AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Coal: ಜಾಗತಿಕ ಕಲ್ಲಿದ್ದಲು ಬೇಡಿಕೆ ಹೆಚ್ಚಿಸುವ, ಪೂರೈಸುವ ನಿಟ್ಟಿನಲ್ಲಿ ಭಾರತ ಸಮರ್ಥವಾಗಿದೆ -ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅಭಿಮತ

pralhad joshi: ಜಾಗತಿಕ ಕಲ್ಲಿದ್ದಲು ಬೇಡಿಕೆಯನ್ನು ಹೆಚ್ಚಿಸುವ ಮತ್ತು ಬಳಕೆಯಲ್ಲಿನ ಬೇಡಿಕೆ ಪೂರೈಸಲು ಭಾರತ ಸಮರ್ಥವಾಗಿ ಸಜ್ಜಾಗಿದೆ ಎಂಬುದರ ಸ್ಪಷ್ಟ ಚಿತ್ರಣವನ್ನು ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು ನೀಡಿದ್ದಾರೆ.

Coal: ಜಾಗತಿಕ ಕಲ್ಲಿದ್ದಲು ಬೇಡಿಕೆ ಹೆಚ್ಚಿಸುವ, ಪೂರೈಸುವ ನಿಟ್ಟಿನಲ್ಲಿ ಭಾರತ ಸಮರ್ಥವಾಗಿದೆ -ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅಭಿಮತ
ಜಾಗತಿಕ ಕಲ್ಲಿದ್ದಲು ಬೇಡಿಕೆ ಹೆಚ್ಚಿಸುವ ಹಾಗೂ ಬಳಕೆಯ ಬೇಡಿಕೆ ಪೂರೈಸುವ ನಿಟ್ಟಿನಲ್ಲಿ ಭಾರತ ಸಮರ್ಥ : ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅಭಿಮತ
TV9 Web
| Updated By: ಸಾಧು ಶ್ರೀನಾಥ್​|

Updated on:Oct 18, 2022 | 12:33 PM

Share

ನವದೆಹಲಿ: ಜಾಗತಿಕ ಕಲ್ಲಿದ್ದಲು ಬೇಡಿಕೆ ಹೆಚ್ಚಿಸುವ, ಪೂರೈಸುವ ನಿಟ್ಟಿನಲ್ಲಿ ಭಾರತ ಸಮರ್ಥವಾಗಿ ಸಜ್ಜಾಗಿದೆ ಎಂಬುದರ ಸ್ಪಷ್ಟ ಚಿತ್ರಣವನ್ನು ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು ನೀಡಿದ್ದಾರೆ.

ನವದೆಹಲಿಯಲ್ಲಿಂದು ನಡೆದ ಪ್ರಥಮ ಕಲ್ಲಿದ್ದಲು ರಾಷ್ಟ್ರೀಯ ಸಮಾವೇಶ ಉದ್ಘಾಟಿಸಿ ಮಾತನಾಡಿದ ಕೇಂದ್ರ ಸಂಸದೀಯ ವ್ಯವಹಾರಗಳು ಮತ್ತು ಕಲ್ಲಿದ್ದಲು ಹಾಗೂ ಗಣಿ ಸಚಿವ ಪ್ರಲ್ಹಾದ್ ಜೋಶಿ, ಭಾರತದಲ್ಲಿ ಕಲ್ಲಿದ್ದಲು ಕ್ಷೇತ್ರದ ಭವಿಷ್ಯದ ಹಾದಿಯನ್ನು ನಿರ್ಧರಿಸಲು ಇಂಥಹ ಸಮಾವೇಶಗಳು ಮುಖ್ಯ ಪಾತ್ರ ವಹಿಸಲಿವೆ ಎಂದರು. ಜಾಗತಿಕ ಕಲ್ಲಿದ್ದಲು ಬೇಡಿಕೆಯನ್ನು ಹೆಚ್ಚಿಸುವ ಮತ್ತು ಬಳಕೆಯಲ್ಲಿನ ಬೇಡಿಕೆ ಪೂರೈಸಲು ಭಾರತ ಹೇಗೆ ಸಜ್ಜಾಗಿದೆ ಎಂಬುದರ ಕುರಿತು ಸ್ಪಷ್ಟತೆ ನೀಡಿದ ಪ್ರಲ್ಹಾದ್ ಜೋಶಿ, ನೀತಿ ನಿರೂಪಣೆ, ಉದ್ಯಮಿಗಳ ಒಗ್ಗೂಡವಿಕೆಗೆ ಸಮಾವೇಶಗಳು ಸಹಕಾರಿ ಎಂದರು.‌

