ಡೆಪ್ಯುಟಿ ಗವರ್ನರ್
ಮೈಕೆಲ್ ದೇಬಬ್ರತ ಪಾತ್ರ
ರಶ್ಮಿ ಕಲ್ಲಕಟ್ಟ
|

Updated on: Jul 13, 2024 | 5:55 PM

Share

ದೆಹಲಿ ಜುಲೈ 13: ಭಾರತವು 2031 ರ ವೇಳೆಗೆ ಎರಡನೇ ಅತಿದೊಡ್ಡ ಆರ್ಥಿಕತೆಯಾಗಲಿದ್ದು(largest economy) 2060 ರ ವೇಳೆಗೆ ವಿಶ್ವದ ಅತಿದೊಡ್ಡ ಆರ್ಥಿಕತೆಯಾಗಲಿದೆ ಎಂದು ಮಸ್ಸೂರಿಯ ಲಾಲ್ ಬಹದ್ದೂರ್ ಶಾಸ್ತ್ರಿ ನ್ಯಾಷನಲ್ ಅಕಾಡೆಮಿ ಆಫ್ ಅಡ್ಮಿನಿಸ್ಟ್ರೇಷನ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್ (RBI) ಡೆಪ್ಯುಟಿ ಗವರ್ನರ್ ಮೈಕೆಲ್ ದೇಬಬ್ರತ ಪಾತ್ರ ( Michael Debabrata Patra) ಹೇಳಿದ್ದಾರೆ. “2048 ರ ವೇಳೆಗೆ ಅಲ್ಲ, ಆದರೆ 2031 ರ ವೇಳೆಗೆ ಭಾರತ ವಿಶ್ವದ ಎರಡನೇ ಅತಿದೊಡ್ಡ ಆರ್ಥಿಕತೆಯಾಗಿ ಮತ್ತು 2060 ರ ವೇಳೆಗೆ  ಭಾರತವು  ಅತಿದೊಡ್ಡ ಆರ್ಥಿಕತೆಯಾಗಲಿದೆ ಎಂದು ಪಾತ್ರ ಹೇಳಿದ್ದಾರೆ. ಲಾಲ್ ಬಹದ್ದೂರ್ ಶಾಸ್ತ್ರಿ ನ್ಯಾಷನಲ್ ಅಕಾಡೆಮಿ ಆಫ್ ಅಡ್ಮಿನಿಸ್ಟ್ರೇಷನ್‌ನಲ್ಲಿ ಜುಲೈ 9 ರಂದು ಭಾರತೀಯ ಆಡಳಿತ ಸೇವೆಯ ಅಧಿಕಾರಿಗಳಿಗೆ ಮಿಡ್-ಕರಿಯರ್ ತರಬೇತಿ ಕಾರ್ಯಕ್ರಮದ ಸಂದರ್ಭದಲ್ಲಿ ಮಾತನಾಡುತ್ತಿದ್ದರವರು.

ಆರ್ಥಿಕ ಅಭಿವೃದ್ಧಿಯಲ್ಲಿ ಭಾರತದ ಪ್ರಯಾಣ ಪ್ರಯಾಸಕರವಾದುದು. ಕಳೆದ ಹಣಕಾಸು ವರ್ಷದಲ್ಲಿ 2023-24 ರಲ್ಲಿ ಭಾರತವು 3.6 ಟ್ರಿಲಿಯನ್ ಅಮೆರಿಕನ್ ಡಾಲರ್ ಆರ್ಥಿಕತೆಯಾಗಿದೆ ಎಂದು ಹೇಳಿದರು. ಭಾರತವು ಪ್ರಸ್ತುತ ವಿನಿಮಯ ದರದಲ್ಲಿ ₹ 295.4 ಲಕ್ಷ ಕೋಟಿ ಅಥವಾ 3.6 ಟ್ರಿಲಿಯನ್ ಅಮೆರಿಕನ್ ಡಾಲರ್ ಆರ್ಥಿಕತೆಯಾಗಿದೆ. ತಲಾ ಆದಾಯ ₹ 2,07,030 ಅಥವಾ 2,500 ಅಮೆರಿಕನ್ ಡಾಲರ್ ಆಗಿದ್ದು ಭಾರತವು ಕಡಿಮೆ ಮಧ್ಯಮ-ಆದಾಯದ ದೇಶಗಳ ಗುಂಪಿನಲ್ಲಿ ಸೇರಿದೆ. ಇದು ಘಟನಾತ್ಮಕ ಮತ್ತು ಪ್ರಯಾಸಕರ ಪ್ರಯಾಣವಾಗಿದೆ, ಇದನ್ನು ಸಂಖ್ಯಾಶಾಸ್ತ್ರಜ್ಞರು ‘ಸ್ಟ್ರಕ್ಟರಲ್ ಬ್ರೇಕ್’ ಎಂದು ಕರೆಯುತ್ತಾರೆ ಎಂದಿದ್ದಾರೆ ಪಾತ್ರ.

