AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Coal: ಜಾಗತಿಕ ಕಲ್ಲಿದ್ದಲು ಬೇಡಿಕೆ ಹೆಚ್ಚಿಸುವ, ಪೂರೈಸುವ ನಿಟ್ಟಿನಲ್ಲಿ ಭಾರತ ಸಮರ್ಥವಾಗಿದೆ -ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅಭಿಮತ

pralhad joshi: ಜಾಗತಿಕ ಕಲ್ಲಿದ್ದಲು ಬೇಡಿಕೆಯನ್ನು ಹೆಚ್ಚಿಸುವ ಮತ್ತು ಬಳಕೆಯಲ್ಲಿನ ಬೇಡಿಕೆ ಪೂರೈಸಲು ಭಾರತ ಸಮರ್ಥವಾಗಿ ಸಜ್ಜಾಗಿದೆ ಎಂಬುದರ ಸ್ಪಷ್ಟ ಚಿತ್ರಣವನ್ನು ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು ನೀಡಿದ್ದಾರೆ.

Coal: ಜಾಗತಿಕ ಕಲ್ಲಿದ್ದಲು ಬೇಡಿಕೆ ಹೆಚ್ಚಿಸುವ, ಪೂರೈಸುವ ನಿಟ್ಟಿನಲ್ಲಿ ಭಾರತ ಸಮರ್ಥವಾಗಿದೆ -ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅಭಿಮತ
ಜಾಗತಿಕ ಕಲ್ಲಿದ್ದಲು ಬೇಡಿಕೆ ಹೆಚ್ಚಿಸುವ ಹಾಗೂ ಬಳಕೆಯ ಬೇಡಿಕೆ ಪೂರೈಸುವ ನಿಟ್ಟಿನಲ್ಲಿ ಭಾರತ ಸಮರ್ಥ : ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅಭಿಮತ
TV9 Web
| Edited By: |

Updated on:Oct 18, 2022 | 12:33 PM

Share

ನವದೆಹಲಿ: ಜಾಗತಿಕ ಕಲ್ಲಿದ್ದಲು ಬೇಡಿಕೆ ಹೆಚ್ಚಿಸುವ, ಪೂರೈಸುವ ನಿಟ್ಟಿನಲ್ಲಿ ಭಾರತ ಸಮರ್ಥವಾಗಿ ಸಜ್ಜಾಗಿದೆ ಎಂಬುದರ ಸ್ಪಷ್ಟ ಚಿತ್ರಣವನ್ನು ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು ನೀಡಿದ್ದಾರೆ.

ನವದೆಹಲಿಯಲ್ಲಿಂದು ನಡೆದ ಪ್ರಥಮ ಕಲ್ಲಿದ್ದಲು ರಾಷ್ಟ್ರೀಯ ಸಮಾವೇಶ ಉದ್ಘಾಟಿಸಿ ಮಾತನಾಡಿದ ಕೇಂದ್ರ ಸಂಸದೀಯ ವ್ಯವಹಾರಗಳು ಮತ್ತು ಕಲ್ಲಿದ್ದಲು ಹಾಗೂ ಗಣಿ ಸಚಿವ ಪ್ರಲ್ಹಾದ್ ಜೋಶಿ, ಭಾರತದಲ್ಲಿ ಕಲ್ಲಿದ್ದಲು ಕ್ಷೇತ್ರದ ಭವಿಷ್ಯದ ಹಾದಿಯನ್ನು ನಿರ್ಧರಿಸಲು ಇಂಥಹ ಸಮಾವೇಶಗಳು ಮುಖ್ಯ ಪಾತ್ರ ವಹಿಸಲಿವೆ ಎಂದರು. ಜಾಗತಿಕ ಕಲ್ಲಿದ್ದಲು ಬೇಡಿಕೆಯನ್ನು ಹೆಚ್ಚಿಸುವ ಮತ್ತು ಬಳಕೆಯಲ್ಲಿನ ಬೇಡಿಕೆ ಪೂರೈಸಲು ಭಾರತ ಹೇಗೆ ಸಜ್ಜಾಗಿದೆ ಎಂಬುದರ ಕುರಿತು ಸ್ಪಷ್ಟತೆ ನೀಡಿದ ಪ್ರಲ್ಹಾದ್ ಜೋಶಿ, ನೀತಿ ನಿರೂಪಣೆ, ಉದ್ಯಮಿಗಳ ಒಗ್ಗೂಡವಿಕೆಗೆ ಸಮಾವೇಶಗಳು ಸಹಕಾರಿ ಎಂದರು.‌

ವಿಶೇಷವಾಗಿ ವಿದ್ಯುತ್ ವಲಯಕ್ಕೆ ಕಲ್ಲಿದ್ದಲು ರವಾನೆಯು ಕಳೆದ ವರ್ಷಕ್ಕಿಂತ (ಏಪ್ರಿಲ್-ಸೆಪ್ಟೆಂಬರ್) 16.7% ರಷ್ಟು ಬೆಳವಣಿಗೆಯನ್ನು ದಾಖಲಿಸಿದೆ. ಕಲ್ಲಿದ್ದಲು ಉತ್ಪಾದನೆ 356 MT ತಲುಪಿದ್ದನ್ನ ಗಮನಿಸಿದಾಗ ಸಂತೋಷವೆನಿಸುತ್ತದೆ ಎಂದು ಇದೇ ವೇಳೆ ಪ್ರಲ್ಜಾದ್ ಜೋಶಿ ಹೇಳಿದರು.

ಇಂದಿನ ರಾಷ್ಟ್ರೀಯ ಕಲ್ಲಿದ್ದಲು ಸಮಾವೇಶದಲ್ಲಿ ಕಲ್ಲಿದ್ದಲು ಬ್ಲಾಕ್‌ಗಳ ಅಭಿವೃದ್ಧಿ ಮತ್ತು ಉತ್ಪಾದನೆ ಒಪ್ಪಂದಕ್ಕೆ ಸಹಿ ಹಾಕುವ ಸಮಾರಂಭ ಕೂಡಾ ನಡೆಯಿತು. ಹಿಂದಿನ ಅವಧಿಗಳಲ್ಲಿ ಹರಾಜಾಗಿದ್ದ ಒಟ್ಟು 10 ಕಲ್ಲಿದ್ದಲು ಗಣಿಗಳಲ್ಲಿ ಕಲ್ಲಿದ್ದಲು ಉತ್ಪಾದನೆ ಒಪ್ಪಂದಕ್ಕೆ ಸಹಿ ಹಾಕಲಾಗಿದೆ. ಶಿಘ್ರದಲ್ಲಿಯೇ ಈ ಗಣಿಗಳಲ್ಲಿ ಕಲ್ಲಿದ್ದಲು ಉತ್ಪಾದನೆ ಆರಂಭವಾಗಲಿದೆ ಎಂದರು. ಮೊದಲನೇ ಕಲ್ಲಿದ್ದಲು ರಾಷ್ಟ್ರೀಯ ಸಮಾವೇಶ ಇದಾಗಿದ್ದು, ಕಲ್ಲಿದ್ದಲು ಉತ್ಪಾದನಾ ಪ್ರದರ್ಶನ ಕೂಡ ಇದರೊಂದಿಗೆ ನಡೆಯುತ್ತಿರುವುದು ವಿಶೇಷ.

Published On - 2:42 pm, Mon, 17 October 22

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್