ವಿಶೇಷವಾಗಿ ವಿದ್ಯುತ್ ವಲಯಕ್ಕೆ ಕಲ್ಲಿದ್ದಲು ರವಾನೆಯು ಕಳೆದ ವರ್ಷಕ್ಕಿಂತ (ಏಪ್ರಿಲ್-ಸೆಪ್ಟೆಂಬರ್) 16.7% ರಷ್ಟು ಬೆಳವಣಿಗೆಯನ್ನು ದಾಖಲಿಸಿದೆ. ಕಲ್ಲಿದ್ದಲು ಉತ್ಪಾದನೆ 356 MT ತಲುಪಿದ್ದನ್ನ ಗಮನಿಸಿದಾಗ ಸಂತೋಷವೆನಿಸುತ್ತದೆ ಎಂದು ಇದೇ ವೇಳೆ ಪ್ರಲ್ಜಾದ್ ಜೋಶಿ ಹೇಳಿದರು.

ಇಂದಿನ ರಾಷ್ಟ್ರೀಯ ಕಲ್ಲಿದ್ದಲು ಸಮಾವೇಶದಲ್ಲಿ ಕಲ್ಲಿದ್ದಲು ಬ್ಲಾಕ್‌ಗಳ ಅಭಿವೃದ್ಧಿ ಮತ್ತು ಉತ್ಪಾದನೆ ಒಪ್ಪಂದಕ್ಕೆ ಸಹಿ ಹಾಕುವ ಸಮಾರಂಭ ಕೂಡಾ ನಡೆಯಿತು. ಹಿಂದಿನ ಅವಧಿಗಳಲ್ಲಿ ಹರಾಜಾಗಿದ್ದ ಒಟ್ಟು 10 ಕಲ್ಲಿದ್ದಲು ಗಣಿಗಳಲ್ಲಿ ಕಲ್ಲಿದ್ದಲು ಉತ್ಪಾದನೆ ಒಪ್ಪಂದಕ್ಕೆ ಸಹಿ ಹಾಕಲಾಗಿದೆ. ಶಿಘ್ರದಲ್ಲಿಯೇ ಈ ಗಣಿಗಳಲ್ಲಿ ಕಲ್ಲಿದ್ದಲು ಉತ್ಪಾದನೆ ಆರಂಭವಾಗಲಿದೆ ಎಂದರು. ಮೊದಲನೇ ಕಲ್ಲಿದ್ದಲು ರಾಷ್ಟ್ರೀಯ ಸಮಾವೇಶ ಇದಾಗಿದ್ದು, ಕಲ್ಲಿದ್ದಲು ಉತ್ಪಾದನಾ ಪ್ರದರ್ಶನ ಕೂಡ ಇದರೊಂದಿಗೆ ನಡೆಯುತ್ತಿರುವುದು ವಿಶೇಷ.

Published On - 2:42 pm, Mon, 17 October 22

ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ
ಧ್ರುವಂತ್ ಮೇಲೆ ಬುಕ್ ಬರೆಯುತ್ತಾರಂತೆ ಗಿಲ್ಲಿ: ಸೀರಿಯಸ್ ಪ್ರಶ್ನೆಗೆ ಕಾಮಿಡಿ
ಧ್ರುವಂತ್ ಮೇಲೆ ಬುಕ್ ಬರೆಯುತ್ತಾರಂತೆ ಗಿಲ್ಲಿ: ಸೀರಿಯಸ್ ಪ್ರಶ್ನೆಗೆ ಕಾಮಿಡಿ
ರಷ್ಯಾ ಅಧ್ಯಕ್ಷ ಪುಟಿನ್​​ ಸ್ವಾಗತಕ್ಕೆ ವಿಮಾನ ನಿಲ್ದಾಣಕ್ಕೆ ತೆರಳಿದ ಮೋದಿ
ರಷ್ಯಾ ಅಧ್ಯಕ್ಷ ಪುಟಿನ್​​ ಸ್ವಾಗತಕ್ಕೆ ವಿಮಾನ ನಿಲ್ದಾಣಕ್ಕೆ ತೆರಳಿದ ಮೋದಿ