ಭಾರತವು ಅಭಿವೃದ್ಧಿ ಹೊಂದಿದ ಆರ್ಥಿಕತೆಯಾಗಬೇಕಾದರೆ ಮುಂದಿನ ಹತ್ತು ವರ್ಷಗಳವರೆಗೆ ವಾರ್ಷಿಕ 9.6 ರಷ್ಟು ದರದಲ್ಲಿ ಬೆಳೆಯಬೇಕು. ಮುಂದಿನ ಹತ್ತು ವರ್ಷಗಳಲ್ಲಿ ಭಾರತವು ವಾರ್ಷಿಕ ಶೇ.9.6 ದರದಲ್ಲಿ ಬೆಳೆಯಲು ಸಾಧ್ಯವಾದರೆ, ಕೆಳ ಮಧ್ಯಮ ಆದಾಯದ ಬಲೆಯಿಂದ ಮುಕ್ತಿ ಮತ್ತು ಅಭಿವೃದ್ಧಿ ಹೊಂದಿದ ಆರ್ಥಿಕತೆಯಾಗಲಿದೆ” ಎಂದು ಅವರು ಹೇಳಿದರು.

ಆರ್ಥಿಕ ಸಹಕಾರ ಮತ್ತು ಅಭಿವೃದ್ಧಿ ಸಂಸ್ಥೆ (OECD) ಯೋಜನೆಗಳ ಪ್ರಕಾರ, PPP (ಖರೀದಿ ಸಾಮರ್ಥ್ಯದ ಸಮಾನತೆ) ಪರಿಭಾಷೆಯಲ್ಲಿ ಭಾರತವು 2048 ರ ವೇಳೆಗೆ ಅಮೆರಿಕವನ್ನು ಹಿಂದಿಕ್ಕಿ ವಿಶ್ವದ ಎರಡನೇ ಅತಿದೊಡ್ಡ ಆರ್ಥಿಕತೆಯಾಗಲಿದೆ. ಭಾರತೀಯ ಆರ್ಥಿಕತೆಯಲ್ಲಿ ಹೆಚ್ಚುತ್ತಿರುವ ಹಣದುಬ್ಬರಕ್ಕಾಗಿ, ಹಣದುಬ್ಬರವನ್ನು ಗುರಿಯೊಂದಿಗೆ ಹೊಂದಿಸಲು ಆರ್​​ಬಿಐ ಬದ್ಧವಾಗಿದೆ. ಹಣದುಬ್ಬರವು 2025-26 ರಲ್ಲಿ ಶೇಕಡಾ 4.1 ಕ್ಕೆ ಇಳಿಯುತ್ತದೆ ಎಂದು ಡೆಪ್ಯೂಟಿ ಗವರ್ನರ್ ಹೇಳಿದ್ದಾರೆ.

ಇದನ್ನೂ ಓದಿ: Ratna Bhandar: 4 ದಶಕಗಳ ಬಳಿಕ ನಾಳೆ ಬಯಲಾಗುತ್ತಾ ಪುರಿ ಜಗನ್ನಾಥ ದೇವಾಲಯದ ರತ್ನ ಭಂಡಾರದ ರಹಸ್ಯ

“ಆರ್‌ಬಿಐ ಹಣದುಬ್ಬರವನ್ನು ನಿಯಂತ್ರಿಸಲು ಪ್ರಯತ್ನಿಸುತ್ತದೆ. ಇದು 2024-25 ರಲ್ಲಿ ಸರಾಸರಿ 4.5 ಶೇಕಡಾ ಮತ್ತು 2025-26 ರಲ್ಲಿ 4.1 ಶೇಕಡಾಕ್ಕೆ ಹಣದುಬ್ಬರವನ್ನು ಯೋಜಿಸುತ್ತದೆ. ಹಣದುಬ್ಬರವು ಭವಿಷ್ಯದಲ್ಲಿ ನಿರಂತರ ಹೆಚ್ಚಿನ ಬೆಳವಣಿಗೆಯ ಅಡಿಪಾಯವನ್ನು ಹಾಕುತ್ತದೆ” ಎಂದು ಪಾತ್ರ ಹೇಳಿದ್ದಾರೆ.

ಬ್ಯಾಂಕಿಂಗ್ ವ್ಯವಸ್ಥೆಯಲ್ಲಿನ ಒಟ್ಟು ಅನುತ್ಪಾದಕ ಆಸ್ತಿಗಳು (ಜಿಎನ್‌ಪಿಎ) ಮಾರ್ಚ್ 2018 ರಲ್ಲಿ ತಮ್ಮ ಗರಿಷ್ಠ ಮಟ್ಟದಿಂದ ಮಾರ್ಚ್ 2024 ರ ವೇಳೆಗೆ ಒಟ್ಟು ಆಸ್ತಿಯ ಶೇಕಡಾ 2.8 ಕ್ಕೆ ಸ್ಥಿರವಾಗಿ ಕುಸಿದಿದೆ ಎಂದು ಅವರು ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